Homeಕರ್ನಾಟಕಹೊನ್ನಾವರ ಖಾಸಗಿ ಬಂದರು ಯೋಜನೆ ನೀಲ ನಕ್ಷೆಯಂತೆ ನಡೆಯುತ್ತಿಲ್ಲ: ಮಾಜಿ ಶಾಸಕ ಮಂಕಾಳ್ ವೈದ್ಯ

ಹೊನ್ನಾವರ ಖಾಸಗಿ ಬಂದರು ಯೋಜನೆ ನೀಲ ನಕ್ಷೆಯಂತೆ ನಡೆಯುತ್ತಿಲ್ಲ: ಮಾಜಿ ಶಾಸಕ ಮಂಕಾಳ್ ವೈದ್ಯ

- Advertisement -
- Advertisement -

ಹೊನ್ನಾವರದಲ್ಲಿ ನಡೆಯುತ್ತಿರುವ ಖಾಸಗಿ ಬಂದರು ಕಾಮಗಾರಿಯಿಂದ ತಮ್ಮ ಬದುಕು ಮೂರಾಬಟ್ಟೆ ಮಾಡುತ್ತದೆಂಬ ಆತಂಕದಲ್ಲಿ ಮೀನುಗಾರರು ಕಂಗಾಲಾಗಿದ್ದರೆ, ಮೀನುಗಾರರ ಅಸಾಯಕತೆಯನ್ನು ರಾಜಕಾರಣಿಗಳು ಪ್ರತಿಷ್ಠೆಯ ಮೇಲಾಟಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಹಾಲಿ ಬಿಜೆಪಿ ಶಾಸಕ ಸುನೀಲ್ ನಾಯ್ಕ ಬಂದರು ಯೋಜನೆ ಪರವಾಗಿದ್ದಾರೆ, ಮಾಜಿ ಶಾಸಕ ಮಂಕಾಳ್ ವೈದ್ಯ ಮೀನುಗಾರರ ಭಾವನೆಗಳಿಗೆ ಸ್ಪಂದಿಸುತ್ತಿದ್ದಾರೆ. ವಾಣಿಜ್ಯ ಬಂದರು ನಿರ್ಮಾಣ ಕೈಬಿಡಬೇಕು ಇಲ್ಲದಿದ್ದರೆ ಮೀನುಗಾರರಿಗೆ ನ್ಯಾಯ ಸಿಗುವವರೆಗೆ ಹೋರಾಟ ನಿಲ್ಲದು ಎಂದವರು ಹೇಳಿದ್ದಾರೆ.

PC : Bhatkallys.com (ಮಂಕಾಳ್ ವೈದ್ಯ)

ಪತ್ರಿಕಾಗೋಷ್ಠಿ ಮಾತನಾಡಿದ ಅವರು, “ಶಾಸಕ ಸುನೀಲ್ ನಾಯ್ಕ ಎರಡು ನಾಲಿಗೆ ಮನುಷ್ಯ. ಅವರು ಮೀನುಗಾರರ ಪರ ನಿಲ್ಲಬೇಕು, ಇಲ್ಲವೆ ಪೋರ್ಟ್ ಕಂಪನಿ ಜತೆಗಿರಲಿ ಎಂದು ಹರಿಹಾಯ್ದಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಬಂದರು ಕಾಮಗಾರಿ ಶಂಕುಸ್ಥಾಪನೆ ಮಾಡಲಾಗಿದೆ ಎಂದು ಶಾಸಕ ಸುನೀಲ್ ನಾಯ್ಕ ಮತ್ತು ಕುಮಟಾ ಶಾಸಕ ದಿನಕರ ಶೆಟ್ಟಿ ಹೇಳುತ್ತಿದ್ದಾರೆ. ಇದೇನೊ ನಿಜ. ಆದರೆ 2010ರಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗಲೇ ಸದ್ರಿ ಯೋಜನೆಗೆ ಮಂಜೂರು ನೀಡಲಾಗಿತ್ತು. ಆ ಹೊತ್ತಲ್ಲಿ ಬಂದರು ಮತ್ತು ಮೀನುಗಾರಿಕಾ ಮಂತ್ರಿಯಾಗಿದ್ದ ಕೃಷ್ಣಪಾಲೆಮಾರ್ ಹೊನ್ನಾವರ ಪೋರ್ಟ್ ಕಂಪನಿಗೆ 5 ಎಕರೆ ಜಾಗ ನೀಡಿದ್ದರು. ಆ ನಂತರ ಮುಳುಗಡೆಯಾಗಿರುವ ಮಲ್ಲುಕುರ್ವಾದ 5 ಎಕರೆ ಸೇರಿಸಿ ಒಟ್ಟೂ 10 ಎಕರೆ ಪ್ರದೇಶ ಪೋರ್ಟ್ ಪ್ರೈ.ಲೀ ಬಿಜೆಪಿ ಸರ್ಕಾರವೇ ಕೊಟ್ಟಿತ್ತು. ಈಗ 50 ಎಕರೆ ಖಾಸಗಿ ಬಂದರಿಗಾಗಿ ಮೀಸಲಿಡಲಾಗಿದೆ” ಎಂದು ವೈದ್ಯ ತಿಳಿಸಿದ್ದಾರೆ.

ಹೊನ್ನಾವರ ಪೋರ್ಟ್ ಕಂಪನಿ ಮುಖ್ಯಸ್ಥರು 2007ರಲ್ಲಿ ಮೀನುಗಾರರ ಮುಂದೆ ಅವರ ಕಸುಬಿಗೆ ಯಾವ ತೊಂದರೆಯಾಗದಂತೆ ಬೇಕ್ ವಾಟರ್ ನಿರ್ಮಿಸಿ ಡ್ರಜಿಗ್ ಕಾಮಗಾರಿ ಜತೆ ಬಂದರು ಕಟ್ಟುವುದಾಗಿ ಹೇಳಿದ್ದರಿಂದ ಅಂದಿನ ಸಿಎಂ ಸಿದ್ದರಾಮಯ್ಯ ಶಂಕು ಸ್ಥಾಪನೆ ನೆರೆವೆರಿಸಿದ್ದರು. ಎಂದ ವೈದ್ಯ ಈಗಿನ ಕಾಮಗಾರಿ ಹಿಂದಿನ ನೀಲಿ ನಕ್ಷೆಯಂತಿಲ್ಲವೆಂದು ಆರೋಪಿಸಿದ್ದಾರೆ.

ಅಂದು ಯೋಜನೆಯ ನೀಲ ನಕ್ಷೆಯಲ್ಲಿ 40 ಮೀಟರ್ ಅಗಲದ ರಸ್ತೆ, ರೈಲ್ವೆಹಳಿ, ನೀರು ಸರಬರಾಜು ಯೋಜನೆಗಳು ಇರಲಿಲ್ಲ. ಈಗ ಇದೆಲ್ಲ ಸೇರಿಸಲಾಗಿದೆ. ಮೀನುಗಾರರ ಮನೆ ಇರುವ ಜಾಗ ಸರಕಾರದ್ದು ಎನ್ನುತ್ತಾರೆ ಶಾಸಕರು. ಮರುಕ್ಷಣವೆ ಮೀನುಗಾರರ ಒಂದು ಮನೆಯೂ ತೆರವುಗೊಳಿಸುವುದಿಲ್ಲ ಎನ್ನುತ್ತಾರೆ ಎಂದು ವ್ಯಂಗ್ಯವಾಡಿದ ವೈದ್ಯ, ಯೋಜನೆಯಲ್ಲಿ ಗೋಲ್ಮಾಲ್ ನಡೆದಿದೆ ಎಂಬ ಗಂಭೀರ ಆರೋಪ ಮಾಡಿದರು.

ಶಾಸಕರಿಗೆ ಪೋರ್ಟ್ ಪ್ರೈ.ಲಿ ಮೇಲೇಕೆ ಪ್ರೀತಿಯಿದೆ ಎಂದು ತಿಳಿಯುತ್ತಿಲ್ಲ. ಯೋಜನೆಯ ಅವಾಂತರದ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ದನಿದ್ದೇನೆ; ಯಾವಾಗ ಬೇಕಿದ್ದರು ಮೀನುಗಾರರ ಉಪಸ್ಥಿತಿಯಲ್ಲಿ ಕರೆದರೆ ದಾಖಲೆ ಸಮೇತ ಬರುತ್ತೇನೆ. ಕಾಸರಗೋಡು ಗ್ರಾ.ಪಂ ಯೋಜನೆಗೆ ಎನ್‌.ಒ.ಸಿ ಕೊಟ್ಟಿದ್ದು ಕಾಂಗ್ರೆಸ್ ಆಡಳಿತದಲ್ಲಿ ಎನ್ನುವುದಾದರೆ ಮೀನುಗಾರರು 52ದಿನಗಳ ಕಾಲ ಧರಣಿ ನಡೆಸಿದಾಗಲಾದರೂ ಶಾಸಕರು ರದ್ದು ಮಾಡಿಸಬಹುದಿತ್ತಲ್ಲ ಎಂದವರು ಪ್ರಶ್ನಿಸಿದರು.

PC : Oneindia Kannada, (ಶಾಸಕ ಸುನೀಲ್ ನಾಯ್ಕ)

ಯಾವ ಮೀನುಗಾರರ ಮತದಿಂದ ಗೆದ್ದಿದ್ದರೋ ಅದೇ ಮೀನುಗಾರರನ್ನು ಈಗ ಕೇವಲವಾಗಿ ಕಾಣಲಾಗುತ್ತಿದೆ. ಪಾವಿನಕುರ್ವಾ ನಡುಗಡ್ಡೆಯಿಂದ ಮಂಕಿಜಡ್ಡಿ ಗುಡ್ಡದವರೆಗೆ ಬಂದರು ಯೋಜನೆ ಸಾಗಲಿದೆ. ಮಂಕಿಜಡ್ಡಿ ಗುಡ್ಡದ 150 ಎಕರೆ ಅರಣ್ಯ ಪ್ರದೇಶ ಲೀಸಿಗೆ ಪಡೆದು ಲೂಟಿಗೆ ಪ್ಲಾನ್ ಹಾಕಲಾಗಿದೆ. ಟೂಲ್‌ಕಿಟ್ ಮಾಡಿ ರಾಜಕೀಯ ಲಾಭ ಬಿಜೆಪಿಗರು ಎತ್ತಲು ಹವಣಿಸುತ್ತಾರೆ. ಕಳೆದ ಚುನಾವಣೆ ಹೊತ್ತಲ್ಲಿ ಪರೇಶ್ ಮೇಸ್ತ ಮತ್ತು ಮಾಗೋಡಿನ ಕಾವ್ಯ ಪ್ರಕರಣದಲ್ಲಿ ಟೂಲ್‌ಕಿಟ್ ಮಾಡಿದ್ದರು. ಮಂಕಿದೋಣಿ ದುರಂತದಲ್ಲಿ ಮೀನುಗಾರರಿಗೆ ನ್ಯಾಯ ಕೊಡಿಸಲಾಗದವರಿಗೆ ಟೂಲ್‌ಕಿಟ್‌ಗಷ್ಟೆ ಮೀನುಗಾರರು ಬೇಕು ಎಂದು ಆಕ್ರೋಶ ವೈದ್ಯ ವ್ಯಕ್ತಪಡಿಸಿದರು.


ಇದನ್ನೂ ಓದಿ: ಹೊನ್ನಾವರ ಖಾಸಗಿ ಬಂದರು ಸ್ಥಾಪನೆಗಾಗಿ ಮೀನುಗಾರರ ಮೇಲೆ ದಾಳಿ: ಮಾನವ ಹಕ್ಕು ಆಯೋಗಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...