Homeಮುಖಪುಟಹನಿಟ್ರ್ಯಾಪ್ ದೂರು ನೀಡಿದ್ದ ಪ್ರಕರಣ: BJP ಮುಖಂಡ ಹುಡುಗಿಯೊಂದಿಗೆ ಸಿಕ್ಕಿಬಿದ್ದ ಆಡಿಯೋ, ವಿಡಿಯೋ ವೈರಲ್

ಹನಿಟ್ರ್ಯಾಪ್ ದೂರು ನೀಡಿದ್ದ ಪ್ರಕರಣ: BJP ಮುಖಂಡ ಹುಡುಗಿಯೊಂದಿಗೆ ಸಿಕ್ಕಿಬಿದ್ದ ಆಡಿಯೋ, ವಿಡಿಯೋ ವೈರಲ್

- Advertisement -
- Advertisement -

ಮಂಡ್ಯದ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಮುಖಂಡ, ಶ್ರೀನಿಧಿ ಗೋಲ್ಡ್ ಮಾಲೀಕ ಜಗನ್ನಾಥ ಶೆಟ್ಟಿಯು ಹುಡುಗಿಯನ್ನು ಹೋಟೆಲ್‌ಗೆ ಬಾ ಎಂದು ಕರೆಯುವ ಆಡಿಯೋ ಮತ್ತು ಹೋಟೆಲ್‌ನಲ್ಲಿ ಹುಡುಗಿಯೊಂದಿಗೆ ಅರೆಬರೆ ಬಟ್ಟೆಯಲ್ಲಿ ಸಿಕ್ಕಿಬಿದ್ದಿರುವ ವಿಡಿಯೋವೊಂದು ವೈರಲ್ ಆಗಿದೆ. ಹಾಗಾಗಿ ಅವರು ಕಳೆದ 15 ದಿನಗಳ ಹಿಂದೆ ತನ್ನನ್ನು ಕಿಡ್ನಾಪ್ ಮಾಡಿ, ಹನಿಟ್ರ್ಯಾಪ್ ಪ್ರಕರಣದಲ್ಲಿ ಸಿಲುಕಿಸಿದ್ದಾರೆ ಎಂದು ನೀಡಿದ್ದ ದೂರಿನ ಪ್ರಕರಣಕ್ಕೆ ಮಹತ್ತರ ತಿರುವು ಸಿಕ್ಕಿದೆ.

ಮೂಲತಃ ಉಡುಪಿ ಮೂಲದ ಜಗನ್ನಾಥ ಶೆಟ್ಟಿಯೂ ತಾನು ಮಂಗಳೂರಿಗೆ ಹೋಗಲು ಮಂಡ್ಯದಲ್ಲಿ ಬಸ್‌ಗಾಗಿ ಕಾಯುತ್ತಿದ್ದೆ. ಆಗ ಡ್ರಾಪ್ ಕೊಡುವ ನೆಪದಲ್ಲಿ ನಾಲ್ವರು ತನ್ನನ್ನು ಮೈಸೂರಿಗೆ ಕರೆದೊಯ್ದರು. ಆನಂತರ ಗೋಲ್ಡ್ ಬಿಸ್ಕೆಟ್ ಪರೀಕ್ಷಿಸಲು ಬಾ ಎಂದು ಕಿಡ್ನಾಪ್ ಮಾಡಿ ಮೈಸೂರಿನ ದರ್ಶನ್‌ ಲಾಡ್ಜ್‌ಗೆ ಕರೆದೊಯ್ದು, ಅಲ್ಲಿದ್ದ ಹುಡುಗಿಯೊಂದಿಗೆ ವಿಡಿಯೊ ಮಾಡಿದರು. ವಿಡಿಯೋ ಹರಿಯಬಿಡುವುದಾಗಿ ಬೆದರಿಸಿ 50 ಲಕ್ಷ ಸುಲಿಗೆ ಮಾಡಿದ್ದಾರೆ ಎಂದು ಆಗಸ್ಟ್ 19 ರಂದು ಮಂಡ್ಯದ ಪಶ್ಚಿಮ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅದರ ಆಧಾರದಲ್ಲಿ ಹನಿಟ್ರ್ಯಾಪ್ ಪ್ರಕರಣ ದಾಖಲಿಸಿದ್ದ ಪೊಲೀಸರು ಸಲ್ಮಾಬಾನು, ಸೇರಿದಂತೆ ಹಲವರನ್ನು ಬಂಧಿಸಿ ಪೊಲೀಸ್ ಕಸ್ಟಡಿಗೆ ಪಡೆದಿದ್ದರು.

ಆದರೆ ಅದಾಗ 15 ದಿನಗಳ ನಂತರ ಜಗನ್ನಾಥ ಶೆಟ್ಟಿಯದು ಎಂದು ಹೇಳಲಾದ ಹುಡುಗಿಯೊಂದಿಗೆ ಮಾತನಾಡುವ 15 ನಿಮಿಷಗಳ ಆಡಿಯೋ ವೈರಲ್ ಆಗಿದೆ. ಅದರಲ್ಲಿ ತನ್ನನ್ನು ಹುಬ್ಬಳ್ಳಿ ಮೂಲಕ ಉಪನ್ಯಾಸಕ ಎಂದು ಹೇಳಿಕೊಳ್ಳುವ ಆತ ಮೈಸೂರಿನ ಲಾಡ್ಜ್‌ಗೆ ಎರಡು ದಿನಗಳ ಕಾಲ ಹೋಗೋಣ ಬಾ ಎಂದು ಸ್ವತಃ ಕರೆಯುತ್ತಾನೆ. ಒಳ್ಳೆಯ ಲಾಡ್ಜ್‌ಗಳಿವೆ, ಅಲ್ಲಿ ಎರಡು ದಿನ ಉಳಿಯೋಣ, ಎಂಜಾಯ್ ಮಾಡೋಣ, ಕಾರಿನಲ್ಲಿ ಹೋಗೋಣ, ಒಟ್ಟಿಗೆ ಊಟ ಮಾಡೋಣ ಎಂದು ಹೇಳಿದ್ದಾನೆ. ಅದಕ್ಕೆ ಹುಡುಗಿ ಸಹ ಒಪ್ಪಿ ಬರುತ್ತೇನೆ ಎಂದು ಹೇಳುವುದು ದಾಖಲಾಗಿದೆ. ಆನಂತರ ಮತ್ತೊಂದು ವಿಡಿಯೋ ವೈರಲ್ ಆಗಿದ್ದು ಅದರಲ್ಲಿ ಅದೇ ಹುಡುಗಿ ಜಗನ್ನಾಥ ಶೆಟ್ಟಿಯೊಂದಿಗೆ ಅದೇ ದರ್ಶನ್ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದಿರುವುದು ಸೆರೆಯಾಗಿದೆ.

ವಿಡಿಯೋದಲ್ಲಿ ಸಲ್ಮಾ ಬಾನು ಕಡೆಯವರು ಆತನನ್ನು ಪ್ರಶ್ನಿಸುವ ಮತ್ತು ಹಲ್ಲೆ ಮಾಡುವುದು ಕಂಡುಬಂದಿದೆ. ಆ ಸಂದರ್ಭದಲ್ಲಿ ಜಗನ್ನಾಥ ಶೆಟ್ಟಿ ತಪ್ಪಾಯ್ತು ಬಿಟ್ಟು ಬಿಡಿ, ಇಲ್ಲದಿದ್ದರೆ ನಾನು ನೇಣು ಹಾಕಿಕೊಂಡು ಸತ್ತು ಹೋಗುತ್ತೇನೆ ಎಂದು ಪರಿ ಪರಿಯಾಗಿ ಕೇಳಿಕೊಳ್ಳುವುದು ದಾಖಲಾಗಿದೆ. ಅಲ್ಲಿ ಸಿಕ್ಕಿರುವ ಮುಜರಾಯಿ ಇಲಾಖೆಯ ಗುರುತಿನ ಚೀಟಿಯಲ್ಲಿ ಜಗನ್ನಾಥ ಶೆಟ್ಟಿಯನ್ನು ಧಾರ್ಮಿಕ ಪರಿಷತ್ ಸದಸ್ಯ ಎಂದು ಹೆಸರಿಸಲಾಗಿದೆ. ಅಲ್ಲಿ ಒಂದಷ್ಟು ಕಂತೆ ಹಣ, ಕೆಲವು ಮಾತ್ರೆಗಳು ಸಹ ಕಂಡುಬಂದಿವೆ.

ಅದೇ ಸಂದರ್ಭದಲ್ಲಿ ಅಲ್ಲಿದ್ದ ಹುಡುಗಿಯು ತಾನು ವಿದ್ಯಾರ್ಥಿನಿಯಾಗಿದ್ದು, ಟ್ಯೂಷನ್ ಹೇಳಿಸಿಕೊಳ್ಳಲು ಬಂದಿದ್ದೇನೆ. ದಯವಿಟ್ಟು ಅವರಿಗೆ ಹೊಡೆಯಬೇಡಿ ಬಿಟ್ಟು ಬಿಡಿ ಎಂದು ಮನವಿ ಮಾಡುವುದು ಸಹ ಸೆರೆಯಾಗಿದೆ.

ಒಟ್ಟಾರೆಯಾಗಿ ಇದು ಹನಿಟ್ರ್ಯಾಪ್ ಪ್ರಕರಣವೇ? ಅಲ್ಲವೇ ಎಂಬುದು ಪೊಲೀಸ್ ತನಿಖೆಯಿಂದ ಮಾತ್ರ ಹೊರಬರಬೇಕಿದೆ. ಅಲ್ಲದೆ ಜಗನ್ನಾಥ ಶೆಟ್ಟಿ ತಾನೇ ಖುದ್ದು ಹುಡುಗಿಯೊಂದಿಗೆ ಲಾಡ್ಜ್‌ಗೆ ಹೋಗಿದ್ದರೂ ಸಹ ತನ್ನನ್ನು ಕಿಡ್ನಾಪ್ ಮಾಡಿ ಕರೆದುಕೊಂಡು ಹೋದರು ಎಂದು ಸುಳ್ಳು ದೂರು ನೀಡಿದ್ದು ಏಕೆ? ಸಲ್ಮಾ ಬಾನು ಗ್ಯಾಂಗ್‌ ಲಾಡ್ಜ್‌ಗೆ ಏಕೆ ದಾಳಿ ನಡೆಸಿತು ಎಂಬುದು ಸಹ ಹೊರಬರಬೇಕಿದೆ.

ಇದನ್ನೂ ಓದಿ: ಬೆಂಗಳೂರು ವಿ.ವಿ ಕ್ಯಾಂಪಸ್‌ನೊಳಗೆ ದೇವಸ್ಥಾನ ನಿರ್ಮಾಣದ ವಿರುದ್ಧ ಭಾರಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...