Homeಕರ್ನಾಟಕಮರ್ಯಾದಾಹೀನ ಹತ್ಯೆ: ಸಿನಿಮಾ ಶೈಲಿಯಲ್ಲಿ ಕಥೆ ಕಟ್ಟಿದ ಯುವತಿಯ ಕುಟುಂಬ!

ಮರ್ಯಾದಾಹೀನ ಹತ್ಯೆ: ಸಿನಿಮಾ ಶೈಲಿಯಲ್ಲಿ ಕಥೆ ಕಟ್ಟಿದ ಯುವತಿಯ ಕುಟುಂಬ!

ಯುವತಿಯನ್ನು ಕುಟುಂಬಸ್ಥರೇ ಕೊಂದು, ಕಾಣೆಯಾಗಿದ್ದಾಳೆ ಎಂದು ರಾಮನಗರದ ಕುದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು!

- Advertisement -
- Advertisement -

ದಲಿತ ಹುಡುಗನನ್ನು ಪ್ರೀತಿಸುತ್ತಿದ್ದಳು ಎಂಬ ಕಾರಣಕ್ಕೆ ಯುವತಿಯೊಬ್ಬಳನ್ನು ಆಕೆಯ ತಂದೆ ಮತ್ತು ತಮ್ಮ ಸೇರಿ ಹತ್ಯೆ ಮಾಡಿರುವ ಹೀನ ಘಟನೆ ರಾಮನಗರದ ಕುದೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತನಿಖೆಯ ನಂತರ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಳಜಾತಿಯ ಹುಡುಗನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ, ಅದನ್ನು ಸಹಿಸಿಕೊಳ್ಳದ ಕುಟುಂಬದವರು ಮಾಡಿರುವ ಈ ದುಷ್ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ.

ಈ ಕುರಿತು ನಾನುಗೌರಿ.ಕಾಂಗೆ ವಿಶ್ವಾಸಾರ್ಹ ಮೂಲಗಳಿಂದ ದೊರಕಿದ ಮಾಹಿತಿಯ ಪ್ರಕಾರ, “ಹೇಮಲತ ಎನ್ನುವ 21 ವರ್ಷದ ಯುವತಿಯನ್ನು ಆಕೆಯ ತಂದೆ ಮತ್ತು ತಮ್ಮ ಸೇರಿ ಕೊಲೆ ಮಾಡಿದ ನಂತರ ಇದನ್ನು ಸಿನಿಮಾ ಶೈಲಿಯಲ್ಲಿ ಮುಚ್ಚಿಹಾಕಲು ಅಥವಾ ಪ್ರಕರಣದ ದಿಕ್ಕುತಪ್ಪಿಸಲು ಪ್ರಯತ್ನಿಸಿದ್ದಾರೆ” ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಯುವತಿ ಅನುಮಾನಾಸ್ಪದ ಸಾವು!: ಮರ್ಯಾದಾಹೀನ ಹತ್ಯೆಯೋ-ನಿರ್ಲಕ್ಷ್ಯತೆಯಿಂದಾದ ಹತ್ಯೆಯೋ?

ಅಕ್ಟೋಬರ್ 8, ಗುರುವಾರದಂದು ತಮ್ಮ ಮಗಳು ಕಾಣೆಯಾಗಿದ್ದಾಳೆ ಎಂದು ಎಲ್ಲಾ ಕಡೆ ಹುಡುಕಾಡಿದ ನಂತರ, ಯುವತಿಯ ತಂದೆ ಕೃಷ್ಣಪ್ಪ ಎಂಬುವವರು, ಪೊಲೀಸ್ ಠಾಣೆಗೆ ಅಕ್ಟೋಬರ್ 9 ರಂದು ದೂರು ನೀಡಿದ್ದರು. ಅದರಲ್ಲಿ, ಪುನಿತ್ ಎಂಬ ಹುಡುಗನನ್ನು ನಮ್ಮ ಮಗಳು ಪ್ರೀತಿಸುತ್ತಿದ್ದಳು ಎಂದು ಹೇಳಿದ್ದಾರೆ. ಆ ದಿನ ನಮ್ಮ ಊರಿನಲ್ಲಿ ಒಂದು ಸಾವಾಗಿತ್ತು, ಮನೆಯವರೆಲ್ಲಾ ಅಲ್ಲಿಗೆ ಹೋಗಿದ್ದೆವು. ಈ ಸಮಯದಲ್ಲಿ ಆತನೆ ನಮ್ಮ ಮಗಳನ್ನು ಕರೆದುಕೊಂಡು ಹೋಗಿದ್ದಾನೆ ಎಂದೂ ದೂರು ನೀಡಿರುತ್ತಾರೆ.

ನಂತರ ಮಾರನೆಯ ದಿನ (ಅಕ್ಟೋಬರ್ 10), ಕುಟುಂಬದವರೇ ಪೊಲೀಸ್‌ಗೆ ಕರೆ ಮಾಡಿ, ನಮ್ಮ ಹೊಲದಲ್ಲಿ, ಯಾರನ್ನೋ ಎಳೆದಾಡಿರುವ ಗುರುತು ಇದೆ. ಅದನ್ನು ಹಿಂಬಾಲಿಸಿದಾಗ ನಮ್ಮ ಮಗಳ ಒಂದು ಚಪ್ಪಲಿ ಸಿಕ್ಕಿದ್ದು, ಇನ್ನೂ ಮುಂದೆ ಹೋದಾಗ ಆಕೆಯ ಒಳ ಉಡುಪು ಸಿಕ್ಕಿದೆ. ಪಕ್ಕದಲ್ಲಿಯೇ ಹೂತಿರುವ ಶವದ ಬೆರಳು ಮಾತ್ರ ಕಾಣಿಸುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜಾತಿಕಾರಣ: ಗ್ರಾಮಪಂಚಾಯಿತಿ ಅಧ್ಯಕ್ಷೆಯನ್ನು ನೆಲದ ಮೇಲೆ ಕೂರಿಸಿದ ಸದಸ್ಯರು!

ಈ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು, ಶವವನ್ನು ಹೊರತೆಗೆದಿದ್ದಾರೆ. ನಂತರ “ನಮ್ಮ ಮಗಳನ್ನು ಅತ್ಯಾಚಾರ ಮಾಡಿ ಕೊಲ್ಲಲಾಗಿದೆ” ಎಂದು ಕುಟುಂಬದವರೇ ಆರೋಪಿಸಿದ್ದರು. ಇದಕ್ಕೆ ಪೂರಕವೆಂಬಂತೆ ತಮ್ಮ ಮಗಳದ್ದೇ ಒಳ ಉಡುಪನ್ನು ಸಾಕ್ಷಿಯಾಗಿ ತೋರಿಸಿದ್ದಾರೆ. ಆದರೆ ಶವ ಹೊರತೆಗೆದಾಗ ಅಲ್ಲಿಯೂ ಅದೇ ಬ್ರಾಂಡ್‌ನ ಒಳಉಡುಪನ್ನು ಯುವತಿ ಧರಿಸಿದ್ದಳು!? ಹೀಗಿರುವಾಗ ಹೊರಗಡೆ ಮತ್ತೊಂದು ಒಳ ಉಡುಪು ಸಿಗಲು ಹೇಗೆ ಸಾಧ್ಯ ಎಂದು ಪೊಲೀಸರು ಅನುಮಾನಕ್ಕೆ ಒಳಗಾಗಿದ್ದಾರೆ. ಮೇಲು ನೋಟಕ್ಕೆ ಅತ್ಯಾಚಾರದ ಯಾವುದೇ ಗುರುತುಗಳು ಕಂಡುಬಂದಿಲ್ಲವಾದ್ದರಿಂದ, ಪೊಲೀಸರು ಈ ಪ್ರಕರಣವನ್ನು ಗೌಪ್ಯವಾಗಿ ತನಿಖೆ ಮಾಡಲು ಪ್ರಾರಂಭಿಸಿದ್ದಾರೆ.

ಯುವತಿ ಪ್ರೀತಿಸುತ್ತಿದ್ದ ಹುಡುಗನನ್ನು ವಿಚಾರಿಸಿದಾಗ, ತಾವು 3 ವರ್ಷಗಳಿಂದ ಪ್ರೀತಿಸುತ್ತಿದ್ದೆವೆಂದು ಒಪ್ಪಿಕೊಂಡಿದ್ದಾನೆ. ಆದರೆ ಈ ಘಟನೆಯ ಬಗ್ಗೆ ನನಗೆ ಗೊತ್ತಿಲ್ಲ. ಇದಕ್ಕೂ ನನಗೂ ಸಂಬಂಧವಿಲ್ಲ. ತಾನು ಮೈಸೂರಿನಲ್ಲಿ ಕೆಲಸ ಮಾಡುತ್ತಿರುವುದಾಗಿಯೂ, ಈ ವಿಷಯ ತಿಳಿದು ಆಘಾತಗೊಂಡು ತಾನೂ ಕೂಡಾ ಎಲ್ಲಾ ಕಡೆ ಹುಡುಕುತ್ತಿರುವುದಾಗಿಯೂ ಪೊಲೀಸರಿಗೆ ತಿಳಿಸಿದ್ದಾನೆ.

ಇದಾದ ನಂತರ ಕುಟುಂಬದವರನ್ನು ತೀವ್ರವಾಗಿ ವಿಚಾರಿಸಿದಾಗ ನಿಜ ಬಾಯಿ ಬಿಟ್ಟಿದ್ದಾರೆ ಎಂದು ಪೊಲಿಸರು ತಿಳಿಸಿದರು.

“ಈ ಹಿಂದೆಯೇ ಎರಡು-ಮೂರು ಬಾರಿ ಇವರ ಪ್ರೀತಿಯ ವಿಷಯಕ್ಕೆ ಸಂಬಂಧಿಸಿದಂತೆ ಪೋಷಕರು ಬೆದರಿಕೆ ಹಾಕಿದ್ದರೂ ಯುವತಿ ಅದನ್ನು ಕಡೆಗಣಿಸಿದ್ದಳು. ಅ. 8 ರ ಹಿಂದಿನ ರಾತ್ರಿ ಬೆಳಿಗ್ಗೆ 4 ಗಂಟೆಯ ತನಕ ಹೇಮಲತ ಆನ್‌ಲೈನ್‌ನಲ್ಲಿ ಆ ಹುಡುಗನೊಂದಿಗೆ ಚಾಟ್ ಮಾಡುತ್ತಿದ್ದಳು. ಇದನ್ನು ಸಹಿಸದ ಯುವತಿಯ ತಂದೆ ಮತ್ತು ಆಕೆಯ ದೊಡ್ಡಪ್ಪನ ಮಗ ಚೇತನ್, ಮಾರನೆಯ ದಿನ (ಅ. 8) ಆಕೆಯನ್ನು ತಮ್ಮ ಜಮೀನಿನ ಬಳಿ ಕರೆಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ, ಚೇತನ್ ದೊಣ್ಣೆಯಿಂದ ಆಕೆಯ ಮೇಲೆ ಹಲ್ಲೆ ಮಾಡಿದ್ದು, ತೀವ್ರ ರಕ್ತಸ್ರಾವ ಉಂಟಾಗಿ ಯುವತಿ ಸ್ಥಳದಲ್ಲೇ ಮತಪಟ್ಟಿದ್ದಾಳೆ. ಇದರಿಂದ ಭಯಭಿತರಾದ ಆರೋಪಿಗಳು, ಶವವನ್ನು ಅಲ್ಲಿಯೇ ಬಿಟ್ಟುಹೋಗಿದ್ದಾರೆ. ಈ ವಿಷಯವನ್ನು ತಮ್ಮ ಮತ್ತೊಬ್ಬ ಸಂಬಂಧಿಗೆ ತಿಳಿಸಿದಾಗ, ಈ ಮೊದಲೇ ಹೇಳಿರುವ ಕಟ್ಟುಕಥೆಯನ್ನು ಆಧರಿಸಿ, ಶವವನ್ನು ಇವರೇ ಹೂತುಹಾಕಿ, ನಂತರ ಮಾರನೆದಿನ (ಅ.9) ದೂರು ನೀಡಿ, ಒಂದು ದಿನ ಕಳೆದ ನಂತರ (ಅ.10) ಇವರೇ ಪೊಲೀಸರಿಗೆ ಕರೆ ಮಾಡಿ, ಪೂರ್ವಯೋಜಿತ ಕಥೆಯನ್ನು ಹೇಳಿದ್ದಾರೆ” ಎಂಬುದು ತನಿಖೆಯ ವೇಳೆ ತಿಳಿದುಬಂದಿದೆ.

ಇದನ್ನೂ ಓದಿ: ತನ್ನ ಜಾತಿಯವರನ್ನು ರಕ್ಷಿಸಲು ಆದಿತ್ಯನಾಥ್ ನನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ: ಚಂದ್ರಶೇಖರ್ ಆಜಾದ್

ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಸಂತ್ರಸ್ತೆಯ ತಂದೆ ಕಷ್ಣಪ್ಪ ಮತ್ತು ಆತನ ಸೋದರನ ಮಗ ಚೇತನ್‌ ಹಾಗೂ ಅವನ ಅಪ್ರಾಪ್ತ ಸ್ನೇಹಿತನನ್ನು ಬಂಧಿಸಲಾಗಿದ್ದು, ಎಫ್ಐಆರ್ ದಾಖಲಾಗಿದೆ. ಹಾಗಾಗಿ ನಿರ್ದಿಷ್ಟವಾಗಿ ಇದು ಮರ್ಯಾದಾಹೀನ ಹತ್ಯೆ ಎಂದು ತಿಳಿದುಬಂದಿದೆ.

ಇಂತಹ ಯಾವುದೋ ಒಂದೋ ಎರಡೋ ಮರ್ಯಾದಾಹೀನ ಹತ್ಯೆ ಪ್ರಕರಣಗಳು ಬೆಳಕಿಗೆ ಬರುತ್ತವೆ. ಆದರೆ ಸಾವಿರಾರು ಪ್ರಕರಣಗಳು ಈ ಯುವತಿಯ ಶವದಂತೆಯೇ ಮಣ್ಣಿನಲ್ಲಿ ಮುಚ್ಚಿಹೋಗುತ್ತವೆ. ಇವುಗಳನ್ನೂ ಸಮರ್ಥಿಸಿಕೊಳ್ಳುವ ಕೊಳಕು ಮನಸ್ಥಿತಿಗಳು ನಮ್ಮ ನಡುವೆಯೇ ಇವೆ. ಇಂತಹವುಗಳನ್ನು ನೋಡಿದರೆ ನಮ್ಮ ಸಮಾಜ ತನ್ನ ಆಂತರ್ಯದಲ್ಲಿ ಇನ್ನೂ ಎಂತಹ ಕ್ರೂರತೆಯನ್ನು ಉಳಿಸಿಕೊಂಡಿದೆ ಎಂಬುದು ತಿಳಿಯುತ್ತದೆ.

ಇತ್ತೀಚೆಗೆ ವಿವಾದಕ್ಕೆ ಕಾರಣವಾಗಿದ್ದ ತನಿಷ್ಕ್ ಜಾಹೀರಾತಿನಲ್ಲಿ ಹಿಂದೂ ಯುವತಿ ಮುಸ್ಲಿಂ ಕುಟುಂಬಕ್ಕೆ ವಿವಾಹವಾಗಿದ್ದಾಳೆ ಎಂಬುದನ್ನೇ ಅರಗಿಸಿಕೊಳ್ಳದ ನೀಚ ಮನಸ್ಥತಿಗಳೇ ಇಂತಹ ಹೀನ ಕೃತ್ಯಗಳಿಗೆ ಕಾರಣವಾಗುತ್ತವೆ. ಮೀಸೆ ಬಿಟ್ಟಿದ್ದಕ್ಕೆ, ಕುದುರೆ ಏರಿದ್ದಕ್ಕೆ, ನೀರು ಮುಟ್ಟಿದ್ದಕ್ಕೆ ಕೊಲ್ಲುವ ಮನಸ್ಥಿತಿಗಳು ನಮ್ಮ ನಡುವೆ ಕೊರೊನಾ ವೈರಸ್‌ಗಿಂತಲೂ ಅಪಾಯಕಾರಿಯಾಗಿ ಬೆಳೆಯುತ್ತಿವೆ.

ಇಷ್ಟಿದ್ದರೂ ನಮ್ಮ ಸಮಾಜದಲ್ಲಿ ಜಾತಿ ಪದ್ದತಿಯೇ ಇಲ್ಲ ಎಂದೂ, ಜಾತ್ಯಾತೀತತೆಯ ಬಗ್ಗೆ ಮಾತನಾಡುವವರೆಲ್ಲಾ ‘ಸೂಡೋ ಸೆಕ್ಯಲರಿಸ್ಟ್’ ಎಂಬ ಅಪಮಾನಕ್ಕೆ ಗುರಿಯಾಗುತ್ತಿದ್ದಾರೆ. ಇಂತಹ ಸಾವಿರಾರು ಪ್ರಕರಣಗಳು ದಿನನಿತ್ಯ ದಾಖಲಾಗುತ್ತಿದ್ದರೂ, ಸರ್ಕಾರವಾಗಲೀ ನಾಗರೀಕರಾಗಲೀ ಇವುಗಳ ಬಗ್ಗೆ ಎಚ್ಚೆತ್ತುಕೊಳ್ಳುತ್ತಿಲ್ಲ.


ಇದನ್ನೂ ಓದಿ: ತಮಿಳುನಾಡು ಶಾಸಕನ ಅಂತರ್ಜಾತಿ ವಿವಾಹದ ವಿಡಿಯೋ ವೈರಲ್: ಯುವತಿಯ ತಂದೆ ಆತ್ಮಹತ್ಯೆಗೆ ಯತ್ನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...