Homeಕರ್ನಾಟಕಜನರಿಗೆ ಪ್ರಾಣಸಂಕಟ, ರಾಜಕಾರಣಿಗಳಿಗೆ ಮತಸಂಕಟ. ರೇಣುಕಾಚಾರ್ಯ ಮೇಲೆ ಮುಗಿಬಿದ್ದ ನೆಟ್ಟಿಗರು: ಟ್ರೋಲ್ ಆಯ್ತು ವಿಡಿಯೋ..

ಜನರಿಗೆ ಪ್ರಾಣಸಂಕಟ, ರಾಜಕಾರಣಿಗಳಿಗೆ ಮತಸಂಕಟ. ರೇಣುಕಾಚಾರ್ಯ ಮೇಲೆ ಮುಗಿಬಿದ್ದ ನೆಟ್ಟಿಗರು: ಟ್ರೋಲ್ ಆಯ್ತು ವಿಡಿಯೋ..

- Advertisement -
- Advertisement -

ಹೊನ್ನಾಳಿ ತಾಲ್ಲೂಕು ಬೇಲಿಮಲ್ಲೂರು ಗ್ರಾಮದ ತುಂಗಭದ್ರಾ ನದಿಪಾತ್ರಕ್ಕೆ ಜನಪ್ರತಿನಿದಿಗಳೊಡನೆ ಬೇಟಿ ನೀಡಿ ನದಿಯಲ್ಲಿ ಅಪಾಯ ಮಟ್ಟದಲ್ಲಿ ನೀರು ಹರಿದು ಗ್ರಾಮವೂ ನೀರಿನಿಂದ ಜಲಾವೃತವಾಗಿದ್ದು ಹರಿಗೋಲನ್ನು ಸ್ವತ:ನಡೆಸಿ ಪರಿಸ್ಥಿತಿ ಅವಲೋಕಿಸಿದ ಕ್ಷಣ ಗ್ರಾಮದಲ್ಲಿ..

ಇದು ಹೊನ್ನಾಳಿ ಶಾಸಕ ರೇಣುಕಾಚಾರ್ಯರವರು ಫೇಸ್ ಬುಕ್ ನಲ್ಲಿ ಹಾಕಿದ ಸ್ಟೇಟಸ್ ಮತ್ತು ವಿಡಿಯೋ. ಅದರಲ್ಲಿಯೇ ಕೊಚ್ಚಿಹೋಗುತ್ತಿದ್ದ ಜನರನ್ನು ರಕ್ಷಿಸಿದ ಶಾಸಕ.. ಹ್ಹ ಹ್ಹ ಎಂದು ಒಬ್ಬ ಹೇಳಿ ನಗುತ್ತಾನೆ. ಇನ್ನೊಬ್ಬ ತಗೊಳ್ಳಿ, ತಗೊಳ್ಳಿ, ಪೋಟೊ ತಗೊಳ್ಲಿ, ವಿಡಿಯೋ ಮಾಡಿಕೊಳ್ಳಿ ಎಂದು ಹೇಳುತ್ತಾನೆ. ಎಲ್ಲವೂ ವಿಡಿಯೋದಲ್ಲಿದೆ.

ವಿಡಿಯೋ ನೋಡಿದರನೇ ಕೇವಲ ಫೋಟೊ ಮತ್ತು ವಿಡಿಯೋ ಮಾಡಿಕೊಳ್ಳಲು ಮಾಡಿರುವ ನಾಟಕ ಎಂದು ಅರ್ಥವಾಗುವುದರಿಂದ ನೆಟ್ಟಿಗರು ಫುಲ್ ಟ್ರೋಲ್ ಮಾಡಿದ್ದಾರೆ.

ನಿಮ್ಮ ಯೋಗ್ಯತೆ ನಿಮ್ಮ ಜೊತೆ ಇರುವ ಜನಗಳು ಹೇಳ್ತಾ ಇದ್ದಾರೆ ರಕ್ಷಣೆ ಮಾಡಿಕೊಂಡು ಬಂದರು ಅಂತ ಗೊತ್ತಾಗಲಿ, ಈ ರೀತಿ ಬರಗೆಟ್ಟು ಬದುಕೋದಕ್ಕಿಂತ ಆ ನದಿಯಲ್ಲಿ ಬಿದ್ದು ಸಾಯುವುದು ಮೇಲು ಎಂದು ಸಂಶುದ್ದೀನ್ ಪ್ರತಿಕ್ರಿಯೆ ನೀಡಿದ್ದಾರೆ.

ಅಯ್ಯೋ ರಾಮಾ.. ಪೋಟೋ ಹಾಕಿದ್ರೆ ಸಾಕಿತ್ತು, ವಿಡಿಯೋ ಹಾಕಿ ಮರ್ಯಾದೆ ತೆಗಿತೀರಲ್ಲೋ. ಕರ್ಮವೇ ಎಂದು ರಾಜೇಶ್ ಶೃಂಗೇರಿ ಕಮೆಂಟ್ ಮಾಡಿದ್ದಾರೆ.

“ಭಾರತೀಯ ಜನತಾ ಪಾರ್ಟಿಗೆ ಅದರದೇ ಆದ ಗೌರವ ಮತ್ತು ಪಕ್ಷದ ಕಾರ್ಯಕರ್ತರು ಶಾಸಕರಿಗೆ ಗೌರವವಿದೆ ಈ ರೀತಿ ಹುಡುಗಾಟ ಆಡಬೇಡಿ ಮಾನ್ಯ ರೇಣುಕಾಚಾರ್ಯ ಜಿ” ಎಂದು ರವಿಗೌಡ ಕೆ.ಸಿ ಕಮೆಂಟ್ ಮಾಡಿದ್ದಾರೆ. ನಿಮ್ಮ ಸಾಹಸವನ್ನು ಎಲ್ಲಾ ಕಾಮಿಡಿ ಮಾಡ್ತಾ ಇದಾರೆ ಸಾರ್ ಎಂದು ಸಿದ್ದು ಸಿದ್ದಾಪ್ಪಾಜಿ ಟಾಂಗ್ ಕೊಟ್ಟಿದ್ದಾರೆ.

ಥೂ…. ನಾಚಿಕೆ ಆಗಬೇಕು ನಿಮಗೆ…
ಕೇವಲ ಪಾದ ಮುಳುಗುವ ನೀರಿನಲ್ಲಿ ತೆಪ್ಪ ನಡೆಸಿ ವೀಡಿಯೊ ಚಿತ್ರೀಕರಣ ಮಾಡಿದ್ದೀರಲ್ಲಾ..
ನಿಮಗಾಗದಿದ್ದರೆ ಸುಮ್ಮನೆ ಮನೆಯಲ್ಲಿ ಕುಳಿತುಕೊಳ್ಲಿ… ರಾತ್ರಿ ಹಗಲೆನ್ನದೆ ಕಾರ್ಯ ನಿರ್ವಹಿಸುತ್ತಿರುವ ಯಡಿಯೂರಪ್ಪನವರ ಮರ್ಯಾದೆ ತೆಗೀಬೇಡಿ ಎಂದು ಸತೀಶ್ ಡಿ ಶೆಟ್ಟಿ ತರಾಟೆಗೆ ತೆಗೆದುಕೊಂಡಿದ್ದಾರೆ.

ನಿಮ್ಮ ಪಕ್ಕದಲ್ಲಿ ಬೈಕ್ ಗಳು ಆರಾಮಾಗಿ ಹೋಗುತ್ತಿದೆ. ನೀವು ಯಾಕೆ ಅಷ್ಟೊಂದು ಶ್ರಮ ತಗೊತಿದ್ದೀರಿ? ಎಂದು ದೇವರಾಜು ಎನ್ ಪ್ರತಿಕ್ರಿಯಿಸಿದ್ದಾರೆ.

“ಜನರಿಗೆ ಪ್ರಾಣಸಂಕಟ ಆದರೆ ಇಂತಹ ರಾಜಕಾರಣಿಗಳಿಗೆ ಮತಸಂಕಟ” ಎಂದು ರಮೇಶ್ ರವರು ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...