Homeಮುಖಪುಟದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ಗೆ ಗೌರವ ಡಾಕ್ಟರೇಟ್

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ಗೆ ಗೌರವ ಡಾಕ್ಟರೇಟ್

ತೀಸ್ತಾ ಸೆಟಲ್ವಾಡ್‌ರವರು ಕರ್ನಾಟಕದೊಂದಿಗೆ ನಿಕಟ ಸಂಬಂಧ ಹೊಂದಿದ್ದು, ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಹತ್ತಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಗೌರಿ ಲಂಕೇಶ್‌ರವರ ನಿಕಟವರ್ತಿಯಾಗಿದ್ದ ಇವರು ಕಳೆದ ವರ್ಷ ಖ್ಯಾತ ಪತ್ರಕರ್ತ ರವೀಶ್‌ ಕುಮಾರ್‌ರವರಿಗೆ ’ಗೌರಿ ಲಂಕೇಶ್‌’ ಪ್ರಶಸ್ತಿ ಪ್ರಧಾನ ಸಮಾರಂಭದ ಮುಖ್ಯ ಅತಿಥಿಯಾಗಿದ್ದರು.

- Advertisement -
- Advertisement -

ಭಾರತದ ನಾಗರಿಕ ಹಕ್ಕುಗಳ ಹೋರಾಟಗಾರ್ತಿ ಮತ್ತು ಪತ್ರಕರ್ತೆ ತೀಸ್ತಾ ಸೆಟಲ್ವಾಡ್ ಅವರಿಗೆ ಬ್ರಿಟಿಷ್ ಕೊಲಂಬಿಯಾ ವಿಶ್ವವಿದ್ಯಾಲಯದ (ಯುಬಿಸಿ) ಪ್ರತಿಷ್ಠಿತ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ.

ತೀಸ್ತಾ ಸೆಟಲ್ವಾಡ್ ಅವರು ನಾಗರಿಕರ ನ್ಯಾಯ ಮತ್ತು ಶಾಂತಿ (ಸಿಜೆಪಿ) ವೇದಿಕೆಯ ಕಾರ್ಯದರ್ಶಿಯಾಗಿದ್ದಾರೆ. ಸಿಜೆಪಿ 2002 ರಲ್ಲಿ ಗುಜರಾತ್ ರಾಜ್ಯದಲ್ಲಿ ಕೋಮು ಹಿಂಸಾಚಾರಕ್ಕೆ ಒಳಗಾದವರಿಗೆ ನ್ಯಾಯಕ್ಕಾಗಿ ಹೋರಾಡಲು ರಚಿಸಲಾದ ಒಂದು ಸಂಘಟನೆಯಾಗಿದೆ. 2002 ರ ಗುಜರಾತ್‌ ಗಲಭೆ ಕುರಿತು ಸಿಜೆಪಿ ಸಹ-ಅರ್ಜಿದಾರರಾಗಿದ್ದು, ನರೇಂದ್ರ ಮೋದಿ ಮತ್ತು ಇತರ ಅರವತ್ತೆರಡು ರಾಜಕಾರಣಿಗಳು ಮತ್ತು ಸರ್ಕಾರಿ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ವಿಚಾರಣೆ ನಡೆಸಬೇಕೆಂದು ಕೋರಿದೆ.

ತೀಸ್ತಾ ತನ್ನ ಪತಿ ಜಾವೇದ್ ಆನಂದ್ ಅವರೊಂದಿಗೆ Cammunalisam cambat ನಿಯತಕಾಲಿಕದ ಸಹ-ಸ್ಥಾಪಕ ಮತ್ತು ಸಹ ಸಂಪಾದಕರಾಗಿದ್ದಾರೆ. ಇದು ಕೋಮು ಹಿಂಸಾಚಾರವನ್ನು ಉತ್ತೇಜಿಸುವ ಘಟಕಗಳ ಮೇಲೆ ಆಕ್ರಮಣ ಮಾಡುವ ಮೂಲಕ ಕೋಮು ಸೌಹಾರ್ದತೆಯನ್ನು ಬೆಳೆಸುತ್ತದೆ. ಅವರು ಪೀಪಲ್ಸ್ ಯೂನಿಯನ್ ಫಾರ್ ಹ್ಯೂಮನ್ ರೈಟ್ಸ್ (ಪಿಯುಹೆಚ್ಆರ್) ನ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

ತೀಸ್ತಾರವರು ಬರೆದ Foot Soldier of the Constitution ಪುಸ್ತಕವು ಬಹಳಷ್ಟು ಜನರ ಗಮನಸೆಳೆದಿದ್ದು ಕನ್ನಡ ಸೇರಿದಂತೆ ಹತ್ತಾರು ಭಾಷೆಗಳಿಗೆ ಅನುವಾದಗೊಂಡಿದೆ.

ತೀಸ್ತಾ ಸೆಟಲ್ವಾಡ್‌ರವರು ಕರ್ನಾಟಕದೊಂದಿಗೆ ನಿಕಟ ಸಂಬಂಧ ಹೊಂದಿದ್ದು, ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಹತ್ತಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಗೌರಿ ಲಂಕೇಶ್‌ರವರ ನಿಕಟವರ್ತಿಯಾಗಿದ್ದ ಇವರು ಕಳೆದ ವರ್ಷ ಖ್ಯಾತ ಪತ್ರಕರ್ತ ರವೀಶ್‌ ಕುಮಾರ್‌ರವರಿಗೆ ’ಗೌರಿ ಲಂಕೇಶ್‌’ ಪ್ರಶಸ್ತಿ ಪ್ರಧಾನ ಸಮಾರಂಭದ ಮುಖ್ಯ ಅತಿಥಿಯಾಗಿದ್ದರು.

2020 ರಲ್ಲಿ ಈ ಗೌರವ ಡಾಕ್ಟರೇಟ್ ಪಡೆದ 10 ಪ್ರಮುಖ ವ್ಯಕ್ತಿಗಳಲ್ಲಿ ತೀಸ್ತಾ ಒಬ್ಬರಾಗಿದ್ದಾರೆ. ಕೋವಿಡ್ -19 ಸಾಂಕ್ರಾಮಿಕದ ಮಧ್ಯೆ ಮೇ ಕೊನೆಯಲ್ಲಿ ವ್ಯಾಂಕೋವರ್‌ನಲ್ಲಿ ನಡೆಯಬೇಕಿದ್ದ ಸಮಾರಂಭವನ್ನು ಮುಂದೂಡಲಾಗಿದೆ.

ಲೇಖಕಿ ತೀಸ್ತಾ ಸೆಟಲ್ವಾಡ್ ಅವರು “ನಾಗರಿಕ ಹಕ್ಕುಗಳ ಹೋರಾಟಗಾರ್ತಿಯಾಗಿದ್ದು, ಗುಜರಾತ್ ರಾಜ್ಯದಲ್ಲಿ 2002 ರ ಸಾವಿರಾರು ಮುಸ್ಲಿಮರ ಹತ್ಯಾಕಾಂಡದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಅಭಿಯಾನದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಜಾತ್ಯತೀತವಾದಿಯಾಗಿ, ಅವರು ಭಾರತದಲ್ಲಿ ಮತ್ತು ವಿಶ್ವದ ಇತರ ಭಾಗಗಳಲ್ಲಿ ಬಹುಸಂಖ್ಯಾತತೆ ಮತ್ತು ಧಾರ್ಮಿಕ ಮತಾಂಧತೆಯನ್ನು ಬಹಿರಂಗಪಡಿಸಲು ಮಾನವ ಹಕ್ಕುಗಳು ಮತ್ತು ಕಾನೂನು ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಮಹಿಳೆಯರು, ಧಾರ್ಮಿಕ ಅಲ್ಪಸಂಖ್ಯಾತರು, LGBTQ ಸಮುದಾಯ, ಸ್ಥಳೀಯರ ಹಕ್ಕುಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

ಇದುವರೆಗೂ ಪಿಯುಸಿಎಲ್ ಜರ್ನಲಿಸಮ್ ಫಾರ್ ಹ್ಯೂಮನ್ ರೈಟ್ಸ್ ಅವಾರ್ಡ್ 1993, ಅತ್ಯುತ್ತಮ ಮಹಿಳಾ ಮಾಧ್ಯಮ ವ್ಯಕ್ತಿ, 1993 ರ ಚಮೇಲಿ ದೇವಿ ಜೈನ್ ಪ್ರಶಸ್ತಿ ಜೊತೆಗೆ ಮಹಾರಾಷ್ಟ್ರದಲ್ಲಿ ಸಾರ್ವಜನಿಕ ವ್ಯವಹಾರಕ್ಕಾಗಿ ಭಾರತ ಸರ್ಕಾರದಿಂದ 2007 ರಲ್ಲಿ ಪದ್ಮಶ್ರೀ ಪ್ರಶಸ್ತಿ ಪಡೆದಿದ್ದಾರೆ.

ಕೋಮುವಾದದ ವಿರುದ್ಧ, ಸೌಹಾರ್ದತೆಯ ಪರ ಸದಾ ದುಡಿಯುತ್ತಿರುವ ತೀಸ್ತಾ ಸೆಟಲ್ವಾದ್‌ ಮೇಲೆ ಪ್ರಭುತ್ವ ಕೆಂಗಣ್ಣು ಬೀರಿದೆ. ಅವರ ವಿರುದ್ಧ ಹತ್ತಾರು ಪ್ರಕರಣಗಳನ್ನು ದಾಖಲಿಸಿ ಹೋರಾತ ಹತ್ತಿಕ್ಕಲು ಯತ್ನಿಸುತ್ತಿದ್ದರೂ ಸಹ ಅದನ್ನು ಅವರು ದಿಟ್ಟವಾಗಿ ಎದುರಿಸುತ್ತಿದ್ದಾರೆ. ಅವರಿಗೆ ಗೌರವ ಡಾಕ್ಟರೇಟ್‌ ಪ್ರದಾನವಾಗುತ್ತಿರುವ ಸಂದರ್ಭದಲ್ಲಿ ನೂರಾರು ಹೋರಾಟಗಾರರು ಅಭಿನಂದನೆ ಸಲ್ಲಿಸಿದ್ದಾರೆ.


ಇದನ್ನೂ ಓದಿ: ಜರ್ಮನ್ ಬುಕ್‌ ಟ್ರೇಡ್‌ನ ಶಾಂತಿ ಪ್ರಶಸ್ತಿ ಗೆದ್ದ ಭಾರತೀಯ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ 

Also Read: UBC honors Teesta Setalvad, among nine others with honorary doctorate

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಚುನಾವಣೆಯನ್ನು ನಿಯಂತ್ರಿಸಲು ಸಾಧ್ಯವಿಲ್ಲ..’; ಇವಿಎಂ-ವಿವಿಪ್ಯಾಟ್ ಪರಿಶೀಲನೆ ಆದೇಶವನ್ನು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

0
'ಇವಿಎಂ-ವಿವಿಪ್ಯಾಟ್ ಪರಿಶೀಲನಾ ಅರ್ಜಿ' ಕುರಿತ ತೀರ್ಪನ್ನು ಸುಪ್ರೀಂ ಕೋರ್ಟ್ ಇಂದು ಕಾಯ್ದಿರಿಸಿದ್ದು, 'ಮತ್ತೊಂದು ಸಾಂವಿಧಾನಿಕ ಪ್ರಾಧಿಕಾರದಿಂದ ನಡೆಸಬೇಕಾದ ಚುನಾವಣೆಗಳನ್ನು ನಿಯಂತ್ರಿಸಲು ಸಾಧ್ಯವಿಲ್ಲ' ಎಂದು ನ್ಯಾಯಾಲಯವು ಹೇಳಿತು. 2024ರ ಲೋಕಸಭಾ ಚುನಾವಣೆಯ ಎರಡನೇ ಹಂತವು...