Homeಕರ್ನಾಟಕಕೋಲಾರದಲ್ಲಿ ಮತ್ತೊಂದು ಮರ್ಯಾದೆಗೇಡು ಹತ್ಯೆ: ಪರಿಶಿಷ್ಟ ಯುವಕನ ಪ್ರೀತಿಸಿದ ಮಗಳನ್ನು ಕೊಂದ ತಂದೆ

ಕೋಲಾರದಲ್ಲಿ ಮತ್ತೊಂದು ಮರ್ಯಾದೆಗೇಡು ಹತ್ಯೆ: ಪರಿಶಿಷ್ಟ ಯುವಕನ ಪ್ರೀತಿಸಿದ ಮಗಳನ್ನು ಕೊಂದ ತಂದೆ

- Advertisement -
- Advertisement -

ಕೋಲಾರ ಜಿಲ್ಲೆಯಲ್ಲಿ ಮತ್ತೊಂದು ಮರ್ಯಾದೆಗೇಡು ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಪರಿಶಿಷ್ಟ ಪಂಗಡದ ಯುವಕನನ್ನು ಪ್ರೀತಿಸುತ್ತಿದ್ದ ಪುತ್ರಿಯನ್ನು ತಂದೆಯೇ ಹತ್ಯೆ ಮಾಡಿ, ಸದ್ದಿಲ್ಲದೇ ಆಕೆಯನ್ನು ಅಂತ್ಯಕ್ರಿಯೆ ನಡೆಸಿರುವ ಘಟನೆ ನಡೆದಿದೆ.

ಈ ಘಟನೆ ಕೋಲಾರ ತಾಲ್ಲೂಕಿನ ತೊಟ್ಟಿ ಗ್ರಾಮದಲ್ಲಿ ನಡೆದಿದೆ. ರಮ್ಯಾ (19) ಕೊಲೆಯಾದ ಯುವತಿ. ಒಕ್ಕಲಿಗ ಸಮುದಾಯಕ್ಕೆ ಸೇರಿದ್ದು, ಯುವಕ ಪರಿಶಿಷ್ಟ ಪಂಗಡಕ್ಕೆ ಸೇರಿದ್ದಾನೆ. ಇಬ್ಬರು ಪ್ರೀತಿಸುತ್ತಿದ್ದರು ಆದರೆ ಇದಕ್ಕೆ ಯುವತಿಯ ತಂದೆ ವೆಂಕಟೇಶಗೌಡ ವಿರೋಧ ವ್ಯಕ್ತಪಡಿಸಿದ್ದನು.

ಆ ಯುವಕನ ತೊಟ್ಟಿ ಗ್ರಾಮ ಸಮೀಪದ ಆಲೇರಿ ಗ್ರಾಮದವನಾಗಿದ್ದಾನೆ. ರಮ್ಯಾ ಹಾಗೂ ಆ ಯುವಕ ಮಧ್ಯ ರಾತ್ರಿ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದರು. ಅದನ್ನು ಗಮನಿಸಿದ ತಂದೆ ಈ ಕೃತ್ಯ ಎಸಗಿರುವುದು ಗೊತ್ತಾಗಿದೆ.

ಪರಿಶಿಷ್ಟ ಪಂಗಡಕ್ಕೆ ಸೇರಿದ ಯುವಕನನ್ನು ಪ್ರೀತಿಸಬೇಡ ಎಂದು ವೆಂಕಟೇಶಗೌಡ ಮಗಳಿಗೆ ಹೇಳಿದ್ದಾನೆ. ಆದರೆ ಅದಕ್ಕೆ ಒಪ್ಪದಿದ್ದಾಗ ಮಗಳನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಗಳು ರಮ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿ ಆಗಸ್ಟ್ 25ರಂದು ಹೆತ್ತವರು ಆಕೆಯ ಅಂತ್ಯಸಂಸ್ಕಾರ ನಡೆಸಿದ್ದರು. ಆ ಬಳಿಕ ಯುವತಿಯನ್ನು ಕೊಲೆ ಮಾಡಿರುವ ವಿಚಾರ ಊರಿನಲ್ಲಿ ಹಬ್ಬಿದ್ದರಿಂದ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಆಕೆಯ ತಂದೆಯನ್ನು ಕರೆಸಿ ವಿಚಾರಣೆ ನಡೆಸಿದ್ದಾರೆ.

ಈ ವೇಳೆ ಮರ್ಯಾದೆಗೇಡು ಹತ್ಯೆ ನಡೆದಿರುವುದು ಗೊತ್ತಾಗಿದೆ. ವೆಂಕಟೇಶಗೌಡ ಹಾಗೂ ಸಹೋದರರಾದ ಮೋಹನ್‌ ಹಾಗೂ ಚೌಡೇಗೌಡ ಎಂಬುವರನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಕೊಲೆಯಾದ ಯುವತಿಯ ಶವವನ್ನು ಭಾನುವಾರ ಬೆಳಿಗ್ಗೆ ತಹಶೀಲ್ದಾರ್ ಹರ್ಷವರ್ಧನ್ ಅವರ ಸಮ್ಮುಖದಲ್ಲಿ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಸ್ಥಳದಲ್ಲಿ ಸರ್ಕಲ್‌ ಇನ್‌ಸ್ಪೆಕ್ಟರ್‌ ಲೋಕೇಶ್ ಇದ್ದರು.

ಈ ಬಗ್ಗೆ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕೋಲಾರದಲ್ಲಿ ಮರ್ಯಾದೆಗೇಡು ಹತ್ಯೆ: ಪರಿಶಿಷ್ಟ ಜಾತಿಯವನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ; ಯುವಕ ಆತ್ಮಹತ್ಯೆ

ಇತ್ತೀಚೆಗೆ ಕೋಲಾರ ಜಿಲ್ಲೆಯಲ್ಲಿಯೇ ಒಂದು ಮರ್ಯಾದೆಗೇಡು ಹತ್ಯೆ ನಡೆದಿತ್ತು. ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಬೋಡಗುರ್ಕಿ ಗ್ರಾಮದಲ್ಲಿ ತನ್ನ ಮಗಳು ದಲಿತ ಸಮುದಾಯಕ್ಕೆ ಸೇರಿದ ಯುವಕನನ್ನು ಪ್ರೀತಿಸಿದಳು ಎನ್ನುವ ಏಕೈಕ ಕಾರಣಕ್ಕೆ ತಂದೆಯೇ ಮಗಳ ಕತ್ತು ಹಿಸುಕಿ ಕೊಲೆ ಮಾಡಿದ ಅಮಾನುಷ ಮರ್ಯಾದೆಗೇಡು ಹತ್ಯೆ ನಡೆದಿತ್ತು. ಪ್ರೇಯಸಿಯ ಸಾವಿನ ಸುದ್ದಿ ತಿಳಿದ ಪ್ರಿಯಕರ ರೈಲಿನ ಹಳಿಗೆ ತಲೆ ಕೊಟ್ಟು ಆತನೂ ಸಾವಿಗೀಡಾಗಿರುವ ಹೃದಯವಿದ್ರಾವಕ ಘಟನೆಗೆ ಕೋಲಾರ ಸಾಕ್ಷಿಯಾಗಿತ್ತು.

ಬೋಡಗುರ್ಕಿ ಗ್ರಾಮದ ದಲಿತ ಸಮುದಾಯಕ್ಕೆ ಸೇರಿದ ಯುವಕ ಗಂಗಾಧರ (23) ಮತ್ತು ಗೊಲ್ಲ ಸಮುದಾಯಕ್ಕೆ ಸೇರಿದ ಕೀರ್ತಿ (20) ಪರಸ್ಪರ ಪ್ರೀತಿಸುತ್ತಿದ್ದರು. ದಲಿತ ಸಮುದಾಯದ ಹುಡುಗನನ್ನು ಮಗಳು ಪ್ರೀತಿಸಿದ್ದಾಳೆ ಎನ್ನುವ ಕಾರಣಕ್ಕೆ ಕುಪಿತಗೊಂಡ ಹೀನ ಜಾತಿವಾದಿ ಮನಸ್ಥಿತಿಯ ತಂದೆ ಕೃಷ್ಣಮೂರ್ತಿ ಜೂನ್ 26ರಂದು ಮಗಳ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿತ್ತು. ಈ ವಿಷಯ ತಿಳಿದ ಯುವಕ ಜೂನ್ 27ರಂದು ಬಂಗಾರಪೇಟೆ ಬಳಿಯ ಪುರ ಎಂಬಲ್ಲಿ ಮೈಸೂರು-ಚೆನ್ನೈ ಎಕ್ಸ್‌ಪ್ರೆಸ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಕೃಷ್ಣಮೂರ್ತಿಯನ್ನು ಬಂಧಿಸಿದ್ದು ಕಾಮಸಮುದ್ರ ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...