Homeಕರ್ನಾಟಕಮರ್ಯಾದಾಹೀನ ಹತ್ಯೆ: ಸಿನಿಮಾ ಶೈಲಿಯಲ್ಲಿ ಕಥೆ ಕಟ್ಟಿದ ಯುವತಿಯ ಕುಟುಂಬ!

ಮರ್ಯಾದಾಹೀನ ಹತ್ಯೆ: ಸಿನಿಮಾ ಶೈಲಿಯಲ್ಲಿ ಕಥೆ ಕಟ್ಟಿದ ಯುವತಿಯ ಕುಟುಂಬ!

ಯುವತಿಯನ್ನು ಕುಟುಂಬಸ್ಥರೇ ಕೊಂದು, ಕಾಣೆಯಾಗಿದ್ದಾಳೆ ಎಂದು ರಾಮನಗರದ ಕುದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು!

- Advertisement -
- Advertisement -

ದಲಿತ ಹುಡುಗನನ್ನು ಪ್ರೀತಿಸುತ್ತಿದ್ದಳು ಎಂಬ ಕಾರಣಕ್ಕೆ ಯುವತಿಯೊಬ್ಬಳನ್ನು ಆಕೆಯ ತಂದೆ ಮತ್ತು ತಮ್ಮ ಸೇರಿ ಹತ್ಯೆ ಮಾಡಿರುವ ಹೀನ ಘಟನೆ ರಾಮನಗರದ ಕುದೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತನಿಖೆಯ ನಂತರ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಳಜಾತಿಯ ಹುಡುಗನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ, ಅದನ್ನು ಸಹಿಸಿಕೊಳ್ಳದ ಕುಟುಂಬದವರು ಮಾಡಿರುವ ಈ ದುಷ್ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ.

ಈ ಕುರಿತು ನಾನುಗೌರಿ.ಕಾಂಗೆ ವಿಶ್ವಾಸಾರ್ಹ ಮೂಲಗಳಿಂದ ದೊರಕಿದ ಮಾಹಿತಿಯ ಪ್ರಕಾರ, “ಹೇಮಲತ ಎನ್ನುವ 21 ವರ್ಷದ ಯುವತಿಯನ್ನು ಆಕೆಯ ತಂದೆ ಮತ್ತು ತಮ್ಮ ಸೇರಿ ಕೊಲೆ ಮಾಡಿದ ನಂತರ ಇದನ್ನು ಸಿನಿಮಾ ಶೈಲಿಯಲ್ಲಿ ಮುಚ್ಚಿಹಾಕಲು ಅಥವಾ ಪ್ರಕರಣದ ದಿಕ್ಕುತಪ್ಪಿಸಲು ಪ್ರಯತ್ನಿಸಿದ್ದಾರೆ” ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಯುವತಿ ಅನುಮಾನಾಸ್ಪದ ಸಾವು!: ಮರ್ಯಾದಾಹೀನ ಹತ್ಯೆಯೋ-ನಿರ್ಲಕ್ಷ್ಯತೆಯಿಂದಾದ ಹತ್ಯೆಯೋ?

ಅಕ್ಟೋಬರ್ 8, ಗುರುವಾರದಂದು ತಮ್ಮ ಮಗಳು ಕಾಣೆಯಾಗಿದ್ದಾಳೆ ಎಂದು ಎಲ್ಲಾ ಕಡೆ ಹುಡುಕಾಡಿದ ನಂತರ, ಯುವತಿಯ ತಂದೆ ಕೃಷ್ಣಪ್ಪ ಎಂಬುವವರು, ಪೊಲೀಸ್ ಠಾಣೆಗೆ ಅಕ್ಟೋಬರ್ 9 ರಂದು ದೂರು ನೀಡಿದ್ದರು. ಅದರಲ್ಲಿ, ಪುನಿತ್ ಎಂಬ ಹುಡುಗನನ್ನು ನಮ್ಮ ಮಗಳು ಪ್ರೀತಿಸುತ್ತಿದ್ದಳು ಎಂದು ಹೇಳಿದ್ದಾರೆ. ಆ ದಿನ ನಮ್ಮ ಊರಿನಲ್ಲಿ ಒಂದು ಸಾವಾಗಿತ್ತು, ಮನೆಯವರೆಲ್ಲಾ ಅಲ್ಲಿಗೆ ಹೋಗಿದ್ದೆವು. ಈ ಸಮಯದಲ್ಲಿ ಆತನೆ ನಮ್ಮ ಮಗಳನ್ನು ಕರೆದುಕೊಂಡು ಹೋಗಿದ್ದಾನೆ ಎಂದೂ ದೂರು ನೀಡಿರುತ್ತಾರೆ.

ನಂತರ ಮಾರನೆಯ ದಿನ (ಅಕ್ಟೋಬರ್ 10), ಕುಟುಂಬದವರೇ ಪೊಲೀಸ್‌ಗೆ ಕರೆ ಮಾಡಿ, ನಮ್ಮ ಹೊಲದಲ್ಲಿ, ಯಾರನ್ನೋ ಎಳೆದಾಡಿರುವ ಗುರುತು ಇದೆ. ಅದನ್ನು ಹಿಂಬಾಲಿಸಿದಾಗ ನಮ್ಮ ಮಗಳ ಒಂದು ಚಪ್ಪಲಿ ಸಿಕ್ಕಿದ್ದು, ಇನ್ನೂ ಮುಂದೆ ಹೋದಾಗ ಆಕೆಯ ಒಳ ಉಡುಪು ಸಿಕ್ಕಿದೆ. ಪಕ್ಕದಲ್ಲಿಯೇ ಹೂತಿರುವ ಶವದ ಬೆರಳು ಮಾತ್ರ ಕಾಣಿಸುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜಾತಿಕಾರಣ: ಗ್ರಾಮಪಂಚಾಯಿತಿ ಅಧ್ಯಕ್ಷೆಯನ್ನು ನೆಲದ ಮೇಲೆ ಕೂರಿಸಿದ ಸದಸ್ಯರು!

ಈ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು, ಶವವನ್ನು ಹೊರತೆಗೆದಿದ್ದಾರೆ. ನಂತರ “ನಮ್ಮ ಮಗಳನ್ನು ಅತ್ಯಾಚಾರ ಮಾಡಿ ಕೊಲ್ಲಲಾಗಿದೆ” ಎಂದು ಕುಟುಂಬದವರೇ ಆರೋಪಿಸಿದ್ದರು. ಇದಕ್ಕೆ ಪೂರಕವೆಂಬಂತೆ ತಮ್ಮ ಮಗಳದ್ದೇ ಒಳ ಉಡುಪನ್ನು ಸಾಕ್ಷಿಯಾಗಿ ತೋರಿಸಿದ್ದಾರೆ. ಆದರೆ ಶವ ಹೊರತೆಗೆದಾಗ ಅಲ್ಲಿಯೂ ಅದೇ ಬ್ರಾಂಡ್‌ನ ಒಳಉಡುಪನ್ನು ಯುವತಿ ಧರಿಸಿದ್ದಳು!? ಹೀಗಿರುವಾಗ ಹೊರಗಡೆ ಮತ್ತೊಂದು ಒಳ ಉಡುಪು ಸಿಗಲು ಹೇಗೆ ಸಾಧ್ಯ ಎಂದು ಪೊಲೀಸರು ಅನುಮಾನಕ್ಕೆ ಒಳಗಾಗಿದ್ದಾರೆ. ಮೇಲು ನೋಟಕ್ಕೆ ಅತ್ಯಾಚಾರದ ಯಾವುದೇ ಗುರುತುಗಳು ಕಂಡುಬಂದಿಲ್ಲವಾದ್ದರಿಂದ, ಪೊಲೀಸರು ಈ ಪ್ರಕರಣವನ್ನು ಗೌಪ್ಯವಾಗಿ ತನಿಖೆ ಮಾಡಲು ಪ್ರಾರಂಭಿಸಿದ್ದಾರೆ.

ಯುವತಿ ಪ್ರೀತಿಸುತ್ತಿದ್ದ ಹುಡುಗನನ್ನು ವಿಚಾರಿಸಿದಾಗ, ತಾವು 3 ವರ್ಷಗಳಿಂದ ಪ್ರೀತಿಸುತ್ತಿದ್ದೆವೆಂದು ಒಪ್ಪಿಕೊಂಡಿದ್ದಾನೆ. ಆದರೆ ಈ ಘಟನೆಯ ಬಗ್ಗೆ ನನಗೆ ಗೊತ್ತಿಲ್ಲ. ಇದಕ್ಕೂ ನನಗೂ ಸಂಬಂಧವಿಲ್ಲ. ತಾನು ಮೈಸೂರಿನಲ್ಲಿ ಕೆಲಸ ಮಾಡುತ್ತಿರುವುದಾಗಿಯೂ, ಈ ವಿಷಯ ತಿಳಿದು ಆಘಾತಗೊಂಡು ತಾನೂ ಕೂಡಾ ಎಲ್ಲಾ ಕಡೆ ಹುಡುಕುತ್ತಿರುವುದಾಗಿಯೂ ಪೊಲೀಸರಿಗೆ ತಿಳಿಸಿದ್ದಾನೆ.

ಇದಾದ ನಂತರ ಕುಟುಂಬದವರನ್ನು ತೀವ್ರವಾಗಿ ವಿಚಾರಿಸಿದಾಗ ನಿಜ ಬಾಯಿ ಬಿಟ್ಟಿದ್ದಾರೆ ಎಂದು ಪೊಲಿಸರು ತಿಳಿಸಿದರು.

“ಈ ಹಿಂದೆಯೇ ಎರಡು-ಮೂರು ಬಾರಿ ಇವರ ಪ್ರೀತಿಯ ವಿಷಯಕ್ಕೆ ಸಂಬಂಧಿಸಿದಂತೆ ಪೋಷಕರು ಬೆದರಿಕೆ ಹಾಕಿದ್ದರೂ ಯುವತಿ ಅದನ್ನು ಕಡೆಗಣಿಸಿದ್ದಳು. ಅ. 8 ರ ಹಿಂದಿನ ರಾತ್ರಿ ಬೆಳಿಗ್ಗೆ 4 ಗಂಟೆಯ ತನಕ ಹೇಮಲತ ಆನ್‌ಲೈನ್‌ನಲ್ಲಿ ಆ ಹುಡುಗನೊಂದಿಗೆ ಚಾಟ್ ಮಾಡುತ್ತಿದ್ದಳು. ಇದನ್ನು ಸಹಿಸದ ಯುವತಿಯ ತಂದೆ ಮತ್ತು ಆಕೆಯ ದೊಡ್ಡಪ್ಪನ ಮಗ ಚೇತನ್, ಮಾರನೆಯ ದಿನ (ಅ. 8) ಆಕೆಯನ್ನು ತಮ್ಮ ಜಮೀನಿನ ಬಳಿ ಕರೆಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ, ಚೇತನ್ ದೊಣ್ಣೆಯಿಂದ ಆಕೆಯ ಮೇಲೆ ಹಲ್ಲೆ ಮಾಡಿದ್ದು, ತೀವ್ರ ರಕ್ತಸ್ರಾವ ಉಂಟಾಗಿ ಯುವತಿ ಸ್ಥಳದಲ್ಲೇ ಮತಪಟ್ಟಿದ್ದಾಳೆ. ಇದರಿಂದ ಭಯಭಿತರಾದ ಆರೋಪಿಗಳು, ಶವವನ್ನು ಅಲ್ಲಿಯೇ ಬಿಟ್ಟುಹೋಗಿದ್ದಾರೆ. ಈ ವಿಷಯವನ್ನು ತಮ್ಮ ಮತ್ತೊಬ್ಬ ಸಂಬಂಧಿಗೆ ತಿಳಿಸಿದಾಗ, ಈ ಮೊದಲೇ ಹೇಳಿರುವ ಕಟ್ಟುಕಥೆಯನ್ನು ಆಧರಿಸಿ, ಶವವನ್ನು ಇವರೇ ಹೂತುಹಾಕಿ, ನಂತರ ಮಾರನೆದಿನ (ಅ.9) ದೂರು ನೀಡಿ, ಒಂದು ದಿನ ಕಳೆದ ನಂತರ (ಅ.10) ಇವರೇ ಪೊಲೀಸರಿಗೆ ಕರೆ ಮಾಡಿ, ಪೂರ್ವಯೋಜಿತ ಕಥೆಯನ್ನು ಹೇಳಿದ್ದಾರೆ” ಎಂಬುದು ತನಿಖೆಯ ವೇಳೆ ತಿಳಿದುಬಂದಿದೆ.

ಇದನ್ನೂ ಓದಿ: ತನ್ನ ಜಾತಿಯವರನ್ನು ರಕ್ಷಿಸಲು ಆದಿತ್ಯನಾಥ್ ನನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ: ಚಂದ್ರಶೇಖರ್ ಆಜಾದ್

ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಸಂತ್ರಸ್ತೆಯ ತಂದೆ ಕಷ್ಣಪ್ಪ ಮತ್ತು ಆತನ ಸೋದರನ ಮಗ ಚೇತನ್‌ ಹಾಗೂ ಅವನ ಅಪ್ರಾಪ್ತ ಸ್ನೇಹಿತನನ್ನು ಬಂಧಿಸಲಾಗಿದ್ದು, ಎಫ್ಐಆರ್ ದಾಖಲಾಗಿದೆ. ಹಾಗಾಗಿ ನಿರ್ದಿಷ್ಟವಾಗಿ ಇದು ಮರ್ಯಾದಾಹೀನ ಹತ್ಯೆ ಎಂದು ತಿಳಿದುಬಂದಿದೆ.

ಇಂತಹ ಯಾವುದೋ ಒಂದೋ ಎರಡೋ ಮರ್ಯಾದಾಹೀನ ಹತ್ಯೆ ಪ್ರಕರಣಗಳು ಬೆಳಕಿಗೆ ಬರುತ್ತವೆ. ಆದರೆ ಸಾವಿರಾರು ಪ್ರಕರಣಗಳು ಈ ಯುವತಿಯ ಶವದಂತೆಯೇ ಮಣ್ಣಿನಲ್ಲಿ ಮುಚ್ಚಿಹೋಗುತ್ತವೆ. ಇವುಗಳನ್ನೂ ಸಮರ್ಥಿಸಿಕೊಳ್ಳುವ ಕೊಳಕು ಮನಸ್ಥಿತಿಗಳು ನಮ್ಮ ನಡುವೆಯೇ ಇವೆ. ಇಂತಹವುಗಳನ್ನು ನೋಡಿದರೆ ನಮ್ಮ ಸಮಾಜ ತನ್ನ ಆಂತರ್ಯದಲ್ಲಿ ಇನ್ನೂ ಎಂತಹ ಕ್ರೂರತೆಯನ್ನು ಉಳಿಸಿಕೊಂಡಿದೆ ಎಂಬುದು ತಿಳಿಯುತ್ತದೆ.

ಇತ್ತೀಚೆಗೆ ವಿವಾದಕ್ಕೆ ಕಾರಣವಾಗಿದ್ದ ತನಿಷ್ಕ್ ಜಾಹೀರಾತಿನಲ್ಲಿ ಹಿಂದೂ ಯುವತಿ ಮುಸ್ಲಿಂ ಕುಟುಂಬಕ್ಕೆ ವಿವಾಹವಾಗಿದ್ದಾಳೆ ಎಂಬುದನ್ನೇ ಅರಗಿಸಿಕೊಳ್ಳದ ನೀಚ ಮನಸ್ಥತಿಗಳೇ ಇಂತಹ ಹೀನ ಕೃತ್ಯಗಳಿಗೆ ಕಾರಣವಾಗುತ್ತವೆ. ಮೀಸೆ ಬಿಟ್ಟಿದ್ದಕ್ಕೆ, ಕುದುರೆ ಏರಿದ್ದಕ್ಕೆ, ನೀರು ಮುಟ್ಟಿದ್ದಕ್ಕೆ ಕೊಲ್ಲುವ ಮನಸ್ಥಿತಿಗಳು ನಮ್ಮ ನಡುವೆ ಕೊರೊನಾ ವೈರಸ್‌ಗಿಂತಲೂ ಅಪಾಯಕಾರಿಯಾಗಿ ಬೆಳೆಯುತ್ತಿವೆ.

ಇಷ್ಟಿದ್ದರೂ ನಮ್ಮ ಸಮಾಜದಲ್ಲಿ ಜಾತಿ ಪದ್ದತಿಯೇ ಇಲ್ಲ ಎಂದೂ, ಜಾತ್ಯಾತೀತತೆಯ ಬಗ್ಗೆ ಮಾತನಾಡುವವರೆಲ್ಲಾ ‘ಸೂಡೋ ಸೆಕ್ಯಲರಿಸ್ಟ್’ ಎಂಬ ಅಪಮಾನಕ್ಕೆ ಗುರಿಯಾಗುತ್ತಿದ್ದಾರೆ. ಇಂತಹ ಸಾವಿರಾರು ಪ್ರಕರಣಗಳು ದಿನನಿತ್ಯ ದಾಖಲಾಗುತ್ತಿದ್ದರೂ, ಸರ್ಕಾರವಾಗಲೀ ನಾಗರೀಕರಾಗಲೀ ಇವುಗಳ ಬಗ್ಗೆ ಎಚ್ಚೆತ್ತುಕೊಳ್ಳುತ್ತಿಲ್ಲ.


ಇದನ್ನೂ ಓದಿ: ತಮಿಳುನಾಡು ಶಾಸಕನ ಅಂತರ್ಜಾತಿ ವಿವಾಹದ ವಿಡಿಯೋ ವೈರಲ್: ಯುವತಿಯ ತಂದೆ ಆತ್ಮಹತ್ಯೆಗೆ ಯತ್ನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...