Homeಕರ್ನಾಟಕಹೊನ್ನಾವರ ಖಾಸಗಿ ಬಂದರು ಯೋಜನೆ ನೀಲ ನಕ್ಷೆಯಂತೆ ನಡೆಯುತ್ತಿಲ್ಲ: ಮಾಜಿ ಶಾಸಕ ಮಂಕಾಳ್ ವೈದ್ಯ

ಹೊನ್ನಾವರ ಖಾಸಗಿ ಬಂದರು ಯೋಜನೆ ನೀಲ ನಕ್ಷೆಯಂತೆ ನಡೆಯುತ್ತಿಲ್ಲ: ಮಾಜಿ ಶಾಸಕ ಮಂಕಾಳ್ ವೈದ್ಯ

- Advertisement -
- Advertisement -

ಹೊನ್ನಾವರದಲ್ಲಿ ನಡೆಯುತ್ತಿರುವ ಖಾಸಗಿ ಬಂದರು ಕಾಮಗಾರಿಯಿಂದ ತಮ್ಮ ಬದುಕು ಮೂರಾಬಟ್ಟೆ ಮಾಡುತ್ತದೆಂಬ ಆತಂಕದಲ್ಲಿ ಮೀನುಗಾರರು ಕಂಗಾಲಾಗಿದ್ದರೆ, ಮೀನುಗಾರರ ಅಸಾಯಕತೆಯನ್ನು ರಾಜಕಾರಣಿಗಳು ಪ್ರತಿಷ್ಠೆಯ ಮೇಲಾಟಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಹಾಲಿ ಬಿಜೆಪಿ ಶಾಸಕ ಸುನೀಲ್ ನಾಯ್ಕ ಬಂದರು ಯೋಜನೆ ಪರವಾಗಿದ್ದಾರೆ, ಮಾಜಿ ಶಾಸಕ ಮಂಕಾಳ್ ವೈದ್ಯ ಮೀನುಗಾರರ ಭಾವನೆಗಳಿಗೆ ಸ್ಪಂದಿಸುತ್ತಿದ್ದಾರೆ. ವಾಣಿಜ್ಯ ಬಂದರು ನಿರ್ಮಾಣ ಕೈಬಿಡಬೇಕು ಇಲ್ಲದಿದ್ದರೆ ಮೀನುಗಾರರಿಗೆ ನ್ಯಾಯ ಸಿಗುವವರೆಗೆ ಹೋರಾಟ ನಿಲ್ಲದು ಎಂದವರು ಹೇಳಿದ್ದಾರೆ.

PC : Bhatkallys.com (ಮಂಕಾಳ್ ವೈದ್ಯ)

ಪತ್ರಿಕಾಗೋಷ್ಠಿ ಮಾತನಾಡಿದ ಅವರು, “ಶಾಸಕ ಸುನೀಲ್ ನಾಯ್ಕ ಎರಡು ನಾಲಿಗೆ ಮನುಷ್ಯ. ಅವರು ಮೀನುಗಾರರ ಪರ ನಿಲ್ಲಬೇಕು, ಇಲ್ಲವೆ ಪೋರ್ಟ್ ಕಂಪನಿ ಜತೆಗಿರಲಿ ಎಂದು ಹರಿಹಾಯ್ದಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಬಂದರು ಕಾಮಗಾರಿ ಶಂಕುಸ್ಥಾಪನೆ ಮಾಡಲಾಗಿದೆ ಎಂದು ಶಾಸಕ ಸುನೀಲ್ ನಾಯ್ಕ ಮತ್ತು ಕುಮಟಾ ಶಾಸಕ ದಿನಕರ ಶೆಟ್ಟಿ ಹೇಳುತ್ತಿದ್ದಾರೆ. ಇದೇನೊ ನಿಜ. ಆದರೆ 2010ರಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗಲೇ ಸದ್ರಿ ಯೋಜನೆಗೆ ಮಂಜೂರು ನೀಡಲಾಗಿತ್ತು. ಆ ಹೊತ್ತಲ್ಲಿ ಬಂದರು ಮತ್ತು ಮೀನುಗಾರಿಕಾ ಮಂತ್ರಿಯಾಗಿದ್ದ ಕೃಷ್ಣಪಾಲೆಮಾರ್ ಹೊನ್ನಾವರ ಪೋರ್ಟ್ ಕಂಪನಿಗೆ 5 ಎಕರೆ ಜಾಗ ನೀಡಿದ್ದರು. ಆ ನಂತರ ಮುಳುಗಡೆಯಾಗಿರುವ ಮಲ್ಲುಕುರ್ವಾದ 5 ಎಕರೆ ಸೇರಿಸಿ ಒಟ್ಟೂ 10 ಎಕರೆ ಪ್ರದೇಶ ಪೋರ್ಟ್ ಪ್ರೈ.ಲೀ ಬಿಜೆಪಿ ಸರ್ಕಾರವೇ ಕೊಟ್ಟಿತ್ತು. ಈಗ 50 ಎಕರೆ ಖಾಸಗಿ ಬಂದರಿಗಾಗಿ ಮೀಸಲಿಡಲಾಗಿದೆ” ಎಂದು ವೈದ್ಯ ತಿಳಿಸಿದ್ದಾರೆ.

ಹೊನ್ನಾವರ ಪೋರ್ಟ್ ಕಂಪನಿ ಮುಖ್ಯಸ್ಥರು 2007ರಲ್ಲಿ ಮೀನುಗಾರರ ಮುಂದೆ ಅವರ ಕಸುಬಿಗೆ ಯಾವ ತೊಂದರೆಯಾಗದಂತೆ ಬೇಕ್ ವಾಟರ್ ನಿರ್ಮಿಸಿ ಡ್ರಜಿಗ್ ಕಾಮಗಾರಿ ಜತೆ ಬಂದರು ಕಟ್ಟುವುದಾಗಿ ಹೇಳಿದ್ದರಿಂದ ಅಂದಿನ ಸಿಎಂ ಸಿದ್ದರಾಮಯ್ಯ ಶಂಕು ಸ್ಥಾಪನೆ ನೆರೆವೆರಿಸಿದ್ದರು. ಎಂದ ವೈದ್ಯ ಈಗಿನ ಕಾಮಗಾರಿ ಹಿಂದಿನ ನೀಲಿ ನಕ್ಷೆಯಂತಿಲ್ಲವೆಂದು ಆರೋಪಿಸಿದ್ದಾರೆ.

ಅಂದು ಯೋಜನೆಯ ನೀಲ ನಕ್ಷೆಯಲ್ಲಿ 40 ಮೀಟರ್ ಅಗಲದ ರಸ್ತೆ, ರೈಲ್ವೆಹಳಿ, ನೀರು ಸರಬರಾಜು ಯೋಜನೆಗಳು ಇರಲಿಲ್ಲ. ಈಗ ಇದೆಲ್ಲ ಸೇರಿಸಲಾಗಿದೆ. ಮೀನುಗಾರರ ಮನೆ ಇರುವ ಜಾಗ ಸರಕಾರದ್ದು ಎನ್ನುತ್ತಾರೆ ಶಾಸಕರು. ಮರುಕ್ಷಣವೆ ಮೀನುಗಾರರ ಒಂದು ಮನೆಯೂ ತೆರವುಗೊಳಿಸುವುದಿಲ್ಲ ಎನ್ನುತ್ತಾರೆ ಎಂದು ವ್ಯಂಗ್ಯವಾಡಿದ ವೈದ್ಯ, ಯೋಜನೆಯಲ್ಲಿ ಗೋಲ್ಮಾಲ್ ನಡೆದಿದೆ ಎಂಬ ಗಂಭೀರ ಆರೋಪ ಮಾಡಿದರು.

ಶಾಸಕರಿಗೆ ಪೋರ್ಟ್ ಪ್ರೈ.ಲಿ ಮೇಲೇಕೆ ಪ್ರೀತಿಯಿದೆ ಎಂದು ತಿಳಿಯುತ್ತಿಲ್ಲ. ಯೋಜನೆಯ ಅವಾಂತರದ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ದನಿದ್ದೇನೆ; ಯಾವಾಗ ಬೇಕಿದ್ದರು ಮೀನುಗಾರರ ಉಪಸ್ಥಿತಿಯಲ್ಲಿ ಕರೆದರೆ ದಾಖಲೆ ಸಮೇತ ಬರುತ್ತೇನೆ. ಕಾಸರಗೋಡು ಗ್ರಾ.ಪಂ ಯೋಜನೆಗೆ ಎನ್‌.ಒ.ಸಿ ಕೊಟ್ಟಿದ್ದು ಕಾಂಗ್ರೆಸ್ ಆಡಳಿತದಲ್ಲಿ ಎನ್ನುವುದಾದರೆ ಮೀನುಗಾರರು 52ದಿನಗಳ ಕಾಲ ಧರಣಿ ನಡೆಸಿದಾಗಲಾದರೂ ಶಾಸಕರು ರದ್ದು ಮಾಡಿಸಬಹುದಿತ್ತಲ್ಲ ಎಂದವರು ಪ್ರಶ್ನಿಸಿದರು.

PC : Oneindia Kannada, (ಶಾಸಕ ಸುನೀಲ್ ನಾಯ್ಕ)

ಯಾವ ಮೀನುಗಾರರ ಮತದಿಂದ ಗೆದ್ದಿದ್ದರೋ ಅದೇ ಮೀನುಗಾರರನ್ನು ಈಗ ಕೇವಲವಾಗಿ ಕಾಣಲಾಗುತ್ತಿದೆ. ಪಾವಿನಕುರ್ವಾ ನಡುಗಡ್ಡೆಯಿಂದ ಮಂಕಿಜಡ್ಡಿ ಗುಡ್ಡದವರೆಗೆ ಬಂದರು ಯೋಜನೆ ಸಾಗಲಿದೆ. ಮಂಕಿಜಡ್ಡಿ ಗುಡ್ಡದ 150 ಎಕರೆ ಅರಣ್ಯ ಪ್ರದೇಶ ಲೀಸಿಗೆ ಪಡೆದು ಲೂಟಿಗೆ ಪ್ಲಾನ್ ಹಾಕಲಾಗಿದೆ. ಟೂಲ್‌ಕಿಟ್ ಮಾಡಿ ರಾಜಕೀಯ ಲಾಭ ಬಿಜೆಪಿಗರು ಎತ್ತಲು ಹವಣಿಸುತ್ತಾರೆ. ಕಳೆದ ಚುನಾವಣೆ ಹೊತ್ತಲ್ಲಿ ಪರೇಶ್ ಮೇಸ್ತ ಮತ್ತು ಮಾಗೋಡಿನ ಕಾವ್ಯ ಪ್ರಕರಣದಲ್ಲಿ ಟೂಲ್‌ಕಿಟ್ ಮಾಡಿದ್ದರು. ಮಂಕಿದೋಣಿ ದುರಂತದಲ್ಲಿ ಮೀನುಗಾರರಿಗೆ ನ್ಯಾಯ ಕೊಡಿಸಲಾಗದವರಿಗೆ ಟೂಲ್‌ಕಿಟ್‌ಗಷ್ಟೆ ಮೀನುಗಾರರು ಬೇಕು ಎಂದು ಆಕ್ರೋಶ ವೈದ್ಯ ವ್ಯಕ್ತಪಡಿಸಿದರು.


ಇದನ್ನೂ ಓದಿ: ಹೊನ್ನಾವರ ಖಾಸಗಿ ಬಂದರು ಸ್ಥಾಪನೆಗಾಗಿ ಮೀನುಗಾರರ ಮೇಲೆ ದಾಳಿ: ಮಾನವ ಹಕ್ಕು ಆಯೋಗಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...