Homeಕರ್ನಾಟಕಜನರಿಗೆ ಪ್ರಾಣಸಂಕಟ, ರಾಜಕಾರಣಿಗಳಿಗೆ ಮತಸಂಕಟ. ರೇಣುಕಾಚಾರ್ಯ ಮೇಲೆ ಮುಗಿಬಿದ್ದ ನೆಟ್ಟಿಗರು: ಟ್ರೋಲ್ ಆಯ್ತು ವಿಡಿಯೋ..

ಜನರಿಗೆ ಪ್ರಾಣಸಂಕಟ, ರಾಜಕಾರಣಿಗಳಿಗೆ ಮತಸಂಕಟ. ರೇಣುಕಾಚಾರ್ಯ ಮೇಲೆ ಮುಗಿಬಿದ್ದ ನೆಟ್ಟಿಗರು: ಟ್ರೋಲ್ ಆಯ್ತು ವಿಡಿಯೋ..

- Advertisement -
- Advertisement -

ಹೊನ್ನಾಳಿ ತಾಲ್ಲೂಕು ಬೇಲಿಮಲ್ಲೂರು ಗ್ರಾಮದ ತುಂಗಭದ್ರಾ ನದಿಪಾತ್ರಕ್ಕೆ ಜನಪ್ರತಿನಿದಿಗಳೊಡನೆ ಬೇಟಿ ನೀಡಿ ನದಿಯಲ್ಲಿ ಅಪಾಯ ಮಟ್ಟದಲ್ಲಿ ನೀರು ಹರಿದು ಗ್ರಾಮವೂ ನೀರಿನಿಂದ ಜಲಾವೃತವಾಗಿದ್ದು ಹರಿಗೋಲನ್ನು ಸ್ವತ:ನಡೆಸಿ ಪರಿಸ್ಥಿತಿ ಅವಲೋಕಿಸಿದ ಕ್ಷಣ ಗ್ರಾಮದಲ್ಲಿ..

ಇದು ಹೊನ್ನಾಳಿ ಶಾಸಕ ರೇಣುಕಾಚಾರ್ಯರವರು ಫೇಸ್ ಬುಕ್ ನಲ್ಲಿ ಹಾಕಿದ ಸ್ಟೇಟಸ್ ಮತ್ತು ವಿಡಿಯೋ. ಅದರಲ್ಲಿಯೇ ಕೊಚ್ಚಿಹೋಗುತ್ತಿದ್ದ ಜನರನ್ನು ರಕ್ಷಿಸಿದ ಶಾಸಕ.. ಹ್ಹ ಹ್ಹ ಎಂದು ಒಬ್ಬ ಹೇಳಿ ನಗುತ್ತಾನೆ. ಇನ್ನೊಬ್ಬ ತಗೊಳ್ಳಿ, ತಗೊಳ್ಳಿ, ಪೋಟೊ ತಗೊಳ್ಲಿ, ವಿಡಿಯೋ ಮಾಡಿಕೊಳ್ಳಿ ಎಂದು ಹೇಳುತ್ತಾನೆ. ಎಲ್ಲವೂ ವಿಡಿಯೋದಲ್ಲಿದೆ.

ವಿಡಿಯೋ ನೋಡಿದರನೇ ಕೇವಲ ಫೋಟೊ ಮತ್ತು ವಿಡಿಯೋ ಮಾಡಿಕೊಳ್ಳಲು ಮಾಡಿರುವ ನಾಟಕ ಎಂದು ಅರ್ಥವಾಗುವುದರಿಂದ ನೆಟ್ಟಿಗರು ಫುಲ್ ಟ್ರೋಲ್ ಮಾಡಿದ್ದಾರೆ.

ನಿಮ್ಮ ಯೋಗ್ಯತೆ ನಿಮ್ಮ ಜೊತೆ ಇರುವ ಜನಗಳು ಹೇಳ್ತಾ ಇದ್ದಾರೆ ರಕ್ಷಣೆ ಮಾಡಿಕೊಂಡು ಬಂದರು ಅಂತ ಗೊತ್ತಾಗಲಿ, ಈ ರೀತಿ ಬರಗೆಟ್ಟು ಬದುಕೋದಕ್ಕಿಂತ ಆ ನದಿಯಲ್ಲಿ ಬಿದ್ದು ಸಾಯುವುದು ಮೇಲು ಎಂದು ಸಂಶುದ್ದೀನ್ ಪ್ರತಿಕ್ರಿಯೆ ನೀಡಿದ್ದಾರೆ.

ಅಯ್ಯೋ ರಾಮಾ.. ಪೋಟೋ ಹಾಕಿದ್ರೆ ಸಾಕಿತ್ತು, ವಿಡಿಯೋ ಹಾಕಿ ಮರ್ಯಾದೆ ತೆಗಿತೀರಲ್ಲೋ. ಕರ್ಮವೇ ಎಂದು ರಾಜೇಶ್ ಶೃಂಗೇರಿ ಕಮೆಂಟ್ ಮಾಡಿದ್ದಾರೆ.

“ಭಾರತೀಯ ಜನತಾ ಪಾರ್ಟಿಗೆ ಅದರದೇ ಆದ ಗೌರವ ಮತ್ತು ಪಕ್ಷದ ಕಾರ್ಯಕರ್ತರು ಶಾಸಕರಿಗೆ ಗೌರವವಿದೆ ಈ ರೀತಿ ಹುಡುಗಾಟ ಆಡಬೇಡಿ ಮಾನ್ಯ ರೇಣುಕಾಚಾರ್ಯ ಜಿ” ಎಂದು ರವಿಗೌಡ ಕೆ.ಸಿ ಕಮೆಂಟ್ ಮಾಡಿದ್ದಾರೆ. ನಿಮ್ಮ ಸಾಹಸವನ್ನು ಎಲ್ಲಾ ಕಾಮಿಡಿ ಮಾಡ್ತಾ ಇದಾರೆ ಸಾರ್ ಎಂದು ಸಿದ್ದು ಸಿದ್ದಾಪ್ಪಾಜಿ ಟಾಂಗ್ ಕೊಟ್ಟಿದ್ದಾರೆ.

ಥೂ…. ನಾಚಿಕೆ ಆಗಬೇಕು ನಿಮಗೆ…
ಕೇವಲ ಪಾದ ಮುಳುಗುವ ನೀರಿನಲ್ಲಿ ತೆಪ್ಪ ನಡೆಸಿ ವೀಡಿಯೊ ಚಿತ್ರೀಕರಣ ಮಾಡಿದ್ದೀರಲ್ಲಾ..
ನಿಮಗಾಗದಿದ್ದರೆ ಸುಮ್ಮನೆ ಮನೆಯಲ್ಲಿ ಕುಳಿತುಕೊಳ್ಲಿ… ರಾತ್ರಿ ಹಗಲೆನ್ನದೆ ಕಾರ್ಯ ನಿರ್ವಹಿಸುತ್ತಿರುವ ಯಡಿಯೂರಪ್ಪನವರ ಮರ್ಯಾದೆ ತೆಗೀಬೇಡಿ ಎಂದು ಸತೀಶ್ ಡಿ ಶೆಟ್ಟಿ ತರಾಟೆಗೆ ತೆಗೆದುಕೊಂಡಿದ್ದಾರೆ.

ನಿಮ್ಮ ಪಕ್ಕದಲ್ಲಿ ಬೈಕ್ ಗಳು ಆರಾಮಾಗಿ ಹೋಗುತ್ತಿದೆ. ನೀವು ಯಾಕೆ ಅಷ್ಟೊಂದು ಶ್ರಮ ತಗೊತಿದ್ದೀರಿ? ಎಂದು ದೇವರಾಜು ಎನ್ ಪ್ರತಿಕ್ರಿಯಿಸಿದ್ದಾರೆ.

“ಜನರಿಗೆ ಪ್ರಾಣಸಂಕಟ ಆದರೆ ಇಂತಹ ರಾಜಕಾರಣಿಗಳಿಗೆ ಮತಸಂಕಟ” ಎಂದು ರಮೇಶ್ ರವರು ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...