Homeಕರ್ನಾಟಕಹೊನ್ನಾವರ; ಮಹಿಳೆಯ ಸ್ನಾನದ ವಿಡಿಯೋ ವೈರಲ್ ಮಾಡಿದ ಬಿಜೆಪಿ ನಗರಾಧ್ಯಕ್ಷ ನಾಪತ್ತೆ?

ಹೊನ್ನಾವರ; ಮಹಿಳೆಯ ಸ್ನಾನದ ವಿಡಿಯೋ ವೈರಲ್ ಮಾಡಿದ ಬಿಜೆಪಿ ನಗರಾಧ್ಯಕ್ಷ ನಾಪತ್ತೆ?

- Advertisement -
- Advertisement -

ವಿವಾಹಿತ ಮಹಿಳೆ ಸ್ನಾನ ಮಾಡುತ್ತಿದ್ದ ವಿಡಿಯೋ ವೈರಲ್ ಮಾಡಿದ ಹೊನ್ನಾವರ ನಗರ ಬಿಜೆಪಿ ಘಟಕದ ಅಧ್ಯಕ್ಷ ಉಮೇಶ್ ಸಾರಂಗ ವಿರುದ್ದ ಸಂತ್ರಸ್ಥ ಮಹಿಳೆ ಪೊಲೀಸ್ ದೂರು ನೀಡುತ್ತಿದ್ದಂತೆಯೆ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ. ಬಿಜೆಪಿಯ ಹಿಂದುತ್ವದ ದೊಡ್ಡ ದ್ವನಿಯಾಗಿದ್ದ ಸಾರಂಗನ ಬಣ್ಣ ಬಯಲಾಗುತ್ತಿದ್ದಂತೆ ಮುಜುಗರಕ್ಕೀಡಾದ ಬಜೆಪಿ ಜಿಲ್ಲಾ ಘಟಕ ಆತನ ರಾಜಿನಾಮೆ ಪಡೆಯಲು ಹರಸಹಾಸ ಮಾಡಬೇಕಾಗಿ ಬಂದಿದ್ದು ಸಾರ್ವಜನಿಕ ವಲಯದಲ್ಲಿ ಚರ್ಚೆಗೀಡಾಗಿದೆ.

ಮಹಿಳೆಯೊಂದಿಗೆ ರಾಜಿ ನಡೆಸಲು ಮಾಡಿದ ಪ್ರಯತ್ನಗಳೆಲ್ಲ ವಿಫಲವಾದ ನಂತರ ಉಮೇಶ್ ಸಾರಂಗನಿಂದ ನಗರಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ಪಡೆಯಲಾಗಿದ್ದು, ಬಂಧನದ ಭಯದಿಂದ ಆರೋಪಿ ತಲೆಮರೆಸಿಕೊಂಡಿದ್ದಾನೆ. ದೂರುದಾರ ಮಹಿಳೆ ಸಾರಂಗನ ಕೇರಿಯವಳೆಯಾಗಿದ್ದು, ಆತನ ಆಟೋ ರಿಕ್ಷಾದಲ್ಲಿ ಪ್ರಯಾಣಿಸುವಾಗ ಪರಿಚಯವಾಗಿತ್ತೆಂದು ಆಕೆ ದೂರಿನಲ್ಲಿ ಹೇಳಿದ್ದಾರೆ. ಆಕೆ ಸ್ನಾನ ಮಾಡುತ್ತಿದ್ದ ವೀಡಿಯೋ ಮಾಡಿ ವಾಟ್ಸಪ್‌ನಲ್ಲಿ ಕಳಿಸಿಕೊಡುವಂತೆ ಪೀಡಿಸತೋಡಗಿದ್ದ ಆಟೋ ಓಡಿಸುವ ವೃತ್ತಿಯ ಸಾರಂಗ್, ವೀಡಿಯೋ ಕಳಿಸದಿದ್ದರೆ ನೀನು ತನ್ನೊಂದಿಗೆ ಸಲಿಗೆಯಿಂದಿರುವುದನ್ನು ನಿನ್ನ ಗಂಡನಿಗೆ ತಿಳಿಸುತ್ತೇನೆಂದು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದನೆಂದು ಮಹಿಳೆ ಹೇಳಿದ್ದಾಳೆ.

ಆತನ ಬೆದರಿಕೆಗೆ ಹೆದರಿ 3-4 ತಿಂಗಳ ಹಿಂದೆ ಸ್ನಾನ ಮಾಡುತ್ತಿರುವ ವೀಡಿಯೋ ಕಳಿಸಿದ್ದಳೆನ್ನಲಾಗಿದೆ. ಆದರೂ ಸಾರಂಗ್ ಪೀಡಿಸುತ್ತಿದ್ದನೆನ್ನಲಾಗಿದೆ. ಹೀಗೆ ನೀನು ಪದೆ-ಪದೆ ಮನೆಯತ್ತ ಬರುವುದು, ಅಸಭ್ಯವಾಗಿ ವರ್ತಿಸುವುದು ಸರಿಯಲ್ಲ; ನನ್ನ ಗಂಡನಿಗೆ, ಕುಟುಂಬದವರಿಗೆ ಇದೆಲ್ಲ ಗೊತ್ತಾದರೆ ಸಮಸ್ಯೆಯಾಗುತ್ತದೆ. ನೀನು ನನ್ನೊಂದಿಗೆ ಇನ್ನು ಮುಂದೆ ಮಾತಾಡಬೇಡ ಎಂದು ಬಿಜೆಪಿ ನಗರಾಧ್ಯಕ್ಷ ಸಾರಂಗನಿಗೆ ಹೇಳಿದ್ದ ಮಹಿಳೆ ಒಂದು ತಿಂಗಳಿಂದ ಆತನ ಸಂಪರ್ಕ ಕಡಿದುಕೊಂಡಿದ್ದರು. ಇದರಿಂದ ಕೆರಳಿದ ಬಿಜೆಪಿ ಮುಖಂಡ ಸಾರಂಗ್ ವಿಡಿಯೋ ವೈರಲ್ ಮಾಡಿದ್ದಾನೆಂದು ಮಹಿಳೆ ಕೊಟ್ಟಿರುವ ಪೊಲೀಸ್ ದೂರಿನಲ್ಲಿ ದಾಖಲಿಸಿದ್ದಾರೆ.

ಮಹಿಳೆ ತನ್ನ ಗಂಡನ ಜತೆ ಠಾಣೆಗೆ ಹೋಗಿ ದೂರು ದಾಖಲಿಸಿದರೂ ಪೊಲೀಸರು ಕೈಗೆ ಸಿಕ್ಕ ಆರೋಪಿ ಆಳುವ ಪಕ್ಷದ ನಗರಾಧ್ಯಕ್ಷನೆಂಬ ಕಾರಣಕ್ಕೆ ಬಂಧಿಸಲಿಲ್ಲವೆಂದು ಆರೋಪಿಸಲಾಗಿದೆ. ರಾಜಕೀಯ ಪ್ರಭಾವದಿಂದ ತಲೆ ಮರೆಸಿಕೊಂಡಿರುವ ಸಾರಂಗ ನಿರೀಕ್ಷಣಾ ಜಾಮೀನು ಪಡೆಯಲು ಅನುಕೂಲಮಾಡಿಕೊಡಲಾಗಿದೆ ಎಂದು ದೂರಲಾಗಿದೆ.


ಇದನ್ನೂ ಓದಿ: ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ರಾಜೇಶ್ವರಿಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...