Homeಕರ್ನಾಟಕಕೋಲಾರದಲ್ಲಿ ಮತ್ತೊಂದು ಮರ್ಯಾದೆಗೇಡು ಹತ್ಯೆ: ಪರಿಶಿಷ್ಟ ಯುವಕನ ಪ್ರೀತಿಸಿದ ಮಗಳನ್ನು ಕೊಂದ ತಂದೆ

ಕೋಲಾರದಲ್ಲಿ ಮತ್ತೊಂದು ಮರ್ಯಾದೆಗೇಡು ಹತ್ಯೆ: ಪರಿಶಿಷ್ಟ ಯುವಕನ ಪ್ರೀತಿಸಿದ ಮಗಳನ್ನು ಕೊಂದ ತಂದೆ

- Advertisement -
- Advertisement -

ಕೋಲಾರ ಜಿಲ್ಲೆಯಲ್ಲಿ ಮತ್ತೊಂದು ಮರ್ಯಾದೆಗೇಡು ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಪರಿಶಿಷ್ಟ ಪಂಗಡದ ಯುವಕನನ್ನು ಪ್ರೀತಿಸುತ್ತಿದ್ದ ಪುತ್ರಿಯನ್ನು ತಂದೆಯೇ ಹತ್ಯೆ ಮಾಡಿ, ಸದ್ದಿಲ್ಲದೇ ಆಕೆಯನ್ನು ಅಂತ್ಯಕ್ರಿಯೆ ನಡೆಸಿರುವ ಘಟನೆ ನಡೆದಿದೆ.

ಈ ಘಟನೆ ಕೋಲಾರ ತಾಲ್ಲೂಕಿನ ತೊಟ್ಟಿ ಗ್ರಾಮದಲ್ಲಿ ನಡೆದಿದೆ. ರಮ್ಯಾ (19) ಕೊಲೆಯಾದ ಯುವತಿ. ಒಕ್ಕಲಿಗ ಸಮುದಾಯಕ್ಕೆ ಸೇರಿದ್ದು, ಯುವಕ ಪರಿಶಿಷ್ಟ ಪಂಗಡಕ್ಕೆ ಸೇರಿದ್ದಾನೆ. ಇಬ್ಬರು ಪ್ರೀತಿಸುತ್ತಿದ್ದರು ಆದರೆ ಇದಕ್ಕೆ ಯುವತಿಯ ತಂದೆ ವೆಂಕಟೇಶಗೌಡ ವಿರೋಧ ವ್ಯಕ್ತಪಡಿಸಿದ್ದನು.

ಆ ಯುವಕನ ತೊಟ್ಟಿ ಗ್ರಾಮ ಸಮೀಪದ ಆಲೇರಿ ಗ್ರಾಮದವನಾಗಿದ್ದಾನೆ. ರಮ್ಯಾ ಹಾಗೂ ಆ ಯುವಕ ಮಧ್ಯ ರಾತ್ರಿ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದರು. ಅದನ್ನು ಗಮನಿಸಿದ ತಂದೆ ಈ ಕೃತ್ಯ ಎಸಗಿರುವುದು ಗೊತ್ತಾಗಿದೆ.

ಪರಿಶಿಷ್ಟ ಪಂಗಡಕ್ಕೆ ಸೇರಿದ ಯುವಕನನ್ನು ಪ್ರೀತಿಸಬೇಡ ಎಂದು ವೆಂಕಟೇಶಗೌಡ ಮಗಳಿಗೆ ಹೇಳಿದ್ದಾನೆ. ಆದರೆ ಅದಕ್ಕೆ ಒಪ್ಪದಿದ್ದಾಗ ಮಗಳನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಗಳು ರಮ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿ ಆಗಸ್ಟ್ 25ರಂದು ಹೆತ್ತವರು ಆಕೆಯ ಅಂತ್ಯಸಂಸ್ಕಾರ ನಡೆಸಿದ್ದರು. ಆ ಬಳಿಕ ಯುವತಿಯನ್ನು ಕೊಲೆ ಮಾಡಿರುವ ವಿಚಾರ ಊರಿನಲ್ಲಿ ಹಬ್ಬಿದ್ದರಿಂದ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಆಕೆಯ ತಂದೆಯನ್ನು ಕರೆಸಿ ವಿಚಾರಣೆ ನಡೆಸಿದ್ದಾರೆ.

ಈ ವೇಳೆ ಮರ್ಯಾದೆಗೇಡು ಹತ್ಯೆ ನಡೆದಿರುವುದು ಗೊತ್ತಾಗಿದೆ. ವೆಂಕಟೇಶಗೌಡ ಹಾಗೂ ಸಹೋದರರಾದ ಮೋಹನ್‌ ಹಾಗೂ ಚೌಡೇಗೌಡ ಎಂಬುವರನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಕೊಲೆಯಾದ ಯುವತಿಯ ಶವವನ್ನು ಭಾನುವಾರ ಬೆಳಿಗ್ಗೆ ತಹಶೀಲ್ದಾರ್ ಹರ್ಷವರ್ಧನ್ ಅವರ ಸಮ್ಮುಖದಲ್ಲಿ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಸ್ಥಳದಲ್ಲಿ ಸರ್ಕಲ್‌ ಇನ್‌ಸ್ಪೆಕ್ಟರ್‌ ಲೋಕೇಶ್ ಇದ್ದರು.

ಈ ಬಗ್ಗೆ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕೋಲಾರದಲ್ಲಿ ಮರ್ಯಾದೆಗೇಡು ಹತ್ಯೆ: ಪರಿಶಿಷ್ಟ ಜಾತಿಯವನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ; ಯುವಕ ಆತ್ಮಹತ್ಯೆ

ಇತ್ತೀಚೆಗೆ ಕೋಲಾರ ಜಿಲ್ಲೆಯಲ್ಲಿಯೇ ಒಂದು ಮರ್ಯಾದೆಗೇಡು ಹತ್ಯೆ ನಡೆದಿತ್ತು. ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಬೋಡಗುರ್ಕಿ ಗ್ರಾಮದಲ್ಲಿ ತನ್ನ ಮಗಳು ದಲಿತ ಸಮುದಾಯಕ್ಕೆ ಸೇರಿದ ಯುವಕನನ್ನು ಪ್ರೀತಿಸಿದಳು ಎನ್ನುವ ಏಕೈಕ ಕಾರಣಕ್ಕೆ ತಂದೆಯೇ ಮಗಳ ಕತ್ತು ಹಿಸುಕಿ ಕೊಲೆ ಮಾಡಿದ ಅಮಾನುಷ ಮರ್ಯಾದೆಗೇಡು ಹತ್ಯೆ ನಡೆದಿತ್ತು. ಪ್ರೇಯಸಿಯ ಸಾವಿನ ಸುದ್ದಿ ತಿಳಿದ ಪ್ರಿಯಕರ ರೈಲಿನ ಹಳಿಗೆ ತಲೆ ಕೊಟ್ಟು ಆತನೂ ಸಾವಿಗೀಡಾಗಿರುವ ಹೃದಯವಿದ್ರಾವಕ ಘಟನೆಗೆ ಕೋಲಾರ ಸಾಕ್ಷಿಯಾಗಿತ್ತು.

ಬೋಡಗುರ್ಕಿ ಗ್ರಾಮದ ದಲಿತ ಸಮುದಾಯಕ್ಕೆ ಸೇರಿದ ಯುವಕ ಗಂಗಾಧರ (23) ಮತ್ತು ಗೊಲ್ಲ ಸಮುದಾಯಕ್ಕೆ ಸೇರಿದ ಕೀರ್ತಿ (20) ಪರಸ್ಪರ ಪ್ರೀತಿಸುತ್ತಿದ್ದರು. ದಲಿತ ಸಮುದಾಯದ ಹುಡುಗನನ್ನು ಮಗಳು ಪ್ರೀತಿಸಿದ್ದಾಳೆ ಎನ್ನುವ ಕಾರಣಕ್ಕೆ ಕುಪಿತಗೊಂಡ ಹೀನ ಜಾತಿವಾದಿ ಮನಸ್ಥಿತಿಯ ತಂದೆ ಕೃಷ್ಣಮೂರ್ತಿ ಜೂನ್ 26ರಂದು ಮಗಳ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿತ್ತು. ಈ ವಿಷಯ ತಿಳಿದ ಯುವಕ ಜೂನ್ 27ರಂದು ಬಂಗಾರಪೇಟೆ ಬಳಿಯ ಪುರ ಎಂಬಲ್ಲಿ ಮೈಸೂರು-ಚೆನ್ನೈ ಎಕ್ಸ್‌ಪ್ರೆಸ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಕೃಷ್ಣಮೂರ್ತಿಯನ್ನು ಬಂಧಿಸಿದ್ದು ಕಾಮಸಮುದ್ರ ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...