Homeಕರ್ನಾಟಕಮರ್ಯಾದಾಹೀನ ಹತ್ಯೆ: ಸಿನಿಮಾ ಶೈಲಿಯಲ್ಲಿ ಕಥೆ ಕಟ್ಟಿದ ಯುವತಿಯ ಕುಟುಂಬ!

ಮರ್ಯಾದಾಹೀನ ಹತ್ಯೆ: ಸಿನಿಮಾ ಶೈಲಿಯಲ್ಲಿ ಕಥೆ ಕಟ್ಟಿದ ಯುವತಿಯ ಕುಟುಂಬ!

ಯುವತಿಯನ್ನು ಕುಟುಂಬಸ್ಥರೇ ಕೊಂದು, ಕಾಣೆಯಾಗಿದ್ದಾಳೆ ಎಂದು ರಾಮನಗರದ ಕುದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು!

- Advertisement -
- Advertisement -

ದಲಿತ ಹುಡುಗನನ್ನು ಪ್ರೀತಿಸುತ್ತಿದ್ದಳು ಎಂಬ ಕಾರಣಕ್ಕೆ ಯುವತಿಯೊಬ್ಬಳನ್ನು ಆಕೆಯ ತಂದೆ ಮತ್ತು ತಮ್ಮ ಸೇರಿ ಹತ್ಯೆ ಮಾಡಿರುವ ಹೀನ ಘಟನೆ ರಾಮನಗರದ ಕುದೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತನಿಖೆಯ ನಂತರ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಳಜಾತಿಯ ಹುಡುಗನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ, ಅದನ್ನು ಸಹಿಸಿಕೊಳ್ಳದ ಕುಟುಂಬದವರು ಮಾಡಿರುವ ಈ ದುಷ್ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ.

ಈ ಕುರಿತು ನಾನುಗೌರಿ.ಕಾಂಗೆ ವಿಶ್ವಾಸಾರ್ಹ ಮೂಲಗಳಿಂದ ದೊರಕಿದ ಮಾಹಿತಿಯ ಪ್ರಕಾರ, “ಹೇಮಲತ ಎನ್ನುವ 21 ವರ್ಷದ ಯುವತಿಯನ್ನು ಆಕೆಯ ತಂದೆ ಮತ್ತು ತಮ್ಮ ಸೇರಿ ಕೊಲೆ ಮಾಡಿದ ನಂತರ ಇದನ್ನು ಸಿನಿಮಾ ಶೈಲಿಯಲ್ಲಿ ಮುಚ್ಚಿಹಾಕಲು ಅಥವಾ ಪ್ರಕರಣದ ದಿಕ್ಕುತಪ್ಪಿಸಲು ಪ್ರಯತ್ನಿಸಿದ್ದಾರೆ” ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಯುವತಿ ಅನುಮಾನಾಸ್ಪದ ಸಾವು!: ಮರ್ಯಾದಾಹೀನ ಹತ್ಯೆಯೋ-ನಿರ್ಲಕ್ಷ್ಯತೆಯಿಂದಾದ ಹತ್ಯೆಯೋ?

ಅಕ್ಟೋಬರ್ 8, ಗುರುವಾರದಂದು ತಮ್ಮ ಮಗಳು ಕಾಣೆಯಾಗಿದ್ದಾಳೆ ಎಂದು ಎಲ್ಲಾ ಕಡೆ ಹುಡುಕಾಡಿದ ನಂತರ, ಯುವತಿಯ ತಂದೆ ಕೃಷ್ಣಪ್ಪ ಎಂಬುವವರು, ಪೊಲೀಸ್ ಠಾಣೆಗೆ ಅಕ್ಟೋಬರ್ 9 ರಂದು ದೂರು ನೀಡಿದ್ದರು. ಅದರಲ್ಲಿ, ಪುನಿತ್ ಎಂಬ ಹುಡುಗನನ್ನು ನಮ್ಮ ಮಗಳು ಪ್ರೀತಿಸುತ್ತಿದ್ದಳು ಎಂದು ಹೇಳಿದ್ದಾರೆ. ಆ ದಿನ ನಮ್ಮ ಊರಿನಲ್ಲಿ ಒಂದು ಸಾವಾಗಿತ್ತು, ಮನೆಯವರೆಲ್ಲಾ ಅಲ್ಲಿಗೆ ಹೋಗಿದ್ದೆವು. ಈ ಸಮಯದಲ್ಲಿ ಆತನೆ ನಮ್ಮ ಮಗಳನ್ನು ಕರೆದುಕೊಂಡು ಹೋಗಿದ್ದಾನೆ ಎಂದೂ ದೂರು ನೀಡಿರುತ್ತಾರೆ.

ನಂತರ ಮಾರನೆಯ ದಿನ (ಅಕ್ಟೋಬರ್ 10), ಕುಟುಂಬದವರೇ ಪೊಲೀಸ್‌ಗೆ ಕರೆ ಮಾಡಿ, ನಮ್ಮ ಹೊಲದಲ್ಲಿ, ಯಾರನ್ನೋ ಎಳೆದಾಡಿರುವ ಗುರುತು ಇದೆ. ಅದನ್ನು ಹಿಂಬಾಲಿಸಿದಾಗ ನಮ್ಮ ಮಗಳ ಒಂದು ಚಪ್ಪಲಿ ಸಿಕ್ಕಿದ್ದು, ಇನ್ನೂ ಮುಂದೆ ಹೋದಾಗ ಆಕೆಯ ಒಳ ಉಡುಪು ಸಿಕ್ಕಿದೆ. ಪಕ್ಕದಲ್ಲಿಯೇ ಹೂತಿರುವ ಶವದ ಬೆರಳು ಮಾತ್ರ ಕಾಣಿಸುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜಾತಿಕಾರಣ: ಗ್ರಾಮಪಂಚಾಯಿತಿ ಅಧ್ಯಕ್ಷೆಯನ್ನು ನೆಲದ ಮೇಲೆ ಕೂರಿಸಿದ ಸದಸ್ಯರು!

ಈ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು, ಶವವನ್ನು ಹೊರತೆಗೆದಿದ್ದಾರೆ. ನಂತರ “ನಮ್ಮ ಮಗಳನ್ನು ಅತ್ಯಾಚಾರ ಮಾಡಿ ಕೊಲ್ಲಲಾಗಿದೆ” ಎಂದು ಕುಟುಂಬದವರೇ ಆರೋಪಿಸಿದ್ದರು. ಇದಕ್ಕೆ ಪೂರಕವೆಂಬಂತೆ ತಮ್ಮ ಮಗಳದ್ದೇ ಒಳ ಉಡುಪನ್ನು ಸಾಕ್ಷಿಯಾಗಿ ತೋರಿಸಿದ್ದಾರೆ. ಆದರೆ ಶವ ಹೊರತೆಗೆದಾಗ ಅಲ್ಲಿಯೂ ಅದೇ ಬ್ರಾಂಡ್‌ನ ಒಳಉಡುಪನ್ನು ಯುವತಿ ಧರಿಸಿದ್ದಳು!? ಹೀಗಿರುವಾಗ ಹೊರಗಡೆ ಮತ್ತೊಂದು ಒಳ ಉಡುಪು ಸಿಗಲು ಹೇಗೆ ಸಾಧ್ಯ ಎಂದು ಪೊಲೀಸರು ಅನುಮಾನಕ್ಕೆ ಒಳಗಾಗಿದ್ದಾರೆ. ಮೇಲು ನೋಟಕ್ಕೆ ಅತ್ಯಾಚಾರದ ಯಾವುದೇ ಗುರುತುಗಳು ಕಂಡುಬಂದಿಲ್ಲವಾದ್ದರಿಂದ, ಪೊಲೀಸರು ಈ ಪ್ರಕರಣವನ್ನು ಗೌಪ್ಯವಾಗಿ ತನಿಖೆ ಮಾಡಲು ಪ್ರಾರಂಭಿಸಿದ್ದಾರೆ.

ಯುವತಿ ಪ್ರೀತಿಸುತ್ತಿದ್ದ ಹುಡುಗನನ್ನು ವಿಚಾರಿಸಿದಾಗ, ತಾವು 3 ವರ್ಷಗಳಿಂದ ಪ್ರೀತಿಸುತ್ತಿದ್ದೆವೆಂದು ಒಪ್ಪಿಕೊಂಡಿದ್ದಾನೆ. ಆದರೆ ಈ ಘಟನೆಯ ಬಗ್ಗೆ ನನಗೆ ಗೊತ್ತಿಲ್ಲ. ಇದಕ್ಕೂ ನನಗೂ ಸಂಬಂಧವಿಲ್ಲ. ತಾನು ಮೈಸೂರಿನಲ್ಲಿ ಕೆಲಸ ಮಾಡುತ್ತಿರುವುದಾಗಿಯೂ, ಈ ವಿಷಯ ತಿಳಿದು ಆಘಾತಗೊಂಡು ತಾನೂ ಕೂಡಾ ಎಲ್ಲಾ ಕಡೆ ಹುಡುಕುತ್ತಿರುವುದಾಗಿಯೂ ಪೊಲೀಸರಿಗೆ ತಿಳಿಸಿದ್ದಾನೆ.

ಇದಾದ ನಂತರ ಕುಟುಂಬದವರನ್ನು ತೀವ್ರವಾಗಿ ವಿಚಾರಿಸಿದಾಗ ನಿಜ ಬಾಯಿ ಬಿಟ್ಟಿದ್ದಾರೆ ಎಂದು ಪೊಲಿಸರು ತಿಳಿಸಿದರು.

“ಈ ಹಿಂದೆಯೇ ಎರಡು-ಮೂರು ಬಾರಿ ಇವರ ಪ್ರೀತಿಯ ವಿಷಯಕ್ಕೆ ಸಂಬಂಧಿಸಿದಂತೆ ಪೋಷಕರು ಬೆದರಿಕೆ ಹಾಕಿದ್ದರೂ ಯುವತಿ ಅದನ್ನು ಕಡೆಗಣಿಸಿದ್ದಳು. ಅ. 8 ರ ಹಿಂದಿನ ರಾತ್ರಿ ಬೆಳಿಗ್ಗೆ 4 ಗಂಟೆಯ ತನಕ ಹೇಮಲತ ಆನ್‌ಲೈನ್‌ನಲ್ಲಿ ಆ ಹುಡುಗನೊಂದಿಗೆ ಚಾಟ್ ಮಾಡುತ್ತಿದ್ದಳು. ಇದನ್ನು ಸಹಿಸದ ಯುವತಿಯ ತಂದೆ ಮತ್ತು ಆಕೆಯ ದೊಡ್ಡಪ್ಪನ ಮಗ ಚೇತನ್, ಮಾರನೆಯ ದಿನ (ಅ. 8) ಆಕೆಯನ್ನು ತಮ್ಮ ಜಮೀನಿನ ಬಳಿ ಕರೆಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ, ಚೇತನ್ ದೊಣ್ಣೆಯಿಂದ ಆಕೆಯ ಮೇಲೆ ಹಲ್ಲೆ ಮಾಡಿದ್ದು, ತೀವ್ರ ರಕ್ತಸ್ರಾವ ಉಂಟಾಗಿ ಯುವತಿ ಸ್ಥಳದಲ್ಲೇ ಮತಪಟ್ಟಿದ್ದಾಳೆ. ಇದರಿಂದ ಭಯಭಿತರಾದ ಆರೋಪಿಗಳು, ಶವವನ್ನು ಅಲ್ಲಿಯೇ ಬಿಟ್ಟುಹೋಗಿದ್ದಾರೆ. ಈ ವಿಷಯವನ್ನು ತಮ್ಮ ಮತ್ತೊಬ್ಬ ಸಂಬಂಧಿಗೆ ತಿಳಿಸಿದಾಗ, ಈ ಮೊದಲೇ ಹೇಳಿರುವ ಕಟ್ಟುಕಥೆಯನ್ನು ಆಧರಿಸಿ, ಶವವನ್ನು ಇವರೇ ಹೂತುಹಾಕಿ, ನಂತರ ಮಾರನೆದಿನ (ಅ.9) ದೂರು ನೀಡಿ, ಒಂದು ದಿನ ಕಳೆದ ನಂತರ (ಅ.10) ಇವರೇ ಪೊಲೀಸರಿಗೆ ಕರೆ ಮಾಡಿ, ಪೂರ್ವಯೋಜಿತ ಕಥೆಯನ್ನು ಹೇಳಿದ್ದಾರೆ” ಎಂಬುದು ತನಿಖೆಯ ವೇಳೆ ತಿಳಿದುಬಂದಿದೆ.

ಇದನ್ನೂ ಓದಿ: ತನ್ನ ಜಾತಿಯವರನ್ನು ರಕ್ಷಿಸಲು ಆದಿತ್ಯನಾಥ್ ನನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ: ಚಂದ್ರಶೇಖರ್ ಆಜಾದ್

ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಸಂತ್ರಸ್ತೆಯ ತಂದೆ ಕಷ್ಣಪ್ಪ ಮತ್ತು ಆತನ ಸೋದರನ ಮಗ ಚೇತನ್‌ ಹಾಗೂ ಅವನ ಅಪ್ರಾಪ್ತ ಸ್ನೇಹಿತನನ್ನು ಬಂಧಿಸಲಾಗಿದ್ದು, ಎಫ್ಐಆರ್ ದಾಖಲಾಗಿದೆ. ಹಾಗಾಗಿ ನಿರ್ದಿಷ್ಟವಾಗಿ ಇದು ಮರ್ಯಾದಾಹೀನ ಹತ್ಯೆ ಎಂದು ತಿಳಿದುಬಂದಿದೆ.

ಇಂತಹ ಯಾವುದೋ ಒಂದೋ ಎರಡೋ ಮರ್ಯಾದಾಹೀನ ಹತ್ಯೆ ಪ್ರಕರಣಗಳು ಬೆಳಕಿಗೆ ಬರುತ್ತವೆ. ಆದರೆ ಸಾವಿರಾರು ಪ್ರಕರಣಗಳು ಈ ಯುವತಿಯ ಶವದಂತೆಯೇ ಮಣ್ಣಿನಲ್ಲಿ ಮುಚ್ಚಿಹೋಗುತ್ತವೆ. ಇವುಗಳನ್ನೂ ಸಮರ್ಥಿಸಿಕೊಳ್ಳುವ ಕೊಳಕು ಮನಸ್ಥಿತಿಗಳು ನಮ್ಮ ನಡುವೆಯೇ ಇವೆ. ಇಂತಹವುಗಳನ್ನು ನೋಡಿದರೆ ನಮ್ಮ ಸಮಾಜ ತನ್ನ ಆಂತರ್ಯದಲ್ಲಿ ಇನ್ನೂ ಎಂತಹ ಕ್ರೂರತೆಯನ್ನು ಉಳಿಸಿಕೊಂಡಿದೆ ಎಂಬುದು ತಿಳಿಯುತ್ತದೆ.

ಇತ್ತೀಚೆಗೆ ವಿವಾದಕ್ಕೆ ಕಾರಣವಾಗಿದ್ದ ತನಿಷ್ಕ್ ಜಾಹೀರಾತಿನಲ್ಲಿ ಹಿಂದೂ ಯುವತಿ ಮುಸ್ಲಿಂ ಕುಟುಂಬಕ್ಕೆ ವಿವಾಹವಾಗಿದ್ದಾಳೆ ಎಂಬುದನ್ನೇ ಅರಗಿಸಿಕೊಳ್ಳದ ನೀಚ ಮನಸ್ಥತಿಗಳೇ ಇಂತಹ ಹೀನ ಕೃತ್ಯಗಳಿಗೆ ಕಾರಣವಾಗುತ್ತವೆ. ಮೀಸೆ ಬಿಟ್ಟಿದ್ದಕ್ಕೆ, ಕುದುರೆ ಏರಿದ್ದಕ್ಕೆ, ನೀರು ಮುಟ್ಟಿದ್ದಕ್ಕೆ ಕೊಲ್ಲುವ ಮನಸ್ಥಿತಿಗಳು ನಮ್ಮ ನಡುವೆ ಕೊರೊನಾ ವೈರಸ್‌ಗಿಂತಲೂ ಅಪಾಯಕಾರಿಯಾಗಿ ಬೆಳೆಯುತ್ತಿವೆ.

ಇಷ್ಟಿದ್ದರೂ ನಮ್ಮ ಸಮಾಜದಲ್ಲಿ ಜಾತಿ ಪದ್ದತಿಯೇ ಇಲ್ಲ ಎಂದೂ, ಜಾತ್ಯಾತೀತತೆಯ ಬಗ್ಗೆ ಮಾತನಾಡುವವರೆಲ್ಲಾ ‘ಸೂಡೋ ಸೆಕ್ಯಲರಿಸ್ಟ್’ ಎಂಬ ಅಪಮಾನಕ್ಕೆ ಗುರಿಯಾಗುತ್ತಿದ್ದಾರೆ. ಇಂತಹ ಸಾವಿರಾರು ಪ್ರಕರಣಗಳು ದಿನನಿತ್ಯ ದಾಖಲಾಗುತ್ತಿದ್ದರೂ, ಸರ್ಕಾರವಾಗಲೀ ನಾಗರೀಕರಾಗಲೀ ಇವುಗಳ ಬಗ್ಗೆ ಎಚ್ಚೆತ್ತುಕೊಳ್ಳುತ್ತಿಲ್ಲ.


ಇದನ್ನೂ ಓದಿ: ತಮಿಳುನಾಡು ಶಾಸಕನ ಅಂತರ್ಜಾತಿ ವಿವಾಹದ ವಿಡಿಯೋ ವೈರಲ್: ಯುವತಿಯ ತಂದೆ ಆತ್ಮಹತ್ಯೆಗೆ ಯತ್ನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...