Homeಕರ್ನಾಟಕಹನಿಟ್ರ್ಯಾಪ್ ಆರೋಪದಲ್ಲಿ ಸಿಕ್ಕ ಬಿದ್ದ ಆರು ಜನರು... ಪೊಲೀಸರ ಮೇಲೆ ಗುಂಡು ಹಾರಿಸಿ ಏಒನ್ ಆರೋಪಿ...

ಹನಿಟ್ರ್ಯಾಪ್ ಆರೋಪದಲ್ಲಿ ಸಿಕ್ಕ ಬಿದ್ದ ಆರು ಜನರು… ಪೊಲೀಸರ ಮೇಲೆ ಗುಂಡು ಹಾರಿಸಿ ಏಒನ್ ಆರೋಪಿ ಪರಾರಿ

- Advertisement -
- Advertisement -

ಯುವತಿಯೊಬ್ಬಳನ್ನು ಬಳಸಿ ವ್ಯಕ್ತಿಯೊಬ್ಬರನ್ನು ಹನಿಟ್ರ್ಯಾಪ್ ಸಂಚಿನಲ್ಲಿ ಸಿಲುಕಿಸಿ, 3.80 ಲಕ್ಷ ರೂ. ನಗದನ್ನು ಲಪಟಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಅಪರಾಧ ಪತ್ತೆದಳ ಯಶಸ್ವಿಯಾಗಿದೆ.

ಬಂಧಿತರನ್ನು ಮುಹಮದ್ ಅಝರುದ್ದೀನ್(24), ಅಬೂಬಕರ್ ಸಿದ್ದೀಕ್(33), ಹಸೈನಾರ್ ಅಲಿಯಾಸ್ ಅಚ್ಚು(27), ಇರ್ಷಾದ್ ಅಲಿ(27), ಎ.ಎ.ಸಮೀರ್(28) ಹಾಗೂ ಓರ್ವ ಕಾಲೇಜು ವಿದ್ಯಾರ್ಥಿನಿ ಕೂಡ ಬಂಧನಕ್ಕೆ ಒಳಗಾಗಿದ್ದಾಳೆ. ಬಂಧಿತ ಆರೋಪಿಗಳಿಂದ 1 ಲಕ್ಷ ರೂ. ಗಳನ್ನು ವಶಕ್ಕೆ ಪಡೆಯಲಾಗಿದೆ.

ಈ ಪ್ರಕರಣದಲ್ಲಿ ಒಟ್ಟು 10 ಮಂದಿ ಶಾಮೀಲಾಗಿದ್ದು, ಪ್ರಮುಖ ಆರೋಪಿ ಸೇರಿದಂತೆ ನಾಲ್ವರ ಪತ್ತೆಗಾಗಿ ಶೋಧ ಕಾರ್ಯ ಚುರುಕುಗೊಂಡಿದೆ. ನಾಪೋಕ್ಲು ಪೊಲೀಸ್ ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ಸುಮನ ಡಿ. ಪನ್ನೇಕರ್ ತಿಳಿಸಿದ್ದಾರೆ.

ಪ್ರಕರಣದ ಹಿನ್ನೆಲೆ

ದುಬೈನಲ್ಲಿದ್ದ ನಾಪೋಕ್ಲು ಎಮ್ಮೆಮಾಡು ನಿವಾಸಿ ಗಫೂರ್ ಆಗಸ್ಟ್ ತಿಂಗಳಿನಲ್ಲಿ ತಮ್ಮ ಊರಿಗೆ ಬಂದಿದ್ದರು. ಹೊಸ ಮನೆಯನ್ನು ನಿರ್ಮಿಸುವ ಯೋಜನೆ ಹಾಕಿಕೊಂಡಿದ್ದ ಅವರ ಬಳಿ ಹಣ ಇರುವ ಬಗ್ಗೆ ಮಾಹಿತಿ ತಿಳಿದ ಎಮ್ಮೆಮಾಡು ನಿವಾಸಿ ಕರೀಂ ಎಂಬಾತ ಸ್ಥಳೀಯ ಯುವಕರನ್ನು ಸಂಪರ್ಕಿಸಿ ಗಫೂರ್ ಬಳಿಯಿದ್ದ ಹಣವನ್ನು ಲಪಟಾಯಿಸಲು ಸಂಚು ಹೂಡಿದ್ದರು ಎನ್ನಲಾಗಿದೆ. ಅದರಂತೆ ಆಗಸ್ಟ್ 16ರಂದು ಗಫೂರ್ ಅವರನ್ನು ಕರೆದುಕೊಂಡು ಮನೆ ಬಳಕೆಯ ಎಲೆಕ್ಟ್ರಿಕಲ್ ವಸ್ತುಗಳನ್ನು ಖರೀದಿಸಲು ಮೈಸೂರಿಗೆ ತೆರಳುವಂತೆ ಆರೋಪಿಗಳು ಮನವೊಲಿಸಿದ್ದರು. ಅದರಂತೆ ಕರೀಂ ಮತ್ತು ಅಝರುದ್ದೀನ್ ಅವರು ಗಫೂರ್ ಅವರನ್ನು ಕರೆದುಕೊಂಡು ಮೈಸೂರಿಗೆ ತೆರಳುವಾಗ ಮೊದಲೇ ಸಂಚು ರೂಪಿಸಿದಂತೆ ಆರೋಪಿಗಳು ಕುಶಾಲನಗರದಿಂದ ಕಾಲೇಜು ಯುವತಿಯೊಬ್ಬಳನ್ನು ಜೊತೆಗೆ ಕರೆದುಕೊಂಡು ಹೋಗಿದ್ದಾರೆ. ಮೈಸೂರಿಗೆ ತಲುಪಿದ ಬಳಿಕ ಕತ್ತಲಾದ ಕಾರಣ ಮೈಸೂರಿನ ರಿಂಗ್ ರೋಡ್‍ನ ಹೋಂ ಸ್ಟೇ ಯಲ್ಲಿ ವಿಶ್ರಾಂತಿ ಪಡೆಯುವಂತೆ ಹೇಳಿ, ಯುವತಿ ಮತ್ತು ಗಫೂರ್ ಅವರನ್ನು ಆರೋಪಿಗಳು ಅಲ್ಲಿಗೆ ಕರೆದೊಯ್ದಿದ್ದರು. ಈ ಸಂದರ್ಭ ಗಫೂರ್ ಅವರಿಗೆ ಅಮಲು ಬರುವ ಪದಾರ್ಥವನ್ನು ನೀಡಿದ್ದರು ಎನ್ನಲಾಗಿದೆ.

ಮೊದಲೇ ನಿರ್ಧರಿಸಿದಂತೆ ಕೆಲವು ಸಮಯದ ಬಳಿಕ ಉಳಿದ ಆರೋಪಿಗಳು ಗಫೂರ್ ಮತ್ತು ಯುವತಿ ಉಳಿದುಕೊಂಡಿದ್ದ ಹೋಂ ಸ್ಟೇ ಮೇಲೆ ದಾಳಿ ನಡೆಸಿದ್ದಾರೆ. ನಾವು ಪತ್ರಿಕಾ ಮಾಧ್ಯಮದವರೆಂದು ಹೇಳಿಕೊಂಡು ಗಫೂರ್ ಮೇಲೆ ಹಲ್ಲೆ ನಡೆಸಿದ್ದಲ್ಲದೇ ಗಫೂರ್ ಮತ್ತು ಯುವತಿಯನ್ನು ಜೊತೆಯಲ್ಲಿ ನಿಲ್ಲಿಸಿ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ತೆಗೆದಿದ್ದಾರೆ.

ನಂತರ ಗಫೂರ್ ಬಳಿಯಿದ್ದ 60 ಸಾವಿರ ರೂ. ನಗದು ಮತ್ತು 55 ಸಾವಿರ ಮುಖ ಬೆಲೆಯ ಫಾರಿನ್ ಕರೆನ್ಸಿ, ಎಟಿಎಂ ಕಾರ್ಡ್ ಕಸಿದುಕೊಂಡಿದ್ದಾರೆ. ಅಲ್ಲದೇ 50 ಲಕ್ಷ ರೂ. ಗಳನ್ನು ತಕ್ಷಣ ನೀಡದಿದ್ದಲ್ಲಿ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ಟಿವಿ ಯಲ್ಲಿ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಇದರಿಂದ ಆತಂಕಗೊಂಡ ಗಫೂರ್ ತಮ್ಮ ಬಳಿಯಿದ್ದ 3 ಲಕ್ಷ ರೂ. ಮತ್ತು ಮನೆಯಿಂದ ಹಣವನ್ನು ತರಿಸಿಕೊಂಡು ಒಟ್ಟು 3.80 ಲಕ್ಷ ರೂ. ಗಳನ್ನು ಆರೋಪಿಗಳಿಗೆ ನೀಡಿದ್ದಾರೆ. ನಂತರ ಆರೋಪಿಗಳು ಗಫೂರ್ ಅವರನ್ನು ಬಿಟ್ಟು ಕಳುಹಿಸಿದ್ದರು ಎಂದು ಆರೋಪಿಸಲಾಗಿದೆ.

ಒಂದು ತಿಂಗಳ ಹಿಂದೆ ಹನಿಟ್ರ್ಯಾಪ್ ಪ್ರಕರಣ ನಡೆದಿರುವ ಬಗ್ಗೆ ಜಿಲ್ಲಾ ಅಪರಾಧ ಪ್ತತೆದಳಕ್ಕೆ ಖಚಿತ ಮಾಹಿತಿ ದೊರಕಿತ್ತು. ಇದನ್ನು ಆಧರಿಸಿ ತನಿಖೆ ನಡೆಸಿದ ಅಪರಾಧ ಪತ್ತೆ ದಳ ನಾಪೋಕ್ಲುವಿನ ಎಮ್ಮೆಮಾಡು ನಿವಾಸಿ ಗಫೂರ್ ಅವರು ಹನಿಟ್ರ್ಯಾಪ್ ಪ್ರಕರಣದಲ್ಲಿ ಸಂತ್ರಸ್ತರಾಗಿರುವ ಬಗ್ಗೆ ಮಾಹಿತಿ ಸಂಗ್ರಹಿಸುತ್ತಾರೆ. ಗಫೂರ್ ಅವರ ಮನವೊಲಿಸಿದ ಪೊಲೀಸರು ನಾಪೋಕ್ಲು ಪೊಲೀಸ್ ಠಾಣೆಯಲ್ಲಿ 10 ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದರು. ಪೊಲೀಸ್ ವರಿಷ್ಟಾಧಿಕಾರಿ ಡಾ.ಸುಮನ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ಅಪರಾಧ ಪತ್ತೆ ದಳ 10 ಮಂದಿ ಆರೋಪಿಗಳ ಪೈಕಿ 6 ಮಂದಿಯನ್ನು ಬಂಧಿಸಿದೆ.

ಬಂಧಿತ ಆರೋಪಿಗಳು ಎಮ್ಮೆಮಾಡು ನಿವಾಸಿಗಳಾಗಿದ್ದು, ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಕಲಂ 120(ಬಿ), 328, 384, 395, ಮತ್ತು 149 ಐಪಿಸಿ ಸೆಕ್ಷನ್ ಗಳ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಇತರ 4 ಮಂದಿ ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿಸಲಾಗಿದೆ.

ಪೊಲೀಸರಿಗೆ ಗುಂಡು

ಪ್ರಕರಣದ ಬಯಲಾಗುತ್ತಿದ್ದಂತೆಯೇ ಪ್ರಮುಖ ಆರೋಪಿ ಕರೀಂನನ್ನು ಬಂಧಿಸಲು ಜಿಲ್ಲಾ ಅಪರಾಧ ಪತ್ತೆ ದಳದ ಸಹಾಯಕ ನಿರೀಕ್ಷಕ ಮತ್ತು ಇತರ 4 ಮಂದಿ ಸಿಬ್ಬಂದಿಗಳು ಕರೀಂನ ಮನೆಗೆ ತೆರಳಿದ್ದರು. ಬಂಧನದ ಮಾಹಿತಿ ಅರಿತ ಕರೀಂ ಮನೆಯೊಳಗಿದ್ದ ಬಂದೂಕಿನಿಂದ ಪೊಲೀಸರ ಮೇಲೆ ಒಂದು ಸುತ್ತು ಗುಂಡು ಹಾರಿಸಿದ್ದು, ಪೊಲೀಸ್ ಸಹಾಯಕ ನಿರೀಕ್ಷಕ ಹಮೀದ್ ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದರು. ಗುಂಡು ಪಕ್ಕದಲ್ಲಿದ್ದ ತಡೆಗೋಡೆಗೆ ಬಡಿದಿದ್ದು, ಬಳಿಕ ಕರೀಂ ತನ್ನ ಇಬ್ಬರು ಹೆಂಡತಿಯರ ಸಹಿತ ಸ್ಥಳದಿಂದ ಪರಾರಿಯಾಗಿದ್ದಾನೆ. ಪೊಲೀಸರಿಗೆ ಗುಂಡು ಹೊಡೆಯುವಂತೆ ಆತನ ಪತ್ನಿಯೇ ಕೋವಿಯನ್ನು ತಂದು ಕೊಟ್ಟಿದ್ದಳು ಎನ್ನಲಾಗಿದೆ.

ಈ ಕುರಿತು ಪ್ರತ್ಯೇಕ ಪ್ರಕರಣವು ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 353, 307, 325 ಮತ್ತು ಭಾರತೀಯ ಶಸ್ತ್ರಾಸ್ತ್ರ ದುರ್ಬಳಕೆ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಕರೀಂ ಮತ್ತು ಆತನ ಇಬ್ಬರು ಪತ್ನಿಯರು ಕೂಡ ಆರೋಪಿಗಳಾಗಿದ್ದು, ಈಗ ತಲೆ ಮರೆಸಿಕೊಂಡಿದ್ದಾರೆ. ಕರೀಂ 2015ರಲ್ಲಿ ನಡೆದ ಟಿಪ್ಪು ಗಲಭೆಯಲ್ಲೂ ಪ್ರಮುಖ ಪಾತ್ರ ವಹಿಸಿರುವ ಆರೋಪದಲ್ಲಿ ಪ್ರಕರಣವೂ ದಾಖಲಾಗಿದೆ. ಆತನ ಹಿನ್ನಲೆಯನ್ನು ಕೂಡ ತನಿಖೆ ನಡೆಸಲಾಗುತ್ತಿದ್ದು, ಆತನ ಬಂಧನದ ಬಳಿಕ ಹೆಚ್ಚಿನ ಮಾಹಿತಿ ದೊರೆಯಲಿದೆ ಎಂದು ಪೊಲೀಸ್ ವರಿಷ್ಟಾಧಿಕಾರಿ ಡಾ. ಸುಮನ್ ಡಿ.ಪನ್ನೇಕರ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...