Homeಕರ್ನಾಟಕಮರ್ಯಾದಾಹೀನ ಹತ್ಯೆ: ಸಿನಿಮಾ ಶೈಲಿಯಲ್ಲಿ ಕಥೆ ಕಟ್ಟಿದ ಯುವತಿಯ ಕುಟುಂಬ!

ಮರ್ಯಾದಾಹೀನ ಹತ್ಯೆ: ಸಿನಿಮಾ ಶೈಲಿಯಲ್ಲಿ ಕಥೆ ಕಟ್ಟಿದ ಯುವತಿಯ ಕುಟುಂಬ!

ಯುವತಿಯನ್ನು ಕುಟುಂಬಸ್ಥರೇ ಕೊಂದು, ಕಾಣೆಯಾಗಿದ್ದಾಳೆ ಎಂದು ರಾಮನಗರದ ಕುದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು!

- Advertisement -
- Advertisement -

ದಲಿತ ಹುಡುಗನನ್ನು ಪ್ರೀತಿಸುತ್ತಿದ್ದಳು ಎಂಬ ಕಾರಣಕ್ಕೆ ಯುವತಿಯೊಬ್ಬಳನ್ನು ಆಕೆಯ ತಂದೆ ಮತ್ತು ತಮ್ಮ ಸೇರಿ ಹತ್ಯೆ ಮಾಡಿರುವ ಹೀನ ಘಟನೆ ರಾಮನಗರದ ಕುದೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತನಿಖೆಯ ನಂತರ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಳಜಾತಿಯ ಹುಡುಗನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ, ಅದನ್ನು ಸಹಿಸಿಕೊಳ್ಳದ ಕುಟುಂಬದವರು ಮಾಡಿರುವ ಈ ದುಷ್ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ.

ಈ ಕುರಿತು ನಾನುಗೌರಿ.ಕಾಂಗೆ ವಿಶ್ವಾಸಾರ್ಹ ಮೂಲಗಳಿಂದ ದೊರಕಿದ ಮಾಹಿತಿಯ ಪ್ರಕಾರ, “ಹೇಮಲತ ಎನ್ನುವ 21 ವರ್ಷದ ಯುವತಿಯನ್ನು ಆಕೆಯ ತಂದೆ ಮತ್ತು ತಮ್ಮ ಸೇರಿ ಕೊಲೆ ಮಾಡಿದ ನಂತರ ಇದನ್ನು ಸಿನಿಮಾ ಶೈಲಿಯಲ್ಲಿ ಮುಚ್ಚಿಹಾಕಲು ಅಥವಾ ಪ್ರಕರಣದ ದಿಕ್ಕುತಪ್ಪಿಸಲು ಪ್ರಯತ್ನಿಸಿದ್ದಾರೆ” ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಯುವತಿ ಅನುಮಾನಾಸ್ಪದ ಸಾವು!: ಮರ್ಯಾದಾಹೀನ ಹತ್ಯೆಯೋ-ನಿರ್ಲಕ್ಷ್ಯತೆಯಿಂದಾದ ಹತ್ಯೆಯೋ?

ಅಕ್ಟೋಬರ್ 8, ಗುರುವಾರದಂದು ತಮ್ಮ ಮಗಳು ಕಾಣೆಯಾಗಿದ್ದಾಳೆ ಎಂದು ಎಲ್ಲಾ ಕಡೆ ಹುಡುಕಾಡಿದ ನಂತರ, ಯುವತಿಯ ತಂದೆ ಕೃಷ್ಣಪ್ಪ ಎಂಬುವವರು, ಪೊಲೀಸ್ ಠಾಣೆಗೆ ಅಕ್ಟೋಬರ್ 9 ರಂದು ದೂರು ನೀಡಿದ್ದರು. ಅದರಲ್ಲಿ, ಪುನಿತ್ ಎಂಬ ಹುಡುಗನನ್ನು ನಮ್ಮ ಮಗಳು ಪ್ರೀತಿಸುತ್ತಿದ್ದಳು ಎಂದು ಹೇಳಿದ್ದಾರೆ. ಆ ದಿನ ನಮ್ಮ ಊರಿನಲ್ಲಿ ಒಂದು ಸಾವಾಗಿತ್ತು, ಮನೆಯವರೆಲ್ಲಾ ಅಲ್ಲಿಗೆ ಹೋಗಿದ್ದೆವು. ಈ ಸಮಯದಲ್ಲಿ ಆತನೆ ನಮ್ಮ ಮಗಳನ್ನು ಕರೆದುಕೊಂಡು ಹೋಗಿದ್ದಾನೆ ಎಂದೂ ದೂರು ನೀಡಿರುತ್ತಾರೆ.

ನಂತರ ಮಾರನೆಯ ದಿನ (ಅಕ್ಟೋಬರ್ 10), ಕುಟುಂಬದವರೇ ಪೊಲೀಸ್‌ಗೆ ಕರೆ ಮಾಡಿ, ನಮ್ಮ ಹೊಲದಲ್ಲಿ, ಯಾರನ್ನೋ ಎಳೆದಾಡಿರುವ ಗುರುತು ಇದೆ. ಅದನ್ನು ಹಿಂಬಾಲಿಸಿದಾಗ ನಮ್ಮ ಮಗಳ ಒಂದು ಚಪ್ಪಲಿ ಸಿಕ್ಕಿದ್ದು, ಇನ್ನೂ ಮುಂದೆ ಹೋದಾಗ ಆಕೆಯ ಒಳ ಉಡುಪು ಸಿಕ್ಕಿದೆ. ಪಕ್ಕದಲ್ಲಿಯೇ ಹೂತಿರುವ ಶವದ ಬೆರಳು ಮಾತ್ರ ಕಾಣಿಸುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜಾತಿಕಾರಣ: ಗ್ರಾಮಪಂಚಾಯಿತಿ ಅಧ್ಯಕ್ಷೆಯನ್ನು ನೆಲದ ಮೇಲೆ ಕೂರಿಸಿದ ಸದಸ್ಯರು!

ಈ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು, ಶವವನ್ನು ಹೊರತೆಗೆದಿದ್ದಾರೆ. ನಂತರ “ನಮ್ಮ ಮಗಳನ್ನು ಅತ್ಯಾಚಾರ ಮಾಡಿ ಕೊಲ್ಲಲಾಗಿದೆ” ಎಂದು ಕುಟುಂಬದವರೇ ಆರೋಪಿಸಿದ್ದರು. ಇದಕ್ಕೆ ಪೂರಕವೆಂಬಂತೆ ತಮ್ಮ ಮಗಳದ್ದೇ ಒಳ ಉಡುಪನ್ನು ಸಾಕ್ಷಿಯಾಗಿ ತೋರಿಸಿದ್ದಾರೆ. ಆದರೆ ಶವ ಹೊರತೆಗೆದಾಗ ಅಲ್ಲಿಯೂ ಅದೇ ಬ್ರಾಂಡ್‌ನ ಒಳಉಡುಪನ್ನು ಯುವತಿ ಧರಿಸಿದ್ದಳು!? ಹೀಗಿರುವಾಗ ಹೊರಗಡೆ ಮತ್ತೊಂದು ಒಳ ಉಡುಪು ಸಿಗಲು ಹೇಗೆ ಸಾಧ್ಯ ಎಂದು ಪೊಲೀಸರು ಅನುಮಾನಕ್ಕೆ ಒಳಗಾಗಿದ್ದಾರೆ. ಮೇಲು ನೋಟಕ್ಕೆ ಅತ್ಯಾಚಾರದ ಯಾವುದೇ ಗುರುತುಗಳು ಕಂಡುಬಂದಿಲ್ಲವಾದ್ದರಿಂದ, ಪೊಲೀಸರು ಈ ಪ್ರಕರಣವನ್ನು ಗೌಪ್ಯವಾಗಿ ತನಿಖೆ ಮಾಡಲು ಪ್ರಾರಂಭಿಸಿದ್ದಾರೆ.

ಯುವತಿ ಪ್ರೀತಿಸುತ್ತಿದ್ದ ಹುಡುಗನನ್ನು ವಿಚಾರಿಸಿದಾಗ, ತಾವು 3 ವರ್ಷಗಳಿಂದ ಪ್ರೀತಿಸುತ್ತಿದ್ದೆವೆಂದು ಒಪ್ಪಿಕೊಂಡಿದ್ದಾನೆ. ಆದರೆ ಈ ಘಟನೆಯ ಬಗ್ಗೆ ನನಗೆ ಗೊತ್ತಿಲ್ಲ. ಇದಕ್ಕೂ ನನಗೂ ಸಂಬಂಧವಿಲ್ಲ. ತಾನು ಮೈಸೂರಿನಲ್ಲಿ ಕೆಲಸ ಮಾಡುತ್ತಿರುವುದಾಗಿಯೂ, ಈ ವಿಷಯ ತಿಳಿದು ಆಘಾತಗೊಂಡು ತಾನೂ ಕೂಡಾ ಎಲ್ಲಾ ಕಡೆ ಹುಡುಕುತ್ತಿರುವುದಾಗಿಯೂ ಪೊಲೀಸರಿಗೆ ತಿಳಿಸಿದ್ದಾನೆ.

ಇದಾದ ನಂತರ ಕುಟುಂಬದವರನ್ನು ತೀವ್ರವಾಗಿ ವಿಚಾರಿಸಿದಾಗ ನಿಜ ಬಾಯಿ ಬಿಟ್ಟಿದ್ದಾರೆ ಎಂದು ಪೊಲಿಸರು ತಿಳಿಸಿದರು.

“ಈ ಹಿಂದೆಯೇ ಎರಡು-ಮೂರು ಬಾರಿ ಇವರ ಪ್ರೀತಿಯ ವಿಷಯಕ್ಕೆ ಸಂಬಂಧಿಸಿದಂತೆ ಪೋಷಕರು ಬೆದರಿಕೆ ಹಾಕಿದ್ದರೂ ಯುವತಿ ಅದನ್ನು ಕಡೆಗಣಿಸಿದ್ದಳು. ಅ. 8 ರ ಹಿಂದಿನ ರಾತ್ರಿ ಬೆಳಿಗ್ಗೆ 4 ಗಂಟೆಯ ತನಕ ಹೇಮಲತ ಆನ್‌ಲೈನ್‌ನಲ್ಲಿ ಆ ಹುಡುಗನೊಂದಿಗೆ ಚಾಟ್ ಮಾಡುತ್ತಿದ್ದಳು. ಇದನ್ನು ಸಹಿಸದ ಯುವತಿಯ ತಂದೆ ಮತ್ತು ಆಕೆಯ ದೊಡ್ಡಪ್ಪನ ಮಗ ಚೇತನ್, ಮಾರನೆಯ ದಿನ (ಅ. 8) ಆಕೆಯನ್ನು ತಮ್ಮ ಜಮೀನಿನ ಬಳಿ ಕರೆಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ, ಚೇತನ್ ದೊಣ್ಣೆಯಿಂದ ಆಕೆಯ ಮೇಲೆ ಹಲ್ಲೆ ಮಾಡಿದ್ದು, ತೀವ್ರ ರಕ್ತಸ್ರಾವ ಉಂಟಾಗಿ ಯುವತಿ ಸ್ಥಳದಲ್ಲೇ ಮತಪಟ್ಟಿದ್ದಾಳೆ. ಇದರಿಂದ ಭಯಭಿತರಾದ ಆರೋಪಿಗಳು, ಶವವನ್ನು ಅಲ್ಲಿಯೇ ಬಿಟ್ಟುಹೋಗಿದ್ದಾರೆ. ಈ ವಿಷಯವನ್ನು ತಮ್ಮ ಮತ್ತೊಬ್ಬ ಸಂಬಂಧಿಗೆ ತಿಳಿಸಿದಾಗ, ಈ ಮೊದಲೇ ಹೇಳಿರುವ ಕಟ್ಟುಕಥೆಯನ್ನು ಆಧರಿಸಿ, ಶವವನ್ನು ಇವರೇ ಹೂತುಹಾಕಿ, ನಂತರ ಮಾರನೆದಿನ (ಅ.9) ದೂರು ನೀಡಿ, ಒಂದು ದಿನ ಕಳೆದ ನಂತರ (ಅ.10) ಇವರೇ ಪೊಲೀಸರಿಗೆ ಕರೆ ಮಾಡಿ, ಪೂರ್ವಯೋಜಿತ ಕಥೆಯನ್ನು ಹೇಳಿದ್ದಾರೆ” ಎಂಬುದು ತನಿಖೆಯ ವೇಳೆ ತಿಳಿದುಬಂದಿದೆ.

ಇದನ್ನೂ ಓದಿ: ತನ್ನ ಜಾತಿಯವರನ್ನು ರಕ್ಷಿಸಲು ಆದಿತ್ಯನಾಥ್ ನನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ: ಚಂದ್ರಶೇಖರ್ ಆಜಾದ್

ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಸಂತ್ರಸ್ತೆಯ ತಂದೆ ಕಷ್ಣಪ್ಪ ಮತ್ತು ಆತನ ಸೋದರನ ಮಗ ಚೇತನ್‌ ಹಾಗೂ ಅವನ ಅಪ್ರಾಪ್ತ ಸ್ನೇಹಿತನನ್ನು ಬಂಧಿಸಲಾಗಿದ್ದು, ಎಫ್ಐಆರ್ ದಾಖಲಾಗಿದೆ. ಹಾಗಾಗಿ ನಿರ್ದಿಷ್ಟವಾಗಿ ಇದು ಮರ್ಯಾದಾಹೀನ ಹತ್ಯೆ ಎಂದು ತಿಳಿದುಬಂದಿದೆ.

ಇಂತಹ ಯಾವುದೋ ಒಂದೋ ಎರಡೋ ಮರ್ಯಾದಾಹೀನ ಹತ್ಯೆ ಪ್ರಕರಣಗಳು ಬೆಳಕಿಗೆ ಬರುತ್ತವೆ. ಆದರೆ ಸಾವಿರಾರು ಪ್ರಕರಣಗಳು ಈ ಯುವತಿಯ ಶವದಂತೆಯೇ ಮಣ್ಣಿನಲ್ಲಿ ಮುಚ್ಚಿಹೋಗುತ್ತವೆ. ಇವುಗಳನ್ನೂ ಸಮರ್ಥಿಸಿಕೊಳ್ಳುವ ಕೊಳಕು ಮನಸ್ಥಿತಿಗಳು ನಮ್ಮ ನಡುವೆಯೇ ಇವೆ. ಇಂತಹವುಗಳನ್ನು ನೋಡಿದರೆ ನಮ್ಮ ಸಮಾಜ ತನ್ನ ಆಂತರ್ಯದಲ್ಲಿ ಇನ್ನೂ ಎಂತಹ ಕ್ರೂರತೆಯನ್ನು ಉಳಿಸಿಕೊಂಡಿದೆ ಎಂಬುದು ತಿಳಿಯುತ್ತದೆ.

ಇತ್ತೀಚೆಗೆ ವಿವಾದಕ್ಕೆ ಕಾರಣವಾಗಿದ್ದ ತನಿಷ್ಕ್ ಜಾಹೀರಾತಿನಲ್ಲಿ ಹಿಂದೂ ಯುವತಿ ಮುಸ್ಲಿಂ ಕುಟುಂಬಕ್ಕೆ ವಿವಾಹವಾಗಿದ್ದಾಳೆ ಎಂಬುದನ್ನೇ ಅರಗಿಸಿಕೊಳ್ಳದ ನೀಚ ಮನಸ್ಥತಿಗಳೇ ಇಂತಹ ಹೀನ ಕೃತ್ಯಗಳಿಗೆ ಕಾರಣವಾಗುತ್ತವೆ. ಮೀಸೆ ಬಿಟ್ಟಿದ್ದಕ್ಕೆ, ಕುದುರೆ ಏರಿದ್ದಕ್ಕೆ, ನೀರು ಮುಟ್ಟಿದ್ದಕ್ಕೆ ಕೊಲ್ಲುವ ಮನಸ್ಥಿತಿಗಳು ನಮ್ಮ ನಡುವೆ ಕೊರೊನಾ ವೈರಸ್‌ಗಿಂತಲೂ ಅಪಾಯಕಾರಿಯಾಗಿ ಬೆಳೆಯುತ್ತಿವೆ.

ಇಷ್ಟಿದ್ದರೂ ನಮ್ಮ ಸಮಾಜದಲ್ಲಿ ಜಾತಿ ಪದ್ದತಿಯೇ ಇಲ್ಲ ಎಂದೂ, ಜಾತ್ಯಾತೀತತೆಯ ಬಗ್ಗೆ ಮಾತನಾಡುವವರೆಲ್ಲಾ ‘ಸೂಡೋ ಸೆಕ್ಯಲರಿಸ್ಟ್’ ಎಂಬ ಅಪಮಾನಕ್ಕೆ ಗುರಿಯಾಗುತ್ತಿದ್ದಾರೆ. ಇಂತಹ ಸಾವಿರಾರು ಪ್ರಕರಣಗಳು ದಿನನಿತ್ಯ ದಾಖಲಾಗುತ್ತಿದ್ದರೂ, ಸರ್ಕಾರವಾಗಲೀ ನಾಗರೀಕರಾಗಲೀ ಇವುಗಳ ಬಗ್ಗೆ ಎಚ್ಚೆತ್ತುಕೊಳ್ಳುತ್ತಿಲ್ಲ.


ಇದನ್ನೂ ಓದಿ: ತಮಿಳುನಾಡು ಶಾಸಕನ ಅಂತರ್ಜಾತಿ ವಿವಾಹದ ವಿಡಿಯೋ ವೈರಲ್: ಯುವತಿಯ ತಂದೆ ಆತ್ಮಹತ್ಯೆಗೆ ಯತ್ನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...