Homeಕರ್ನಾಟಕಹನಿಟ್ರ್ಯಾಪ್ ಆರೋಪದಲ್ಲಿ ಸಿಕ್ಕ ಬಿದ್ದ ಆರು ಜನರು... ಪೊಲೀಸರ ಮೇಲೆ ಗುಂಡು ಹಾರಿಸಿ ಏಒನ್ ಆರೋಪಿ...

ಹನಿಟ್ರ್ಯಾಪ್ ಆರೋಪದಲ್ಲಿ ಸಿಕ್ಕ ಬಿದ್ದ ಆರು ಜನರು… ಪೊಲೀಸರ ಮೇಲೆ ಗುಂಡು ಹಾರಿಸಿ ಏಒನ್ ಆರೋಪಿ ಪರಾರಿ

- Advertisement -
- Advertisement -

ಯುವತಿಯೊಬ್ಬಳನ್ನು ಬಳಸಿ ವ್ಯಕ್ತಿಯೊಬ್ಬರನ್ನು ಹನಿಟ್ರ್ಯಾಪ್ ಸಂಚಿನಲ್ಲಿ ಸಿಲುಕಿಸಿ, 3.80 ಲಕ್ಷ ರೂ. ನಗದನ್ನು ಲಪಟಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಅಪರಾಧ ಪತ್ತೆದಳ ಯಶಸ್ವಿಯಾಗಿದೆ.

ಬಂಧಿತರನ್ನು ಮುಹಮದ್ ಅಝರುದ್ದೀನ್(24), ಅಬೂಬಕರ್ ಸಿದ್ದೀಕ್(33), ಹಸೈನಾರ್ ಅಲಿಯಾಸ್ ಅಚ್ಚು(27), ಇರ್ಷಾದ್ ಅಲಿ(27), ಎ.ಎ.ಸಮೀರ್(28) ಹಾಗೂ ಓರ್ವ ಕಾಲೇಜು ವಿದ್ಯಾರ್ಥಿನಿ ಕೂಡ ಬಂಧನಕ್ಕೆ ಒಳಗಾಗಿದ್ದಾಳೆ. ಬಂಧಿತ ಆರೋಪಿಗಳಿಂದ 1 ಲಕ್ಷ ರೂ. ಗಳನ್ನು ವಶಕ್ಕೆ ಪಡೆಯಲಾಗಿದೆ.

ಈ ಪ್ರಕರಣದಲ್ಲಿ ಒಟ್ಟು 10 ಮಂದಿ ಶಾಮೀಲಾಗಿದ್ದು, ಪ್ರಮುಖ ಆರೋಪಿ ಸೇರಿದಂತೆ ನಾಲ್ವರ ಪತ್ತೆಗಾಗಿ ಶೋಧ ಕಾರ್ಯ ಚುರುಕುಗೊಂಡಿದೆ. ನಾಪೋಕ್ಲು ಪೊಲೀಸ್ ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ಸುಮನ ಡಿ. ಪನ್ನೇಕರ್ ತಿಳಿಸಿದ್ದಾರೆ.

ಪ್ರಕರಣದ ಹಿನ್ನೆಲೆ

ದುಬೈನಲ್ಲಿದ್ದ ನಾಪೋಕ್ಲು ಎಮ್ಮೆಮಾಡು ನಿವಾಸಿ ಗಫೂರ್ ಆಗಸ್ಟ್ ತಿಂಗಳಿನಲ್ಲಿ ತಮ್ಮ ಊರಿಗೆ ಬಂದಿದ್ದರು. ಹೊಸ ಮನೆಯನ್ನು ನಿರ್ಮಿಸುವ ಯೋಜನೆ ಹಾಕಿಕೊಂಡಿದ್ದ ಅವರ ಬಳಿ ಹಣ ಇರುವ ಬಗ್ಗೆ ಮಾಹಿತಿ ತಿಳಿದ ಎಮ್ಮೆಮಾಡು ನಿವಾಸಿ ಕರೀಂ ಎಂಬಾತ ಸ್ಥಳೀಯ ಯುವಕರನ್ನು ಸಂಪರ್ಕಿಸಿ ಗಫೂರ್ ಬಳಿಯಿದ್ದ ಹಣವನ್ನು ಲಪಟಾಯಿಸಲು ಸಂಚು ಹೂಡಿದ್ದರು ಎನ್ನಲಾಗಿದೆ. ಅದರಂತೆ ಆಗಸ್ಟ್ 16ರಂದು ಗಫೂರ್ ಅವರನ್ನು ಕರೆದುಕೊಂಡು ಮನೆ ಬಳಕೆಯ ಎಲೆಕ್ಟ್ರಿಕಲ್ ವಸ್ತುಗಳನ್ನು ಖರೀದಿಸಲು ಮೈಸೂರಿಗೆ ತೆರಳುವಂತೆ ಆರೋಪಿಗಳು ಮನವೊಲಿಸಿದ್ದರು. ಅದರಂತೆ ಕರೀಂ ಮತ್ತು ಅಝರುದ್ದೀನ್ ಅವರು ಗಫೂರ್ ಅವರನ್ನು ಕರೆದುಕೊಂಡು ಮೈಸೂರಿಗೆ ತೆರಳುವಾಗ ಮೊದಲೇ ಸಂಚು ರೂಪಿಸಿದಂತೆ ಆರೋಪಿಗಳು ಕುಶಾಲನಗರದಿಂದ ಕಾಲೇಜು ಯುವತಿಯೊಬ್ಬಳನ್ನು ಜೊತೆಗೆ ಕರೆದುಕೊಂಡು ಹೋಗಿದ್ದಾರೆ. ಮೈಸೂರಿಗೆ ತಲುಪಿದ ಬಳಿಕ ಕತ್ತಲಾದ ಕಾರಣ ಮೈಸೂರಿನ ರಿಂಗ್ ರೋಡ್‍ನ ಹೋಂ ಸ್ಟೇ ಯಲ್ಲಿ ವಿಶ್ರಾಂತಿ ಪಡೆಯುವಂತೆ ಹೇಳಿ, ಯುವತಿ ಮತ್ತು ಗಫೂರ್ ಅವರನ್ನು ಆರೋಪಿಗಳು ಅಲ್ಲಿಗೆ ಕರೆದೊಯ್ದಿದ್ದರು. ಈ ಸಂದರ್ಭ ಗಫೂರ್ ಅವರಿಗೆ ಅಮಲು ಬರುವ ಪದಾರ್ಥವನ್ನು ನೀಡಿದ್ದರು ಎನ್ನಲಾಗಿದೆ.

ಮೊದಲೇ ನಿರ್ಧರಿಸಿದಂತೆ ಕೆಲವು ಸಮಯದ ಬಳಿಕ ಉಳಿದ ಆರೋಪಿಗಳು ಗಫೂರ್ ಮತ್ತು ಯುವತಿ ಉಳಿದುಕೊಂಡಿದ್ದ ಹೋಂ ಸ್ಟೇ ಮೇಲೆ ದಾಳಿ ನಡೆಸಿದ್ದಾರೆ. ನಾವು ಪತ್ರಿಕಾ ಮಾಧ್ಯಮದವರೆಂದು ಹೇಳಿಕೊಂಡು ಗಫೂರ್ ಮೇಲೆ ಹಲ್ಲೆ ನಡೆಸಿದ್ದಲ್ಲದೇ ಗಫೂರ್ ಮತ್ತು ಯುವತಿಯನ್ನು ಜೊತೆಯಲ್ಲಿ ನಿಲ್ಲಿಸಿ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ತೆಗೆದಿದ್ದಾರೆ.

ನಂತರ ಗಫೂರ್ ಬಳಿಯಿದ್ದ 60 ಸಾವಿರ ರೂ. ನಗದು ಮತ್ತು 55 ಸಾವಿರ ಮುಖ ಬೆಲೆಯ ಫಾರಿನ್ ಕರೆನ್ಸಿ, ಎಟಿಎಂ ಕಾರ್ಡ್ ಕಸಿದುಕೊಂಡಿದ್ದಾರೆ. ಅಲ್ಲದೇ 50 ಲಕ್ಷ ರೂ. ಗಳನ್ನು ತಕ್ಷಣ ನೀಡದಿದ್ದಲ್ಲಿ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ಟಿವಿ ಯಲ್ಲಿ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಇದರಿಂದ ಆತಂಕಗೊಂಡ ಗಫೂರ್ ತಮ್ಮ ಬಳಿಯಿದ್ದ 3 ಲಕ್ಷ ರೂ. ಮತ್ತು ಮನೆಯಿಂದ ಹಣವನ್ನು ತರಿಸಿಕೊಂಡು ಒಟ್ಟು 3.80 ಲಕ್ಷ ರೂ. ಗಳನ್ನು ಆರೋಪಿಗಳಿಗೆ ನೀಡಿದ್ದಾರೆ. ನಂತರ ಆರೋಪಿಗಳು ಗಫೂರ್ ಅವರನ್ನು ಬಿಟ್ಟು ಕಳುಹಿಸಿದ್ದರು ಎಂದು ಆರೋಪಿಸಲಾಗಿದೆ.

ಒಂದು ತಿಂಗಳ ಹಿಂದೆ ಹನಿಟ್ರ್ಯಾಪ್ ಪ್ರಕರಣ ನಡೆದಿರುವ ಬಗ್ಗೆ ಜಿಲ್ಲಾ ಅಪರಾಧ ಪ್ತತೆದಳಕ್ಕೆ ಖಚಿತ ಮಾಹಿತಿ ದೊರಕಿತ್ತು. ಇದನ್ನು ಆಧರಿಸಿ ತನಿಖೆ ನಡೆಸಿದ ಅಪರಾಧ ಪತ್ತೆ ದಳ ನಾಪೋಕ್ಲುವಿನ ಎಮ್ಮೆಮಾಡು ನಿವಾಸಿ ಗಫೂರ್ ಅವರು ಹನಿಟ್ರ್ಯಾಪ್ ಪ್ರಕರಣದಲ್ಲಿ ಸಂತ್ರಸ್ತರಾಗಿರುವ ಬಗ್ಗೆ ಮಾಹಿತಿ ಸಂಗ್ರಹಿಸುತ್ತಾರೆ. ಗಫೂರ್ ಅವರ ಮನವೊಲಿಸಿದ ಪೊಲೀಸರು ನಾಪೋಕ್ಲು ಪೊಲೀಸ್ ಠಾಣೆಯಲ್ಲಿ 10 ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದರು. ಪೊಲೀಸ್ ವರಿಷ್ಟಾಧಿಕಾರಿ ಡಾ.ಸುಮನ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ಅಪರಾಧ ಪತ್ತೆ ದಳ 10 ಮಂದಿ ಆರೋಪಿಗಳ ಪೈಕಿ 6 ಮಂದಿಯನ್ನು ಬಂಧಿಸಿದೆ.

ಬಂಧಿತ ಆರೋಪಿಗಳು ಎಮ್ಮೆಮಾಡು ನಿವಾಸಿಗಳಾಗಿದ್ದು, ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಕಲಂ 120(ಬಿ), 328, 384, 395, ಮತ್ತು 149 ಐಪಿಸಿ ಸೆಕ್ಷನ್ ಗಳ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಇತರ 4 ಮಂದಿ ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿಸಲಾಗಿದೆ.

ಪೊಲೀಸರಿಗೆ ಗುಂಡು

ಪ್ರಕರಣದ ಬಯಲಾಗುತ್ತಿದ್ದಂತೆಯೇ ಪ್ರಮುಖ ಆರೋಪಿ ಕರೀಂನನ್ನು ಬಂಧಿಸಲು ಜಿಲ್ಲಾ ಅಪರಾಧ ಪತ್ತೆ ದಳದ ಸಹಾಯಕ ನಿರೀಕ್ಷಕ ಮತ್ತು ಇತರ 4 ಮಂದಿ ಸಿಬ್ಬಂದಿಗಳು ಕರೀಂನ ಮನೆಗೆ ತೆರಳಿದ್ದರು. ಬಂಧನದ ಮಾಹಿತಿ ಅರಿತ ಕರೀಂ ಮನೆಯೊಳಗಿದ್ದ ಬಂದೂಕಿನಿಂದ ಪೊಲೀಸರ ಮೇಲೆ ಒಂದು ಸುತ್ತು ಗುಂಡು ಹಾರಿಸಿದ್ದು, ಪೊಲೀಸ್ ಸಹಾಯಕ ನಿರೀಕ್ಷಕ ಹಮೀದ್ ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದರು. ಗುಂಡು ಪಕ್ಕದಲ್ಲಿದ್ದ ತಡೆಗೋಡೆಗೆ ಬಡಿದಿದ್ದು, ಬಳಿಕ ಕರೀಂ ತನ್ನ ಇಬ್ಬರು ಹೆಂಡತಿಯರ ಸಹಿತ ಸ್ಥಳದಿಂದ ಪರಾರಿಯಾಗಿದ್ದಾನೆ. ಪೊಲೀಸರಿಗೆ ಗುಂಡು ಹೊಡೆಯುವಂತೆ ಆತನ ಪತ್ನಿಯೇ ಕೋವಿಯನ್ನು ತಂದು ಕೊಟ್ಟಿದ್ದಳು ಎನ್ನಲಾಗಿದೆ.

ಈ ಕುರಿತು ಪ್ರತ್ಯೇಕ ಪ್ರಕರಣವು ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 353, 307, 325 ಮತ್ತು ಭಾರತೀಯ ಶಸ್ತ್ರಾಸ್ತ್ರ ದುರ್ಬಳಕೆ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಕರೀಂ ಮತ್ತು ಆತನ ಇಬ್ಬರು ಪತ್ನಿಯರು ಕೂಡ ಆರೋಪಿಗಳಾಗಿದ್ದು, ಈಗ ತಲೆ ಮರೆಸಿಕೊಂಡಿದ್ದಾರೆ. ಕರೀಂ 2015ರಲ್ಲಿ ನಡೆದ ಟಿಪ್ಪು ಗಲಭೆಯಲ್ಲೂ ಪ್ರಮುಖ ಪಾತ್ರ ವಹಿಸಿರುವ ಆರೋಪದಲ್ಲಿ ಪ್ರಕರಣವೂ ದಾಖಲಾಗಿದೆ. ಆತನ ಹಿನ್ನಲೆಯನ್ನು ಕೂಡ ತನಿಖೆ ನಡೆಸಲಾಗುತ್ತಿದ್ದು, ಆತನ ಬಂಧನದ ಬಳಿಕ ಹೆಚ್ಚಿನ ಮಾಹಿತಿ ದೊರೆಯಲಿದೆ ಎಂದು ಪೊಲೀಸ್ ವರಿಷ್ಟಾಧಿಕಾರಿ ಡಾ. ಸುಮನ್ ಡಿ.ಪನ್ನೇಕರ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...