Homeಮುಖಪುಟಹನಿಟ್ರ್ಯಾಪ್ ದೂರು ನೀಡಿದ್ದ ಪ್ರಕರಣ: BJP ಮುಖಂಡ ಹುಡುಗಿಯೊಂದಿಗೆ ಸಿಕ್ಕಿಬಿದ್ದ ಆಡಿಯೋ, ವಿಡಿಯೋ ವೈರಲ್

ಹನಿಟ್ರ್ಯಾಪ್ ದೂರು ನೀಡಿದ್ದ ಪ್ರಕರಣ: BJP ಮುಖಂಡ ಹುಡುಗಿಯೊಂದಿಗೆ ಸಿಕ್ಕಿಬಿದ್ದ ಆಡಿಯೋ, ವಿಡಿಯೋ ವೈರಲ್

- Advertisement -
- Advertisement -

ಮಂಡ್ಯದ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಮುಖಂಡ, ಶ್ರೀನಿಧಿ ಗೋಲ್ಡ್ ಮಾಲೀಕ ಜಗನ್ನಾಥ ಶೆಟ್ಟಿಯು ಹುಡುಗಿಯನ್ನು ಹೋಟೆಲ್‌ಗೆ ಬಾ ಎಂದು ಕರೆಯುವ ಆಡಿಯೋ ಮತ್ತು ಹೋಟೆಲ್‌ನಲ್ಲಿ ಹುಡುಗಿಯೊಂದಿಗೆ ಅರೆಬರೆ ಬಟ್ಟೆಯಲ್ಲಿ ಸಿಕ್ಕಿಬಿದ್ದಿರುವ ವಿಡಿಯೋವೊಂದು ವೈರಲ್ ಆಗಿದೆ. ಹಾಗಾಗಿ ಅವರು ಕಳೆದ 15 ದಿನಗಳ ಹಿಂದೆ ತನ್ನನ್ನು ಕಿಡ್ನಾಪ್ ಮಾಡಿ, ಹನಿಟ್ರ್ಯಾಪ್ ಪ್ರಕರಣದಲ್ಲಿ ಸಿಲುಕಿಸಿದ್ದಾರೆ ಎಂದು ನೀಡಿದ್ದ ದೂರಿನ ಪ್ರಕರಣಕ್ಕೆ ಮಹತ್ತರ ತಿರುವು ಸಿಕ್ಕಿದೆ.

ಮೂಲತಃ ಉಡುಪಿ ಮೂಲದ ಜಗನ್ನಾಥ ಶೆಟ್ಟಿಯೂ ತಾನು ಮಂಗಳೂರಿಗೆ ಹೋಗಲು ಮಂಡ್ಯದಲ್ಲಿ ಬಸ್‌ಗಾಗಿ ಕಾಯುತ್ತಿದ್ದೆ. ಆಗ ಡ್ರಾಪ್ ಕೊಡುವ ನೆಪದಲ್ಲಿ ನಾಲ್ವರು ತನ್ನನ್ನು ಮೈಸೂರಿಗೆ ಕರೆದೊಯ್ದರು. ಆನಂತರ ಗೋಲ್ಡ್ ಬಿಸ್ಕೆಟ್ ಪರೀಕ್ಷಿಸಲು ಬಾ ಎಂದು ಕಿಡ್ನಾಪ್ ಮಾಡಿ ಮೈಸೂರಿನ ದರ್ಶನ್‌ ಲಾಡ್ಜ್‌ಗೆ ಕರೆದೊಯ್ದು, ಅಲ್ಲಿದ್ದ ಹುಡುಗಿಯೊಂದಿಗೆ ವಿಡಿಯೊ ಮಾಡಿದರು. ವಿಡಿಯೋ ಹರಿಯಬಿಡುವುದಾಗಿ ಬೆದರಿಸಿ 50 ಲಕ್ಷ ಸುಲಿಗೆ ಮಾಡಿದ್ದಾರೆ ಎಂದು ಆಗಸ್ಟ್ 19 ರಂದು ಮಂಡ್ಯದ ಪಶ್ಚಿಮ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅದರ ಆಧಾರದಲ್ಲಿ ಹನಿಟ್ರ್ಯಾಪ್ ಪ್ರಕರಣ ದಾಖಲಿಸಿದ್ದ ಪೊಲೀಸರು ಸಲ್ಮಾಬಾನು, ಸೇರಿದಂತೆ ಹಲವರನ್ನು ಬಂಧಿಸಿ ಪೊಲೀಸ್ ಕಸ್ಟಡಿಗೆ ಪಡೆದಿದ್ದರು.

ಆದರೆ ಅದಾಗ 15 ದಿನಗಳ ನಂತರ ಜಗನ್ನಾಥ ಶೆಟ್ಟಿಯದು ಎಂದು ಹೇಳಲಾದ ಹುಡುಗಿಯೊಂದಿಗೆ ಮಾತನಾಡುವ 15 ನಿಮಿಷಗಳ ಆಡಿಯೋ ವೈರಲ್ ಆಗಿದೆ. ಅದರಲ್ಲಿ ತನ್ನನ್ನು ಹುಬ್ಬಳ್ಳಿ ಮೂಲಕ ಉಪನ್ಯಾಸಕ ಎಂದು ಹೇಳಿಕೊಳ್ಳುವ ಆತ ಮೈಸೂರಿನ ಲಾಡ್ಜ್‌ಗೆ ಎರಡು ದಿನಗಳ ಕಾಲ ಹೋಗೋಣ ಬಾ ಎಂದು ಸ್ವತಃ ಕರೆಯುತ್ತಾನೆ. ಒಳ್ಳೆಯ ಲಾಡ್ಜ್‌ಗಳಿವೆ, ಅಲ್ಲಿ ಎರಡು ದಿನ ಉಳಿಯೋಣ, ಎಂಜಾಯ್ ಮಾಡೋಣ, ಕಾರಿನಲ್ಲಿ ಹೋಗೋಣ, ಒಟ್ಟಿಗೆ ಊಟ ಮಾಡೋಣ ಎಂದು ಹೇಳಿದ್ದಾನೆ. ಅದಕ್ಕೆ ಹುಡುಗಿ ಸಹ ಒಪ್ಪಿ ಬರುತ್ತೇನೆ ಎಂದು ಹೇಳುವುದು ದಾಖಲಾಗಿದೆ. ಆನಂತರ ಮತ್ತೊಂದು ವಿಡಿಯೋ ವೈರಲ್ ಆಗಿದ್ದು ಅದರಲ್ಲಿ ಅದೇ ಹುಡುಗಿ ಜಗನ್ನಾಥ ಶೆಟ್ಟಿಯೊಂದಿಗೆ ಅದೇ ದರ್ಶನ್ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದಿರುವುದು ಸೆರೆಯಾಗಿದೆ.

ವಿಡಿಯೋದಲ್ಲಿ ಸಲ್ಮಾ ಬಾನು ಕಡೆಯವರು ಆತನನ್ನು ಪ್ರಶ್ನಿಸುವ ಮತ್ತು ಹಲ್ಲೆ ಮಾಡುವುದು ಕಂಡುಬಂದಿದೆ. ಆ ಸಂದರ್ಭದಲ್ಲಿ ಜಗನ್ನಾಥ ಶೆಟ್ಟಿ ತಪ್ಪಾಯ್ತು ಬಿಟ್ಟು ಬಿಡಿ, ಇಲ್ಲದಿದ್ದರೆ ನಾನು ನೇಣು ಹಾಕಿಕೊಂಡು ಸತ್ತು ಹೋಗುತ್ತೇನೆ ಎಂದು ಪರಿ ಪರಿಯಾಗಿ ಕೇಳಿಕೊಳ್ಳುವುದು ದಾಖಲಾಗಿದೆ. ಅಲ್ಲಿ ಸಿಕ್ಕಿರುವ ಮುಜರಾಯಿ ಇಲಾಖೆಯ ಗುರುತಿನ ಚೀಟಿಯಲ್ಲಿ ಜಗನ್ನಾಥ ಶೆಟ್ಟಿಯನ್ನು ಧಾರ್ಮಿಕ ಪರಿಷತ್ ಸದಸ್ಯ ಎಂದು ಹೆಸರಿಸಲಾಗಿದೆ. ಅಲ್ಲಿ ಒಂದಷ್ಟು ಕಂತೆ ಹಣ, ಕೆಲವು ಮಾತ್ರೆಗಳು ಸಹ ಕಂಡುಬಂದಿವೆ.

ಅದೇ ಸಂದರ್ಭದಲ್ಲಿ ಅಲ್ಲಿದ್ದ ಹುಡುಗಿಯು ತಾನು ವಿದ್ಯಾರ್ಥಿನಿಯಾಗಿದ್ದು, ಟ್ಯೂಷನ್ ಹೇಳಿಸಿಕೊಳ್ಳಲು ಬಂದಿದ್ದೇನೆ. ದಯವಿಟ್ಟು ಅವರಿಗೆ ಹೊಡೆಯಬೇಡಿ ಬಿಟ್ಟು ಬಿಡಿ ಎಂದು ಮನವಿ ಮಾಡುವುದು ಸಹ ಸೆರೆಯಾಗಿದೆ.

ಒಟ್ಟಾರೆಯಾಗಿ ಇದು ಹನಿಟ್ರ್ಯಾಪ್ ಪ್ರಕರಣವೇ? ಅಲ್ಲವೇ ಎಂಬುದು ಪೊಲೀಸ್ ತನಿಖೆಯಿಂದ ಮಾತ್ರ ಹೊರಬರಬೇಕಿದೆ. ಅಲ್ಲದೆ ಜಗನ್ನಾಥ ಶೆಟ್ಟಿ ತಾನೇ ಖುದ್ದು ಹುಡುಗಿಯೊಂದಿಗೆ ಲಾಡ್ಜ್‌ಗೆ ಹೋಗಿದ್ದರೂ ಸಹ ತನ್ನನ್ನು ಕಿಡ್ನಾಪ್ ಮಾಡಿ ಕರೆದುಕೊಂಡು ಹೋದರು ಎಂದು ಸುಳ್ಳು ದೂರು ನೀಡಿದ್ದು ಏಕೆ? ಸಲ್ಮಾ ಬಾನು ಗ್ಯಾಂಗ್‌ ಲಾಡ್ಜ್‌ಗೆ ಏಕೆ ದಾಳಿ ನಡೆಸಿತು ಎಂಬುದು ಸಹ ಹೊರಬರಬೇಕಿದೆ.

ಇದನ್ನೂ ಓದಿ: ಬೆಂಗಳೂರು ವಿ.ವಿ ಕ್ಯಾಂಪಸ್‌ನೊಳಗೆ ದೇವಸ್ಥಾನ ನಿರ್ಮಾಣದ ವಿರುದ್ಧ ಭಾರಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...