Homeಕರ್ನಾಟಕಹೊನ್ನಾವರ ಖಾಸಗಿ ಬಂದರು ಯೋಜನೆ ನೀಲ ನಕ್ಷೆಯಂತೆ ನಡೆಯುತ್ತಿಲ್ಲ: ಮಾಜಿ ಶಾಸಕ ಮಂಕಾಳ್ ವೈದ್ಯ

ಹೊನ್ನಾವರ ಖಾಸಗಿ ಬಂದರು ಯೋಜನೆ ನೀಲ ನಕ್ಷೆಯಂತೆ ನಡೆಯುತ್ತಿಲ್ಲ: ಮಾಜಿ ಶಾಸಕ ಮಂಕಾಳ್ ವೈದ್ಯ

- Advertisement -
- Advertisement -

ಹೊನ್ನಾವರದಲ್ಲಿ ನಡೆಯುತ್ತಿರುವ ಖಾಸಗಿ ಬಂದರು ಕಾಮಗಾರಿಯಿಂದ ತಮ್ಮ ಬದುಕು ಮೂರಾಬಟ್ಟೆ ಮಾಡುತ್ತದೆಂಬ ಆತಂಕದಲ್ಲಿ ಮೀನುಗಾರರು ಕಂಗಾಲಾಗಿದ್ದರೆ, ಮೀನುಗಾರರ ಅಸಾಯಕತೆಯನ್ನು ರಾಜಕಾರಣಿಗಳು ಪ್ರತಿಷ್ಠೆಯ ಮೇಲಾಟಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಹಾಲಿ ಬಿಜೆಪಿ ಶಾಸಕ ಸುನೀಲ್ ನಾಯ್ಕ ಬಂದರು ಯೋಜನೆ ಪರವಾಗಿದ್ದಾರೆ, ಮಾಜಿ ಶಾಸಕ ಮಂಕಾಳ್ ವೈದ್ಯ ಮೀನುಗಾರರ ಭಾವನೆಗಳಿಗೆ ಸ್ಪಂದಿಸುತ್ತಿದ್ದಾರೆ. ವಾಣಿಜ್ಯ ಬಂದರು ನಿರ್ಮಾಣ ಕೈಬಿಡಬೇಕು ಇಲ್ಲದಿದ್ದರೆ ಮೀನುಗಾರರಿಗೆ ನ್ಯಾಯ ಸಿಗುವವರೆಗೆ ಹೋರಾಟ ನಿಲ್ಲದು ಎಂದವರು ಹೇಳಿದ್ದಾರೆ.

PC : Bhatkallys.com (ಮಂಕಾಳ್ ವೈದ್ಯ)

ಪತ್ರಿಕಾಗೋಷ್ಠಿ ಮಾತನಾಡಿದ ಅವರು, “ಶಾಸಕ ಸುನೀಲ್ ನಾಯ್ಕ ಎರಡು ನಾಲಿಗೆ ಮನುಷ್ಯ. ಅವರು ಮೀನುಗಾರರ ಪರ ನಿಲ್ಲಬೇಕು, ಇಲ್ಲವೆ ಪೋರ್ಟ್ ಕಂಪನಿ ಜತೆಗಿರಲಿ ಎಂದು ಹರಿಹಾಯ್ದಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಬಂದರು ಕಾಮಗಾರಿ ಶಂಕುಸ್ಥಾಪನೆ ಮಾಡಲಾಗಿದೆ ಎಂದು ಶಾಸಕ ಸುನೀಲ್ ನಾಯ್ಕ ಮತ್ತು ಕುಮಟಾ ಶಾಸಕ ದಿನಕರ ಶೆಟ್ಟಿ ಹೇಳುತ್ತಿದ್ದಾರೆ. ಇದೇನೊ ನಿಜ. ಆದರೆ 2010ರಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗಲೇ ಸದ್ರಿ ಯೋಜನೆಗೆ ಮಂಜೂರು ನೀಡಲಾಗಿತ್ತು. ಆ ಹೊತ್ತಲ್ಲಿ ಬಂದರು ಮತ್ತು ಮೀನುಗಾರಿಕಾ ಮಂತ್ರಿಯಾಗಿದ್ದ ಕೃಷ್ಣಪಾಲೆಮಾರ್ ಹೊನ್ನಾವರ ಪೋರ್ಟ್ ಕಂಪನಿಗೆ 5 ಎಕರೆ ಜಾಗ ನೀಡಿದ್ದರು. ಆ ನಂತರ ಮುಳುಗಡೆಯಾಗಿರುವ ಮಲ್ಲುಕುರ್ವಾದ 5 ಎಕರೆ ಸೇರಿಸಿ ಒಟ್ಟೂ 10 ಎಕರೆ ಪ್ರದೇಶ ಪೋರ್ಟ್ ಪ್ರೈ.ಲೀ ಬಿಜೆಪಿ ಸರ್ಕಾರವೇ ಕೊಟ್ಟಿತ್ತು. ಈಗ 50 ಎಕರೆ ಖಾಸಗಿ ಬಂದರಿಗಾಗಿ ಮೀಸಲಿಡಲಾಗಿದೆ” ಎಂದು ವೈದ್ಯ ತಿಳಿಸಿದ್ದಾರೆ.

ಹೊನ್ನಾವರ ಪೋರ್ಟ್ ಕಂಪನಿ ಮುಖ್ಯಸ್ಥರು 2007ರಲ್ಲಿ ಮೀನುಗಾರರ ಮುಂದೆ ಅವರ ಕಸುಬಿಗೆ ಯಾವ ತೊಂದರೆಯಾಗದಂತೆ ಬೇಕ್ ವಾಟರ್ ನಿರ್ಮಿಸಿ ಡ್ರಜಿಗ್ ಕಾಮಗಾರಿ ಜತೆ ಬಂದರು ಕಟ್ಟುವುದಾಗಿ ಹೇಳಿದ್ದರಿಂದ ಅಂದಿನ ಸಿಎಂ ಸಿದ್ದರಾಮಯ್ಯ ಶಂಕು ಸ್ಥಾಪನೆ ನೆರೆವೆರಿಸಿದ್ದರು. ಎಂದ ವೈದ್ಯ ಈಗಿನ ಕಾಮಗಾರಿ ಹಿಂದಿನ ನೀಲಿ ನಕ್ಷೆಯಂತಿಲ್ಲವೆಂದು ಆರೋಪಿಸಿದ್ದಾರೆ.

ಅಂದು ಯೋಜನೆಯ ನೀಲ ನಕ್ಷೆಯಲ್ಲಿ 40 ಮೀಟರ್ ಅಗಲದ ರಸ್ತೆ, ರೈಲ್ವೆಹಳಿ, ನೀರು ಸರಬರಾಜು ಯೋಜನೆಗಳು ಇರಲಿಲ್ಲ. ಈಗ ಇದೆಲ್ಲ ಸೇರಿಸಲಾಗಿದೆ. ಮೀನುಗಾರರ ಮನೆ ಇರುವ ಜಾಗ ಸರಕಾರದ್ದು ಎನ್ನುತ್ತಾರೆ ಶಾಸಕರು. ಮರುಕ್ಷಣವೆ ಮೀನುಗಾರರ ಒಂದು ಮನೆಯೂ ತೆರವುಗೊಳಿಸುವುದಿಲ್ಲ ಎನ್ನುತ್ತಾರೆ ಎಂದು ವ್ಯಂಗ್ಯವಾಡಿದ ವೈದ್ಯ, ಯೋಜನೆಯಲ್ಲಿ ಗೋಲ್ಮಾಲ್ ನಡೆದಿದೆ ಎಂಬ ಗಂಭೀರ ಆರೋಪ ಮಾಡಿದರು.

ಶಾಸಕರಿಗೆ ಪೋರ್ಟ್ ಪ್ರೈ.ಲಿ ಮೇಲೇಕೆ ಪ್ರೀತಿಯಿದೆ ಎಂದು ತಿಳಿಯುತ್ತಿಲ್ಲ. ಯೋಜನೆಯ ಅವಾಂತರದ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ದನಿದ್ದೇನೆ; ಯಾವಾಗ ಬೇಕಿದ್ದರು ಮೀನುಗಾರರ ಉಪಸ್ಥಿತಿಯಲ್ಲಿ ಕರೆದರೆ ದಾಖಲೆ ಸಮೇತ ಬರುತ್ತೇನೆ. ಕಾಸರಗೋಡು ಗ್ರಾ.ಪಂ ಯೋಜನೆಗೆ ಎನ್‌.ಒ.ಸಿ ಕೊಟ್ಟಿದ್ದು ಕಾಂಗ್ರೆಸ್ ಆಡಳಿತದಲ್ಲಿ ಎನ್ನುವುದಾದರೆ ಮೀನುಗಾರರು 52ದಿನಗಳ ಕಾಲ ಧರಣಿ ನಡೆಸಿದಾಗಲಾದರೂ ಶಾಸಕರು ರದ್ದು ಮಾಡಿಸಬಹುದಿತ್ತಲ್ಲ ಎಂದವರು ಪ್ರಶ್ನಿಸಿದರು.

PC : Oneindia Kannada, (ಶಾಸಕ ಸುನೀಲ್ ನಾಯ್ಕ)

ಯಾವ ಮೀನುಗಾರರ ಮತದಿಂದ ಗೆದ್ದಿದ್ದರೋ ಅದೇ ಮೀನುಗಾರರನ್ನು ಈಗ ಕೇವಲವಾಗಿ ಕಾಣಲಾಗುತ್ತಿದೆ. ಪಾವಿನಕುರ್ವಾ ನಡುಗಡ್ಡೆಯಿಂದ ಮಂಕಿಜಡ್ಡಿ ಗುಡ್ಡದವರೆಗೆ ಬಂದರು ಯೋಜನೆ ಸಾಗಲಿದೆ. ಮಂಕಿಜಡ್ಡಿ ಗುಡ್ಡದ 150 ಎಕರೆ ಅರಣ್ಯ ಪ್ರದೇಶ ಲೀಸಿಗೆ ಪಡೆದು ಲೂಟಿಗೆ ಪ್ಲಾನ್ ಹಾಕಲಾಗಿದೆ. ಟೂಲ್‌ಕಿಟ್ ಮಾಡಿ ರಾಜಕೀಯ ಲಾಭ ಬಿಜೆಪಿಗರು ಎತ್ತಲು ಹವಣಿಸುತ್ತಾರೆ. ಕಳೆದ ಚುನಾವಣೆ ಹೊತ್ತಲ್ಲಿ ಪರೇಶ್ ಮೇಸ್ತ ಮತ್ತು ಮಾಗೋಡಿನ ಕಾವ್ಯ ಪ್ರಕರಣದಲ್ಲಿ ಟೂಲ್‌ಕಿಟ್ ಮಾಡಿದ್ದರು. ಮಂಕಿದೋಣಿ ದುರಂತದಲ್ಲಿ ಮೀನುಗಾರರಿಗೆ ನ್ಯಾಯ ಕೊಡಿಸಲಾಗದವರಿಗೆ ಟೂಲ್‌ಕಿಟ್‌ಗಷ್ಟೆ ಮೀನುಗಾರರು ಬೇಕು ಎಂದು ಆಕ್ರೋಶ ವೈದ್ಯ ವ್ಯಕ್ತಪಡಿಸಿದರು.


ಇದನ್ನೂ ಓದಿ: ಹೊನ್ನಾವರ ಖಾಸಗಿ ಬಂದರು ಸ್ಥಾಪನೆಗಾಗಿ ಮೀನುಗಾರರ ಮೇಲೆ ದಾಳಿ: ಮಾನವ ಹಕ್ಕು ಆಯೋಗಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...