Homeಕರ್ನಾಟಕಮರ್ಯಾದಾಹೀನ ಹತ್ಯೆ: ಸಿನಿಮಾ ಶೈಲಿಯಲ್ಲಿ ಕಥೆ ಕಟ್ಟಿದ ಯುವತಿಯ ಕುಟುಂಬ!

ಮರ್ಯಾದಾಹೀನ ಹತ್ಯೆ: ಸಿನಿಮಾ ಶೈಲಿಯಲ್ಲಿ ಕಥೆ ಕಟ್ಟಿದ ಯುವತಿಯ ಕುಟುಂಬ!

ಯುವತಿಯನ್ನು ಕುಟುಂಬಸ್ಥರೇ ಕೊಂದು, ಕಾಣೆಯಾಗಿದ್ದಾಳೆ ಎಂದು ರಾಮನಗರದ ಕುದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು!

- Advertisement -
- Advertisement -

ದಲಿತ ಹುಡುಗನನ್ನು ಪ್ರೀತಿಸುತ್ತಿದ್ದಳು ಎಂಬ ಕಾರಣಕ್ಕೆ ಯುವತಿಯೊಬ್ಬಳನ್ನು ಆಕೆಯ ತಂದೆ ಮತ್ತು ತಮ್ಮ ಸೇರಿ ಹತ್ಯೆ ಮಾಡಿರುವ ಹೀನ ಘಟನೆ ರಾಮನಗರದ ಕುದೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತನಿಖೆಯ ನಂತರ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಳಜಾತಿಯ ಹುಡುಗನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ, ಅದನ್ನು ಸಹಿಸಿಕೊಳ್ಳದ ಕುಟುಂಬದವರು ಮಾಡಿರುವ ಈ ದುಷ್ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ.

ಈ ಕುರಿತು ನಾನುಗೌರಿ.ಕಾಂಗೆ ವಿಶ್ವಾಸಾರ್ಹ ಮೂಲಗಳಿಂದ ದೊರಕಿದ ಮಾಹಿತಿಯ ಪ್ರಕಾರ, “ಹೇಮಲತ ಎನ್ನುವ 21 ವರ್ಷದ ಯುವತಿಯನ್ನು ಆಕೆಯ ತಂದೆ ಮತ್ತು ತಮ್ಮ ಸೇರಿ ಕೊಲೆ ಮಾಡಿದ ನಂತರ ಇದನ್ನು ಸಿನಿಮಾ ಶೈಲಿಯಲ್ಲಿ ಮುಚ್ಚಿಹಾಕಲು ಅಥವಾ ಪ್ರಕರಣದ ದಿಕ್ಕುತಪ್ಪಿಸಲು ಪ್ರಯತ್ನಿಸಿದ್ದಾರೆ” ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಯುವತಿ ಅನುಮಾನಾಸ್ಪದ ಸಾವು!: ಮರ್ಯಾದಾಹೀನ ಹತ್ಯೆಯೋ-ನಿರ್ಲಕ್ಷ್ಯತೆಯಿಂದಾದ ಹತ್ಯೆಯೋ?

ಅಕ್ಟೋಬರ್ 8, ಗುರುವಾರದಂದು ತಮ್ಮ ಮಗಳು ಕಾಣೆಯಾಗಿದ್ದಾಳೆ ಎಂದು ಎಲ್ಲಾ ಕಡೆ ಹುಡುಕಾಡಿದ ನಂತರ, ಯುವತಿಯ ತಂದೆ ಕೃಷ್ಣಪ್ಪ ಎಂಬುವವರು, ಪೊಲೀಸ್ ಠಾಣೆಗೆ ಅಕ್ಟೋಬರ್ 9 ರಂದು ದೂರು ನೀಡಿದ್ದರು. ಅದರಲ್ಲಿ, ಪುನಿತ್ ಎಂಬ ಹುಡುಗನನ್ನು ನಮ್ಮ ಮಗಳು ಪ್ರೀತಿಸುತ್ತಿದ್ದಳು ಎಂದು ಹೇಳಿದ್ದಾರೆ. ಆ ದಿನ ನಮ್ಮ ಊರಿನಲ್ಲಿ ಒಂದು ಸಾವಾಗಿತ್ತು, ಮನೆಯವರೆಲ್ಲಾ ಅಲ್ಲಿಗೆ ಹೋಗಿದ್ದೆವು. ಈ ಸಮಯದಲ್ಲಿ ಆತನೆ ನಮ್ಮ ಮಗಳನ್ನು ಕರೆದುಕೊಂಡು ಹೋಗಿದ್ದಾನೆ ಎಂದೂ ದೂರು ನೀಡಿರುತ್ತಾರೆ.

ನಂತರ ಮಾರನೆಯ ದಿನ (ಅಕ್ಟೋಬರ್ 10), ಕುಟುಂಬದವರೇ ಪೊಲೀಸ್‌ಗೆ ಕರೆ ಮಾಡಿ, ನಮ್ಮ ಹೊಲದಲ್ಲಿ, ಯಾರನ್ನೋ ಎಳೆದಾಡಿರುವ ಗುರುತು ಇದೆ. ಅದನ್ನು ಹಿಂಬಾಲಿಸಿದಾಗ ನಮ್ಮ ಮಗಳ ಒಂದು ಚಪ್ಪಲಿ ಸಿಕ್ಕಿದ್ದು, ಇನ್ನೂ ಮುಂದೆ ಹೋದಾಗ ಆಕೆಯ ಒಳ ಉಡುಪು ಸಿಕ್ಕಿದೆ. ಪಕ್ಕದಲ್ಲಿಯೇ ಹೂತಿರುವ ಶವದ ಬೆರಳು ಮಾತ್ರ ಕಾಣಿಸುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜಾತಿಕಾರಣ: ಗ್ರಾಮಪಂಚಾಯಿತಿ ಅಧ್ಯಕ್ಷೆಯನ್ನು ನೆಲದ ಮೇಲೆ ಕೂರಿಸಿದ ಸದಸ್ಯರು!

ಈ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು, ಶವವನ್ನು ಹೊರತೆಗೆದಿದ್ದಾರೆ. ನಂತರ “ನಮ್ಮ ಮಗಳನ್ನು ಅತ್ಯಾಚಾರ ಮಾಡಿ ಕೊಲ್ಲಲಾಗಿದೆ” ಎಂದು ಕುಟುಂಬದವರೇ ಆರೋಪಿಸಿದ್ದರು. ಇದಕ್ಕೆ ಪೂರಕವೆಂಬಂತೆ ತಮ್ಮ ಮಗಳದ್ದೇ ಒಳ ಉಡುಪನ್ನು ಸಾಕ್ಷಿಯಾಗಿ ತೋರಿಸಿದ್ದಾರೆ. ಆದರೆ ಶವ ಹೊರತೆಗೆದಾಗ ಅಲ್ಲಿಯೂ ಅದೇ ಬ್ರಾಂಡ್‌ನ ಒಳಉಡುಪನ್ನು ಯುವತಿ ಧರಿಸಿದ್ದಳು!? ಹೀಗಿರುವಾಗ ಹೊರಗಡೆ ಮತ್ತೊಂದು ಒಳ ಉಡುಪು ಸಿಗಲು ಹೇಗೆ ಸಾಧ್ಯ ಎಂದು ಪೊಲೀಸರು ಅನುಮಾನಕ್ಕೆ ಒಳಗಾಗಿದ್ದಾರೆ. ಮೇಲು ನೋಟಕ್ಕೆ ಅತ್ಯಾಚಾರದ ಯಾವುದೇ ಗುರುತುಗಳು ಕಂಡುಬಂದಿಲ್ಲವಾದ್ದರಿಂದ, ಪೊಲೀಸರು ಈ ಪ್ರಕರಣವನ್ನು ಗೌಪ್ಯವಾಗಿ ತನಿಖೆ ಮಾಡಲು ಪ್ರಾರಂಭಿಸಿದ್ದಾರೆ.

ಯುವತಿ ಪ್ರೀತಿಸುತ್ತಿದ್ದ ಹುಡುಗನನ್ನು ವಿಚಾರಿಸಿದಾಗ, ತಾವು 3 ವರ್ಷಗಳಿಂದ ಪ್ರೀತಿಸುತ್ತಿದ್ದೆವೆಂದು ಒಪ್ಪಿಕೊಂಡಿದ್ದಾನೆ. ಆದರೆ ಈ ಘಟನೆಯ ಬಗ್ಗೆ ನನಗೆ ಗೊತ್ತಿಲ್ಲ. ಇದಕ್ಕೂ ನನಗೂ ಸಂಬಂಧವಿಲ್ಲ. ತಾನು ಮೈಸೂರಿನಲ್ಲಿ ಕೆಲಸ ಮಾಡುತ್ತಿರುವುದಾಗಿಯೂ, ಈ ವಿಷಯ ತಿಳಿದು ಆಘಾತಗೊಂಡು ತಾನೂ ಕೂಡಾ ಎಲ್ಲಾ ಕಡೆ ಹುಡುಕುತ್ತಿರುವುದಾಗಿಯೂ ಪೊಲೀಸರಿಗೆ ತಿಳಿಸಿದ್ದಾನೆ.

ಇದಾದ ನಂತರ ಕುಟುಂಬದವರನ್ನು ತೀವ್ರವಾಗಿ ವಿಚಾರಿಸಿದಾಗ ನಿಜ ಬಾಯಿ ಬಿಟ್ಟಿದ್ದಾರೆ ಎಂದು ಪೊಲಿಸರು ತಿಳಿಸಿದರು.

“ಈ ಹಿಂದೆಯೇ ಎರಡು-ಮೂರು ಬಾರಿ ಇವರ ಪ್ರೀತಿಯ ವಿಷಯಕ್ಕೆ ಸಂಬಂಧಿಸಿದಂತೆ ಪೋಷಕರು ಬೆದರಿಕೆ ಹಾಕಿದ್ದರೂ ಯುವತಿ ಅದನ್ನು ಕಡೆಗಣಿಸಿದ್ದಳು. ಅ. 8 ರ ಹಿಂದಿನ ರಾತ್ರಿ ಬೆಳಿಗ್ಗೆ 4 ಗಂಟೆಯ ತನಕ ಹೇಮಲತ ಆನ್‌ಲೈನ್‌ನಲ್ಲಿ ಆ ಹುಡುಗನೊಂದಿಗೆ ಚಾಟ್ ಮಾಡುತ್ತಿದ್ದಳು. ಇದನ್ನು ಸಹಿಸದ ಯುವತಿಯ ತಂದೆ ಮತ್ತು ಆಕೆಯ ದೊಡ್ಡಪ್ಪನ ಮಗ ಚೇತನ್, ಮಾರನೆಯ ದಿನ (ಅ. 8) ಆಕೆಯನ್ನು ತಮ್ಮ ಜಮೀನಿನ ಬಳಿ ಕರೆಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ, ಚೇತನ್ ದೊಣ್ಣೆಯಿಂದ ಆಕೆಯ ಮೇಲೆ ಹಲ್ಲೆ ಮಾಡಿದ್ದು, ತೀವ್ರ ರಕ್ತಸ್ರಾವ ಉಂಟಾಗಿ ಯುವತಿ ಸ್ಥಳದಲ್ಲೇ ಮತಪಟ್ಟಿದ್ದಾಳೆ. ಇದರಿಂದ ಭಯಭಿತರಾದ ಆರೋಪಿಗಳು, ಶವವನ್ನು ಅಲ್ಲಿಯೇ ಬಿಟ್ಟುಹೋಗಿದ್ದಾರೆ. ಈ ವಿಷಯವನ್ನು ತಮ್ಮ ಮತ್ತೊಬ್ಬ ಸಂಬಂಧಿಗೆ ತಿಳಿಸಿದಾಗ, ಈ ಮೊದಲೇ ಹೇಳಿರುವ ಕಟ್ಟುಕಥೆಯನ್ನು ಆಧರಿಸಿ, ಶವವನ್ನು ಇವರೇ ಹೂತುಹಾಕಿ, ನಂತರ ಮಾರನೆದಿನ (ಅ.9) ದೂರು ನೀಡಿ, ಒಂದು ದಿನ ಕಳೆದ ನಂತರ (ಅ.10) ಇವರೇ ಪೊಲೀಸರಿಗೆ ಕರೆ ಮಾಡಿ, ಪೂರ್ವಯೋಜಿತ ಕಥೆಯನ್ನು ಹೇಳಿದ್ದಾರೆ” ಎಂಬುದು ತನಿಖೆಯ ವೇಳೆ ತಿಳಿದುಬಂದಿದೆ.

ಇದನ್ನೂ ಓದಿ: ತನ್ನ ಜಾತಿಯವರನ್ನು ರಕ್ಷಿಸಲು ಆದಿತ್ಯನಾಥ್ ನನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ: ಚಂದ್ರಶೇಖರ್ ಆಜಾದ್

ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಸಂತ್ರಸ್ತೆಯ ತಂದೆ ಕಷ್ಣಪ್ಪ ಮತ್ತು ಆತನ ಸೋದರನ ಮಗ ಚೇತನ್‌ ಹಾಗೂ ಅವನ ಅಪ್ರಾಪ್ತ ಸ್ನೇಹಿತನನ್ನು ಬಂಧಿಸಲಾಗಿದ್ದು, ಎಫ್ಐಆರ್ ದಾಖಲಾಗಿದೆ. ಹಾಗಾಗಿ ನಿರ್ದಿಷ್ಟವಾಗಿ ಇದು ಮರ್ಯಾದಾಹೀನ ಹತ್ಯೆ ಎಂದು ತಿಳಿದುಬಂದಿದೆ.

ಇಂತಹ ಯಾವುದೋ ಒಂದೋ ಎರಡೋ ಮರ್ಯಾದಾಹೀನ ಹತ್ಯೆ ಪ್ರಕರಣಗಳು ಬೆಳಕಿಗೆ ಬರುತ್ತವೆ. ಆದರೆ ಸಾವಿರಾರು ಪ್ರಕರಣಗಳು ಈ ಯುವತಿಯ ಶವದಂತೆಯೇ ಮಣ್ಣಿನಲ್ಲಿ ಮುಚ್ಚಿಹೋಗುತ್ತವೆ. ಇವುಗಳನ್ನೂ ಸಮರ್ಥಿಸಿಕೊಳ್ಳುವ ಕೊಳಕು ಮನಸ್ಥಿತಿಗಳು ನಮ್ಮ ನಡುವೆಯೇ ಇವೆ. ಇಂತಹವುಗಳನ್ನು ನೋಡಿದರೆ ನಮ್ಮ ಸಮಾಜ ತನ್ನ ಆಂತರ್ಯದಲ್ಲಿ ಇನ್ನೂ ಎಂತಹ ಕ್ರೂರತೆಯನ್ನು ಉಳಿಸಿಕೊಂಡಿದೆ ಎಂಬುದು ತಿಳಿಯುತ್ತದೆ.

ಇತ್ತೀಚೆಗೆ ವಿವಾದಕ್ಕೆ ಕಾರಣವಾಗಿದ್ದ ತನಿಷ್ಕ್ ಜಾಹೀರಾತಿನಲ್ಲಿ ಹಿಂದೂ ಯುವತಿ ಮುಸ್ಲಿಂ ಕುಟುಂಬಕ್ಕೆ ವಿವಾಹವಾಗಿದ್ದಾಳೆ ಎಂಬುದನ್ನೇ ಅರಗಿಸಿಕೊಳ್ಳದ ನೀಚ ಮನಸ್ಥತಿಗಳೇ ಇಂತಹ ಹೀನ ಕೃತ್ಯಗಳಿಗೆ ಕಾರಣವಾಗುತ್ತವೆ. ಮೀಸೆ ಬಿಟ್ಟಿದ್ದಕ್ಕೆ, ಕುದುರೆ ಏರಿದ್ದಕ್ಕೆ, ನೀರು ಮುಟ್ಟಿದ್ದಕ್ಕೆ ಕೊಲ್ಲುವ ಮನಸ್ಥಿತಿಗಳು ನಮ್ಮ ನಡುವೆ ಕೊರೊನಾ ವೈರಸ್‌ಗಿಂತಲೂ ಅಪಾಯಕಾರಿಯಾಗಿ ಬೆಳೆಯುತ್ತಿವೆ.

ಇಷ್ಟಿದ್ದರೂ ನಮ್ಮ ಸಮಾಜದಲ್ಲಿ ಜಾತಿ ಪದ್ದತಿಯೇ ಇಲ್ಲ ಎಂದೂ, ಜಾತ್ಯಾತೀತತೆಯ ಬಗ್ಗೆ ಮಾತನಾಡುವವರೆಲ್ಲಾ ‘ಸೂಡೋ ಸೆಕ್ಯಲರಿಸ್ಟ್’ ಎಂಬ ಅಪಮಾನಕ್ಕೆ ಗುರಿಯಾಗುತ್ತಿದ್ದಾರೆ. ಇಂತಹ ಸಾವಿರಾರು ಪ್ರಕರಣಗಳು ದಿನನಿತ್ಯ ದಾಖಲಾಗುತ್ತಿದ್ದರೂ, ಸರ್ಕಾರವಾಗಲೀ ನಾಗರೀಕರಾಗಲೀ ಇವುಗಳ ಬಗ್ಗೆ ಎಚ್ಚೆತ್ತುಕೊಳ್ಳುತ್ತಿಲ್ಲ.


ಇದನ್ನೂ ಓದಿ: ತಮಿಳುನಾಡು ಶಾಸಕನ ಅಂತರ್ಜಾತಿ ವಿವಾಹದ ವಿಡಿಯೋ ವೈರಲ್: ಯುವತಿಯ ತಂದೆ ಆತ್ಮಹತ್ಯೆಗೆ ಯತ್ನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....