Homeಮುಖಪುಟನಕಲಿ ಮದ್ಯ ದುರಂತ | 21 ದಿನಗೂಲಿ ಕಾರ್ಮಿಕರು ಸಾವು: ನಾಲ್ವರು ಅಧಿಕಾರಿಗಳು ಅಮಾನತು, 10...

ನಕಲಿ ಮದ್ಯ ದುರಂತ | 21 ದಿನಗೂಲಿ ಕಾರ್ಮಿಕರು ಸಾವು: ನಾಲ್ವರು ಅಧಿಕಾರಿಗಳು ಅಮಾನತು, 10 ಜನರ ಬಂಧನ

- Advertisement -
- Advertisement -

ಪಂಜಾಬ್‌ನ ಅಮೃತಸರದ ಮಜಿತಾ ಪ್ರದೇಶದಲ್ಲಿ ನಕಲಿ ವಿಷಪೂರಿತ ಮದ್ಯ ಸೇವಿಸಿ ಸಾವಿಗೀಡಾದವರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಸುಮಾರು 10 ಜನರು ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.

ಕಳೆದ ಭಾನುವಾರ ಸಂಜೆ ಮಜಿತಾ ಪ್ರದೇಶದ ಸುಮಾರು ಐದು ಹಳ್ಳಿಗಳ ಜನರು ನಕಲಿ ಮದ್ಯ ಸೇವಿಸಿದ್ದಾರೆ. ಈ ಬೆನ್ನಲ್ಲೇ ಹಲವರು ಅಸ್ವಸ್ಥಗೊಂಡಿದ್ದು, ಈ ಪೈಕಿ ಕೆಲವರು ಸೋಮವಾರ ಬೆಳಿಗ್ಗೆ ಸಾವಿಗೀಡಾಗಿದ್ದಾರೆ. ಆದರೆ, ಈ ವಿಚಾರವನ್ನು ಮುಚ್ಚಿಟ್ಟಿದ್ದ ಗ್ರಾಮಸ್ಥರು, ಮೃತರ ಅಂತ್ಯ ಸಂಸ್ಕಾರ ಮುಗಿಸಿದ್ದರು.

ಸೋಮವಾರ ಸಂಜೆಯ ವೇಳೆ ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು, ತಕ್ಷಣ ವೈದ್ಯರ ತಂಡವೊಂದನ್ನು ಹಳ್ಳಿಗಳಿಗೆ ಕಳಿಸಿದ್ದರು. ವೈದ್ಯರು ಮನೆ ಮನೆಗೆ ಹೋಗಿ ನಕಲಿ ಮದ್ಯ ಕುಡಿದವರನ್ನು ತಪಾಸಣೆ ನಡೆಸಿದ್ದರು ಮತ್ತು ಗಂಭೀರ ಸ್ಥಿತಿಯಲ್ಲಿದ್ದ ಕೆಲವರನ್ನು ಆಸ್ಪತ್ರೆಗೆ ಸೇರಿಸಿದ್ದರು. ಆದರೂ, ಮಂಗಳವಾರ ಸಂಜೆಯ ವೇಳೆ ಸಾವಿನ ಸಂಖ್ಯೆ 15 ಆಗಿತ್ತು. ಇಂದು ಮುಂಜಾನೆ ಅದು 21ಕ್ಕೆ ತಲುಪಿದೆ.

ಘಟನೆ ಸಂಬಂಧ 10 ಜನರನ್ನು ಬಂಧಿಸಲಾಗಿದೆ. ಮಜಿತಾ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಮತ್ತು ಸ್ಥಳೀಯ ಅಬಕಾರಿ ಮತ್ತು ತೆರಿಗೆ ಅಧಿಕಾರಿ (ಇಟಿಒ) ಸೇರಿದಂತೆ ನಾಲ್ವರು ಅಧಿಕಾರಿಗಳನ್ನು ಮಂಗಳವಾರ ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ.

ಸಾವಿಗೀಡಾದವರು ಮತ್ತು ಸೋಮವಾರದಿಂದ ಆಸ್ಪತ್ರೆಗೆ ದಾಖಲಾದ ಹೆಚ್ಚಿನ ಜನರು ದಿನಗೂಲಿ ಕಾರ್ಮಿಕರು. ಅಮೃತಸರದ ಗುರುನಾನಕ್ ದೇವ್ ಆಸ್ಪತ್ರೆಗೆ ದಾಖಲಾಗಿರುವ 10 ಜನರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಅಮೃತಸರ ಉಪ ಆಯುಕ್ತ ಸಾಕ್ಷಿ ಸಾಹ್ನಿ ಹೇಳಿದ್ದಾರೆ.

ಮಜಿಥಿಯಾದ ಭಂಗಲಿ, ಪಾತಾಳಪುರಿ, ಮರಾರಿ ಕಲನ್ ಮತ್ತು ಥೆರೆವಾಲ್ ಗ್ರಾಮಗಳಲ್ಲಿ ಸಾವುಗಳು ಸಂಭವಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಮೆಥನಾಲ್ ಎಂಬ ಅಗ್ಗದ ಕೈಗಾರಿಕಾ ಮದ್ಯವು ಸಣ್ಣ ಪ್ರಮಾಣದಲ್ಲಿಯೂ ಸಹ ಮಾರಕವಾಗಿದ್ದು, ಅದನ್ನು ಅಕ್ರಮ ಮದ್ಯವನ್ನು ತಯಾರಿಸಲು ಆನ್‌ಲೈನ್‌ನಲ್ಲಿ ದೊಡ್ಡ ಪ್ರಮಾಣದಲ್ಲಿ ಖರೀದಿಸಲಾಗಿದೆ ಎಂದು ತಿಳಿದುಬಂದಿದೆ.

ಜನ ಪ್ರತಿನಿಧಿಗಳು, ಪೊಲೀಸ್ ಮತ್ತು ಇತರ ಇಲಾಖೆಗಳ ಹಿರಿಯ ಅಧಿಕಾರಿಗಳು ದುರಂತ ಸಂಭವಿಸಿದ ಗ್ರಾಮಗಳಿಗೆ ಭೇಟಿ ನೀಡಿದ್ದಾರೆ. ವೈದ್ಯಕೀಯ ತಂಡವೊಂದನ್ನು ಗ್ರಾಮಗಳಲ್ಲಿ ನೇಮಿಸಲಾಗಿದೆ. ಅವರು ಯಾವುದೇ ಅನಾರೋಗ್ಯ ಲಕ್ಷಣ ಇಲ್ಲದಿದ್ದವರೂ ಸೇರಿದಂತೆ, ನಕಲಿ ಮದ್ಯ ಸೇವಿಸಿದ ಪ್ರತಿಯೊಬ್ಬರನ್ನು ಪರೀಕ್ಷೆ ನಡೆಸಿ ಆಸ್ಪತ್ರೆ ಸೇರಿಸುತ್ತಿದ್ದಾರೆ.

ದುರಂತ ಸ್ಥಳಕ್ಕೆ ಸಿಎಂ ಭೇಟಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಮದ್ಯ ದುರಂತ ಸಂಭವಿಸಿದ ಗ್ರಾಮಗಳಿಗೆ ತೆರಳಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಗಂಭೀರ ಸ್ಥಿತಿಯಲ್ಲಿರುವವರ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದಿದ್ದಾರೆ. ಮೃತ ಕುಟುಂಬಗಳಿಗೆ ಸರ್ಕಾರದಿಂದ ತಲಾ 10 ಲಕ್ಷ ರೂಪಾಯಿ ಆರ್ಥಿಕ ಸಹಾಯ ಘೋಷಿಸಿದ್ದಾರೆ. ಸರ್ಕಾರದಿಂದ ಎಲ್ಲಾ ರೀತಿಯ ಬೆಂಬಲ ಒದಗಿಸುವುದಾಗಿ ಭರವಸೆ ನೀಡಿದ್ದಾರೆ.

ಘಟನೆಗೆ ಕಾರಣರಾದವರನ್ನು ಬಂಧಿಸಲಾಗಿದೆ. ನಿರ್ಲಕ್ಷ್ಯ ತೋರಿದ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಪ್ರಕರಣದ ಹಿಂದೆ ಎಷ್ಟೇ ದೊಡ್ಡ ಪ್ರಭಾವಿಗಳು ಇದ್ದರೂ, ಅವರ ವಿರುದ್ದ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಪಾಕಿಸ್ತಾನದ ಡ್ರೋನ್ ದಾಳಿಯಲ್ಲಿ ಗಾಯಗೊಂಡಿದ್ದ ಪಂಜಾಬ್‌ನ ಮಹಿಳೆ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...