Homeಮುಖಪುಟಹನಿಟ್ರ್ಯಾಪ್ ದೂರು ನೀಡಿದ್ದ ಪ್ರಕರಣ: BJP ಮುಖಂಡ ಹುಡುಗಿಯೊಂದಿಗೆ ಸಿಕ್ಕಿಬಿದ್ದ ಆಡಿಯೋ, ವಿಡಿಯೋ ವೈರಲ್

ಹನಿಟ್ರ್ಯಾಪ್ ದೂರು ನೀಡಿದ್ದ ಪ್ರಕರಣ: BJP ಮುಖಂಡ ಹುಡುಗಿಯೊಂದಿಗೆ ಸಿಕ್ಕಿಬಿದ್ದ ಆಡಿಯೋ, ವಿಡಿಯೋ ವೈರಲ್

- Advertisement -
- Advertisement -

ಮಂಡ್ಯದ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಮುಖಂಡ, ಶ್ರೀನಿಧಿ ಗೋಲ್ಡ್ ಮಾಲೀಕ ಜಗನ್ನಾಥ ಶೆಟ್ಟಿಯು ಹುಡುಗಿಯನ್ನು ಹೋಟೆಲ್‌ಗೆ ಬಾ ಎಂದು ಕರೆಯುವ ಆಡಿಯೋ ಮತ್ತು ಹೋಟೆಲ್‌ನಲ್ಲಿ ಹುಡುಗಿಯೊಂದಿಗೆ ಅರೆಬರೆ ಬಟ್ಟೆಯಲ್ಲಿ ಸಿಕ್ಕಿಬಿದ್ದಿರುವ ವಿಡಿಯೋವೊಂದು ವೈರಲ್ ಆಗಿದೆ. ಹಾಗಾಗಿ ಅವರು ಕಳೆದ 15 ದಿನಗಳ ಹಿಂದೆ ತನ್ನನ್ನು ಕಿಡ್ನಾಪ್ ಮಾಡಿ, ಹನಿಟ್ರ್ಯಾಪ್ ಪ್ರಕರಣದಲ್ಲಿ ಸಿಲುಕಿಸಿದ್ದಾರೆ ಎಂದು ನೀಡಿದ್ದ ದೂರಿನ ಪ್ರಕರಣಕ್ಕೆ ಮಹತ್ತರ ತಿರುವು ಸಿಕ್ಕಿದೆ.

ಮೂಲತಃ ಉಡುಪಿ ಮೂಲದ ಜಗನ್ನಾಥ ಶೆಟ್ಟಿಯೂ ತಾನು ಮಂಗಳೂರಿಗೆ ಹೋಗಲು ಮಂಡ್ಯದಲ್ಲಿ ಬಸ್‌ಗಾಗಿ ಕಾಯುತ್ತಿದ್ದೆ. ಆಗ ಡ್ರಾಪ್ ಕೊಡುವ ನೆಪದಲ್ಲಿ ನಾಲ್ವರು ತನ್ನನ್ನು ಮೈಸೂರಿಗೆ ಕರೆದೊಯ್ದರು. ಆನಂತರ ಗೋಲ್ಡ್ ಬಿಸ್ಕೆಟ್ ಪರೀಕ್ಷಿಸಲು ಬಾ ಎಂದು ಕಿಡ್ನಾಪ್ ಮಾಡಿ ಮೈಸೂರಿನ ದರ್ಶನ್‌ ಲಾಡ್ಜ್‌ಗೆ ಕರೆದೊಯ್ದು, ಅಲ್ಲಿದ್ದ ಹುಡುಗಿಯೊಂದಿಗೆ ವಿಡಿಯೊ ಮಾಡಿದರು. ವಿಡಿಯೋ ಹರಿಯಬಿಡುವುದಾಗಿ ಬೆದರಿಸಿ 50 ಲಕ್ಷ ಸುಲಿಗೆ ಮಾಡಿದ್ದಾರೆ ಎಂದು ಆಗಸ್ಟ್ 19 ರಂದು ಮಂಡ್ಯದ ಪಶ್ಚಿಮ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅದರ ಆಧಾರದಲ್ಲಿ ಹನಿಟ್ರ್ಯಾಪ್ ಪ್ರಕರಣ ದಾಖಲಿಸಿದ್ದ ಪೊಲೀಸರು ಸಲ್ಮಾಬಾನು, ಸೇರಿದಂತೆ ಹಲವರನ್ನು ಬಂಧಿಸಿ ಪೊಲೀಸ್ ಕಸ್ಟಡಿಗೆ ಪಡೆದಿದ್ದರು.

ಆದರೆ ಅದಾಗ 15 ದಿನಗಳ ನಂತರ ಜಗನ್ನಾಥ ಶೆಟ್ಟಿಯದು ಎಂದು ಹೇಳಲಾದ ಹುಡುಗಿಯೊಂದಿಗೆ ಮಾತನಾಡುವ 15 ನಿಮಿಷಗಳ ಆಡಿಯೋ ವೈರಲ್ ಆಗಿದೆ. ಅದರಲ್ಲಿ ತನ್ನನ್ನು ಹುಬ್ಬಳ್ಳಿ ಮೂಲಕ ಉಪನ್ಯಾಸಕ ಎಂದು ಹೇಳಿಕೊಳ್ಳುವ ಆತ ಮೈಸೂರಿನ ಲಾಡ್ಜ್‌ಗೆ ಎರಡು ದಿನಗಳ ಕಾಲ ಹೋಗೋಣ ಬಾ ಎಂದು ಸ್ವತಃ ಕರೆಯುತ್ತಾನೆ. ಒಳ್ಳೆಯ ಲಾಡ್ಜ್‌ಗಳಿವೆ, ಅಲ್ಲಿ ಎರಡು ದಿನ ಉಳಿಯೋಣ, ಎಂಜಾಯ್ ಮಾಡೋಣ, ಕಾರಿನಲ್ಲಿ ಹೋಗೋಣ, ಒಟ್ಟಿಗೆ ಊಟ ಮಾಡೋಣ ಎಂದು ಹೇಳಿದ್ದಾನೆ. ಅದಕ್ಕೆ ಹುಡುಗಿ ಸಹ ಒಪ್ಪಿ ಬರುತ್ತೇನೆ ಎಂದು ಹೇಳುವುದು ದಾಖಲಾಗಿದೆ. ಆನಂತರ ಮತ್ತೊಂದು ವಿಡಿಯೋ ವೈರಲ್ ಆಗಿದ್ದು ಅದರಲ್ಲಿ ಅದೇ ಹುಡುಗಿ ಜಗನ್ನಾಥ ಶೆಟ್ಟಿಯೊಂದಿಗೆ ಅದೇ ದರ್ಶನ್ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದಿರುವುದು ಸೆರೆಯಾಗಿದೆ.

ವಿಡಿಯೋದಲ್ಲಿ ಸಲ್ಮಾ ಬಾನು ಕಡೆಯವರು ಆತನನ್ನು ಪ್ರಶ್ನಿಸುವ ಮತ್ತು ಹಲ್ಲೆ ಮಾಡುವುದು ಕಂಡುಬಂದಿದೆ. ಆ ಸಂದರ್ಭದಲ್ಲಿ ಜಗನ್ನಾಥ ಶೆಟ್ಟಿ ತಪ್ಪಾಯ್ತು ಬಿಟ್ಟು ಬಿಡಿ, ಇಲ್ಲದಿದ್ದರೆ ನಾನು ನೇಣು ಹಾಕಿಕೊಂಡು ಸತ್ತು ಹೋಗುತ್ತೇನೆ ಎಂದು ಪರಿ ಪರಿಯಾಗಿ ಕೇಳಿಕೊಳ್ಳುವುದು ದಾಖಲಾಗಿದೆ. ಅಲ್ಲಿ ಸಿಕ್ಕಿರುವ ಮುಜರಾಯಿ ಇಲಾಖೆಯ ಗುರುತಿನ ಚೀಟಿಯಲ್ಲಿ ಜಗನ್ನಾಥ ಶೆಟ್ಟಿಯನ್ನು ಧಾರ್ಮಿಕ ಪರಿಷತ್ ಸದಸ್ಯ ಎಂದು ಹೆಸರಿಸಲಾಗಿದೆ. ಅಲ್ಲಿ ಒಂದಷ್ಟು ಕಂತೆ ಹಣ, ಕೆಲವು ಮಾತ್ರೆಗಳು ಸಹ ಕಂಡುಬಂದಿವೆ.

ಅದೇ ಸಂದರ್ಭದಲ್ಲಿ ಅಲ್ಲಿದ್ದ ಹುಡುಗಿಯು ತಾನು ವಿದ್ಯಾರ್ಥಿನಿಯಾಗಿದ್ದು, ಟ್ಯೂಷನ್ ಹೇಳಿಸಿಕೊಳ್ಳಲು ಬಂದಿದ್ದೇನೆ. ದಯವಿಟ್ಟು ಅವರಿಗೆ ಹೊಡೆಯಬೇಡಿ ಬಿಟ್ಟು ಬಿಡಿ ಎಂದು ಮನವಿ ಮಾಡುವುದು ಸಹ ಸೆರೆಯಾಗಿದೆ.

ಒಟ್ಟಾರೆಯಾಗಿ ಇದು ಹನಿಟ್ರ್ಯಾಪ್ ಪ್ರಕರಣವೇ? ಅಲ್ಲವೇ ಎಂಬುದು ಪೊಲೀಸ್ ತನಿಖೆಯಿಂದ ಮಾತ್ರ ಹೊರಬರಬೇಕಿದೆ. ಅಲ್ಲದೆ ಜಗನ್ನಾಥ ಶೆಟ್ಟಿ ತಾನೇ ಖುದ್ದು ಹುಡುಗಿಯೊಂದಿಗೆ ಲಾಡ್ಜ್‌ಗೆ ಹೋಗಿದ್ದರೂ ಸಹ ತನ್ನನ್ನು ಕಿಡ್ನಾಪ್ ಮಾಡಿ ಕರೆದುಕೊಂಡು ಹೋದರು ಎಂದು ಸುಳ್ಳು ದೂರು ನೀಡಿದ್ದು ಏಕೆ? ಸಲ್ಮಾ ಬಾನು ಗ್ಯಾಂಗ್‌ ಲಾಡ್ಜ್‌ಗೆ ಏಕೆ ದಾಳಿ ನಡೆಸಿತು ಎಂಬುದು ಸಹ ಹೊರಬರಬೇಕಿದೆ.

ಇದನ್ನೂ ಓದಿ: ಬೆಂಗಳೂರು ವಿ.ವಿ ಕ್ಯಾಂಪಸ್‌ನೊಳಗೆ ದೇವಸ್ಥಾನ ನಿರ್ಮಾಣದ ವಿರುದ್ಧ ಭಾರಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಒಪ್ಪುವುದಿಲ್ಲ : ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...