Homeಕರ್ನಾಟಕ9 ತಿಂಗಳ ಗರ್ಭಿಣಿಯ ಮರ್ಯಾದೆಗೇಡು ಹತ್ಯೆ: ಇಬ್ಬರಿಗೆ ಮರಣದಂಡನೆ, ಐವರಿಗೆ ಜೀವಾವಧಿ ಶಿಕ್ಷೆ

9 ತಿಂಗಳ ಗರ್ಭಿಣಿಯ ಮರ್ಯಾದೆಗೇಡು ಹತ್ಯೆ: ಇಬ್ಬರಿಗೆ ಮರಣದಂಡನೆ, ಐವರಿಗೆ ಜೀವಾವಧಿ ಶಿಕ್ಷೆ

- Advertisement -
- Advertisement -

ಒಂಬತ್ತು ತಿಂಗಳ ಗರ್ಭಿಣಿ ಹೆಣ್ಣು ಮಗಳನ್ನು ಬೆಂಕಿ ಹಚ್ಚಿ ಕೊಂದ ಪ್ರಕರಣದಲ್ಲಿ, ಆಕೆಯ ಕುಟುಂಬದ ಇಬ್ಬರಿಗೆ ಮರಣದಂಡನೆ ಮತ್ತು ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದ ವಿಜಯಪುರ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್‌ನ ಕಲಬುರಗಿ ಪೀಠ ಎತ್ತಿ ಹಿಡಿದಿದೆ.

ಮೃತ ಭಾನು ಬೇಗಂ ಅವರ ಸಹೋದರರಾದ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಗುಂಡಕಲ್ ಗ್ರಾಮದ ಇಬ್ರಾಹಿಂ ಸಾಬ್ ಮಹಮ್ಮದ್‌ಸಾಬ್ ಅತ್ತರ್ (31) ಮತ್ತು ಅಕ್ಬರ್ ಮಹಮ್ಮದ್‌ಸಾಬ್ ಅತ್ತರ್ (28) ಮರಣದಂಡನೆ ವಿಧಿಸಲ್ಪಟ್ಟವರು.

ಮೃತಳ ತಾಯಿ ರಂಜಾನ್‌ಬಿ ಅತ್ತರ್, ಸಂಬಂಧಿಕರಾದ ದಾವಲ್‌ಬಿ ಬಂದೇನವಾಝ್ ಜಮಾದಾರ್, ಅಜ್ಮಾ ಜೀಲಾನಿ ದಖನಿ, ಅಬ್ದುಲ್ ಖಾದರ್ ದಖನಿ ಮತ್ತು ದಾವಲ್‌ಬಿ ಸುಬ್ಹಾನ್ ದಣ್ಣೂರ್ ಜೀವಾವಧಿ ಶಿಕ್ಷೆಗೆ ಒಳಗಾದವರು.

2017ರಲ್ಲಿ ತನ್ನದೇ ಗ್ರಾಮದ ಪರಿಶಿಷ್ಟ ಪಂಗಡದ ಯುವಕ ಸಾಯಿಬಣ್ಣ ಅವರನ್ನು ಪ್ರೀತಿಸಿ ಬಾನು ಬೇಗಂ ಮದುವೆಯಾಗಿದ್ದರು. ಆಕೆ 9 ತಿಂಗಳ ಗರ್ಭಿಣಿ ಆಗಿದ್ದಾಗ ತಾಯಿ, ಸಹೋದರರು ಸಂಬಂಧಿಕರ ಜೊತೆಗೂಡಿ ಬೆಂಕಿ ಹಚ್ಚಿ ಕೊಂದಿದ್ದರು.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಬಸವನಬಾಗೇವಾಡಿ ಪೊಲೀಸರು, ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ವಿಜಯಪುರ ಜಿಲ್ಲಾ ನ್ಯಾಯಾಲಯ, ಇಬ್ಬರು ಅಪರಾಧಿಗಳಿಗೆ ಮರಣದಂಡನೆ ಹಾಗೂ ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ತೀರ್ಪು ಪ್ರಶ್ನಿಸಿ ಅಪರಾಧಿಗಳು ಹೈಕೋರ್ಟ್‌ನ ಕಲಬುರಗಿ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಹೆಚ್‌.ಪಿ ಸಂದೇಶ್ ಮತ್ತು ಟಿ.ಎಂ ನದಾಫ್ ಅವರ ದ್ವಿಸದಸ್ಯ ಪೀಠ, ವಿಜಯಪುರ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿದೆ.

‘ಬೇಡಿಕೆ ಗಂಭೀರವಾಗಿ ಪರಿಗಣಿಸದಿದ್ದರೆ ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆ..; ಸರ್ಕಾರಕ್ಕೆ ಒಳಮೀಸಲಾತಿ ಹೋರಾಟಗಾರರಿಂದ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ’: ಪ್ರಿಯಾಂಕ್ ಖರ್ಗೆ

ಬೆಂಗಳೂರು: ‘ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ’ ಎಂದು ಆರ್.ಎಸ್.ಎಸ್ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಮತ್ತೆ ಗುಡುಗಿದ್ದಾರೆ.  ರಾಜ್ಯದ ಗಮನ‌ ಸೆಳೆದಿದ್ದ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ...

“ಮಾಸ್ಕ್ ಧರಿಸಿದರೂ ಪ್ರಯೋಜನವಿಲ್ಲ”: ದೆಹಲಿ ವಾಯುಮಾಲಿನ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್

ದೆಹಲಿಯ ವಾಯುಮಾಲಿನ್ಯ 'ಗಂಭೀರ ಮಟ್ಟ' ತಲುಪಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಮಾಸ್ಕ್‌ ಧರಿಸಿದರೂ ಯಾವುದೇ ಪ್ರಯೋಜನವಿಲ್ಲದಂತಾಗಿದೆ. ವಕೀಲರು ವರ್ಚುವಲ್ ಮೂಲಕ ನ್ಯಾಯಾಲಯಕ್ಕೆ ಹಾಜರಾದರೆ ಸಾಕು ಎಂದು ಹೇಳಿದೆ. ವಿವಿಧ ಪ್ರಕರಣಗಳಲ್ಲಿ...

ಛತ್ತೀಸ್‌ಗಢ| ಇಬ್ಬರು ಉನ್ನತ ಕಮಾಂಡರ್‌ಗಳು ಸೇರಿದಂತೆ ಆರು ಜನ ಮಾವೋವಾದಿಗಳ ಎನ್‌ಕೌಂಟರ್‌

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನವೆಂಬರ್ 11 ರಂದು ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ಆರು ಮಾವೋವಾದಿಗಳಲ್ಲಿ ಮಾವೋವಾದಿ ನಾಯಕಿ, ಹಿರಿಯ ಕಾರ್ಯಕರ್ತ ಪಾಪಾ ರಾವ್ ಅವರ ಪತ್ನಿ ಊರ್ಮಿಳಾ ಮತ್ತು ಬುಚಣ್ಣ...

ಗ್ರೆನೇಡ್ ದಾಳಿಗೆ ಸಂಚು ರೂಪಿಸಿದ್ದ, ಪಾಕ್ ಐಎಸ್ಐ ಬೆಂಬಲಿತ ಗುಂಪು: ವಿದೇಶಿ ಮೂಲದ 10 ಹ್ಯಾಂಡ್ಲರ್‌ಗಳ ಬಂಧನ

ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಮಹತ್ವದ ಪ್ರಗತಿ ಸಾಧಿಸಿರುವ ಲುಧಿಯಾನ ಕಮಿಷನರೇಟ್ ಪೊಲೀಸರು, ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಬೆಂಬಲಿತ ಗ್ರೆನೇಡ್ ದಾಳಿ ಘಟಕದ 10 ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಅವರಿಂದ ಸ್ಪೋಟಕಗಳನ್ನು ವಶಕ್ಕೆ ಪಡೆದಿದ್ದಾರೆ.  ನವೆಂಬರ್...

ಗಾಜಾದಲ್ಲಿ ಮುಂದುವರೆದ ಪ್ಯಾಲೆಸ್ತೀನಿಯನ್ ಮಕ್ಕಳ ಕಾಣೆ ಪ್ರಕರಣ: ಮಕ್ಕಳ ಹಕ್ಕುಗಳ ಗುಂಪು

ಬುಧವಾರ ಪ್ಯಾಲೆಸ್ತೀನಿಯನ್ ಹಕ್ಕುಗಳ ಗುಂಪಿನ ವರದಿಯ ಪ್ರಕಾರ, ಇತ್ತೀಚಿನ ತಿಂಗಳುಗಳಲ್ಲಿ ಗಾಜಾದಿಂದ ಕನಿಷ್ಠ ಆರು ಮಕ್ಕಳು ಕಣ್ಮರೆಯಾಗಿದ್ದಾರೆ ಎಂದು 'ಮಕ್ತೂಬ್‌ ಮೀಡಿಯಾ' ವರದಿ ಮಾಡಿದೆ. ಕಾಣೆಯಾದ ಮಕ್ಕಳ ಕುಟುಂಬಗಳು ಈ ಪ್ರದೇಶದಲ್ಲಿನ ತನ್ನ ಮಿಲಿಟರಿ...

ರೂ. 15 ಲಕ್ಷ ಲಂಚ ಪಡೆದ ಪ್ರಕರಣ : ನ್ಯಾಯಾಧೀಶನ ಮೇಲೆ ಕೇಸ್, ಕೋರ್ಟ್ ಗುಮಾಸ್ತ ಅರೆಸ್ಟ್

ವಾಣಿಜ್ಯ ಮೊಕದ್ದಮೆಯೊಂದರಲ್ಲಿ ಅನುಕೂಲಕರ ಆದೇಶವನ್ನು ಪಡೆಯಲು 15 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಸ್ವೀಕರಿಸಿದ ಆರೋಪದ ಮೇಲೆ ಮುಂಬೈ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮಜಗಾಂವ್ ಸಿವಿಲ್ ಮತ್ತು ಸೆಷನ್ಸ್...

ಅಲಿಘರ್| ಶಾಲೆಯಲ್ಲಿ ‘ವಂದೇ ಮಾತರಂ’ ಹಾಡುವುದಕ್ಕೆ ಆಕ್ಷೇಪಿಸಿದ ಶಿಕ್ಷಕನ ಅಮಾನತು

ಉತ್ತರ ಪ್ರದೇಶದ ಶಾಹಪುರ್ ಕುತುಬ್‌ನ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ 'ವಂದೇ ಮಾತರಂ' ಹಾಡುವುದನ್ನು ಆಕ್ಷೇಪಿಸಿದ ಆರೋಪದ ಮೇಲೆ ಸರ್ಕಾರಿ ಶಾಲಾ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ರಾಷ್ಟ್ರಗೀತೆಯ ನಂತರ ವಂದೇಮಾತರಂ...

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್ಎಸ್ ಪಥಸಂಚಲನಕ್ಕೆ ಕರ್ನಾಟಕ ಹೈಕೋರ್ಟ್ ನ ಕಲಬುರಗಿ ಪೀಠ ಷರತ್ತುಬದ್ಧ ಅನುಮತಿ ನೀಡಿದೆ. ಇದರಿಂದ ತೀವ್ರ ಪ್ರತಿಷ್ಠೆಯ ವಿಷಯವಾಗಿದ್ದ ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನಕ್ಕೆ ದಿನಾಂಕ ನಿಗದಿಯಾಗಿದೆ. ನವೆಂಬರ್ 16ರ‌ ಭಾನುವಾರ...

ಯಡಿಯೂರಪ್ಪ ವಿರುದ್ದದ ಪೋಕ್ಸೋ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಈ ಮೂಲಕ ನ್ಯಾಯಮೂರ್ತಿ ಎಂ.ಐ ಅರುಣ್ ಅವರು, ವಿಚಾರಣಾ ನ್ಯಾಯಾಲಯ ಸಂಜ್ಞೇ (cognisance)ಪರಿಗಣಿಸಿ ಯಡಿಯೂರಪ್ಪ ಅವರಿಗೆ ಸಮನ್ಸ್ ಜಾರಿ...

ಗುಜರಾತ್| ಗೋಹತ್ಯೆ ಮಾಡಿದ್ದಕ್ಕಾಗಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ; ರೂ.18 ಲಕ್ಷ ದಂಡ

ಗುಜರಾತ್‌ನ ಅಮ್ರೇಲಿಯಲ್ಲಿರುವ ಸೆಷನ್ಸ್ ನ್ಯಾಯಾಲಯವು, ಗುಜರಾತ್ ಪ್ರಾಣಿ ಸಂರಕ್ಷಣಾ ಕಾಯ್ದೆಯಡಿ ಗೋಹತ್ಯೆ ಮಾಡಿದ್ದಕ್ಕಾಗಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದಲ್ಲಿ ಗೋ ಕುಟುಂಬಕ್ಕೆ ಸೇರಿದ ಪ್ರಾಣಿಗಳ ಹತ್ಯೆಯನ್ನು ಕಾನೂನು...