Homeಕರ್ನಾಟಕಹೊನ್ನಾವರ: ವಿವಾದಿತ ಬಂದರು ಯೋಜನಾ ಪ್ರದೇಶದಲ್ಲಿ ಮೊಟ್ಟೆಯಿಟ್ಟ ಕಡಲಾಮೆಗಳು!

ಹೊನ್ನಾವರ: ವಿವಾದಿತ ಬಂದರು ಯೋಜನಾ ಪ್ರದೇಶದಲ್ಲಿ ಮೊಟ್ಟೆಯಿಟ್ಟ ಕಡಲಾಮೆಗಳು!

ಬಂದರು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಮೀನುಗಾರರ ಅವಲೋಕನ, ವಾದಕ್ಕೆ ಸಮರ್ಥನೆ ಸಿಕ್ಕಂತಾಗಿದೆ ಎಂದು ಹೋರಾಟಗಾರರು ತಿಳಿಸಿದ್ದಾರೆ.

- Advertisement -
- Advertisement -

ಹೊನ್ನಾವರದ ಕಾಸರಕೋಡಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಿವಾದಿತ ಖಾಸಗಿ ಬಂದರು ಯೋಜನಾ ಪ್ರದೇಶದಲ್ಲಿ ಅಪರೂಪದ ಕಡಲಾಮೆಗಳು ಸಮುದ್ರ ತೀರದಲ್ಲಿ ಮೊಟ್ಟೆಯಿಟ್ಟಿರುವುದು ಭಾನುವಾರ ಕಂಡುಬಂದಿದೆ. ಇದರಿಂದ ಬಂದರು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಮೀನುಗಾರರ ಅವಲೋಕನ, ವಾದಕ್ಕೆ ಸಮರ್ಥನೆ ಸಿಕ್ಕಂತಾಗಿದೆ ಎಂದು ಹೋರಾಟಗಾರರು ಹೇಳಿದ್ದಾರೆ.

ಕಡಲಾಮೆ ಹೆಜ್ಜೆಗುರುತು

ಕಾಸರಕೋಡು ಸಮುದ್ರ ದಂಡೆಯಲ್ಲಿ 2-3 ಕಡಲಾಮೆ ನೂರರು ಮೊಟ್ಟೆ ಹಾಕಿವೆ. ಇದರಿಂದ ಚೆನ್ನೈನ ಎನ್‌ಸಿಎಸ್‌ಸಿಎಮ್ ಸಂಶೋಧನಾ ಸಂಸ್ಥೆ ಈ ಪ್ರದೇಶದಲ್ಲಿ ಕಡಲಾಮೆಗಳ ವಾಸ ಸ್ಥಳಗಳಿಲ್ಲವೆಂಬ ಸುಳ್ಳು ವರದಿ ತಯಾರಿಸಿರುವುದನ್ನು ಖಾತ್ರಿ ಪಡಿಸುತ್ತದೆಂದು ಪರಿಸರ ವಿಜ್ಞಾನಿ ಡಾ.ಪ್ರಕಾಶ್ ಮೇಸ್ತ ಅಭಿಪ್ರಾಯ ಪಟ್ಟಿದ್ದಾರೆ. ಕಡಲಾಮೆಗಳಂಥ ಅಪರೂಪದ ಜೀವ ವೈವಿದ್ಯ ತಾಣವಾದ ಕಾಸರಕೋಡು ಟೊಂಕದಲ್ಲಿ ವಾಣಿಜ್ಯ ಬಂದರು ಸ್ಥಾಪನೆ ಸಲ್ಲದೆಂದು ಸ್ಥಳೀಯರು ಹಾಗೂ ಪರಿಸರ ವಿಜ್ಞಾನಿಗಳು ಈ ಹಿಂದೆ ಆಗ್ರಹಿಸಿದ್ದರು.

ಕಡಲಾಮೆ ಇರುವಿಕೆ ಬಗ್ಗೆ ಚೆನ್ನೈನ ಎನ್‌ಸಿಎಸ್‌ಸಿಎಮ್ ಎಂಬ ಸಂಸ್ಥೆಯಿಂದ ಸಂಶೋಧನೆ ಮಾಡಿಸಲಾಗಿತ್ತು. ಈ ಸಂಸ್ಥೆ ಖಾಸಗಿ ಬಂದರು ಕಟ್ಟಲಾಗುತ್ತಿರುವ ಪ್ರದೇಶದಲ್ಲಿ ಕಡಲಾಮೆಗಳ ವಾಸವಿಲ್ಲವೆಂದು ಹೈಕೋರ್ಟಿಗೆ ವರದಿ ಸಲ್ಲಿಸಿತ್ತು. ಈ ಆಧಾರದಲ್ಲಿ ನ್ಯಾಯಾಲಯ ಖಾಸಗಿ ಬಂದರು ನಿರ್ಮಾಣಕ್ಕೆ ಒಪ್ಪಿಗೆ ಸೂಚಿಸಿತ್ತೆಂದು ಹೋರಾಟಗಾರರು ದೂರಿದ್ದಾರೆ. ಬಂದರು ನಿರ್ಮಾಣದ ಪರವಿರುವ ಆಡಳಿತ ವರ್ಗ ಮತ್ತು ಉದ್ಯಮಿಗಳು ನ್ಯಾಯಾಲಯವನ್ನು ದಿಕ್ಕು ತಪ್ಪಿಸುತ್ತಿದ್ದಾರೆಂದು ಆರೋಪಿಸಿದ್ದಾರೆ.

ಈಗ ಕಡಲಾಮೆಗಳು ಮೊಟ್ಟೆಯನ್ನು ಬಂದರು ಯೋಜನೆ ಸ್ಥಳದಲ್ಲೇ ಹಾಕಿ ಪ್ರಾದೇಶಿಕತೆ ಸಾಬೀತು ಪಡಿಸಿವೆ. ಅಪರೂಪದ ಜೀವ ವೈವಿದ್ಯವಾದ ಕಡಲಾಮೆ ಸಂತತಿ ಸಂರಕ್ಷಿಸುವಂತೆ ಹೈಕೋರ್ಟ್ ಹಿಂದೆ ಹೇಳಿದೆ. ಹೀಗಾಗಿ ಕಾಸರಕೋಡು ಕಡಲತಡಿಯ ಕಡಲಾಮೆಗಳ ಕಾಪಾಡುವ ಹೊಣೆಗಾರಿಕೆ ಯಾರದು ಎಂಬ ಪ್ರಶ್ನೆ ಉದ್ಭವಿಸಿದೆ.

ಕಡಲಾಮೆ ಮೊಟ್ಟೆ ಸಂರಕ್ಷಿಸುವ ಗೂಡು

ಖಾಸಗಿ ಬಂದರು ನಿರ್ಮಾಣಕ್ಕೆ ಹಠ ತೊಟ್ಟಿರುವ ಬಂಡವಾಳಶಾಹಿಗಳು ಹಾಗೂ ಆವರಿಗೆ ಒತ್ತಾಸೆಯಾಗಿ ನಿಂತಿರುವ ಆಳುವ ವರ್ಗ ಸಿಕ್ಕಿರುವ ಕಡಲಾಮೆ ಮೊಟ್ಟೆಗಳನ್ನು ನಾಶಮಾಡಿ ಚೆನ್ನೈನ ಸಂಶೋಧನಾ ಸಂಸ್ಥೆ ಕಾಸರಕೋಡು ಕಡಲ ಪ್ರದೇಶದಲ್ಲಿ ಕಡಲಾಮೆಗಳಿಲ್ಲವೆಂದು ಕೊಟ್ಟಿರುವ ಖೋಟಾ ವರದಿಯೆ ನಿಜವೆಂದು ಬಿಂಬಿಸಿ ಬಂದರು ನಿರ್ಮಾಣಕ್ಕೆ ನ್ಯಾಯಾಲಯದಿಂದ ಪಡೆದಿರುವ ಒಪ್ಪಿಗೆ ಕಾಪಾಡಿಕೋಳ್ಳಲು ಹುನ್ನಾರ ನಡೆಸುವ ಸಾಧ್ಯತೆಯಿದೆಯೆಂದು ಸ್ಥಳಿಯರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳು ಕಾಸರಕೋಡಲ್ಲಿ ದೊರೆತಿರುವ ಕಡಲಾಮೆ ಮೊಟ್ಟೆಗಳನ್ನು ಕಾಪಾಡಲು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಕಾರವಾರದಲ್ಲಿ ಹವಳ ದ್ವೀಪದ ಗಿಡುಗ ಕಡಲಾಮೆ ಕಳೇಬರ ಪತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...