Homeರಾಷ್ಟ್ರೀಯಸಾಮಾಜಿಕ ಮಾಧ್ಯಮಗಳಲ್ಲಿ ನೂಪುರ್ ಶರ್ಮಾ ಬೆಂಬಲಿಸಿದ್ದಕ್ಕೆ ರಾಜಸ್ಥಾನದ ಉದಯಪುರದಲ್ಲಿ ಭೀಕರ ಹತ್ಯೆ; ಆರೋಪಿಗಳ ಬಂಧನ

ಸಾಮಾಜಿಕ ಮಾಧ್ಯಮಗಳಲ್ಲಿ ನೂಪುರ್ ಶರ್ಮಾ ಬೆಂಬಲಿಸಿದ್ದಕ್ಕೆ ರಾಜಸ್ಥಾನದ ಉದಯಪುರದಲ್ಲಿ ಭೀಕರ ಹತ್ಯೆ; ಆರೋಪಿಗಳ ಬಂಧನ

- Advertisement -
- Advertisement -

ರಾಜಸ್ಥಾನದ ಉದಯಪುರದಲ್ಲಿ ಮಂಗಳವಾರ ಹಾಡ ಹಗಲೇ ಅಂಗಡಿಯವರೊಬ್ಬರನ್ನು ಹತ್ಯೆ ಮಾಡಲಾಗಿದ್ದು, ನಗರದಲ್ಲಿ ಉದ್ವಿಗ್ನತೆ ಉಂಟಾಗಿದೆ. ಕನ್ಹಯ್ಯಾ ಲಾಲ್ ಎಂಬ ಅಂಗಡಿಯವರನ್ನು ಇಬ್ಬರು ದುಷ್ಕರ್ಮಿಗಳು ಅವರ ತಲೆಯನ್ನು ಕೊಯ್ದು ಹತ್ಯೆ ಮಾಡಿದ್ದಾರೆ.

ಅಮಾನತುಗೊಂಡ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿದ್ದಕ್ಕಾಗಿ ವ್ಯಕ್ತಿಯನ್ನು ಕೊಂದಿರುವುದಾಗಿ, ಕೊಲೆಯ ನಂತರ ದುಷ್ಕರ್ಮಿಗಳು ವಿಡಿಯೊದಲ್ಲಿ ಒಪ್ಪಿಕೊಂಡಿದ್ದಾರೆ. ಆರೋಪಿಗಳನ್ನು ರಾಜ್‌ಸಮಂದ್ ಜಿಲ್ಲೆಯ ಭೀಮ್ ಪ್ರದೇಶದಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಪರಾರಿಯಾಗಲು ಯತ್ನಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದುಷ್ಕರ್ಮಿಗಳಿಬ್ಬರು ಟೈಲರ್ ಅಂಗಡಿಗೆ ಪ್ರವೇಶಿಸಿ ಚಾಕುವಿನಿಂದ ದಾಳಿ ನಡೆಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ದುಷ್ಕರ್ಮಿಗಳಿಬ್ಬರೂ ಪ್ರತ್ಯೇಕವಾಗಿ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಹೇಳಿದೆ.

ಇದನ್ನೂ ಓದಿ: ‘ಬಿಜೆಪಿ ಪದಾಧಿಕಾರಿಗಳ ಆಕ್ಷೇಪಾರ್ಹ ಹೇಳಿಕೆಗೆ ವಿರೋಧವಿದೆ’: ಪ್ರವಾದಿ ನಿಂದನೆಯನ್ನು ಖಂಡಿಸಿದ ಅಮೆರಿಕ

ಇಬ್ಬರೂ ಕೊಲೆಯನ್ನು ಒಪ್ಪಿಕೊಂಡಿದ್ದು, ಪ್ರಧಾನಿ ನರೇಂದ್ರ ಮೋದಿಗೆ ಬೆದರಿಕೆ ಹಾಕಿದ್ದಾರೆ. ದುಷ್ಕರ್ಮಿಗಳಲ್ಲಿ ಒಬ್ಬ ವ್ಯಕ್ತಿ ತಾವು ನಡೆಸಿದ ಕೃತ್ಯದ ಉದ್ದೇಶವನ್ನು ವಿವರಿಸಿದ್ದಾನೆ.

ಶಾಂತಿಗಾಗಿ ಸಿಎಂ ಮನವಿ; ಮುಂದುವರಿದ ಪೊಲೀಸ್ ತನಿಖೆ 

“ಭೀಕರವಾಗಿ ಕೊಲೆ ಮಾಡಲಾಗಿದೆ. ಘಟನೆಯ ಬಗ್ಗೆ ಸಂಪೂರ್ಣ ತನಿಖೆ ನಡೆಸಲಾಗುವುದು. ಕೆಲವು ಆರೋಪಿಗಳನ್ನು ಗುರುತಿಸಲಾಗಿದೆ” ಎಂದು ಉದಯಪುರದ ಪೊಲೀಸ್‌ ಅಧೀಕ್ಷಕರು ಹೇಳಿದ್ದಾರೆ.

ಹತ್ಯೆಯೂ ಉದಯಪುರದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದ್ದು, ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಶಾಂತಿಗಾಗಿ ಜನತೆಯೊಂದಿಗೆ ಮನವಿ ಮಾಡಿದ್ದಾರೆ.

“ಉದಯ್‌ಪುರದಲ್ಲಿ ನಡೆದ ಯುವಕನ ಘೋರ ಹತ್ಯೆಯನ್ನು ನಾನು ಖಂಡಿಸುತ್ತೇನೆ. ಈ ಘಟನೆಯಲ್ಲಿ ಭಾಗಿಯಾಗಿರುವ ಎಲ್ಲಾ ಕ್ರಿಮಿನಲ್‌ಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು. ಪೊಲೀಸರು ಅಪರಾಧದ ಬುಡಕ್ಕೆ ಹೋಗುತ್ತಾರೆ. ಶಾಂತಿ ಕಾಪಾಡುವಂತೆ ನಾನು ಎಲ್ಲಾ ಪಕ್ಷಗಳಿಗೆ ಮನವಿ ಮಾಡುತ್ತೇನೆ” ಎಂದು ಗೆಹ್ಲೋಟ್ ಹೇಳಿದ್ದಾರೆ.

ಇದನ್ನೂ ಓದಿ: ಪ್ರವಾದಿ ನಿಂದನೆ: ಮುಂಬೈ ಪೊಲೀಸರ ಕೈಗೆ ಸಿಗದ ಅಮಾನತುಗೊಂಡ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ

ಪ್ರತಿಭಟನೆ, ಇಂಟರ್ನೆಟ್‌ ಅಮಾನತು

ಘಟನೆಯ ನಂತರ, ಉದಯಪುರದಾದ್ಯಂತ ಪ್ರತಿಭಟನೆಗಳು ಭುಗಿಲೆದ್ದಿದ್ದು, ಮಾರುಕಟ್ಟೆಗಳನ್ನು ಮುಚ್ಚಿಸಲಾಗಿದೆ. ಹಿಂಸಾತ್ಮಕ ಕೃತ್ಯದ ವಿರುದ್ಧ ಪ್ರತಿಭಟನಾಕಾರರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಜಿಲ್ಲಾಧಿಕಾರಿ ತಾರಾಚಂದ್ ಮೀನಾ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ಚೌಧರಿ ಸ್ಥಳಕ್ಕೆ ಆಗಮಿಸಿದ್ದಾರೆ. ಈ ಮಧ್ಯೆ, ಮುಂದಿನ 24 ಗಂಟೆಗಳ ಕಾಲ ಪ್ರದೇಶದಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...