Homeಮುಖಪುಟವೈದ್ಯರ ಮೇಲೆ ಮಾರಣಾಂತಿಕ ಹಲ್ಲೆ, ಕಠಿಣ ಕಾಯ್ದೆ ರೂಪಿಸಲು IMA ಆಗ್ರಹ

ವೈದ್ಯರ ಮೇಲೆ ಮಾರಣಾಂತಿಕ ಹಲ್ಲೆ, ಕಠಿಣ ಕಾಯ್ದೆ ರೂಪಿಸಲು IMA ಆಗ್ರಹ

- Advertisement -
- Advertisement -

ಕೊರೊನಾ ಸಾವುಗಳು ಹೆಚ್ಚಾಗುತ್ತಿರುವಂತೆಯೇ ವೈದ್ಯರ ಮೇಲೆ ಹಲ್ಲೆಗಳು ಹೆಚ್ಚಾಗುತ್ತಿವೆ. ಗುವಾಹಟಿಯಿಂದ 140 ಕಿಲೋಮೀಟರ್ ದೂರದಲ್ಲಿರುವ ಅಸ್ಸಾಂನ ಹೊಜೈನಲ್ಲಿರುವ ಕೋವಿಡ್ ಆರೈಕೆ ಕೇಂದ್ರದಲ್ಲಿ ವೈದ್ಯರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.

ಆಮ್ಲಜನಕದ ಕೊರತೆಯಿಂದಾಗಿ ಸಾವನ್ನಪ್ಪಿದ ಕೊರೊನಾ ಸೋಂಕಿತ ರೋಗಿಯ ಸಂಬಂಧಿಕರು, ವೈದ್ಯರ ಮೇಲೆ ಲೋಹದ ಕಸದ ಡಬ್ಬಿ ಮತ್ತು ಇಟ್ಟಿಗೆಗಳಿಂದ ಮನ ಬಂದಂತೆ ಥಳಿಸಿದ್ದಾರೆ. ಮೃತನ ಸಂಬಂಧಿಕರ ಜೊತೆಗೆ ವೈದ್ಯರ ಮೇಲೆ ಸ್ಥಳೀಯರು ಹಲ್ಲೆ ಮಾಡಿದ್ದಾರೆ. ವೈದ್ಯರ ಮೇಲಿನ ಮಾರಣಾಂತಿಕ ಹಲ್ಲೆಯ ವಿಡಿಯೋ ತುಣುಕು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಘಟನೆಯಲ್ಲಿ ಮುಖ್ಯ ಆರೋಪಿಗಳು ಸೇರಿದಂತೆ 24 ಜನರನ್ನು ಬಂಧಿಸಲಾಗಿದೆ.

ಹೊಜೈನಲ್ಲಿರುವ ಉದಾಲಿ ಮಾಡೆಲ್ ಆಸ್ಪತ್ರೆಯಲ್ಲಿ ಮಂಗಳವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಡಾ. ಸೆಯೇಜ್ ಕುಮಾರ್ ಸೇನಾಪತಿ ಕರ್ತವ್ಯದಲ್ಲಿದ್ದರು. ಪಿಪಾಲ್ ಪುಖುರಿ ಗ್ರಾಮದ ನಿವಾಸಿ ಗಿಯಾಜ್ ಉದ್ದೀನ್ ಎಂಬ ರೋಗಿಯು ಕೊರೊನಾ ಸಂಬಂಧಿತ ತೊಂದರೆಗಳಿಂದಾಗಿ ಮಂಗಳವಾರ ಮೃತಪಟ್ಟಿದ್ದರು.

ಇದನ್ನೂ ಓದಿ: ರಾಜ್ಯದಲ್ಲಿ ಬಿಜೆಪಿಗೂ ಲಸಿಕೆಗೂ ಮುಗಿಯದ ನಂಟು, ಮತ್ತೆ ವಿವಾದದಲ್ಲಿ ಬಿಜೆಪಿ ಶಾಸಕ

 

“ರೋಗಿಯ ಸ್ಥಿತಿ ಗಂಭೀರವಾಗಿದೆ ಮತ್ತು ಬೆಳಿಗ್ಗೆಯಿಂದ ಮೂತ್ರ ವಿಸರ್ಜಿಸಿಲ್ಲ ಎಂದು ನನಗೆ ಅಟೆಂಡರ್‌ ತಿಳಿಸಿದರು. ನಾನು ಕೋಣೆಗೆ ಹೋಗಿ ರೋಗಿಯನ್ನು ಪರೀಕ್ಷಿಸಿದೆ. ಆತ ಮೃತಪಟ್ಟಿದ್ದಾನೆ ತಿಳಿಯಿತು. ನಾನು ಸುದ್ದಿ ತಿಳಿಸುತ್ತಿದ್ದಂತೆ, ಮೃತನ ಸಂಬಂಧಿ ನನ್ನನ್ನು ನಿಂದಿಸಲು ಪ್ರಾರಂಭಿಸಿದರು” ಎಂದು ಡಾ.ಸೇನಾಪತಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಕೊರೊನಾ ಸೋಂಕಿತ ರೋಗಿಯ ಸಾವಿನಿಂದ ಬೇಸತ್ತ ಜನಸಮೂಹವು ಆಸ್ಪತ್ರೆಯ ಮೇಲೆ ದಾಳಿ ಮಾಡಿತು. ಹೆಚ್ಚಿನ ವೈದ್ಯಕೀಯ ಅಧಿಕಾರಿಗಳು ಇವರಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಆದರೆ, ಡಾ. ಸೇನಾಪತಿ ತನ್ನನ್ನು ಕೋಣೆ ಒಳಗೆ ಸೇರಿಕೊಂಡಿದ್ದರು, ಆದರೆ ಜನರ ಗುಂಪು ಕೊಠಡಿಗೆ ನುಗ್ಗಿ ತೀವ್ರವಾಗಿ ಹಲ್ಲೆ ಮಾಡಿದೆ ಎಂದು ವರದಿಯಾಗಿದೆ.

“ಉದ್ರಿಕ್ತ ಗುಂಪು ಆಸ್ಪತ್ರೆಯನ್ನು ದರೋಡೆ ಮಾಡಿದರು, ನಾವು (ಸಿಬ್ಬಂದಿ) ಸುರಕ್ಷತೆಗಾಗಿ ಓಡಿದೆವು. ನಾನು ಒಂದು ಕೊಠಡಿಗೆ ಸೇರಿಕೊಂಡು ಬಚಾವಾಗಲು ಪ್ರಯತ್ನಿಸಿದೆ. ಆದರೆ, ಅವರು ನನ್ನನ್ನು ಕಂಡು ನನ್ನ ಮೇಲೆ ಹಲ್ಲೆ ನಡೆಸಿದರು. ಅವರು ನನ್ನ ಚಿನ್ನದ ಸರ, ನನ್ನ ಉಂಗುರ ಮತ್ತು ನನ್ನ ಮೊಬೈಲ್ ಕಸಿದುಕೊಂಡರು. ಅವರು 30 ಜನರಿದ್ದರು” ಎಂದು ಡಾ.ಸೇನಾಪತಿ ಹೇಳಿದ್ದಾರೆ.

ವೈದ್ಯರ ಮೇಲಿನ ಹಲ್ಲೆ ವ್ಯಾಪಕ ಖಂಡನೆಗೆ ಕಾರಣವಾಗಿದ್ದು, ಈ ಘಟನೆಯನ್ನು ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಜೆ.ಜಯಲಾಲ್ ಖಂಡಿಸಿದ್ದಾರೆ. ಅಸ್ಸಾಂ ವೈದ್ಯಕೀಯ ಸೇವೆಗಳ ಸಂಘದ (ಎಎಂಎಸ್ಎ) ಅಸ್ಸಾಂ ಅಧ್ಯಾಯದ ಸದಸ್ಯರು ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಸರ್ಕಾರಿ ಎಲ್ಲಾ ವೈದ್ಯಕೀಯ ಸೌಲಭ್ಯಗಳಲ್ಲಿ ಅವರು ಇಂದು ಹೊರರೋಗಿ ವಿಭಾಗ (ಒಪಿಡಿ) ಸೇವೆಗಳನ್ನು ಬಹಿಷ್ಕರಿಸಿದ್ದಾರೆ.

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ದಾಳಿಯ ಬಗ್ಗೆ ತನಿಖೆ ನಡೆಸಿ, ಆರೋಪಿಗಳನ್ನು ಬಂಧಿಸುವಂತೆ ಅಸ್ಸಾಂನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಜಿ.ಪಿ.ಸಿಂಗ್‌ಗೆ ನಿರ್ದೇಶನ ನೀಡಿದ್ದಾರೆ., ಘಟನೆ ಕುರಿತು ಪ್ರಕರಣ ದಾಖಲಾಗಿದ್ದು, ದಾಳಿಯಲ್ಲಿ ಭಾಗಿಯಾಗಿರುವ ವ್ಯಕ್ತಿಗಳನ್ನು ಬಂಧಿಸಲಾಗಿದೆ.

ಭಾರತೀಯ ವೈದ್ಯಕೀಯ ಸಂಘಟನೆ ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿದೆ. ವೈದ್ಯರ ಮೇಲೆ ನಡೆಯುತ್ತಿರುವ ಹಲ್ಲೆಯನ್ನು ತಡೆಯಲು ಕಠಿಣ ಮತ್ತು ಪರಿಣಾಮಕಾರಿ ಕಾಯ್ದೆ ಜಾರಿಗೆ ತರಬೇಕು ಎಂದು ಗೃಹ ಸಚಿವ ಅಮಿತ್ ಶಾ ಅವರಲ್ಲಿ ಮನವಿ ಮಾಡಿದೆ.


ಇದನ್ನೂ ಓದಿ: ಕಲಬುರಗಿ ಕೇಂದ್ರೀಯ ವಿವಿಯಲ್ಲಿ ಪ್ರಭಾರಿಗಳ ಕಾರ್ಯಶೈಲಿ: ಭ್ರಷ್ಟಾಚಾರ, ಅಕ್ರಮ ನೇಮಕಾತಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....