Homeಕರ್ನಾಟಕಹನಿಟ್ರ್ಯಾಪ್ ಆರೋಪದಲ್ಲಿ ಸಿಕ್ಕ ಬಿದ್ದ ಆರು ಜನರು... ಪೊಲೀಸರ ಮೇಲೆ ಗುಂಡು ಹಾರಿಸಿ ಏಒನ್ ಆರೋಪಿ...

ಹನಿಟ್ರ್ಯಾಪ್ ಆರೋಪದಲ್ಲಿ ಸಿಕ್ಕ ಬಿದ್ದ ಆರು ಜನರು… ಪೊಲೀಸರ ಮೇಲೆ ಗುಂಡು ಹಾರಿಸಿ ಏಒನ್ ಆರೋಪಿ ಪರಾರಿ

- Advertisement -
- Advertisement -

ಯುವತಿಯೊಬ್ಬಳನ್ನು ಬಳಸಿ ವ್ಯಕ್ತಿಯೊಬ್ಬರನ್ನು ಹನಿಟ್ರ್ಯಾಪ್ ಸಂಚಿನಲ್ಲಿ ಸಿಲುಕಿಸಿ, 3.80 ಲಕ್ಷ ರೂ. ನಗದನ್ನು ಲಪಟಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಅಪರಾಧ ಪತ್ತೆದಳ ಯಶಸ್ವಿಯಾಗಿದೆ.

ಬಂಧಿತರನ್ನು ಮುಹಮದ್ ಅಝರುದ್ದೀನ್(24), ಅಬೂಬಕರ್ ಸಿದ್ದೀಕ್(33), ಹಸೈನಾರ್ ಅಲಿಯಾಸ್ ಅಚ್ಚು(27), ಇರ್ಷಾದ್ ಅಲಿ(27), ಎ.ಎ.ಸಮೀರ್(28) ಹಾಗೂ ಓರ್ವ ಕಾಲೇಜು ವಿದ್ಯಾರ್ಥಿನಿ ಕೂಡ ಬಂಧನಕ್ಕೆ ಒಳಗಾಗಿದ್ದಾಳೆ. ಬಂಧಿತ ಆರೋಪಿಗಳಿಂದ 1 ಲಕ್ಷ ರೂ. ಗಳನ್ನು ವಶಕ್ಕೆ ಪಡೆಯಲಾಗಿದೆ.

ಈ ಪ್ರಕರಣದಲ್ಲಿ ಒಟ್ಟು 10 ಮಂದಿ ಶಾಮೀಲಾಗಿದ್ದು, ಪ್ರಮುಖ ಆರೋಪಿ ಸೇರಿದಂತೆ ನಾಲ್ವರ ಪತ್ತೆಗಾಗಿ ಶೋಧ ಕಾರ್ಯ ಚುರುಕುಗೊಂಡಿದೆ. ನಾಪೋಕ್ಲು ಪೊಲೀಸ್ ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ಸುಮನ ಡಿ. ಪನ್ನೇಕರ್ ತಿಳಿಸಿದ್ದಾರೆ.

ಪ್ರಕರಣದ ಹಿನ್ನೆಲೆ

ದುಬೈನಲ್ಲಿದ್ದ ನಾಪೋಕ್ಲು ಎಮ್ಮೆಮಾಡು ನಿವಾಸಿ ಗಫೂರ್ ಆಗಸ್ಟ್ ತಿಂಗಳಿನಲ್ಲಿ ತಮ್ಮ ಊರಿಗೆ ಬಂದಿದ್ದರು. ಹೊಸ ಮನೆಯನ್ನು ನಿರ್ಮಿಸುವ ಯೋಜನೆ ಹಾಕಿಕೊಂಡಿದ್ದ ಅವರ ಬಳಿ ಹಣ ಇರುವ ಬಗ್ಗೆ ಮಾಹಿತಿ ತಿಳಿದ ಎಮ್ಮೆಮಾಡು ನಿವಾಸಿ ಕರೀಂ ಎಂಬಾತ ಸ್ಥಳೀಯ ಯುವಕರನ್ನು ಸಂಪರ್ಕಿಸಿ ಗಫೂರ್ ಬಳಿಯಿದ್ದ ಹಣವನ್ನು ಲಪಟಾಯಿಸಲು ಸಂಚು ಹೂಡಿದ್ದರು ಎನ್ನಲಾಗಿದೆ. ಅದರಂತೆ ಆಗಸ್ಟ್ 16ರಂದು ಗಫೂರ್ ಅವರನ್ನು ಕರೆದುಕೊಂಡು ಮನೆ ಬಳಕೆಯ ಎಲೆಕ್ಟ್ರಿಕಲ್ ವಸ್ತುಗಳನ್ನು ಖರೀದಿಸಲು ಮೈಸೂರಿಗೆ ತೆರಳುವಂತೆ ಆರೋಪಿಗಳು ಮನವೊಲಿಸಿದ್ದರು. ಅದರಂತೆ ಕರೀಂ ಮತ್ತು ಅಝರುದ್ದೀನ್ ಅವರು ಗಫೂರ್ ಅವರನ್ನು ಕರೆದುಕೊಂಡು ಮೈಸೂರಿಗೆ ತೆರಳುವಾಗ ಮೊದಲೇ ಸಂಚು ರೂಪಿಸಿದಂತೆ ಆರೋಪಿಗಳು ಕುಶಾಲನಗರದಿಂದ ಕಾಲೇಜು ಯುವತಿಯೊಬ್ಬಳನ್ನು ಜೊತೆಗೆ ಕರೆದುಕೊಂಡು ಹೋಗಿದ್ದಾರೆ. ಮೈಸೂರಿಗೆ ತಲುಪಿದ ಬಳಿಕ ಕತ್ತಲಾದ ಕಾರಣ ಮೈಸೂರಿನ ರಿಂಗ್ ರೋಡ್‍ನ ಹೋಂ ಸ್ಟೇ ಯಲ್ಲಿ ವಿಶ್ರಾಂತಿ ಪಡೆಯುವಂತೆ ಹೇಳಿ, ಯುವತಿ ಮತ್ತು ಗಫೂರ್ ಅವರನ್ನು ಆರೋಪಿಗಳು ಅಲ್ಲಿಗೆ ಕರೆದೊಯ್ದಿದ್ದರು. ಈ ಸಂದರ್ಭ ಗಫೂರ್ ಅವರಿಗೆ ಅಮಲು ಬರುವ ಪದಾರ್ಥವನ್ನು ನೀಡಿದ್ದರು ಎನ್ನಲಾಗಿದೆ.

ಮೊದಲೇ ನಿರ್ಧರಿಸಿದಂತೆ ಕೆಲವು ಸಮಯದ ಬಳಿಕ ಉಳಿದ ಆರೋಪಿಗಳು ಗಫೂರ್ ಮತ್ತು ಯುವತಿ ಉಳಿದುಕೊಂಡಿದ್ದ ಹೋಂ ಸ್ಟೇ ಮೇಲೆ ದಾಳಿ ನಡೆಸಿದ್ದಾರೆ. ನಾವು ಪತ್ರಿಕಾ ಮಾಧ್ಯಮದವರೆಂದು ಹೇಳಿಕೊಂಡು ಗಫೂರ್ ಮೇಲೆ ಹಲ್ಲೆ ನಡೆಸಿದ್ದಲ್ಲದೇ ಗಫೂರ್ ಮತ್ತು ಯುವತಿಯನ್ನು ಜೊತೆಯಲ್ಲಿ ನಿಲ್ಲಿಸಿ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ತೆಗೆದಿದ್ದಾರೆ.

ನಂತರ ಗಫೂರ್ ಬಳಿಯಿದ್ದ 60 ಸಾವಿರ ರೂ. ನಗದು ಮತ್ತು 55 ಸಾವಿರ ಮುಖ ಬೆಲೆಯ ಫಾರಿನ್ ಕರೆನ್ಸಿ, ಎಟಿಎಂ ಕಾರ್ಡ್ ಕಸಿದುಕೊಂಡಿದ್ದಾರೆ. ಅಲ್ಲದೇ 50 ಲಕ್ಷ ರೂ. ಗಳನ್ನು ತಕ್ಷಣ ನೀಡದಿದ್ದಲ್ಲಿ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ಟಿವಿ ಯಲ್ಲಿ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಇದರಿಂದ ಆತಂಕಗೊಂಡ ಗಫೂರ್ ತಮ್ಮ ಬಳಿಯಿದ್ದ 3 ಲಕ್ಷ ರೂ. ಮತ್ತು ಮನೆಯಿಂದ ಹಣವನ್ನು ತರಿಸಿಕೊಂಡು ಒಟ್ಟು 3.80 ಲಕ್ಷ ರೂ. ಗಳನ್ನು ಆರೋಪಿಗಳಿಗೆ ನೀಡಿದ್ದಾರೆ. ನಂತರ ಆರೋಪಿಗಳು ಗಫೂರ್ ಅವರನ್ನು ಬಿಟ್ಟು ಕಳುಹಿಸಿದ್ದರು ಎಂದು ಆರೋಪಿಸಲಾಗಿದೆ.

ಒಂದು ತಿಂಗಳ ಹಿಂದೆ ಹನಿಟ್ರ್ಯಾಪ್ ಪ್ರಕರಣ ನಡೆದಿರುವ ಬಗ್ಗೆ ಜಿಲ್ಲಾ ಅಪರಾಧ ಪ್ತತೆದಳಕ್ಕೆ ಖಚಿತ ಮಾಹಿತಿ ದೊರಕಿತ್ತು. ಇದನ್ನು ಆಧರಿಸಿ ತನಿಖೆ ನಡೆಸಿದ ಅಪರಾಧ ಪತ್ತೆ ದಳ ನಾಪೋಕ್ಲುವಿನ ಎಮ್ಮೆಮಾಡು ನಿವಾಸಿ ಗಫೂರ್ ಅವರು ಹನಿಟ್ರ್ಯಾಪ್ ಪ್ರಕರಣದಲ್ಲಿ ಸಂತ್ರಸ್ತರಾಗಿರುವ ಬಗ್ಗೆ ಮಾಹಿತಿ ಸಂಗ್ರಹಿಸುತ್ತಾರೆ. ಗಫೂರ್ ಅವರ ಮನವೊಲಿಸಿದ ಪೊಲೀಸರು ನಾಪೋಕ್ಲು ಪೊಲೀಸ್ ಠಾಣೆಯಲ್ಲಿ 10 ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದರು. ಪೊಲೀಸ್ ವರಿಷ್ಟಾಧಿಕಾರಿ ಡಾ.ಸುಮನ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ಅಪರಾಧ ಪತ್ತೆ ದಳ 10 ಮಂದಿ ಆರೋಪಿಗಳ ಪೈಕಿ 6 ಮಂದಿಯನ್ನು ಬಂಧಿಸಿದೆ.

ಬಂಧಿತ ಆರೋಪಿಗಳು ಎಮ್ಮೆಮಾಡು ನಿವಾಸಿಗಳಾಗಿದ್ದು, ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಕಲಂ 120(ಬಿ), 328, 384, 395, ಮತ್ತು 149 ಐಪಿಸಿ ಸೆಕ್ಷನ್ ಗಳ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಇತರ 4 ಮಂದಿ ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿಸಲಾಗಿದೆ.

ಪೊಲೀಸರಿಗೆ ಗುಂಡು

ಪ್ರಕರಣದ ಬಯಲಾಗುತ್ತಿದ್ದಂತೆಯೇ ಪ್ರಮುಖ ಆರೋಪಿ ಕರೀಂನನ್ನು ಬಂಧಿಸಲು ಜಿಲ್ಲಾ ಅಪರಾಧ ಪತ್ತೆ ದಳದ ಸಹಾಯಕ ನಿರೀಕ್ಷಕ ಮತ್ತು ಇತರ 4 ಮಂದಿ ಸಿಬ್ಬಂದಿಗಳು ಕರೀಂನ ಮನೆಗೆ ತೆರಳಿದ್ದರು. ಬಂಧನದ ಮಾಹಿತಿ ಅರಿತ ಕರೀಂ ಮನೆಯೊಳಗಿದ್ದ ಬಂದೂಕಿನಿಂದ ಪೊಲೀಸರ ಮೇಲೆ ಒಂದು ಸುತ್ತು ಗುಂಡು ಹಾರಿಸಿದ್ದು, ಪೊಲೀಸ್ ಸಹಾಯಕ ನಿರೀಕ್ಷಕ ಹಮೀದ್ ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದರು. ಗುಂಡು ಪಕ್ಕದಲ್ಲಿದ್ದ ತಡೆಗೋಡೆಗೆ ಬಡಿದಿದ್ದು, ಬಳಿಕ ಕರೀಂ ತನ್ನ ಇಬ್ಬರು ಹೆಂಡತಿಯರ ಸಹಿತ ಸ್ಥಳದಿಂದ ಪರಾರಿಯಾಗಿದ್ದಾನೆ. ಪೊಲೀಸರಿಗೆ ಗುಂಡು ಹೊಡೆಯುವಂತೆ ಆತನ ಪತ್ನಿಯೇ ಕೋವಿಯನ್ನು ತಂದು ಕೊಟ್ಟಿದ್ದಳು ಎನ್ನಲಾಗಿದೆ.

ಈ ಕುರಿತು ಪ್ರತ್ಯೇಕ ಪ್ರಕರಣವು ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 353, 307, 325 ಮತ್ತು ಭಾರತೀಯ ಶಸ್ತ್ರಾಸ್ತ್ರ ದುರ್ಬಳಕೆ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಕರೀಂ ಮತ್ತು ಆತನ ಇಬ್ಬರು ಪತ್ನಿಯರು ಕೂಡ ಆರೋಪಿಗಳಾಗಿದ್ದು, ಈಗ ತಲೆ ಮರೆಸಿಕೊಂಡಿದ್ದಾರೆ. ಕರೀಂ 2015ರಲ್ಲಿ ನಡೆದ ಟಿಪ್ಪು ಗಲಭೆಯಲ್ಲೂ ಪ್ರಮುಖ ಪಾತ್ರ ವಹಿಸಿರುವ ಆರೋಪದಲ್ಲಿ ಪ್ರಕರಣವೂ ದಾಖಲಾಗಿದೆ. ಆತನ ಹಿನ್ನಲೆಯನ್ನು ಕೂಡ ತನಿಖೆ ನಡೆಸಲಾಗುತ್ತಿದ್ದು, ಆತನ ಬಂಧನದ ಬಳಿಕ ಹೆಚ್ಚಿನ ಮಾಹಿತಿ ದೊರೆಯಲಿದೆ ಎಂದು ಪೊಲೀಸ್ ವರಿಷ್ಟಾಧಿಕಾರಿ ಡಾ. ಸುಮನ್ ಡಿ.ಪನ್ನೇಕರ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...