Homeಮುಖಪುಟನಕಲಿ ಮದ್ಯ ದುರಂತ | 21 ದಿನಗೂಲಿ ಕಾರ್ಮಿಕರು ಸಾವು: ನಾಲ್ವರು ಅಧಿಕಾರಿಗಳು ಅಮಾನತು, 10...

ನಕಲಿ ಮದ್ಯ ದುರಂತ | 21 ದಿನಗೂಲಿ ಕಾರ್ಮಿಕರು ಸಾವು: ನಾಲ್ವರು ಅಧಿಕಾರಿಗಳು ಅಮಾನತು, 10 ಜನರ ಬಂಧನ

- Advertisement -
- Advertisement -

ಪಂಜಾಬ್‌ನ ಅಮೃತಸರದ ಮಜಿತಾ ಪ್ರದೇಶದಲ್ಲಿ ನಕಲಿ ವಿಷಪೂರಿತ ಮದ್ಯ ಸೇವಿಸಿ ಸಾವಿಗೀಡಾದವರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಸುಮಾರು 10 ಜನರು ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.

ಕಳೆದ ಭಾನುವಾರ ಸಂಜೆ ಮಜಿತಾ ಪ್ರದೇಶದ ಸುಮಾರು ಐದು ಹಳ್ಳಿಗಳ ಜನರು ನಕಲಿ ಮದ್ಯ ಸೇವಿಸಿದ್ದಾರೆ. ಈ ಬೆನ್ನಲ್ಲೇ ಹಲವರು ಅಸ್ವಸ್ಥಗೊಂಡಿದ್ದು, ಈ ಪೈಕಿ ಕೆಲವರು ಸೋಮವಾರ ಬೆಳಿಗ್ಗೆ ಸಾವಿಗೀಡಾಗಿದ್ದಾರೆ. ಆದರೆ, ಈ ವಿಚಾರವನ್ನು ಮುಚ್ಚಿಟ್ಟಿದ್ದ ಗ್ರಾಮಸ್ಥರು, ಮೃತರ ಅಂತ್ಯ ಸಂಸ್ಕಾರ ಮುಗಿಸಿದ್ದರು.

ಸೋಮವಾರ ಸಂಜೆಯ ವೇಳೆ ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು, ತಕ್ಷಣ ವೈದ್ಯರ ತಂಡವೊಂದನ್ನು ಹಳ್ಳಿಗಳಿಗೆ ಕಳಿಸಿದ್ದರು. ವೈದ್ಯರು ಮನೆ ಮನೆಗೆ ಹೋಗಿ ನಕಲಿ ಮದ್ಯ ಕುಡಿದವರನ್ನು ತಪಾಸಣೆ ನಡೆಸಿದ್ದರು ಮತ್ತು ಗಂಭೀರ ಸ್ಥಿತಿಯಲ್ಲಿದ್ದ ಕೆಲವರನ್ನು ಆಸ್ಪತ್ರೆಗೆ ಸೇರಿಸಿದ್ದರು. ಆದರೂ, ಮಂಗಳವಾರ ಸಂಜೆಯ ವೇಳೆ ಸಾವಿನ ಸಂಖ್ಯೆ 15 ಆಗಿತ್ತು. ಇಂದು ಮುಂಜಾನೆ ಅದು 21ಕ್ಕೆ ತಲುಪಿದೆ.

ಘಟನೆ ಸಂಬಂಧ 10 ಜನರನ್ನು ಬಂಧಿಸಲಾಗಿದೆ. ಮಜಿತಾ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಮತ್ತು ಸ್ಥಳೀಯ ಅಬಕಾರಿ ಮತ್ತು ತೆರಿಗೆ ಅಧಿಕಾರಿ (ಇಟಿಒ) ಸೇರಿದಂತೆ ನಾಲ್ವರು ಅಧಿಕಾರಿಗಳನ್ನು ಮಂಗಳವಾರ ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ.

ಸಾವಿಗೀಡಾದವರು ಮತ್ತು ಸೋಮವಾರದಿಂದ ಆಸ್ಪತ್ರೆಗೆ ದಾಖಲಾದ ಹೆಚ್ಚಿನ ಜನರು ದಿನಗೂಲಿ ಕಾರ್ಮಿಕರು. ಅಮೃತಸರದ ಗುರುನಾನಕ್ ದೇವ್ ಆಸ್ಪತ್ರೆಗೆ ದಾಖಲಾಗಿರುವ 10 ಜನರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಅಮೃತಸರ ಉಪ ಆಯುಕ್ತ ಸಾಕ್ಷಿ ಸಾಹ್ನಿ ಹೇಳಿದ್ದಾರೆ.

ಮಜಿಥಿಯಾದ ಭಂಗಲಿ, ಪಾತಾಳಪುರಿ, ಮರಾರಿ ಕಲನ್ ಮತ್ತು ಥೆರೆವಾಲ್ ಗ್ರಾಮಗಳಲ್ಲಿ ಸಾವುಗಳು ಸಂಭವಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಮೆಥನಾಲ್ ಎಂಬ ಅಗ್ಗದ ಕೈಗಾರಿಕಾ ಮದ್ಯವು ಸಣ್ಣ ಪ್ರಮಾಣದಲ್ಲಿಯೂ ಸಹ ಮಾರಕವಾಗಿದ್ದು, ಅದನ್ನು ಅಕ್ರಮ ಮದ್ಯವನ್ನು ತಯಾರಿಸಲು ಆನ್‌ಲೈನ್‌ನಲ್ಲಿ ದೊಡ್ಡ ಪ್ರಮಾಣದಲ್ಲಿ ಖರೀದಿಸಲಾಗಿದೆ ಎಂದು ತಿಳಿದುಬಂದಿದೆ.

ಜನ ಪ್ರತಿನಿಧಿಗಳು, ಪೊಲೀಸ್ ಮತ್ತು ಇತರ ಇಲಾಖೆಗಳ ಹಿರಿಯ ಅಧಿಕಾರಿಗಳು ದುರಂತ ಸಂಭವಿಸಿದ ಗ್ರಾಮಗಳಿಗೆ ಭೇಟಿ ನೀಡಿದ್ದಾರೆ. ವೈದ್ಯಕೀಯ ತಂಡವೊಂದನ್ನು ಗ್ರಾಮಗಳಲ್ಲಿ ನೇಮಿಸಲಾಗಿದೆ. ಅವರು ಯಾವುದೇ ಅನಾರೋಗ್ಯ ಲಕ್ಷಣ ಇಲ್ಲದಿದ್ದವರೂ ಸೇರಿದಂತೆ, ನಕಲಿ ಮದ್ಯ ಸೇವಿಸಿದ ಪ್ರತಿಯೊಬ್ಬರನ್ನು ಪರೀಕ್ಷೆ ನಡೆಸಿ ಆಸ್ಪತ್ರೆ ಸೇರಿಸುತ್ತಿದ್ದಾರೆ.

ದುರಂತ ಸ್ಥಳಕ್ಕೆ ಸಿಎಂ ಭೇಟಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಮದ್ಯ ದುರಂತ ಸಂಭವಿಸಿದ ಗ್ರಾಮಗಳಿಗೆ ತೆರಳಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಗಂಭೀರ ಸ್ಥಿತಿಯಲ್ಲಿರುವವರ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದಿದ್ದಾರೆ. ಮೃತ ಕುಟುಂಬಗಳಿಗೆ ಸರ್ಕಾರದಿಂದ ತಲಾ 10 ಲಕ್ಷ ರೂಪಾಯಿ ಆರ್ಥಿಕ ಸಹಾಯ ಘೋಷಿಸಿದ್ದಾರೆ. ಸರ್ಕಾರದಿಂದ ಎಲ್ಲಾ ರೀತಿಯ ಬೆಂಬಲ ಒದಗಿಸುವುದಾಗಿ ಭರವಸೆ ನೀಡಿದ್ದಾರೆ.

ಘಟನೆಗೆ ಕಾರಣರಾದವರನ್ನು ಬಂಧಿಸಲಾಗಿದೆ. ನಿರ್ಲಕ್ಷ್ಯ ತೋರಿದ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಪ್ರಕರಣದ ಹಿಂದೆ ಎಷ್ಟೇ ದೊಡ್ಡ ಪ್ರಭಾವಿಗಳು ಇದ್ದರೂ, ಅವರ ವಿರುದ್ದ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಪಾಕಿಸ್ತಾನದ ಡ್ರೋನ್ ದಾಳಿಯಲ್ಲಿ ಗಾಯಗೊಂಡಿದ್ದ ಪಂಜಾಬ್‌ನ ಮಹಿಳೆ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...