Homeಕರ್ನಾಟಕಹೊನ್ನಾವರ: ವಿವಾದಿತ ಬಂದರು ಯೋಜನಾ ಪ್ರದೇಶದಲ್ಲಿ ಮೊಟ್ಟೆಯಿಟ್ಟ ಕಡಲಾಮೆಗಳು!

ಹೊನ್ನಾವರ: ವಿವಾದಿತ ಬಂದರು ಯೋಜನಾ ಪ್ರದೇಶದಲ್ಲಿ ಮೊಟ್ಟೆಯಿಟ್ಟ ಕಡಲಾಮೆಗಳು!

ಬಂದರು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಮೀನುಗಾರರ ಅವಲೋಕನ, ವಾದಕ್ಕೆ ಸಮರ್ಥನೆ ಸಿಕ್ಕಂತಾಗಿದೆ ಎಂದು ಹೋರಾಟಗಾರರು ತಿಳಿಸಿದ್ದಾರೆ.

- Advertisement -
- Advertisement -

ಹೊನ್ನಾವರದ ಕಾಸರಕೋಡಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಿವಾದಿತ ಖಾಸಗಿ ಬಂದರು ಯೋಜನಾ ಪ್ರದೇಶದಲ್ಲಿ ಅಪರೂಪದ ಕಡಲಾಮೆಗಳು ಸಮುದ್ರ ತೀರದಲ್ಲಿ ಮೊಟ್ಟೆಯಿಟ್ಟಿರುವುದು ಭಾನುವಾರ ಕಂಡುಬಂದಿದೆ. ಇದರಿಂದ ಬಂದರು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಮೀನುಗಾರರ ಅವಲೋಕನ, ವಾದಕ್ಕೆ ಸಮರ್ಥನೆ ಸಿಕ್ಕಂತಾಗಿದೆ ಎಂದು ಹೋರಾಟಗಾರರು ಹೇಳಿದ್ದಾರೆ.

ಕಡಲಾಮೆ ಹೆಜ್ಜೆಗುರುತು

ಕಾಸರಕೋಡು ಸಮುದ್ರ ದಂಡೆಯಲ್ಲಿ 2-3 ಕಡಲಾಮೆ ನೂರರು ಮೊಟ್ಟೆ ಹಾಕಿವೆ. ಇದರಿಂದ ಚೆನ್ನೈನ ಎನ್‌ಸಿಎಸ್‌ಸಿಎಮ್ ಸಂಶೋಧನಾ ಸಂಸ್ಥೆ ಈ ಪ್ರದೇಶದಲ್ಲಿ ಕಡಲಾಮೆಗಳ ವಾಸ ಸ್ಥಳಗಳಿಲ್ಲವೆಂಬ ಸುಳ್ಳು ವರದಿ ತಯಾರಿಸಿರುವುದನ್ನು ಖಾತ್ರಿ ಪಡಿಸುತ್ತದೆಂದು ಪರಿಸರ ವಿಜ್ಞಾನಿ ಡಾ.ಪ್ರಕಾಶ್ ಮೇಸ್ತ ಅಭಿಪ್ರಾಯ ಪಟ್ಟಿದ್ದಾರೆ. ಕಡಲಾಮೆಗಳಂಥ ಅಪರೂಪದ ಜೀವ ವೈವಿದ್ಯ ತಾಣವಾದ ಕಾಸರಕೋಡು ಟೊಂಕದಲ್ಲಿ ವಾಣಿಜ್ಯ ಬಂದರು ಸ್ಥಾಪನೆ ಸಲ್ಲದೆಂದು ಸ್ಥಳೀಯರು ಹಾಗೂ ಪರಿಸರ ವಿಜ್ಞಾನಿಗಳು ಈ ಹಿಂದೆ ಆಗ್ರಹಿಸಿದ್ದರು.

ಕಡಲಾಮೆ ಇರುವಿಕೆ ಬಗ್ಗೆ ಚೆನ್ನೈನ ಎನ್‌ಸಿಎಸ್‌ಸಿಎಮ್ ಎಂಬ ಸಂಸ್ಥೆಯಿಂದ ಸಂಶೋಧನೆ ಮಾಡಿಸಲಾಗಿತ್ತು. ಈ ಸಂಸ್ಥೆ ಖಾಸಗಿ ಬಂದರು ಕಟ್ಟಲಾಗುತ್ತಿರುವ ಪ್ರದೇಶದಲ್ಲಿ ಕಡಲಾಮೆಗಳ ವಾಸವಿಲ್ಲವೆಂದು ಹೈಕೋರ್ಟಿಗೆ ವರದಿ ಸಲ್ಲಿಸಿತ್ತು. ಈ ಆಧಾರದಲ್ಲಿ ನ್ಯಾಯಾಲಯ ಖಾಸಗಿ ಬಂದರು ನಿರ್ಮಾಣಕ್ಕೆ ಒಪ್ಪಿಗೆ ಸೂಚಿಸಿತ್ತೆಂದು ಹೋರಾಟಗಾರರು ದೂರಿದ್ದಾರೆ. ಬಂದರು ನಿರ್ಮಾಣದ ಪರವಿರುವ ಆಡಳಿತ ವರ್ಗ ಮತ್ತು ಉದ್ಯಮಿಗಳು ನ್ಯಾಯಾಲಯವನ್ನು ದಿಕ್ಕು ತಪ್ಪಿಸುತ್ತಿದ್ದಾರೆಂದು ಆರೋಪಿಸಿದ್ದಾರೆ.

ಈಗ ಕಡಲಾಮೆಗಳು ಮೊಟ್ಟೆಯನ್ನು ಬಂದರು ಯೋಜನೆ ಸ್ಥಳದಲ್ಲೇ ಹಾಕಿ ಪ್ರಾದೇಶಿಕತೆ ಸಾಬೀತು ಪಡಿಸಿವೆ. ಅಪರೂಪದ ಜೀವ ವೈವಿದ್ಯವಾದ ಕಡಲಾಮೆ ಸಂತತಿ ಸಂರಕ್ಷಿಸುವಂತೆ ಹೈಕೋರ್ಟ್ ಹಿಂದೆ ಹೇಳಿದೆ. ಹೀಗಾಗಿ ಕಾಸರಕೋಡು ಕಡಲತಡಿಯ ಕಡಲಾಮೆಗಳ ಕಾಪಾಡುವ ಹೊಣೆಗಾರಿಕೆ ಯಾರದು ಎಂಬ ಪ್ರಶ್ನೆ ಉದ್ಭವಿಸಿದೆ.

ಕಡಲಾಮೆ ಮೊಟ್ಟೆ ಸಂರಕ್ಷಿಸುವ ಗೂಡು

ಖಾಸಗಿ ಬಂದರು ನಿರ್ಮಾಣಕ್ಕೆ ಹಠ ತೊಟ್ಟಿರುವ ಬಂಡವಾಳಶಾಹಿಗಳು ಹಾಗೂ ಆವರಿಗೆ ಒತ್ತಾಸೆಯಾಗಿ ನಿಂತಿರುವ ಆಳುವ ವರ್ಗ ಸಿಕ್ಕಿರುವ ಕಡಲಾಮೆ ಮೊಟ್ಟೆಗಳನ್ನು ನಾಶಮಾಡಿ ಚೆನ್ನೈನ ಸಂಶೋಧನಾ ಸಂಸ್ಥೆ ಕಾಸರಕೋಡು ಕಡಲ ಪ್ರದೇಶದಲ್ಲಿ ಕಡಲಾಮೆಗಳಿಲ್ಲವೆಂದು ಕೊಟ್ಟಿರುವ ಖೋಟಾ ವರದಿಯೆ ನಿಜವೆಂದು ಬಿಂಬಿಸಿ ಬಂದರು ನಿರ್ಮಾಣಕ್ಕೆ ನ್ಯಾಯಾಲಯದಿಂದ ಪಡೆದಿರುವ ಒಪ್ಪಿಗೆ ಕಾಪಾಡಿಕೋಳ್ಳಲು ಹುನ್ನಾರ ನಡೆಸುವ ಸಾಧ್ಯತೆಯಿದೆಯೆಂದು ಸ್ಥಳಿಯರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳು ಕಾಸರಕೋಡಲ್ಲಿ ದೊರೆತಿರುವ ಕಡಲಾಮೆ ಮೊಟ್ಟೆಗಳನ್ನು ಕಾಪಾಡಲು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಕಾರವಾರದಲ್ಲಿ ಹವಳ ದ್ವೀಪದ ಗಿಡುಗ ಕಡಲಾಮೆ ಕಳೇಬರ ಪತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...