Homeಕರ್ನಾಟಕಹೊನ್ನಾವರ: ವಿವಾದಿತ ಬಂದರು ಯೋಜನಾ ಪ್ರದೇಶದಲ್ಲಿ ಮೊಟ್ಟೆಯಿಟ್ಟ ಕಡಲಾಮೆಗಳು!

ಹೊನ್ನಾವರ: ವಿವಾದಿತ ಬಂದರು ಯೋಜನಾ ಪ್ರದೇಶದಲ್ಲಿ ಮೊಟ್ಟೆಯಿಟ್ಟ ಕಡಲಾಮೆಗಳು!

ಬಂದರು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಮೀನುಗಾರರ ಅವಲೋಕನ, ವಾದಕ್ಕೆ ಸಮರ್ಥನೆ ಸಿಕ್ಕಂತಾಗಿದೆ ಎಂದು ಹೋರಾಟಗಾರರು ತಿಳಿಸಿದ್ದಾರೆ.

- Advertisement -
- Advertisement -

ಹೊನ್ನಾವರದ ಕಾಸರಕೋಡಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಿವಾದಿತ ಖಾಸಗಿ ಬಂದರು ಯೋಜನಾ ಪ್ರದೇಶದಲ್ಲಿ ಅಪರೂಪದ ಕಡಲಾಮೆಗಳು ಸಮುದ್ರ ತೀರದಲ್ಲಿ ಮೊಟ್ಟೆಯಿಟ್ಟಿರುವುದು ಭಾನುವಾರ ಕಂಡುಬಂದಿದೆ. ಇದರಿಂದ ಬಂದರು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಮೀನುಗಾರರ ಅವಲೋಕನ, ವಾದಕ್ಕೆ ಸಮರ್ಥನೆ ಸಿಕ್ಕಂತಾಗಿದೆ ಎಂದು ಹೋರಾಟಗಾರರು ಹೇಳಿದ್ದಾರೆ.

ಕಡಲಾಮೆ ಹೆಜ್ಜೆಗುರುತು

ಕಾಸರಕೋಡು ಸಮುದ್ರ ದಂಡೆಯಲ್ಲಿ 2-3 ಕಡಲಾಮೆ ನೂರರು ಮೊಟ್ಟೆ ಹಾಕಿವೆ. ಇದರಿಂದ ಚೆನ್ನೈನ ಎನ್‌ಸಿಎಸ್‌ಸಿಎಮ್ ಸಂಶೋಧನಾ ಸಂಸ್ಥೆ ಈ ಪ್ರದೇಶದಲ್ಲಿ ಕಡಲಾಮೆಗಳ ವಾಸ ಸ್ಥಳಗಳಿಲ್ಲವೆಂಬ ಸುಳ್ಳು ವರದಿ ತಯಾರಿಸಿರುವುದನ್ನು ಖಾತ್ರಿ ಪಡಿಸುತ್ತದೆಂದು ಪರಿಸರ ವಿಜ್ಞಾನಿ ಡಾ.ಪ್ರಕಾಶ್ ಮೇಸ್ತ ಅಭಿಪ್ರಾಯ ಪಟ್ಟಿದ್ದಾರೆ. ಕಡಲಾಮೆಗಳಂಥ ಅಪರೂಪದ ಜೀವ ವೈವಿದ್ಯ ತಾಣವಾದ ಕಾಸರಕೋಡು ಟೊಂಕದಲ್ಲಿ ವಾಣಿಜ್ಯ ಬಂದರು ಸ್ಥಾಪನೆ ಸಲ್ಲದೆಂದು ಸ್ಥಳೀಯರು ಹಾಗೂ ಪರಿಸರ ವಿಜ್ಞಾನಿಗಳು ಈ ಹಿಂದೆ ಆಗ್ರಹಿಸಿದ್ದರು.

ಕಡಲಾಮೆ ಇರುವಿಕೆ ಬಗ್ಗೆ ಚೆನ್ನೈನ ಎನ್‌ಸಿಎಸ್‌ಸಿಎಮ್ ಎಂಬ ಸಂಸ್ಥೆಯಿಂದ ಸಂಶೋಧನೆ ಮಾಡಿಸಲಾಗಿತ್ತು. ಈ ಸಂಸ್ಥೆ ಖಾಸಗಿ ಬಂದರು ಕಟ್ಟಲಾಗುತ್ತಿರುವ ಪ್ರದೇಶದಲ್ಲಿ ಕಡಲಾಮೆಗಳ ವಾಸವಿಲ್ಲವೆಂದು ಹೈಕೋರ್ಟಿಗೆ ವರದಿ ಸಲ್ಲಿಸಿತ್ತು. ಈ ಆಧಾರದಲ್ಲಿ ನ್ಯಾಯಾಲಯ ಖಾಸಗಿ ಬಂದರು ನಿರ್ಮಾಣಕ್ಕೆ ಒಪ್ಪಿಗೆ ಸೂಚಿಸಿತ್ತೆಂದು ಹೋರಾಟಗಾರರು ದೂರಿದ್ದಾರೆ. ಬಂದರು ನಿರ್ಮಾಣದ ಪರವಿರುವ ಆಡಳಿತ ವರ್ಗ ಮತ್ತು ಉದ್ಯಮಿಗಳು ನ್ಯಾಯಾಲಯವನ್ನು ದಿಕ್ಕು ತಪ್ಪಿಸುತ್ತಿದ್ದಾರೆಂದು ಆರೋಪಿಸಿದ್ದಾರೆ.

ಈಗ ಕಡಲಾಮೆಗಳು ಮೊಟ್ಟೆಯನ್ನು ಬಂದರು ಯೋಜನೆ ಸ್ಥಳದಲ್ಲೇ ಹಾಕಿ ಪ್ರಾದೇಶಿಕತೆ ಸಾಬೀತು ಪಡಿಸಿವೆ. ಅಪರೂಪದ ಜೀವ ವೈವಿದ್ಯವಾದ ಕಡಲಾಮೆ ಸಂತತಿ ಸಂರಕ್ಷಿಸುವಂತೆ ಹೈಕೋರ್ಟ್ ಹಿಂದೆ ಹೇಳಿದೆ. ಹೀಗಾಗಿ ಕಾಸರಕೋಡು ಕಡಲತಡಿಯ ಕಡಲಾಮೆಗಳ ಕಾಪಾಡುವ ಹೊಣೆಗಾರಿಕೆ ಯಾರದು ಎಂಬ ಪ್ರಶ್ನೆ ಉದ್ಭವಿಸಿದೆ.

ಕಡಲಾಮೆ ಮೊಟ್ಟೆ ಸಂರಕ್ಷಿಸುವ ಗೂಡು

ಖಾಸಗಿ ಬಂದರು ನಿರ್ಮಾಣಕ್ಕೆ ಹಠ ತೊಟ್ಟಿರುವ ಬಂಡವಾಳಶಾಹಿಗಳು ಹಾಗೂ ಆವರಿಗೆ ಒತ್ತಾಸೆಯಾಗಿ ನಿಂತಿರುವ ಆಳುವ ವರ್ಗ ಸಿಕ್ಕಿರುವ ಕಡಲಾಮೆ ಮೊಟ್ಟೆಗಳನ್ನು ನಾಶಮಾಡಿ ಚೆನ್ನೈನ ಸಂಶೋಧನಾ ಸಂಸ್ಥೆ ಕಾಸರಕೋಡು ಕಡಲ ಪ್ರದೇಶದಲ್ಲಿ ಕಡಲಾಮೆಗಳಿಲ್ಲವೆಂದು ಕೊಟ್ಟಿರುವ ಖೋಟಾ ವರದಿಯೆ ನಿಜವೆಂದು ಬಿಂಬಿಸಿ ಬಂದರು ನಿರ್ಮಾಣಕ್ಕೆ ನ್ಯಾಯಾಲಯದಿಂದ ಪಡೆದಿರುವ ಒಪ್ಪಿಗೆ ಕಾಪಾಡಿಕೋಳ್ಳಲು ಹುನ್ನಾರ ನಡೆಸುವ ಸಾಧ್ಯತೆಯಿದೆಯೆಂದು ಸ್ಥಳಿಯರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳು ಕಾಸರಕೋಡಲ್ಲಿ ದೊರೆತಿರುವ ಕಡಲಾಮೆ ಮೊಟ್ಟೆಗಳನ್ನು ಕಾಪಾಡಲು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಕಾರವಾರದಲ್ಲಿ ಹವಳ ದ್ವೀಪದ ಗಿಡುಗ ಕಡಲಾಮೆ ಕಳೇಬರ ಪತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...