Homeಮುಖಪುಟದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ಗೆ ಗೌರವ ಡಾಕ್ಟರೇಟ್

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ಗೆ ಗೌರವ ಡಾಕ್ಟರೇಟ್

ತೀಸ್ತಾ ಸೆಟಲ್ವಾಡ್‌ರವರು ಕರ್ನಾಟಕದೊಂದಿಗೆ ನಿಕಟ ಸಂಬಂಧ ಹೊಂದಿದ್ದು, ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಹತ್ತಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಗೌರಿ ಲಂಕೇಶ್‌ರವರ ನಿಕಟವರ್ತಿಯಾಗಿದ್ದ ಇವರು ಕಳೆದ ವರ್ಷ ಖ್ಯಾತ ಪತ್ರಕರ್ತ ರವೀಶ್‌ ಕುಮಾರ್‌ರವರಿಗೆ ’ಗೌರಿ ಲಂಕೇಶ್‌’ ಪ್ರಶಸ್ತಿ ಪ್ರಧಾನ ಸಮಾರಂಭದ ಮುಖ್ಯ ಅತಿಥಿಯಾಗಿದ್ದರು.

- Advertisement -
- Advertisement -

ಭಾರತದ ನಾಗರಿಕ ಹಕ್ಕುಗಳ ಹೋರಾಟಗಾರ್ತಿ ಮತ್ತು ಪತ್ರಕರ್ತೆ ತೀಸ್ತಾ ಸೆಟಲ್ವಾಡ್ ಅವರಿಗೆ ಬ್ರಿಟಿಷ್ ಕೊಲಂಬಿಯಾ ವಿಶ್ವವಿದ್ಯಾಲಯದ (ಯುಬಿಸಿ) ಪ್ರತಿಷ್ಠಿತ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ.

ತೀಸ್ತಾ ಸೆಟಲ್ವಾಡ್ ಅವರು ನಾಗರಿಕರ ನ್ಯಾಯ ಮತ್ತು ಶಾಂತಿ (ಸಿಜೆಪಿ) ವೇದಿಕೆಯ ಕಾರ್ಯದರ್ಶಿಯಾಗಿದ್ದಾರೆ. ಸಿಜೆಪಿ 2002 ರಲ್ಲಿ ಗುಜರಾತ್ ರಾಜ್ಯದಲ್ಲಿ ಕೋಮು ಹಿಂಸಾಚಾರಕ್ಕೆ ಒಳಗಾದವರಿಗೆ ನ್ಯಾಯಕ್ಕಾಗಿ ಹೋರಾಡಲು ರಚಿಸಲಾದ ಒಂದು ಸಂಘಟನೆಯಾಗಿದೆ. 2002 ರ ಗುಜರಾತ್‌ ಗಲಭೆ ಕುರಿತು ಸಿಜೆಪಿ ಸಹ-ಅರ್ಜಿದಾರರಾಗಿದ್ದು, ನರೇಂದ್ರ ಮೋದಿ ಮತ್ತು ಇತರ ಅರವತ್ತೆರಡು ರಾಜಕಾರಣಿಗಳು ಮತ್ತು ಸರ್ಕಾರಿ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ವಿಚಾರಣೆ ನಡೆಸಬೇಕೆಂದು ಕೋರಿದೆ.

ತೀಸ್ತಾ ತನ್ನ ಪತಿ ಜಾವೇದ್ ಆನಂದ್ ಅವರೊಂದಿಗೆ Cammunalisam cambat ನಿಯತಕಾಲಿಕದ ಸಹ-ಸ್ಥಾಪಕ ಮತ್ತು ಸಹ ಸಂಪಾದಕರಾಗಿದ್ದಾರೆ. ಇದು ಕೋಮು ಹಿಂಸಾಚಾರವನ್ನು ಉತ್ತೇಜಿಸುವ ಘಟಕಗಳ ಮೇಲೆ ಆಕ್ರಮಣ ಮಾಡುವ ಮೂಲಕ ಕೋಮು ಸೌಹಾರ್ದತೆಯನ್ನು ಬೆಳೆಸುತ್ತದೆ. ಅವರು ಪೀಪಲ್ಸ್ ಯೂನಿಯನ್ ಫಾರ್ ಹ್ಯೂಮನ್ ರೈಟ್ಸ್ (ಪಿಯುಹೆಚ್ಆರ್) ನ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

ತೀಸ್ತಾರವರು ಬರೆದ Foot Soldier of the Constitution ಪುಸ್ತಕವು ಬಹಳಷ್ಟು ಜನರ ಗಮನಸೆಳೆದಿದ್ದು ಕನ್ನಡ ಸೇರಿದಂತೆ ಹತ್ತಾರು ಭಾಷೆಗಳಿಗೆ ಅನುವಾದಗೊಂಡಿದೆ.

ತೀಸ್ತಾ ಸೆಟಲ್ವಾಡ್‌ರವರು ಕರ್ನಾಟಕದೊಂದಿಗೆ ನಿಕಟ ಸಂಬಂಧ ಹೊಂದಿದ್ದು, ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಹತ್ತಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಗೌರಿ ಲಂಕೇಶ್‌ರವರ ನಿಕಟವರ್ತಿಯಾಗಿದ್ದ ಇವರು ಕಳೆದ ವರ್ಷ ಖ್ಯಾತ ಪತ್ರಕರ್ತ ರವೀಶ್‌ ಕುಮಾರ್‌ರವರಿಗೆ ’ಗೌರಿ ಲಂಕೇಶ್‌’ ಪ್ರಶಸ್ತಿ ಪ್ರಧಾನ ಸಮಾರಂಭದ ಮುಖ್ಯ ಅತಿಥಿಯಾಗಿದ್ದರು.

2020 ರಲ್ಲಿ ಈ ಗೌರವ ಡಾಕ್ಟರೇಟ್ ಪಡೆದ 10 ಪ್ರಮುಖ ವ್ಯಕ್ತಿಗಳಲ್ಲಿ ತೀಸ್ತಾ ಒಬ್ಬರಾಗಿದ್ದಾರೆ. ಕೋವಿಡ್ -19 ಸಾಂಕ್ರಾಮಿಕದ ಮಧ್ಯೆ ಮೇ ಕೊನೆಯಲ್ಲಿ ವ್ಯಾಂಕೋವರ್‌ನಲ್ಲಿ ನಡೆಯಬೇಕಿದ್ದ ಸಮಾರಂಭವನ್ನು ಮುಂದೂಡಲಾಗಿದೆ.

ಲೇಖಕಿ ತೀಸ್ತಾ ಸೆಟಲ್ವಾಡ್ ಅವರು “ನಾಗರಿಕ ಹಕ್ಕುಗಳ ಹೋರಾಟಗಾರ್ತಿಯಾಗಿದ್ದು, ಗುಜರಾತ್ ರಾಜ್ಯದಲ್ಲಿ 2002 ರ ಸಾವಿರಾರು ಮುಸ್ಲಿಮರ ಹತ್ಯಾಕಾಂಡದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಅಭಿಯಾನದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಜಾತ್ಯತೀತವಾದಿಯಾಗಿ, ಅವರು ಭಾರತದಲ್ಲಿ ಮತ್ತು ವಿಶ್ವದ ಇತರ ಭಾಗಗಳಲ್ಲಿ ಬಹುಸಂಖ್ಯಾತತೆ ಮತ್ತು ಧಾರ್ಮಿಕ ಮತಾಂಧತೆಯನ್ನು ಬಹಿರಂಗಪಡಿಸಲು ಮಾನವ ಹಕ್ಕುಗಳು ಮತ್ತು ಕಾನೂನು ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಮಹಿಳೆಯರು, ಧಾರ್ಮಿಕ ಅಲ್ಪಸಂಖ್ಯಾತರು, LGBTQ ಸಮುದಾಯ, ಸ್ಥಳೀಯರ ಹಕ್ಕುಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

ಇದುವರೆಗೂ ಪಿಯುಸಿಎಲ್ ಜರ್ನಲಿಸಮ್ ಫಾರ್ ಹ್ಯೂಮನ್ ರೈಟ್ಸ್ ಅವಾರ್ಡ್ 1993, ಅತ್ಯುತ್ತಮ ಮಹಿಳಾ ಮಾಧ್ಯಮ ವ್ಯಕ್ತಿ, 1993 ರ ಚಮೇಲಿ ದೇವಿ ಜೈನ್ ಪ್ರಶಸ್ತಿ ಜೊತೆಗೆ ಮಹಾರಾಷ್ಟ್ರದಲ್ಲಿ ಸಾರ್ವಜನಿಕ ವ್ಯವಹಾರಕ್ಕಾಗಿ ಭಾರತ ಸರ್ಕಾರದಿಂದ 2007 ರಲ್ಲಿ ಪದ್ಮಶ್ರೀ ಪ್ರಶಸ್ತಿ ಪಡೆದಿದ್ದಾರೆ.

ಕೋಮುವಾದದ ವಿರುದ್ಧ, ಸೌಹಾರ್ದತೆಯ ಪರ ಸದಾ ದುಡಿಯುತ್ತಿರುವ ತೀಸ್ತಾ ಸೆಟಲ್ವಾದ್‌ ಮೇಲೆ ಪ್ರಭುತ್ವ ಕೆಂಗಣ್ಣು ಬೀರಿದೆ. ಅವರ ವಿರುದ್ಧ ಹತ್ತಾರು ಪ್ರಕರಣಗಳನ್ನು ದಾಖಲಿಸಿ ಹೋರಾತ ಹತ್ತಿಕ್ಕಲು ಯತ್ನಿಸುತ್ತಿದ್ದರೂ ಸಹ ಅದನ್ನು ಅವರು ದಿಟ್ಟವಾಗಿ ಎದುರಿಸುತ್ತಿದ್ದಾರೆ. ಅವರಿಗೆ ಗೌರವ ಡಾಕ್ಟರೇಟ್‌ ಪ್ರದಾನವಾಗುತ್ತಿರುವ ಸಂದರ್ಭದಲ್ಲಿ ನೂರಾರು ಹೋರಾಟಗಾರರು ಅಭಿನಂದನೆ ಸಲ್ಲಿಸಿದ್ದಾರೆ.


ಇದನ್ನೂ ಓದಿ: ಜರ್ಮನ್ ಬುಕ್‌ ಟ್ರೇಡ್‌ನ ಶಾಂತಿ ಪ್ರಶಸ್ತಿ ಗೆದ್ದ ಭಾರತೀಯ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ 

Also Read: UBC honors Teesta Setalvad, among nine others with honorary doctorate

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...