Homeಕರ್ನಾಟಕಹೊನ್ನಾವರ ಖಾಸಗಿ ಬಂದರು ಯೋಜನೆ ನೀಲ ನಕ್ಷೆಯಂತೆ ನಡೆಯುತ್ತಿಲ್ಲ: ಮಾಜಿ ಶಾಸಕ ಮಂಕಾಳ್ ವೈದ್ಯ

ಹೊನ್ನಾವರ ಖಾಸಗಿ ಬಂದರು ಯೋಜನೆ ನೀಲ ನಕ್ಷೆಯಂತೆ ನಡೆಯುತ್ತಿಲ್ಲ: ಮಾಜಿ ಶಾಸಕ ಮಂಕಾಳ್ ವೈದ್ಯ

- Advertisement -
- Advertisement -

ಹೊನ್ನಾವರದಲ್ಲಿ ನಡೆಯುತ್ತಿರುವ ಖಾಸಗಿ ಬಂದರು ಕಾಮಗಾರಿಯಿಂದ ತಮ್ಮ ಬದುಕು ಮೂರಾಬಟ್ಟೆ ಮಾಡುತ್ತದೆಂಬ ಆತಂಕದಲ್ಲಿ ಮೀನುಗಾರರು ಕಂಗಾಲಾಗಿದ್ದರೆ, ಮೀನುಗಾರರ ಅಸಾಯಕತೆಯನ್ನು ರಾಜಕಾರಣಿಗಳು ಪ್ರತಿಷ್ಠೆಯ ಮೇಲಾಟಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಹಾಲಿ ಬಿಜೆಪಿ ಶಾಸಕ ಸುನೀಲ್ ನಾಯ್ಕ ಬಂದರು ಯೋಜನೆ ಪರವಾಗಿದ್ದಾರೆ, ಮಾಜಿ ಶಾಸಕ ಮಂಕಾಳ್ ವೈದ್ಯ ಮೀನುಗಾರರ ಭಾವನೆಗಳಿಗೆ ಸ್ಪಂದಿಸುತ್ತಿದ್ದಾರೆ. ವಾಣಿಜ್ಯ ಬಂದರು ನಿರ್ಮಾಣ ಕೈಬಿಡಬೇಕು ಇಲ್ಲದಿದ್ದರೆ ಮೀನುಗಾರರಿಗೆ ನ್ಯಾಯ ಸಿಗುವವರೆಗೆ ಹೋರಾಟ ನಿಲ್ಲದು ಎಂದವರು ಹೇಳಿದ್ದಾರೆ.

PC : Bhatkallys.com (ಮಂಕಾಳ್ ವೈದ್ಯ)

ಪತ್ರಿಕಾಗೋಷ್ಠಿ ಮಾತನಾಡಿದ ಅವರು, “ಶಾಸಕ ಸುನೀಲ್ ನಾಯ್ಕ ಎರಡು ನಾಲಿಗೆ ಮನುಷ್ಯ. ಅವರು ಮೀನುಗಾರರ ಪರ ನಿಲ್ಲಬೇಕು, ಇಲ್ಲವೆ ಪೋರ್ಟ್ ಕಂಪನಿ ಜತೆಗಿರಲಿ ಎಂದು ಹರಿಹಾಯ್ದಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಬಂದರು ಕಾಮಗಾರಿ ಶಂಕುಸ್ಥಾಪನೆ ಮಾಡಲಾಗಿದೆ ಎಂದು ಶಾಸಕ ಸುನೀಲ್ ನಾಯ್ಕ ಮತ್ತು ಕುಮಟಾ ಶಾಸಕ ದಿನಕರ ಶೆಟ್ಟಿ ಹೇಳುತ್ತಿದ್ದಾರೆ. ಇದೇನೊ ನಿಜ. ಆದರೆ 2010ರಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗಲೇ ಸದ್ರಿ ಯೋಜನೆಗೆ ಮಂಜೂರು ನೀಡಲಾಗಿತ್ತು. ಆ ಹೊತ್ತಲ್ಲಿ ಬಂದರು ಮತ್ತು ಮೀನುಗಾರಿಕಾ ಮಂತ್ರಿಯಾಗಿದ್ದ ಕೃಷ್ಣಪಾಲೆಮಾರ್ ಹೊನ್ನಾವರ ಪೋರ್ಟ್ ಕಂಪನಿಗೆ 5 ಎಕರೆ ಜಾಗ ನೀಡಿದ್ದರು. ಆ ನಂತರ ಮುಳುಗಡೆಯಾಗಿರುವ ಮಲ್ಲುಕುರ್ವಾದ 5 ಎಕರೆ ಸೇರಿಸಿ ಒಟ್ಟೂ 10 ಎಕರೆ ಪ್ರದೇಶ ಪೋರ್ಟ್ ಪ್ರೈ.ಲೀ ಬಿಜೆಪಿ ಸರ್ಕಾರವೇ ಕೊಟ್ಟಿತ್ತು. ಈಗ 50 ಎಕರೆ ಖಾಸಗಿ ಬಂದರಿಗಾಗಿ ಮೀಸಲಿಡಲಾಗಿದೆ” ಎಂದು ವೈದ್ಯ ತಿಳಿಸಿದ್ದಾರೆ.

ಹೊನ್ನಾವರ ಪೋರ್ಟ್ ಕಂಪನಿ ಮುಖ್ಯಸ್ಥರು 2007ರಲ್ಲಿ ಮೀನುಗಾರರ ಮುಂದೆ ಅವರ ಕಸುಬಿಗೆ ಯಾವ ತೊಂದರೆಯಾಗದಂತೆ ಬೇಕ್ ವಾಟರ್ ನಿರ್ಮಿಸಿ ಡ್ರಜಿಗ್ ಕಾಮಗಾರಿ ಜತೆ ಬಂದರು ಕಟ್ಟುವುದಾಗಿ ಹೇಳಿದ್ದರಿಂದ ಅಂದಿನ ಸಿಎಂ ಸಿದ್ದರಾಮಯ್ಯ ಶಂಕು ಸ್ಥಾಪನೆ ನೆರೆವೆರಿಸಿದ್ದರು. ಎಂದ ವೈದ್ಯ ಈಗಿನ ಕಾಮಗಾರಿ ಹಿಂದಿನ ನೀಲಿ ನಕ್ಷೆಯಂತಿಲ್ಲವೆಂದು ಆರೋಪಿಸಿದ್ದಾರೆ.

ಅಂದು ಯೋಜನೆಯ ನೀಲ ನಕ್ಷೆಯಲ್ಲಿ 40 ಮೀಟರ್ ಅಗಲದ ರಸ್ತೆ, ರೈಲ್ವೆಹಳಿ, ನೀರು ಸರಬರಾಜು ಯೋಜನೆಗಳು ಇರಲಿಲ್ಲ. ಈಗ ಇದೆಲ್ಲ ಸೇರಿಸಲಾಗಿದೆ. ಮೀನುಗಾರರ ಮನೆ ಇರುವ ಜಾಗ ಸರಕಾರದ್ದು ಎನ್ನುತ್ತಾರೆ ಶಾಸಕರು. ಮರುಕ್ಷಣವೆ ಮೀನುಗಾರರ ಒಂದು ಮನೆಯೂ ತೆರವುಗೊಳಿಸುವುದಿಲ್ಲ ಎನ್ನುತ್ತಾರೆ ಎಂದು ವ್ಯಂಗ್ಯವಾಡಿದ ವೈದ್ಯ, ಯೋಜನೆಯಲ್ಲಿ ಗೋಲ್ಮಾಲ್ ನಡೆದಿದೆ ಎಂಬ ಗಂಭೀರ ಆರೋಪ ಮಾಡಿದರು.

ಶಾಸಕರಿಗೆ ಪೋರ್ಟ್ ಪ್ರೈ.ಲಿ ಮೇಲೇಕೆ ಪ್ರೀತಿಯಿದೆ ಎಂದು ತಿಳಿಯುತ್ತಿಲ್ಲ. ಯೋಜನೆಯ ಅವಾಂತರದ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ದನಿದ್ದೇನೆ; ಯಾವಾಗ ಬೇಕಿದ್ದರು ಮೀನುಗಾರರ ಉಪಸ್ಥಿತಿಯಲ್ಲಿ ಕರೆದರೆ ದಾಖಲೆ ಸಮೇತ ಬರುತ್ತೇನೆ. ಕಾಸರಗೋಡು ಗ್ರಾ.ಪಂ ಯೋಜನೆಗೆ ಎನ್‌.ಒ.ಸಿ ಕೊಟ್ಟಿದ್ದು ಕಾಂಗ್ರೆಸ್ ಆಡಳಿತದಲ್ಲಿ ಎನ್ನುವುದಾದರೆ ಮೀನುಗಾರರು 52ದಿನಗಳ ಕಾಲ ಧರಣಿ ನಡೆಸಿದಾಗಲಾದರೂ ಶಾಸಕರು ರದ್ದು ಮಾಡಿಸಬಹುದಿತ್ತಲ್ಲ ಎಂದವರು ಪ್ರಶ್ನಿಸಿದರು.

PC : Oneindia Kannada, (ಶಾಸಕ ಸುನೀಲ್ ನಾಯ್ಕ)

ಯಾವ ಮೀನುಗಾರರ ಮತದಿಂದ ಗೆದ್ದಿದ್ದರೋ ಅದೇ ಮೀನುಗಾರರನ್ನು ಈಗ ಕೇವಲವಾಗಿ ಕಾಣಲಾಗುತ್ತಿದೆ. ಪಾವಿನಕುರ್ವಾ ನಡುಗಡ್ಡೆಯಿಂದ ಮಂಕಿಜಡ್ಡಿ ಗುಡ್ಡದವರೆಗೆ ಬಂದರು ಯೋಜನೆ ಸಾಗಲಿದೆ. ಮಂಕಿಜಡ್ಡಿ ಗುಡ್ಡದ 150 ಎಕರೆ ಅರಣ್ಯ ಪ್ರದೇಶ ಲೀಸಿಗೆ ಪಡೆದು ಲೂಟಿಗೆ ಪ್ಲಾನ್ ಹಾಕಲಾಗಿದೆ. ಟೂಲ್‌ಕಿಟ್ ಮಾಡಿ ರಾಜಕೀಯ ಲಾಭ ಬಿಜೆಪಿಗರು ಎತ್ತಲು ಹವಣಿಸುತ್ತಾರೆ. ಕಳೆದ ಚುನಾವಣೆ ಹೊತ್ತಲ್ಲಿ ಪರೇಶ್ ಮೇಸ್ತ ಮತ್ತು ಮಾಗೋಡಿನ ಕಾವ್ಯ ಪ್ರಕರಣದಲ್ಲಿ ಟೂಲ್‌ಕಿಟ್ ಮಾಡಿದ್ದರು. ಮಂಕಿದೋಣಿ ದುರಂತದಲ್ಲಿ ಮೀನುಗಾರರಿಗೆ ನ್ಯಾಯ ಕೊಡಿಸಲಾಗದವರಿಗೆ ಟೂಲ್‌ಕಿಟ್‌ಗಷ್ಟೆ ಮೀನುಗಾರರು ಬೇಕು ಎಂದು ಆಕ್ರೋಶ ವೈದ್ಯ ವ್ಯಕ್ತಪಡಿಸಿದರು.


ಇದನ್ನೂ ಓದಿ: ಹೊನ್ನಾವರ ಖಾಸಗಿ ಬಂದರು ಸ್ಥಾಪನೆಗಾಗಿ ಮೀನುಗಾರರ ಮೇಲೆ ದಾಳಿ: ಮಾನವ ಹಕ್ಕು ಆಯೋಗಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...