Homeಕರ್ನಾಟಕಹೊನ್ನಾವರ; ಮಹಿಳೆಯ ಸ್ನಾನದ ವಿಡಿಯೋ ವೈರಲ್ ಮಾಡಿದ ಬಿಜೆಪಿ ನಗರಾಧ್ಯಕ್ಷ ನಾಪತ್ತೆ?

ಹೊನ್ನಾವರ; ಮಹಿಳೆಯ ಸ್ನಾನದ ವಿಡಿಯೋ ವೈರಲ್ ಮಾಡಿದ ಬಿಜೆಪಿ ನಗರಾಧ್ಯಕ್ಷ ನಾಪತ್ತೆ?

- Advertisement -
- Advertisement -

ವಿವಾಹಿತ ಮಹಿಳೆ ಸ್ನಾನ ಮಾಡುತ್ತಿದ್ದ ವಿಡಿಯೋ ವೈರಲ್ ಮಾಡಿದ ಹೊನ್ನಾವರ ನಗರ ಬಿಜೆಪಿ ಘಟಕದ ಅಧ್ಯಕ್ಷ ಉಮೇಶ್ ಸಾರಂಗ ವಿರುದ್ದ ಸಂತ್ರಸ್ಥ ಮಹಿಳೆ ಪೊಲೀಸ್ ದೂರು ನೀಡುತ್ತಿದ್ದಂತೆಯೆ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ. ಬಿಜೆಪಿಯ ಹಿಂದುತ್ವದ ದೊಡ್ಡ ದ್ವನಿಯಾಗಿದ್ದ ಸಾರಂಗನ ಬಣ್ಣ ಬಯಲಾಗುತ್ತಿದ್ದಂತೆ ಮುಜುಗರಕ್ಕೀಡಾದ ಬಜೆಪಿ ಜಿಲ್ಲಾ ಘಟಕ ಆತನ ರಾಜಿನಾಮೆ ಪಡೆಯಲು ಹರಸಹಾಸ ಮಾಡಬೇಕಾಗಿ ಬಂದಿದ್ದು ಸಾರ್ವಜನಿಕ ವಲಯದಲ್ಲಿ ಚರ್ಚೆಗೀಡಾಗಿದೆ.

ಮಹಿಳೆಯೊಂದಿಗೆ ರಾಜಿ ನಡೆಸಲು ಮಾಡಿದ ಪ್ರಯತ್ನಗಳೆಲ್ಲ ವಿಫಲವಾದ ನಂತರ ಉಮೇಶ್ ಸಾರಂಗನಿಂದ ನಗರಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ಪಡೆಯಲಾಗಿದ್ದು, ಬಂಧನದ ಭಯದಿಂದ ಆರೋಪಿ ತಲೆಮರೆಸಿಕೊಂಡಿದ್ದಾನೆ. ದೂರುದಾರ ಮಹಿಳೆ ಸಾರಂಗನ ಕೇರಿಯವಳೆಯಾಗಿದ್ದು, ಆತನ ಆಟೋ ರಿಕ್ಷಾದಲ್ಲಿ ಪ್ರಯಾಣಿಸುವಾಗ ಪರಿಚಯವಾಗಿತ್ತೆಂದು ಆಕೆ ದೂರಿನಲ್ಲಿ ಹೇಳಿದ್ದಾರೆ. ಆಕೆ ಸ್ನಾನ ಮಾಡುತ್ತಿದ್ದ ವೀಡಿಯೋ ಮಾಡಿ ವಾಟ್ಸಪ್‌ನಲ್ಲಿ ಕಳಿಸಿಕೊಡುವಂತೆ ಪೀಡಿಸತೋಡಗಿದ್ದ ಆಟೋ ಓಡಿಸುವ ವೃತ್ತಿಯ ಸಾರಂಗ್, ವೀಡಿಯೋ ಕಳಿಸದಿದ್ದರೆ ನೀನು ತನ್ನೊಂದಿಗೆ ಸಲಿಗೆಯಿಂದಿರುವುದನ್ನು ನಿನ್ನ ಗಂಡನಿಗೆ ತಿಳಿಸುತ್ತೇನೆಂದು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದನೆಂದು ಮಹಿಳೆ ಹೇಳಿದ್ದಾಳೆ.

ಆತನ ಬೆದರಿಕೆಗೆ ಹೆದರಿ 3-4 ತಿಂಗಳ ಹಿಂದೆ ಸ್ನಾನ ಮಾಡುತ್ತಿರುವ ವೀಡಿಯೋ ಕಳಿಸಿದ್ದಳೆನ್ನಲಾಗಿದೆ. ಆದರೂ ಸಾರಂಗ್ ಪೀಡಿಸುತ್ತಿದ್ದನೆನ್ನಲಾಗಿದೆ. ಹೀಗೆ ನೀನು ಪದೆ-ಪದೆ ಮನೆಯತ್ತ ಬರುವುದು, ಅಸಭ್ಯವಾಗಿ ವರ್ತಿಸುವುದು ಸರಿಯಲ್ಲ; ನನ್ನ ಗಂಡನಿಗೆ, ಕುಟುಂಬದವರಿಗೆ ಇದೆಲ್ಲ ಗೊತ್ತಾದರೆ ಸಮಸ್ಯೆಯಾಗುತ್ತದೆ. ನೀನು ನನ್ನೊಂದಿಗೆ ಇನ್ನು ಮುಂದೆ ಮಾತಾಡಬೇಡ ಎಂದು ಬಿಜೆಪಿ ನಗರಾಧ್ಯಕ್ಷ ಸಾರಂಗನಿಗೆ ಹೇಳಿದ್ದ ಮಹಿಳೆ ಒಂದು ತಿಂಗಳಿಂದ ಆತನ ಸಂಪರ್ಕ ಕಡಿದುಕೊಂಡಿದ್ದರು. ಇದರಿಂದ ಕೆರಳಿದ ಬಿಜೆಪಿ ಮುಖಂಡ ಸಾರಂಗ್ ವಿಡಿಯೋ ವೈರಲ್ ಮಾಡಿದ್ದಾನೆಂದು ಮಹಿಳೆ ಕೊಟ್ಟಿರುವ ಪೊಲೀಸ್ ದೂರಿನಲ್ಲಿ ದಾಖಲಿಸಿದ್ದಾರೆ.

ಮಹಿಳೆ ತನ್ನ ಗಂಡನ ಜತೆ ಠಾಣೆಗೆ ಹೋಗಿ ದೂರು ದಾಖಲಿಸಿದರೂ ಪೊಲೀಸರು ಕೈಗೆ ಸಿಕ್ಕ ಆರೋಪಿ ಆಳುವ ಪಕ್ಷದ ನಗರಾಧ್ಯಕ್ಷನೆಂಬ ಕಾರಣಕ್ಕೆ ಬಂಧಿಸಲಿಲ್ಲವೆಂದು ಆರೋಪಿಸಲಾಗಿದೆ. ರಾಜಕೀಯ ಪ್ರಭಾವದಿಂದ ತಲೆ ಮರೆಸಿಕೊಂಡಿರುವ ಸಾರಂಗ ನಿರೀಕ್ಷಣಾ ಜಾಮೀನು ಪಡೆಯಲು ಅನುಕೂಲಮಾಡಿಕೊಡಲಾಗಿದೆ ಎಂದು ದೂರಲಾಗಿದೆ.


ಇದನ್ನೂ ಓದಿ: ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ರಾಜೇಶ್ವರಿಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...