Homeಕರ್ನಾಟಕಹೊನ್ನಾವರ; ಮಹಿಳೆಯ ಸ್ನಾನದ ವಿಡಿಯೋ ವೈರಲ್ ಮಾಡಿದ ಬಿಜೆಪಿ ನಗರಾಧ್ಯಕ್ಷ ನಾಪತ್ತೆ?

ಹೊನ್ನಾವರ; ಮಹಿಳೆಯ ಸ್ನಾನದ ವಿಡಿಯೋ ವೈರಲ್ ಮಾಡಿದ ಬಿಜೆಪಿ ನಗರಾಧ್ಯಕ್ಷ ನಾಪತ್ತೆ?

- Advertisement -
- Advertisement -

ವಿವಾಹಿತ ಮಹಿಳೆ ಸ್ನಾನ ಮಾಡುತ್ತಿದ್ದ ವಿಡಿಯೋ ವೈರಲ್ ಮಾಡಿದ ಹೊನ್ನಾವರ ನಗರ ಬಿಜೆಪಿ ಘಟಕದ ಅಧ್ಯಕ್ಷ ಉಮೇಶ್ ಸಾರಂಗ ವಿರುದ್ದ ಸಂತ್ರಸ್ಥ ಮಹಿಳೆ ಪೊಲೀಸ್ ದೂರು ನೀಡುತ್ತಿದ್ದಂತೆಯೆ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ. ಬಿಜೆಪಿಯ ಹಿಂದುತ್ವದ ದೊಡ್ಡ ದ್ವನಿಯಾಗಿದ್ದ ಸಾರಂಗನ ಬಣ್ಣ ಬಯಲಾಗುತ್ತಿದ್ದಂತೆ ಮುಜುಗರಕ್ಕೀಡಾದ ಬಜೆಪಿ ಜಿಲ್ಲಾ ಘಟಕ ಆತನ ರಾಜಿನಾಮೆ ಪಡೆಯಲು ಹರಸಹಾಸ ಮಾಡಬೇಕಾಗಿ ಬಂದಿದ್ದು ಸಾರ್ವಜನಿಕ ವಲಯದಲ್ಲಿ ಚರ್ಚೆಗೀಡಾಗಿದೆ.

ಮಹಿಳೆಯೊಂದಿಗೆ ರಾಜಿ ನಡೆಸಲು ಮಾಡಿದ ಪ್ರಯತ್ನಗಳೆಲ್ಲ ವಿಫಲವಾದ ನಂತರ ಉಮೇಶ್ ಸಾರಂಗನಿಂದ ನಗರಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ಪಡೆಯಲಾಗಿದ್ದು, ಬಂಧನದ ಭಯದಿಂದ ಆರೋಪಿ ತಲೆಮರೆಸಿಕೊಂಡಿದ್ದಾನೆ. ದೂರುದಾರ ಮಹಿಳೆ ಸಾರಂಗನ ಕೇರಿಯವಳೆಯಾಗಿದ್ದು, ಆತನ ಆಟೋ ರಿಕ್ಷಾದಲ್ಲಿ ಪ್ರಯಾಣಿಸುವಾಗ ಪರಿಚಯವಾಗಿತ್ತೆಂದು ಆಕೆ ದೂರಿನಲ್ಲಿ ಹೇಳಿದ್ದಾರೆ. ಆಕೆ ಸ್ನಾನ ಮಾಡುತ್ತಿದ್ದ ವೀಡಿಯೋ ಮಾಡಿ ವಾಟ್ಸಪ್‌ನಲ್ಲಿ ಕಳಿಸಿಕೊಡುವಂತೆ ಪೀಡಿಸತೋಡಗಿದ್ದ ಆಟೋ ಓಡಿಸುವ ವೃತ್ತಿಯ ಸಾರಂಗ್, ವೀಡಿಯೋ ಕಳಿಸದಿದ್ದರೆ ನೀನು ತನ್ನೊಂದಿಗೆ ಸಲಿಗೆಯಿಂದಿರುವುದನ್ನು ನಿನ್ನ ಗಂಡನಿಗೆ ತಿಳಿಸುತ್ತೇನೆಂದು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದನೆಂದು ಮಹಿಳೆ ಹೇಳಿದ್ದಾಳೆ.

ಆತನ ಬೆದರಿಕೆಗೆ ಹೆದರಿ 3-4 ತಿಂಗಳ ಹಿಂದೆ ಸ್ನಾನ ಮಾಡುತ್ತಿರುವ ವೀಡಿಯೋ ಕಳಿಸಿದ್ದಳೆನ್ನಲಾಗಿದೆ. ಆದರೂ ಸಾರಂಗ್ ಪೀಡಿಸುತ್ತಿದ್ದನೆನ್ನಲಾಗಿದೆ. ಹೀಗೆ ನೀನು ಪದೆ-ಪದೆ ಮನೆಯತ್ತ ಬರುವುದು, ಅಸಭ್ಯವಾಗಿ ವರ್ತಿಸುವುದು ಸರಿಯಲ್ಲ; ನನ್ನ ಗಂಡನಿಗೆ, ಕುಟುಂಬದವರಿಗೆ ಇದೆಲ್ಲ ಗೊತ್ತಾದರೆ ಸಮಸ್ಯೆಯಾಗುತ್ತದೆ. ನೀನು ನನ್ನೊಂದಿಗೆ ಇನ್ನು ಮುಂದೆ ಮಾತಾಡಬೇಡ ಎಂದು ಬಿಜೆಪಿ ನಗರಾಧ್ಯಕ್ಷ ಸಾರಂಗನಿಗೆ ಹೇಳಿದ್ದ ಮಹಿಳೆ ಒಂದು ತಿಂಗಳಿಂದ ಆತನ ಸಂಪರ್ಕ ಕಡಿದುಕೊಂಡಿದ್ದರು. ಇದರಿಂದ ಕೆರಳಿದ ಬಿಜೆಪಿ ಮುಖಂಡ ಸಾರಂಗ್ ವಿಡಿಯೋ ವೈರಲ್ ಮಾಡಿದ್ದಾನೆಂದು ಮಹಿಳೆ ಕೊಟ್ಟಿರುವ ಪೊಲೀಸ್ ದೂರಿನಲ್ಲಿ ದಾಖಲಿಸಿದ್ದಾರೆ.

ಮಹಿಳೆ ತನ್ನ ಗಂಡನ ಜತೆ ಠಾಣೆಗೆ ಹೋಗಿ ದೂರು ದಾಖಲಿಸಿದರೂ ಪೊಲೀಸರು ಕೈಗೆ ಸಿಕ್ಕ ಆರೋಪಿ ಆಳುವ ಪಕ್ಷದ ನಗರಾಧ್ಯಕ್ಷನೆಂಬ ಕಾರಣಕ್ಕೆ ಬಂಧಿಸಲಿಲ್ಲವೆಂದು ಆರೋಪಿಸಲಾಗಿದೆ. ರಾಜಕೀಯ ಪ್ರಭಾವದಿಂದ ತಲೆ ಮರೆಸಿಕೊಂಡಿರುವ ಸಾರಂಗ ನಿರೀಕ್ಷಣಾ ಜಾಮೀನು ಪಡೆಯಲು ಅನುಕೂಲಮಾಡಿಕೊಡಲಾಗಿದೆ ಎಂದು ದೂರಲಾಗಿದೆ.


ಇದನ್ನೂ ಓದಿ: ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ರಾಜೇಶ್ವರಿಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...