Homeಮುಖಪುಟನಕಲಿ ಮದ್ಯ ದುರಂತ | 21 ದಿನಗೂಲಿ ಕಾರ್ಮಿಕರು ಸಾವು: ನಾಲ್ವರು ಅಧಿಕಾರಿಗಳು ಅಮಾನತು, 10...

ನಕಲಿ ಮದ್ಯ ದುರಂತ | 21 ದಿನಗೂಲಿ ಕಾರ್ಮಿಕರು ಸಾವು: ನಾಲ್ವರು ಅಧಿಕಾರಿಗಳು ಅಮಾನತು, 10 ಜನರ ಬಂಧನ

- Advertisement -
- Advertisement -

ಪಂಜಾಬ್‌ನ ಅಮೃತಸರದ ಮಜಿತಾ ಪ್ರದೇಶದಲ್ಲಿ ನಕಲಿ ವಿಷಪೂರಿತ ಮದ್ಯ ಸೇವಿಸಿ ಸಾವಿಗೀಡಾದವರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಸುಮಾರು 10 ಜನರು ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.

ಕಳೆದ ಭಾನುವಾರ ಸಂಜೆ ಮಜಿತಾ ಪ್ರದೇಶದ ಸುಮಾರು ಐದು ಹಳ್ಳಿಗಳ ಜನರು ನಕಲಿ ಮದ್ಯ ಸೇವಿಸಿದ್ದಾರೆ. ಈ ಬೆನ್ನಲ್ಲೇ ಹಲವರು ಅಸ್ವಸ್ಥಗೊಂಡಿದ್ದು, ಈ ಪೈಕಿ ಕೆಲವರು ಸೋಮವಾರ ಬೆಳಿಗ್ಗೆ ಸಾವಿಗೀಡಾಗಿದ್ದಾರೆ. ಆದರೆ, ಈ ವಿಚಾರವನ್ನು ಮುಚ್ಚಿಟ್ಟಿದ್ದ ಗ್ರಾಮಸ್ಥರು, ಮೃತರ ಅಂತ್ಯ ಸಂಸ್ಕಾರ ಮುಗಿಸಿದ್ದರು.

ಸೋಮವಾರ ಸಂಜೆಯ ವೇಳೆ ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು, ತಕ್ಷಣ ವೈದ್ಯರ ತಂಡವೊಂದನ್ನು ಹಳ್ಳಿಗಳಿಗೆ ಕಳಿಸಿದ್ದರು. ವೈದ್ಯರು ಮನೆ ಮನೆಗೆ ಹೋಗಿ ನಕಲಿ ಮದ್ಯ ಕುಡಿದವರನ್ನು ತಪಾಸಣೆ ನಡೆಸಿದ್ದರು ಮತ್ತು ಗಂಭೀರ ಸ್ಥಿತಿಯಲ್ಲಿದ್ದ ಕೆಲವರನ್ನು ಆಸ್ಪತ್ರೆಗೆ ಸೇರಿಸಿದ್ದರು. ಆದರೂ, ಮಂಗಳವಾರ ಸಂಜೆಯ ವೇಳೆ ಸಾವಿನ ಸಂಖ್ಯೆ 15 ಆಗಿತ್ತು. ಇಂದು ಮುಂಜಾನೆ ಅದು 21ಕ್ಕೆ ತಲುಪಿದೆ.

ಘಟನೆ ಸಂಬಂಧ 10 ಜನರನ್ನು ಬಂಧಿಸಲಾಗಿದೆ. ಮಜಿತಾ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಮತ್ತು ಸ್ಥಳೀಯ ಅಬಕಾರಿ ಮತ್ತು ತೆರಿಗೆ ಅಧಿಕಾರಿ (ಇಟಿಒ) ಸೇರಿದಂತೆ ನಾಲ್ವರು ಅಧಿಕಾರಿಗಳನ್ನು ಮಂಗಳವಾರ ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ.

ಸಾವಿಗೀಡಾದವರು ಮತ್ತು ಸೋಮವಾರದಿಂದ ಆಸ್ಪತ್ರೆಗೆ ದಾಖಲಾದ ಹೆಚ್ಚಿನ ಜನರು ದಿನಗೂಲಿ ಕಾರ್ಮಿಕರು. ಅಮೃತಸರದ ಗುರುನಾನಕ್ ದೇವ್ ಆಸ್ಪತ್ರೆಗೆ ದಾಖಲಾಗಿರುವ 10 ಜನರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಅಮೃತಸರ ಉಪ ಆಯುಕ್ತ ಸಾಕ್ಷಿ ಸಾಹ್ನಿ ಹೇಳಿದ್ದಾರೆ.

ಮಜಿಥಿಯಾದ ಭಂಗಲಿ, ಪಾತಾಳಪುರಿ, ಮರಾರಿ ಕಲನ್ ಮತ್ತು ಥೆರೆವಾಲ್ ಗ್ರಾಮಗಳಲ್ಲಿ ಸಾವುಗಳು ಸಂಭವಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಮೆಥನಾಲ್ ಎಂಬ ಅಗ್ಗದ ಕೈಗಾರಿಕಾ ಮದ್ಯವು ಸಣ್ಣ ಪ್ರಮಾಣದಲ್ಲಿಯೂ ಸಹ ಮಾರಕವಾಗಿದ್ದು, ಅದನ್ನು ಅಕ್ರಮ ಮದ್ಯವನ್ನು ತಯಾರಿಸಲು ಆನ್‌ಲೈನ್‌ನಲ್ಲಿ ದೊಡ್ಡ ಪ್ರಮಾಣದಲ್ಲಿ ಖರೀದಿಸಲಾಗಿದೆ ಎಂದು ತಿಳಿದುಬಂದಿದೆ.

ಜನ ಪ್ರತಿನಿಧಿಗಳು, ಪೊಲೀಸ್ ಮತ್ತು ಇತರ ಇಲಾಖೆಗಳ ಹಿರಿಯ ಅಧಿಕಾರಿಗಳು ದುರಂತ ಸಂಭವಿಸಿದ ಗ್ರಾಮಗಳಿಗೆ ಭೇಟಿ ನೀಡಿದ್ದಾರೆ. ವೈದ್ಯಕೀಯ ತಂಡವೊಂದನ್ನು ಗ್ರಾಮಗಳಲ್ಲಿ ನೇಮಿಸಲಾಗಿದೆ. ಅವರು ಯಾವುದೇ ಅನಾರೋಗ್ಯ ಲಕ್ಷಣ ಇಲ್ಲದಿದ್ದವರೂ ಸೇರಿದಂತೆ, ನಕಲಿ ಮದ್ಯ ಸೇವಿಸಿದ ಪ್ರತಿಯೊಬ್ಬರನ್ನು ಪರೀಕ್ಷೆ ನಡೆಸಿ ಆಸ್ಪತ್ರೆ ಸೇರಿಸುತ್ತಿದ್ದಾರೆ.

ದುರಂತ ಸ್ಥಳಕ್ಕೆ ಸಿಎಂ ಭೇಟಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಮದ್ಯ ದುರಂತ ಸಂಭವಿಸಿದ ಗ್ರಾಮಗಳಿಗೆ ತೆರಳಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಗಂಭೀರ ಸ್ಥಿತಿಯಲ್ಲಿರುವವರ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದಿದ್ದಾರೆ. ಮೃತ ಕುಟುಂಬಗಳಿಗೆ ಸರ್ಕಾರದಿಂದ ತಲಾ 10 ಲಕ್ಷ ರೂಪಾಯಿ ಆರ್ಥಿಕ ಸಹಾಯ ಘೋಷಿಸಿದ್ದಾರೆ. ಸರ್ಕಾರದಿಂದ ಎಲ್ಲಾ ರೀತಿಯ ಬೆಂಬಲ ಒದಗಿಸುವುದಾಗಿ ಭರವಸೆ ನೀಡಿದ್ದಾರೆ.

ಘಟನೆಗೆ ಕಾರಣರಾದವರನ್ನು ಬಂಧಿಸಲಾಗಿದೆ. ನಿರ್ಲಕ್ಷ್ಯ ತೋರಿದ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಪ್ರಕರಣದ ಹಿಂದೆ ಎಷ್ಟೇ ದೊಡ್ಡ ಪ್ರಭಾವಿಗಳು ಇದ್ದರೂ, ಅವರ ವಿರುದ್ದ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಪಾಕಿಸ್ತಾನದ ಡ್ರೋನ್ ದಾಳಿಯಲ್ಲಿ ಗಾಯಗೊಂಡಿದ್ದ ಪಂಜಾಬ್‌ನ ಮಹಿಳೆ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದೊಂದಿಗೆ ಮಾತುಕತೆಗೆ ಇರಾನ್ ಸಹಮತ: ಶರಣಾಗತಿಗೆ ನಿರಾಕರಿಸಿದ ಅಧ್ಯಕ್ಷ ಪೆಝೇಷ್ಕಿಯಾನ್

ತನ್ನ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಮಾತುಕತೆಯ ಮಾರ್ಗವನ್ನು ಮುಂದುವರಿಸಲು ಇರಾನ್ ಬದ್ಧವಾಗಿದೆ ಎಂದು ದೇಶದ ಅಧ್ಯಕ್ಷ ಮಸೂದ್ ಪೆಝೇಷ್ಕಿಯಾನ್ ಪುನರುಚ್ಚರಿಸಿದ್ದು, ಯಾವುದೇ ಕಾರಣಕ್ಕೂ ಟೆಹ್ರಾನ್ ಶರಣಾಗತಿಗೆ ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ (ಆಗಸ್ಟ್ 7) ತಮ್ಮ...

ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಪಾಕಿಸ್ತಾನಿ ಎಂದ ಪ್ರಕರಣ : ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಹೈಕೋರ್ಟ್‌ ತರಾಟೆ

ಕಲಬುರಗಿಯಲ್ಲಿ ನಡೆದಿದ್ದ ಪ್ರತಿಭಟನೆಯ ವೇಳೆ ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಭಾರತೀಯರೋ ಅಥವಾ ಪಾಕಿಸ್ತಾನಿಯೋ ಎಂದಿದ್ದ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಎನ್‌. ರವಿಕುಮಾರ್‌ ವಿರುದ್ಧ ಶುಕ್ರವಾರ (ಆ.7) ಕರ್ನಾಟಕ ಹೈಕೋರ್ಟ್‌...

ಸಿಲಿಕಾನ್ ಸಿಟಿಯ ಐಷಾರಾಮಿ ಹೋಟೆಲ್‌ಗಳ ಮೇಲೆ ದಾಳಿ: ಅಡುಗೆ ಮನೆಯಲ್ಲಿ ಸಿಕ್ತು 250.KG ಕೊಳೆತ ಮಾಂಸ ಮತ್ತು ತರಕಾರಿ

ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟದ ವಿರುದ್ಧ ಸಮರ ಸಾರಿದ್ದ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ (FSDA) ಇಲಾಖೆ, ಶುಕ್ರವಾರ ಬೆಂಗಳೂರಿನ ಫೈವ್-ಸ್ಟಾರ್ ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ ನಡೆಸಿ...

‘ರಷ್ಯಾ ನಿರ್ಬಂಧ ಮಸೂದೆ’ ಅಂಗೀಕರಿಸಿದ ಅಮೆರಿಕ ಸೆನೆಟ್: ಭಾರತದ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಎಚ್ಚರಿಕೆ

ಉಕ್ರೇನ್ ವಿರುದ್ಧದ ಯುದ್ಧಕ್ಕೆ ಆರ್ಥಿಕ ನೆರವು ಸಿಗದಂತೆ ಮಾಡಲು, ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಹೆಚ್ಚಾಗಿ ಖರೀದಿಸುವ ಭಾರತ ಮತ್ತು ಚೀನಾದಂತಹ ಪ್ರಮುಖ ದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕದ ಸೆನೆಟ್‌ ಬೃಹತ್‌ ಬೆಂಬಲದೊಂದಿಗೆ ಹೊಸ ಮಸೂದೆಯನ್ನು...

ಆರ್‌ಎಸ್‌ಎಸ್‌ ಗೂಂಡಾಗಳಿಗೆ ಶಾಯಿ ಇರುವುದು ಬರೆಯಲು, ಎರಚಲು ಅಲ್ಲ ಎಂಬುವುದು ಗೊತ್ತಿಲ್ಲ, ನಮ್ಮ ಸಂಕಲ್ಪಕ್ಕೆ ಮಿತಿಯಿಲ್ಲ : ನೇಹಾ ಬೋರಾ

ಜಾರ್ಖಂಡ್ ವಿದ್ಯಾರ್ಥಿ ಹೋರಾಟವನ್ನು ಬೆಂಬಲಿಸಲು ಹೋಗಿದ್ದ ವೇಳೆ ತನ್ನ ಮೇಲೆ ಶಾಯಿ ಎರಚಿರುವುದಕ್ಕೆ ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ...

ಮನೆಗೆ ಬರುವ ಸಂದರ್ಶಕರೊಂದಿಗೆ ಪಿಎಸ್‌ಐ ‘ಅಸಭ್ಯ’ ವರ್ತನೆ; ಆಕ್ರೋಶ ವ್ಯಕ್ತಪಡಿಸಿದ ಅಭಿಜೀತ್ ದಿಪ್ಕೆ

ಛತ್ರಪತಿ ಸಂಭಾಜಿನಗರದಲ್ಲಿರುವ ತಮ್ಮ ಮನೆಯಲ್ಲಿ ಭದ್ರತಾ ಪಡೆಯ ಭಾಗವಾಗಿ ನಿಯೋಜಿಸಲಾದ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಪಿಎಸ್‌ಐ) ಅವರು, ಜನರು ನಮ್ಮನ್ನು ಭೇಟಿಯಾಗದಂತೆ ತಡೆಯುತ್ತಿದ್ದಾರೆ ಎಂದು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದಿಪ್ಕೆ...

ಮೋಹನ್ ಭಾಗವತ್‌ ದೇಶಪ್ರವೇಶ ನಿಷೇಧಿಸುವಂತೆ ಕೆನಡಾದ 40ಕ್ಕೂ ಹೆಚ್ಚು ಸಂಘಟನೆಗಳಿಂದ ಸರ್ಕಾರಕ್ಕೆ ಒತ್ತಾಯ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್‌ ದೇಶದೊಳಗೆ ಪ್ರವೇಶಿಸುವುದನ್ನು ತಡೆಯುವಂತೆ ಕೆನಡಾದ 40ಕ್ಕೂ ಹೆಚ್ಚು ನಾಗರಿಕ, ಮಾನವ ಹಕ್ಕುಗಳು, ಕಾರ್ಮಿಕ ಮತ್ತು ಧಾರ್ಮಿಕ ಸಂಘಟನೆಗಳು ಅಲ್ಲಿನ ಸಾರ್ವಜನಿಕ ಸುರಕ್ಷತಾ ಸಚಿವರಿಗೆ...

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...