Homeಕರ್ನಾಟಕಹನಿಟ್ರ್ಯಾಪ್ ಆರೋಪದಲ್ಲಿ ಸಿಕ್ಕ ಬಿದ್ದ ಆರು ಜನರು... ಪೊಲೀಸರ ಮೇಲೆ ಗುಂಡು ಹಾರಿಸಿ ಏಒನ್ ಆರೋಪಿ...

ಹನಿಟ್ರ್ಯಾಪ್ ಆರೋಪದಲ್ಲಿ ಸಿಕ್ಕ ಬಿದ್ದ ಆರು ಜನರು… ಪೊಲೀಸರ ಮೇಲೆ ಗುಂಡು ಹಾರಿಸಿ ಏಒನ್ ಆರೋಪಿ ಪರಾರಿ

- Advertisement -
- Advertisement -

ಯುವತಿಯೊಬ್ಬಳನ್ನು ಬಳಸಿ ವ್ಯಕ್ತಿಯೊಬ್ಬರನ್ನು ಹನಿಟ್ರ್ಯಾಪ್ ಸಂಚಿನಲ್ಲಿ ಸಿಲುಕಿಸಿ, 3.80 ಲಕ್ಷ ರೂ. ನಗದನ್ನು ಲಪಟಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಅಪರಾಧ ಪತ್ತೆದಳ ಯಶಸ್ವಿಯಾಗಿದೆ.

ಬಂಧಿತರನ್ನು ಮುಹಮದ್ ಅಝರುದ್ದೀನ್(24), ಅಬೂಬಕರ್ ಸಿದ್ದೀಕ್(33), ಹಸೈನಾರ್ ಅಲಿಯಾಸ್ ಅಚ್ಚು(27), ಇರ್ಷಾದ್ ಅಲಿ(27), ಎ.ಎ.ಸಮೀರ್(28) ಹಾಗೂ ಓರ್ವ ಕಾಲೇಜು ವಿದ್ಯಾರ್ಥಿನಿ ಕೂಡ ಬಂಧನಕ್ಕೆ ಒಳಗಾಗಿದ್ದಾಳೆ. ಬಂಧಿತ ಆರೋಪಿಗಳಿಂದ 1 ಲಕ್ಷ ರೂ. ಗಳನ್ನು ವಶಕ್ಕೆ ಪಡೆಯಲಾಗಿದೆ.

ಈ ಪ್ರಕರಣದಲ್ಲಿ ಒಟ್ಟು 10 ಮಂದಿ ಶಾಮೀಲಾಗಿದ್ದು, ಪ್ರಮುಖ ಆರೋಪಿ ಸೇರಿದಂತೆ ನಾಲ್ವರ ಪತ್ತೆಗಾಗಿ ಶೋಧ ಕಾರ್ಯ ಚುರುಕುಗೊಂಡಿದೆ. ನಾಪೋಕ್ಲು ಪೊಲೀಸ್ ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ಸುಮನ ಡಿ. ಪನ್ನೇಕರ್ ತಿಳಿಸಿದ್ದಾರೆ.

ಪ್ರಕರಣದ ಹಿನ್ನೆಲೆ

ದುಬೈನಲ್ಲಿದ್ದ ನಾಪೋಕ್ಲು ಎಮ್ಮೆಮಾಡು ನಿವಾಸಿ ಗಫೂರ್ ಆಗಸ್ಟ್ ತಿಂಗಳಿನಲ್ಲಿ ತಮ್ಮ ಊರಿಗೆ ಬಂದಿದ್ದರು. ಹೊಸ ಮನೆಯನ್ನು ನಿರ್ಮಿಸುವ ಯೋಜನೆ ಹಾಕಿಕೊಂಡಿದ್ದ ಅವರ ಬಳಿ ಹಣ ಇರುವ ಬಗ್ಗೆ ಮಾಹಿತಿ ತಿಳಿದ ಎಮ್ಮೆಮಾಡು ನಿವಾಸಿ ಕರೀಂ ಎಂಬಾತ ಸ್ಥಳೀಯ ಯುವಕರನ್ನು ಸಂಪರ್ಕಿಸಿ ಗಫೂರ್ ಬಳಿಯಿದ್ದ ಹಣವನ್ನು ಲಪಟಾಯಿಸಲು ಸಂಚು ಹೂಡಿದ್ದರು ಎನ್ನಲಾಗಿದೆ. ಅದರಂತೆ ಆಗಸ್ಟ್ 16ರಂದು ಗಫೂರ್ ಅವರನ್ನು ಕರೆದುಕೊಂಡು ಮನೆ ಬಳಕೆಯ ಎಲೆಕ್ಟ್ರಿಕಲ್ ವಸ್ತುಗಳನ್ನು ಖರೀದಿಸಲು ಮೈಸೂರಿಗೆ ತೆರಳುವಂತೆ ಆರೋಪಿಗಳು ಮನವೊಲಿಸಿದ್ದರು. ಅದರಂತೆ ಕರೀಂ ಮತ್ತು ಅಝರುದ್ದೀನ್ ಅವರು ಗಫೂರ್ ಅವರನ್ನು ಕರೆದುಕೊಂಡು ಮೈಸೂರಿಗೆ ತೆರಳುವಾಗ ಮೊದಲೇ ಸಂಚು ರೂಪಿಸಿದಂತೆ ಆರೋಪಿಗಳು ಕುಶಾಲನಗರದಿಂದ ಕಾಲೇಜು ಯುವತಿಯೊಬ್ಬಳನ್ನು ಜೊತೆಗೆ ಕರೆದುಕೊಂಡು ಹೋಗಿದ್ದಾರೆ. ಮೈಸೂರಿಗೆ ತಲುಪಿದ ಬಳಿಕ ಕತ್ತಲಾದ ಕಾರಣ ಮೈಸೂರಿನ ರಿಂಗ್ ರೋಡ್‍ನ ಹೋಂ ಸ್ಟೇ ಯಲ್ಲಿ ವಿಶ್ರಾಂತಿ ಪಡೆಯುವಂತೆ ಹೇಳಿ, ಯುವತಿ ಮತ್ತು ಗಫೂರ್ ಅವರನ್ನು ಆರೋಪಿಗಳು ಅಲ್ಲಿಗೆ ಕರೆದೊಯ್ದಿದ್ದರು. ಈ ಸಂದರ್ಭ ಗಫೂರ್ ಅವರಿಗೆ ಅಮಲು ಬರುವ ಪದಾರ್ಥವನ್ನು ನೀಡಿದ್ದರು ಎನ್ನಲಾಗಿದೆ.

ಮೊದಲೇ ನಿರ್ಧರಿಸಿದಂತೆ ಕೆಲವು ಸಮಯದ ಬಳಿಕ ಉಳಿದ ಆರೋಪಿಗಳು ಗಫೂರ್ ಮತ್ತು ಯುವತಿ ಉಳಿದುಕೊಂಡಿದ್ದ ಹೋಂ ಸ್ಟೇ ಮೇಲೆ ದಾಳಿ ನಡೆಸಿದ್ದಾರೆ. ನಾವು ಪತ್ರಿಕಾ ಮಾಧ್ಯಮದವರೆಂದು ಹೇಳಿಕೊಂಡು ಗಫೂರ್ ಮೇಲೆ ಹಲ್ಲೆ ನಡೆಸಿದ್ದಲ್ಲದೇ ಗಫೂರ್ ಮತ್ತು ಯುವತಿಯನ್ನು ಜೊತೆಯಲ್ಲಿ ನಿಲ್ಲಿಸಿ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ತೆಗೆದಿದ್ದಾರೆ.

ನಂತರ ಗಫೂರ್ ಬಳಿಯಿದ್ದ 60 ಸಾವಿರ ರೂ. ನಗದು ಮತ್ತು 55 ಸಾವಿರ ಮುಖ ಬೆಲೆಯ ಫಾರಿನ್ ಕರೆನ್ಸಿ, ಎಟಿಎಂ ಕಾರ್ಡ್ ಕಸಿದುಕೊಂಡಿದ್ದಾರೆ. ಅಲ್ಲದೇ 50 ಲಕ್ಷ ರೂ. ಗಳನ್ನು ತಕ್ಷಣ ನೀಡದಿದ್ದಲ್ಲಿ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ಟಿವಿ ಯಲ್ಲಿ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಇದರಿಂದ ಆತಂಕಗೊಂಡ ಗಫೂರ್ ತಮ್ಮ ಬಳಿಯಿದ್ದ 3 ಲಕ್ಷ ರೂ. ಮತ್ತು ಮನೆಯಿಂದ ಹಣವನ್ನು ತರಿಸಿಕೊಂಡು ಒಟ್ಟು 3.80 ಲಕ್ಷ ರೂ. ಗಳನ್ನು ಆರೋಪಿಗಳಿಗೆ ನೀಡಿದ್ದಾರೆ. ನಂತರ ಆರೋಪಿಗಳು ಗಫೂರ್ ಅವರನ್ನು ಬಿಟ್ಟು ಕಳುಹಿಸಿದ್ದರು ಎಂದು ಆರೋಪಿಸಲಾಗಿದೆ.

ಒಂದು ತಿಂಗಳ ಹಿಂದೆ ಹನಿಟ್ರ್ಯಾಪ್ ಪ್ರಕರಣ ನಡೆದಿರುವ ಬಗ್ಗೆ ಜಿಲ್ಲಾ ಅಪರಾಧ ಪ್ತತೆದಳಕ್ಕೆ ಖಚಿತ ಮಾಹಿತಿ ದೊರಕಿತ್ತು. ಇದನ್ನು ಆಧರಿಸಿ ತನಿಖೆ ನಡೆಸಿದ ಅಪರಾಧ ಪತ್ತೆ ದಳ ನಾಪೋಕ್ಲುವಿನ ಎಮ್ಮೆಮಾಡು ನಿವಾಸಿ ಗಫೂರ್ ಅವರು ಹನಿಟ್ರ್ಯಾಪ್ ಪ್ರಕರಣದಲ್ಲಿ ಸಂತ್ರಸ್ತರಾಗಿರುವ ಬಗ್ಗೆ ಮಾಹಿತಿ ಸಂಗ್ರಹಿಸುತ್ತಾರೆ. ಗಫೂರ್ ಅವರ ಮನವೊಲಿಸಿದ ಪೊಲೀಸರು ನಾಪೋಕ್ಲು ಪೊಲೀಸ್ ಠಾಣೆಯಲ್ಲಿ 10 ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದರು. ಪೊಲೀಸ್ ವರಿಷ್ಟಾಧಿಕಾರಿ ಡಾ.ಸುಮನ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ಅಪರಾಧ ಪತ್ತೆ ದಳ 10 ಮಂದಿ ಆರೋಪಿಗಳ ಪೈಕಿ 6 ಮಂದಿಯನ್ನು ಬಂಧಿಸಿದೆ.

ಬಂಧಿತ ಆರೋಪಿಗಳು ಎಮ್ಮೆಮಾಡು ನಿವಾಸಿಗಳಾಗಿದ್ದು, ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಕಲಂ 120(ಬಿ), 328, 384, 395, ಮತ್ತು 149 ಐಪಿಸಿ ಸೆಕ್ಷನ್ ಗಳ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಇತರ 4 ಮಂದಿ ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿಸಲಾಗಿದೆ.

ಪೊಲೀಸರಿಗೆ ಗುಂಡು

ಪ್ರಕರಣದ ಬಯಲಾಗುತ್ತಿದ್ದಂತೆಯೇ ಪ್ರಮುಖ ಆರೋಪಿ ಕರೀಂನನ್ನು ಬಂಧಿಸಲು ಜಿಲ್ಲಾ ಅಪರಾಧ ಪತ್ತೆ ದಳದ ಸಹಾಯಕ ನಿರೀಕ್ಷಕ ಮತ್ತು ಇತರ 4 ಮಂದಿ ಸಿಬ್ಬಂದಿಗಳು ಕರೀಂನ ಮನೆಗೆ ತೆರಳಿದ್ದರು. ಬಂಧನದ ಮಾಹಿತಿ ಅರಿತ ಕರೀಂ ಮನೆಯೊಳಗಿದ್ದ ಬಂದೂಕಿನಿಂದ ಪೊಲೀಸರ ಮೇಲೆ ಒಂದು ಸುತ್ತು ಗುಂಡು ಹಾರಿಸಿದ್ದು, ಪೊಲೀಸ್ ಸಹಾಯಕ ನಿರೀಕ್ಷಕ ಹಮೀದ್ ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದರು. ಗುಂಡು ಪಕ್ಕದಲ್ಲಿದ್ದ ತಡೆಗೋಡೆಗೆ ಬಡಿದಿದ್ದು, ಬಳಿಕ ಕರೀಂ ತನ್ನ ಇಬ್ಬರು ಹೆಂಡತಿಯರ ಸಹಿತ ಸ್ಥಳದಿಂದ ಪರಾರಿಯಾಗಿದ್ದಾನೆ. ಪೊಲೀಸರಿಗೆ ಗುಂಡು ಹೊಡೆಯುವಂತೆ ಆತನ ಪತ್ನಿಯೇ ಕೋವಿಯನ್ನು ತಂದು ಕೊಟ್ಟಿದ್ದಳು ಎನ್ನಲಾಗಿದೆ.

ಈ ಕುರಿತು ಪ್ರತ್ಯೇಕ ಪ್ರಕರಣವು ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 353, 307, 325 ಮತ್ತು ಭಾರತೀಯ ಶಸ್ತ್ರಾಸ್ತ್ರ ದುರ್ಬಳಕೆ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಕರೀಂ ಮತ್ತು ಆತನ ಇಬ್ಬರು ಪತ್ನಿಯರು ಕೂಡ ಆರೋಪಿಗಳಾಗಿದ್ದು, ಈಗ ತಲೆ ಮರೆಸಿಕೊಂಡಿದ್ದಾರೆ. ಕರೀಂ 2015ರಲ್ಲಿ ನಡೆದ ಟಿಪ್ಪು ಗಲಭೆಯಲ್ಲೂ ಪ್ರಮುಖ ಪಾತ್ರ ವಹಿಸಿರುವ ಆರೋಪದಲ್ಲಿ ಪ್ರಕರಣವೂ ದಾಖಲಾಗಿದೆ. ಆತನ ಹಿನ್ನಲೆಯನ್ನು ಕೂಡ ತನಿಖೆ ನಡೆಸಲಾಗುತ್ತಿದ್ದು, ಆತನ ಬಂಧನದ ಬಳಿಕ ಹೆಚ್ಚಿನ ಮಾಹಿತಿ ದೊರೆಯಲಿದೆ ಎಂದು ಪೊಲೀಸ್ ವರಿಷ್ಟಾಧಿಕಾರಿ ಡಾ. ಸುಮನ್ ಡಿ.ಪನ್ನೇಕರ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...