Homeಕರ್ನಾಟಕಹೊನ್ನಾವರ: ವಿವಾದಿತ ಬಂದರು ಯೋಜನಾ ಪ್ರದೇಶದಲ್ಲಿ ಮೊಟ್ಟೆಯಿಟ್ಟ ಕಡಲಾಮೆಗಳು!

ಹೊನ್ನಾವರ: ವಿವಾದಿತ ಬಂದರು ಯೋಜನಾ ಪ್ರದೇಶದಲ್ಲಿ ಮೊಟ್ಟೆಯಿಟ್ಟ ಕಡಲಾಮೆಗಳು!

ಬಂದರು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಮೀನುಗಾರರ ಅವಲೋಕನ, ವಾದಕ್ಕೆ ಸಮರ್ಥನೆ ಸಿಕ್ಕಂತಾಗಿದೆ ಎಂದು ಹೋರಾಟಗಾರರು ತಿಳಿಸಿದ್ದಾರೆ.

- Advertisement -
- Advertisement -

ಹೊನ್ನಾವರದ ಕಾಸರಕೋಡಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಿವಾದಿತ ಖಾಸಗಿ ಬಂದರು ಯೋಜನಾ ಪ್ರದೇಶದಲ್ಲಿ ಅಪರೂಪದ ಕಡಲಾಮೆಗಳು ಸಮುದ್ರ ತೀರದಲ್ಲಿ ಮೊಟ್ಟೆಯಿಟ್ಟಿರುವುದು ಭಾನುವಾರ ಕಂಡುಬಂದಿದೆ. ಇದರಿಂದ ಬಂದರು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಮೀನುಗಾರರ ಅವಲೋಕನ, ವಾದಕ್ಕೆ ಸಮರ್ಥನೆ ಸಿಕ್ಕಂತಾಗಿದೆ ಎಂದು ಹೋರಾಟಗಾರರು ಹೇಳಿದ್ದಾರೆ.

ಕಡಲಾಮೆ ಹೆಜ್ಜೆಗುರುತು

ಕಾಸರಕೋಡು ಸಮುದ್ರ ದಂಡೆಯಲ್ಲಿ 2-3 ಕಡಲಾಮೆ ನೂರರು ಮೊಟ್ಟೆ ಹಾಕಿವೆ. ಇದರಿಂದ ಚೆನ್ನೈನ ಎನ್‌ಸಿಎಸ್‌ಸಿಎಮ್ ಸಂಶೋಧನಾ ಸಂಸ್ಥೆ ಈ ಪ್ರದೇಶದಲ್ಲಿ ಕಡಲಾಮೆಗಳ ವಾಸ ಸ್ಥಳಗಳಿಲ್ಲವೆಂಬ ಸುಳ್ಳು ವರದಿ ತಯಾರಿಸಿರುವುದನ್ನು ಖಾತ್ರಿ ಪಡಿಸುತ್ತದೆಂದು ಪರಿಸರ ವಿಜ್ಞಾನಿ ಡಾ.ಪ್ರಕಾಶ್ ಮೇಸ್ತ ಅಭಿಪ್ರಾಯ ಪಟ್ಟಿದ್ದಾರೆ. ಕಡಲಾಮೆಗಳಂಥ ಅಪರೂಪದ ಜೀವ ವೈವಿದ್ಯ ತಾಣವಾದ ಕಾಸರಕೋಡು ಟೊಂಕದಲ್ಲಿ ವಾಣಿಜ್ಯ ಬಂದರು ಸ್ಥಾಪನೆ ಸಲ್ಲದೆಂದು ಸ್ಥಳೀಯರು ಹಾಗೂ ಪರಿಸರ ವಿಜ್ಞಾನಿಗಳು ಈ ಹಿಂದೆ ಆಗ್ರಹಿಸಿದ್ದರು.

ಕಡಲಾಮೆ ಇರುವಿಕೆ ಬಗ್ಗೆ ಚೆನ್ನೈನ ಎನ್‌ಸಿಎಸ್‌ಸಿಎಮ್ ಎಂಬ ಸಂಸ್ಥೆಯಿಂದ ಸಂಶೋಧನೆ ಮಾಡಿಸಲಾಗಿತ್ತು. ಈ ಸಂಸ್ಥೆ ಖಾಸಗಿ ಬಂದರು ಕಟ್ಟಲಾಗುತ್ತಿರುವ ಪ್ರದೇಶದಲ್ಲಿ ಕಡಲಾಮೆಗಳ ವಾಸವಿಲ್ಲವೆಂದು ಹೈಕೋರ್ಟಿಗೆ ವರದಿ ಸಲ್ಲಿಸಿತ್ತು. ಈ ಆಧಾರದಲ್ಲಿ ನ್ಯಾಯಾಲಯ ಖಾಸಗಿ ಬಂದರು ನಿರ್ಮಾಣಕ್ಕೆ ಒಪ್ಪಿಗೆ ಸೂಚಿಸಿತ್ತೆಂದು ಹೋರಾಟಗಾರರು ದೂರಿದ್ದಾರೆ. ಬಂದರು ನಿರ್ಮಾಣದ ಪರವಿರುವ ಆಡಳಿತ ವರ್ಗ ಮತ್ತು ಉದ್ಯಮಿಗಳು ನ್ಯಾಯಾಲಯವನ್ನು ದಿಕ್ಕು ತಪ್ಪಿಸುತ್ತಿದ್ದಾರೆಂದು ಆರೋಪಿಸಿದ್ದಾರೆ.

ಈಗ ಕಡಲಾಮೆಗಳು ಮೊಟ್ಟೆಯನ್ನು ಬಂದರು ಯೋಜನೆ ಸ್ಥಳದಲ್ಲೇ ಹಾಕಿ ಪ್ರಾದೇಶಿಕತೆ ಸಾಬೀತು ಪಡಿಸಿವೆ. ಅಪರೂಪದ ಜೀವ ವೈವಿದ್ಯವಾದ ಕಡಲಾಮೆ ಸಂತತಿ ಸಂರಕ್ಷಿಸುವಂತೆ ಹೈಕೋರ್ಟ್ ಹಿಂದೆ ಹೇಳಿದೆ. ಹೀಗಾಗಿ ಕಾಸರಕೋಡು ಕಡಲತಡಿಯ ಕಡಲಾಮೆಗಳ ಕಾಪಾಡುವ ಹೊಣೆಗಾರಿಕೆ ಯಾರದು ಎಂಬ ಪ್ರಶ್ನೆ ಉದ್ಭವಿಸಿದೆ.

ಕಡಲಾಮೆ ಮೊಟ್ಟೆ ಸಂರಕ್ಷಿಸುವ ಗೂಡು

ಖಾಸಗಿ ಬಂದರು ನಿರ್ಮಾಣಕ್ಕೆ ಹಠ ತೊಟ್ಟಿರುವ ಬಂಡವಾಳಶಾಹಿಗಳು ಹಾಗೂ ಆವರಿಗೆ ಒತ್ತಾಸೆಯಾಗಿ ನಿಂತಿರುವ ಆಳುವ ವರ್ಗ ಸಿಕ್ಕಿರುವ ಕಡಲಾಮೆ ಮೊಟ್ಟೆಗಳನ್ನು ನಾಶಮಾಡಿ ಚೆನ್ನೈನ ಸಂಶೋಧನಾ ಸಂಸ್ಥೆ ಕಾಸರಕೋಡು ಕಡಲ ಪ್ರದೇಶದಲ್ಲಿ ಕಡಲಾಮೆಗಳಿಲ್ಲವೆಂದು ಕೊಟ್ಟಿರುವ ಖೋಟಾ ವರದಿಯೆ ನಿಜವೆಂದು ಬಿಂಬಿಸಿ ಬಂದರು ನಿರ್ಮಾಣಕ್ಕೆ ನ್ಯಾಯಾಲಯದಿಂದ ಪಡೆದಿರುವ ಒಪ್ಪಿಗೆ ಕಾಪಾಡಿಕೋಳ್ಳಲು ಹುನ್ನಾರ ನಡೆಸುವ ಸಾಧ್ಯತೆಯಿದೆಯೆಂದು ಸ್ಥಳಿಯರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳು ಕಾಸರಕೋಡಲ್ಲಿ ದೊರೆತಿರುವ ಕಡಲಾಮೆ ಮೊಟ್ಟೆಗಳನ್ನು ಕಾಪಾಡಲು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಕಾರವಾರದಲ್ಲಿ ಹವಳ ದ್ವೀಪದ ಗಿಡುಗ ಕಡಲಾಮೆ ಕಳೇಬರ ಪತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...