Homeಕರ್ನಾಟಕಹೊನ್ನಾವರ ಖಾಸಗಿ ಬಂದರು ಯೋಜನೆ ನೀಲ ನಕ್ಷೆಯಂತೆ ನಡೆಯುತ್ತಿಲ್ಲ: ಮಾಜಿ ಶಾಸಕ ಮಂಕಾಳ್ ವೈದ್ಯ

ಹೊನ್ನಾವರ ಖಾಸಗಿ ಬಂದರು ಯೋಜನೆ ನೀಲ ನಕ್ಷೆಯಂತೆ ನಡೆಯುತ್ತಿಲ್ಲ: ಮಾಜಿ ಶಾಸಕ ಮಂಕಾಳ್ ವೈದ್ಯ

- Advertisement -
- Advertisement -

ಹೊನ್ನಾವರದಲ್ಲಿ ನಡೆಯುತ್ತಿರುವ ಖಾಸಗಿ ಬಂದರು ಕಾಮಗಾರಿಯಿಂದ ತಮ್ಮ ಬದುಕು ಮೂರಾಬಟ್ಟೆ ಮಾಡುತ್ತದೆಂಬ ಆತಂಕದಲ್ಲಿ ಮೀನುಗಾರರು ಕಂಗಾಲಾಗಿದ್ದರೆ, ಮೀನುಗಾರರ ಅಸಾಯಕತೆಯನ್ನು ರಾಜಕಾರಣಿಗಳು ಪ್ರತಿಷ್ಠೆಯ ಮೇಲಾಟಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಹಾಲಿ ಬಿಜೆಪಿ ಶಾಸಕ ಸುನೀಲ್ ನಾಯ್ಕ ಬಂದರು ಯೋಜನೆ ಪರವಾಗಿದ್ದಾರೆ, ಮಾಜಿ ಶಾಸಕ ಮಂಕಾಳ್ ವೈದ್ಯ ಮೀನುಗಾರರ ಭಾವನೆಗಳಿಗೆ ಸ್ಪಂದಿಸುತ್ತಿದ್ದಾರೆ. ವಾಣಿಜ್ಯ ಬಂದರು ನಿರ್ಮಾಣ ಕೈಬಿಡಬೇಕು ಇಲ್ಲದಿದ್ದರೆ ಮೀನುಗಾರರಿಗೆ ನ್ಯಾಯ ಸಿಗುವವರೆಗೆ ಹೋರಾಟ ನಿಲ್ಲದು ಎಂದವರು ಹೇಳಿದ್ದಾರೆ.

PC : Bhatkallys.com (ಮಂಕಾಳ್ ವೈದ್ಯ)

ಪತ್ರಿಕಾಗೋಷ್ಠಿ ಮಾತನಾಡಿದ ಅವರು, “ಶಾಸಕ ಸುನೀಲ್ ನಾಯ್ಕ ಎರಡು ನಾಲಿಗೆ ಮನುಷ್ಯ. ಅವರು ಮೀನುಗಾರರ ಪರ ನಿಲ್ಲಬೇಕು, ಇಲ್ಲವೆ ಪೋರ್ಟ್ ಕಂಪನಿ ಜತೆಗಿರಲಿ ಎಂದು ಹರಿಹಾಯ್ದಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಬಂದರು ಕಾಮಗಾರಿ ಶಂಕುಸ್ಥಾಪನೆ ಮಾಡಲಾಗಿದೆ ಎಂದು ಶಾಸಕ ಸುನೀಲ್ ನಾಯ್ಕ ಮತ್ತು ಕುಮಟಾ ಶಾಸಕ ದಿನಕರ ಶೆಟ್ಟಿ ಹೇಳುತ್ತಿದ್ದಾರೆ. ಇದೇನೊ ನಿಜ. ಆದರೆ 2010ರಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗಲೇ ಸದ್ರಿ ಯೋಜನೆಗೆ ಮಂಜೂರು ನೀಡಲಾಗಿತ್ತು. ಆ ಹೊತ್ತಲ್ಲಿ ಬಂದರು ಮತ್ತು ಮೀನುಗಾರಿಕಾ ಮಂತ್ರಿಯಾಗಿದ್ದ ಕೃಷ್ಣಪಾಲೆಮಾರ್ ಹೊನ್ನಾವರ ಪೋರ್ಟ್ ಕಂಪನಿಗೆ 5 ಎಕರೆ ಜಾಗ ನೀಡಿದ್ದರು. ಆ ನಂತರ ಮುಳುಗಡೆಯಾಗಿರುವ ಮಲ್ಲುಕುರ್ವಾದ 5 ಎಕರೆ ಸೇರಿಸಿ ಒಟ್ಟೂ 10 ಎಕರೆ ಪ್ರದೇಶ ಪೋರ್ಟ್ ಪ್ರೈ.ಲೀ ಬಿಜೆಪಿ ಸರ್ಕಾರವೇ ಕೊಟ್ಟಿತ್ತು. ಈಗ 50 ಎಕರೆ ಖಾಸಗಿ ಬಂದರಿಗಾಗಿ ಮೀಸಲಿಡಲಾಗಿದೆ” ಎಂದು ವೈದ್ಯ ತಿಳಿಸಿದ್ದಾರೆ.

ಹೊನ್ನಾವರ ಪೋರ್ಟ್ ಕಂಪನಿ ಮುಖ್ಯಸ್ಥರು 2007ರಲ್ಲಿ ಮೀನುಗಾರರ ಮುಂದೆ ಅವರ ಕಸುಬಿಗೆ ಯಾವ ತೊಂದರೆಯಾಗದಂತೆ ಬೇಕ್ ವಾಟರ್ ನಿರ್ಮಿಸಿ ಡ್ರಜಿಗ್ ಕಾಮಗಾರಿ ಜತೆ ಬಂದರು ಕಟ್ಟುವುದಾಗಿ ಹೇಳಿದ್ದರಿಂದ ಅಂದಿನ ಸಿಎಂ ಸಿದ್ದರಾಮಯ್ಯ ಶಂಕು ಸ್ಥಾಪನೆ ನೆರೆವೆರಿಸಿದ್ದರು. ಎಂದ ವೈದ್ಯ ಈಗಿನ ಕಾಮಗಾರಿ ಹಿಂದಿನ ನೀಲಿ ನಕ್ಷೆಯಂತಿಲ್ಲವೆಂದು ಆರೋಪಿಸಿದ್ದಾರೆ.

ಅಂದು ಯೋಜನೆಯ ನೀಲ ನಕ್ಷೆಯಲ್ಲಿ 40 ಮೀಟರ್ ಅಗಲದ ರಸ್ತೆ, ರೈಲ್ವೆಹಳಿ, ನೀರು ಸರಬರಾಜು ಯೋಜನೆಗಳು ಇರಲಿಲ್ಲ. ಈಗ ಇದೆಲ್ಲ ಸೇರಿಸಲಾಗಿದೆ. ಮೀನುಗಾರರ ಮನೆ ಇರುವ ಜಾಗ ಸರಕಾರದ್ದು ಎನ್ನುತ್ತಾರೆ ಶಾಸಕರು. ಮರುಕ್ಷಣವೆ ಮೀನುಗಾರರ ಒಂದು ಮನೆಯೂ ತೆರವುಗೊಳಿಸುವುದಿಲ್ಲ ಎನ್ನುತ್ತಾರೆ ಎಂದು ವ್ಯಂಗ್ಯವಾಡಿದ ವೈದ್ಯ, ಯೋಜನೆಯಲ್ಲಿ ಗೋಲ್ಮಾಲ್ ನಡೆದಿದೆ ಎಂಬ ಗಂಭೀರ ಆರೋಪ ಮಾಡಿದರು.

ಶಾಸಕರಿಗೆ ಪೋರ್ಟ್ ಪ್ರೈ.ಲಿ ಮೇಲೇಕೆ ಪ್ರೀತಿಯಿದೆ ಎಂದು ತಿಳಿಯುತ್ತಿಲ್ಲ. ಯೋಜನೆಯ ಅವಾಂತರದ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ದನಿದ್ದೇನೆ; ಯಾವಾಗ ಬೇಕಿದ್ದರು ಮೀನುಗಾರರ ಉಪಸ್ಥಿತಿಯಲ್ಲಿ ಕರೆದರೆ ದಾಖಲೆ ಸಮೇತ ಬರುತ್ತೇನೆ. ಕಾಸರಗೋಡು ಗ್ರಾ.ಪಂ ಯೋಜನೆಗೆ ಎನ್‌.ಒ.ಸಿ ಕೊಟ್ಟಿದ್ದು ಕಾಂಗ್ರೆಸ್ ಆಡಳಿತದಲ್ಲಿ ಎನ್ನುವುದಾದರೆ ಮೀನುಗಾರರು 52ದಿನಗಳ ಕಾಲ ಧರಣಿ ನಡೆಸಿದಾಗಲಾದರೂ ಶಾಸಕರು ರದ್ದು ಮಾಡಿಸಬಹುದಿತ್ತಲ್ಲ ಎಂದವರು ಪ್ರಶ್ನಿಸಿದರು.

PC : Oneindia Kannada, (ಶಾಸಕ ಸುನೀಲ್ ನಾಯ್ಕ)

ಯಾವ ಮೀನುಗಾರರ ಮತದಿಂದ ಗೆದ್ದಿದ್ದರೋ ಅದೇ ಮೀನುಗಾರರನ್ನು ಈಗ ಕೇವಲವಾಗಿ ಕಾಣಲಾಗುತ್ತಿದೆ. ಪಾವಿನಕುರ್ವಾ ನಡುಗಡ್ಡೆಯಿಂದ ಮಂಕಿಜಡ್ಡಿ ಗುಡ್ಡದವರೆಗೆ ಬಂದರು ಯೋಜನೆ ಸಾಗಲಿದೆ. ಮಂಕಿಜಡ್ಡಿ ಗುಡ್ಡದ 150 ಎಕರೆ ಅರಣ್ಯ ಪ್ರದೇಶ ಲೀಸಿಗೆ ಪಡೆದು ಲೂಟಿಗೆ ಪ್ಲಾನ್ ಹಾಕಲಾಗಿದೆ. ಟೂಲ್‌ಕಿಟ್ ಮಾಡಿ ರಾಜಕೀಯ ಲಾಭ ಬಿಜೆಪಿಗರು ಎತ್ತಲು ಹವಣಿಸುತ್ತಾರೆ. ಕಳೆದ ಚುನಾವಣೆ ಹೊತ್ತಲ್ಲಿ ಪರೇಶ್ ಮೇಸ್ತ ಮತ್ತು ಮಾಗೋಡಿನ ಕಾವ್ಯ ಪ್ರಕರಣದಲ್ಲಿ ಟೂಲ್‌ಕಿಟ್ ಮಾಡಿದ್ದರು. ಮಂಕಿದೋಣಿ ದುರಂತದಲ್ಲಿ ಮೀನುಗಾರರಿಗೆ ನ್ಯಾಯ ಕೊಡಿಸಲಾಗದವರಿಗೆ ಟೂಲ್‌ಕಿಟ್‌ಗಷ್ಟೆ ಮೀನುಗಾರರು ಬೇಕು ಎಂದು ಆಕ್ರೋಶ ವೈದ್ಯ ವ್ಯಕ್ತಪಡಿಸಿದರು.


ಇದನ್ನೂ ಓದಿ: ಹೊನ್ನಾವರ ಖಾಸಗಿ ಬಂದರು ಸ್ಥಾಪನೆಗಾಗಿ ಮೀನುಗಾರರ ಮೇಲೆ ದಾಳಿ: ಮಾನವ ಹಕ್ಕು ಆಯೋಗಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...