Homeಕರ್ನಾಟಕಹೊನ್ನಾವರ ಖಾಸಗಿ ಬಂದರು ಯೋಜನೆ ನೀಲ ನಕ್ಷೆಯಂತೆ ನಡೆಯುತ್ತಿಲ್ಲ: ಮಾಜಿ ಶಾಸಕ ಮಂಕಾಳ್ ವೈದ್ಯ

ಹೊನ್ನಾವರ ಖಾಸಗಿ ಬಂದರು ಯೋಜನೆ ನೀಲ ನಕ್ಷೆಯಂತೆ ನಡೆಯುತ್ತಿಲ್ಲ: ಮಾಜಿ ಶಾಸಕ ಮಂಕಾಳ್ ವೈದ್ಯ

- Advertisement -
- Advertisement -

ಹೊನ್ನಾವರದಲ್ಲಿ ನಡೆಯುತ್ತಿರುವ ಖಾಸಗಿ ಬಂದರು ಕಾಮಗಾರಿಯಿಂದ ತಮ್ಮ ಬದುಕು ಮೂರಾಬಟ್ಟೆ ಮಾಡುತ್ತದೆಂಬ ಆತಂಕದಲ್ಲಿ ಮೀನುಗಾರರು ಕಂಗಾಲಾಗಿದ್ದರೆ, ಮೀನುಗಾರರ ಅಸಾಯಕತೆಯನ್ನು ರಾಜಕಾರಣಿಗಳು ಪ್ರತಿಷ್ಠೆಯ ಮೇಲಾಟಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಹಾಲಿ ಬಿಜೆಪಿ ಶಾಸಕ ಸುನೀಲ್ ನಾಯ್ಕ ಬಂದರು ಯೋಜನೆ ಪರವಾಗಿದ್ದಾರೆ, ಮಾಜಿ ಶಾಸಕ ಮಂಕಾಳ್ ವೈದ್ಯ ಮೀನುಗಾರರ ಭಾವನೆಗಳಿಗೆ ಸ್ಪಂದಿಸುತ್ತಿದ್ದಾರೆ. ವಾಣಿಜ್ಯ ಬಂದರು ನಿರ್ಮಾಣ ಕೈಬಿಡಬೇಕು ಇಲ್ಲದಿದ್ದರೆ ಮೀನುಗಾರರಿಗೆ ನ್ಯಾಯ ಸಿಗುವವರೆಗೆ ಹೋರಾಟ ನಿಲ್ಲದು ಎಂದವರು ಹೇಳಿದ್ದಾರೆ.

PC : Bhatkallys.com (ಮಂಕಾಳ್ ವೈದ್ಯ)

ಪತ್ರಿಕಾಗೋಷ್ಠಿ ಮಾತನಾಡಿದ ಅವರು, “ಶಾಸಕ ಸುನೀಲ್ ನಾಯ್ಕ ಎರಡು ನಾಲಿಗೆ ಮನುಷ್ಯ. ಅವರು ಮೀನುಗಾರರ ಪರ ನಿಲ್ಲಬೇಕು, ಇಲ್ಲವೆ ಪೋರ್ಟ್ ಕಂಪನಿ ಜತೆಗಿರಲಿ ಎಂದು ಹರಿಹಾಯ್ದಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಬಂದರು ಕಾಮಗಾರಿ ಶಂಕುಸ್ಥಾಪನೆ ಮಾಡಲಾಗಿದೆ ಎಂದು ಶಾಸಕ ಸುನೀಲ್ ನಾಯ್ಕ ಮತ್ತು ಕುಮಟಾ ಶಾಸಕ ದಿನಕರ ಶೆಟ್ಟಿ ಹೇಳುತ್ತಿದ್ದಾರೆ. ಇದೇನೊ ನಿಜ. ಆದರೆ 2010ರಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗಲೇ ಸದ್ರಿ ಯೋಜನೆಗೆ ಮಂಜೂರು ನೀಡಲಾಗಿತ್ತು. ಆ ಹೊತ್ತಲ್ಲಿ ಬಂದರು ಮತ್ತು ಮೀನುಗಾರಿಕಾ ಮಂತ್ರಿಯಾಗಿದ್ದ ಕೃಷ್ಣಪಾಲೆಮಾರ್ ಹೊನ್ನಾವರ ಪೋರ್ಟ್ ಕಂಪನಿಗೆ 5 ಎಕರೆ ಜಾಗ ನೀಡಿದ್ದರು. ಆ ನಂತರ ಮುಳುಗಡೆಯಾಗಿರುವ ಮಲ್ಲುಕುರ್ವಾದ 5 ಎಕರೆ ಸೇರಿಸಿ ಒಟ್ಟೂ 10 ಎಕರೆ ಪ್ರದೇಶ ಪೋರ್ಟ್ ಪ್ರೈ.ಲೀ ಬಿಜೆಪಿ ಸರ್ಕಾರವೇ ಕೊಟ್ಟಿತ್ತು. ಈಗ 50 ಎಕರೆ ಖಾಸಗಿ ಬಂದರಿಗಾಗಿ ಮೀಸಲಿಡಲಾಗಿದೆ” ಎಂದು ವೈದ್ಯ ತಿಳಿಸಿದ್ದಾರೆ.

ಹೊನ್ನಾವರ ಪೋರ್ಟ್ ಕಂಪನಿ ಮುಖ್ಯಸ್ಥರು 2007ರಲ್ಲಿ ಮೀನುಗಾರರ ಮುಂದೆ ಅವರ ಕಸುಬಿಗೆ ಯಾವ ತೊಂದರೆಯಾಗದಂತೆ ಬೇಕ್ ವಾಟರ್ ನಿರ್ಮಿಸಿ ಡ್ರಜಿಗ್ ಕಾಮಗಾರಿ ಜತೆ ಬಂದರು ಕಟ್ಟುವುದಾಗಿ ಹೇಳಿದ್ದರಿಂದ ಅಂದಿನ ಸಿಎಂ ಸಿದ್ದರಾಮಯ್ಯ ಶಂಕು ಸ್ಥಾಪನೆ ನೆರೆವೆರಿಸಿದ್ದರು. ಎಂದ ವೈದ್ಯ ಈಗಿನ ಕಾಮಗಾರಿ ಹಿಂದಿನ ನೀಲಿ ನಕ್ಷೆಯಂತಿಲ್ಲವೆಂದು ಆರೋಪಿಸಿದ್ದಾರೆ.

ಅಂದು ಯೋಜನೆಯ ನೀಲ ನಕ್ಷೆಯಲ್ಲಿ 40 ಮೀಟರ್ ಅಗಲದ ರಸ್ತೆ, ರೈಲ್ವೆಹಳಿ, ನೀರು ಸರಬರಾಜು ಯೋಜನೆಗಳು ಇರಲಿಲ್ಲ. ಈಗ ಇದೆಲ್ಲ ಸೇರಿಸಲಾಗಿದೆ. ಮೀನುಗಾರರ ಮನೆ ಇರುವ ಜಾಗ ಸರಕಾರದ್ದು ಎನ್ನುತ್ತಾರೆ ಶಾಸಕರು. ಮರುಕ್ಷಣವೆ ಮೀನುಗಾರರ ಒಂದು ಮನೆಯೂ ತೆರವುಗೊಳಿಸುವುದಿಲ್ಲ ಎನ್ನುತ್ತಾರೆ ಎಂದು ವ್ಯಂಗ್ಯವಾಡಿದ ವೈದ್ಯ, ಯೋಜನೆಯಲ್ಲಿ ಗೋಲ್ಮಾಲ್ ನಡೆದಿದೆ ಎಂಬ ಗಂಭೀರ ಆರೋಪ ಮಾಡಿದರು.

ಶಾಸಕರಿಗೆ ಪೋರ್ಟ್ ಪ್ರೈ.ಲಿ ಮೇಲೇಕೆ ಪ್ರೀತಿಯಿದೆ ಎಂದು ತಿಳಿಯುತ್ತಿಲ್ಲ. ಯೋಜನೆಯ ಅವಾಂತರದ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ದನಿದ್ದೇನೆ; ಯಾವಾಗ ಬೇಕಿದ್ದರು ಮೀನುಗಾರರ ಉಪಸ್ಥಿತಿಯಲ್ಲಿ ಕರೆದರೆ ದಾಖಲೆ ಸಮೇತ ಬರುತ್ತೇನೆ. ಕಾಸರಗೋಡು ಗ್ರಾ.ಪಂ ಯೋಜನೆಗೆ ಎನ್‌.ಒ.ಸಿ ಕೊಟ್ಟಿದ್ದು ಕಾಂಗ್ರೆಸ್ ಆಡಳಿತದಲ್ಲಿ ಎನ್ನುವುದಾದರೆ ಮೀನುಗಾರರು 52ದಿನಗಳ ಕಾಲ ಧರಣಿ ನಡೆಸಿದಾಗಲಾದರೂ ಶಾಸಕರು ರದ್ದು ಮಾಡಿಸಬಹುದಿತ್ತಲ್ಲ ಎಂದವರು ಪ್ರಶ್ನಿಸಿದರು.

PC : Oneindia Kannada, (ಶಾಸಕ ಸುನೀಲ್ ನಾಯ್ಕ)

ಯಾವ ಮೀನುಗಾರರ ಮತದಿಂದ ಗೆದ್ದಿದ್ದರೋ ಅದೇ ಮೀನುಗಾರರನ್ನು ಈಗ ಕೇವಲವಾಗಿ ಕಾಣಲಾಗುತ್ತಿದೆ. ಪಾವಿನಕುರ್ವಾ ನಡುಗಡ್ಡೆಯಿಂದ ಮಂಕಿಜಡ್ಡಿ ಗುಡ್ಡದವರೆಗೆ ಬಂದರು ಯೋಜನೆ ಸಾಗಲಿದೆ. ಮಂಕಿಜಡ್ಡಿ ಗುಡ್ಡದ 150 ಎಕರೆ ಅರಣ್ಯ ಪ್ರದೇಶ ಲೀಸಿಗೆ ಪಡೆದು ಲೂಟಿಗೆ ಪ್ಲಾನ್ ಹಾಕಲಾಗಿದೆ. ಟೂಲ್‌ಕಿಟ್ ಮಾಡಿ ರಾಜಕೀಯ ಲಾಭ ಬಿಜೆಪಿಗರು ಎತ್ತಲು ಹವಣಿಸುತ್ತಾರೆ. ಕಳೆದ ಚುನಾವಣೆ ಹೊತ್ತಲ್ಲಿ ಪರೇಶ್ ಮೇಸ್ತ ಮತ್ತು ಮಾಗೋಡಿನ ಕಾವ್ಯ ಪ್ರಕರಣದಲ್ಲಿ ಟೂಲ್‌ಕಿಟ್ ಮಾಡಿದ್ದರು. ಮಂಕಿದೋಣಿ ದುರಂತದಲ್ಲಿ ಮೀನುಗಾರರಿಗೆ ನ್ಯಾಯ ಕೊಡಿಸಲಾಗದವರಿಗೆ ಟೂಲ್‌ಕಿಟ್‌ಗಷ್ಟೆ ಮೀನುಗಾರರು ಬೇಕು ಎಂದು ಆಕ್ರೋಶ ವೈದ್ಯ ವ್ಯಕ್ತಪಡಿಸಿದರು.


ಇದನ್ನೂ ಓದಿ: ಹೊನ್ನಾವರ ಖಾಸಗಿ ಬಂದರು ಸ್ಥಾಪನೆಗಾಗಿ ಮೀನುಗಾರರ ಮೇಲೆ ದಾಳಿ: ಮಾನವ ಹಕ್ಕು ಆಯೋಗಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...