Homeಮುಖಪುಟವೈದ್ಯರ ಮೇಲೆ ಮಾರಣಾಂತಿಕ ಹಲ್ಲೆ, ಕಠಿಣ ಕಾಯ್ದೆ ರೂಪಿಸಲು IMA ಆಗ್ರಹ

ವೈದ್ಯರ ಮೇಲೆ ಮಾರಣಾಂತಿಕ ಹಲ್ಲೆ, ಕಠಿಣ ಕಾಯ್ದೆ ರೂಪಿಸಲು IMA ಆಗ್ರಹ

- Advertisement -
- Advertisement -

ಕೊರೊನಾ ಸಾವುಗಳು ಹೆಚ್ಚಾಗುತ್ತಿರುವಂತೆಯೇ ವೈದ್ಯರ ಮೇಲೆ ಹಲ್ಲೆಗಳು ಹೆಚ್ಚಾಗುತ್ತಿವೆ. ಗುವಾಹಟಿಯಿಂದ 140 ಕಿಲೋಮೀಟರ್ ದೂರದಲ್ಲಿರುವ ಅಸ್ಸಾಂನ ಹೊಜೈನಲ್ಲಿರುವ ಕೋವಿಡ್ ಆರೈಕೆ ಕೇಂದ್ರದಲ್ಲಿ ವೈದ್ಯರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.

ಆಮ್ಲಜನಕದ ಕೊರತೆಯಿಂದಾಗಿ ಸಾವನ್ನಪ್ಪಿದ ಕೊರೊನಾ ಸೋಂಕಿತ ರೋಗಿಯ ಸಂಬಂಧಿಕರು, ವೈದ್ಯರ ಮೇಲೆ ಲೋಹದ ಕಸದ ಡಬ್ಬಿ ಮತ್ತು ಇಟ್ಟಿಗೆಗಳಿಂದ ಮನ ಬಂದಂತೆ ಥಳಿಸಿದ್ದಾರೆ. ಮೃತನ ಸಂಬಂಧಿಕರ ಜೊತೆಗೆ ವೈದ್ಯರ ಮೇಲೆ ಸ್ಥಳೀಯರು ಹಲ್ಲೆ ಮಾಡಿದ್ದಾರೆ. ವೈದ್ಯರ ಮೇಲಿನ ಮಾರಣಾಂತಿಕ ಹಲ್ಲೆಯ ವಿಡಿಯೋ ತುಣುಕು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಘಟನೆಯಲ್ಲಿ ಮುಖ್ಯ ಆರೋಪಿಗಳು ಸೇರಿದಂತೆ 24 ಜನರನ್ನು ಬಂಧಿಸಲಾಗಿದೆ.

ಹೊಜೈನಲ್ಲಿರುವ ಉದಾಲಿ ಮಾಡೆಲ್ ಆಸ್ಪತ್ರೆಯಲ್ಲಿ ಮಂಗಳವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಡಾ. ಸೆಯೇಜ್ ಕುಮಾರ್ ಸೇನಾಪತಿ ಕರ್ತವ್ಯದಲ್ಲಿದ್ದರು. ಪಿಪಾಲ್ ಪುಖುರಿ ಗ್ರಾಮದ ನಿವಾಸಿ ಗಿಯಾಜ್ ಉದ್ದೀನ್ ಎಂಬ ರೋಗಿಯು ಕೊರೊನಾ ಸಂಬಂಧಿತ ತೊಂದರೆಗಳಿಂದಾಗಿ ಮಂಗಳವಾರ ಮೃತಪಟ್ಟಿದ್ದರು.

ಇದನ್ನೂ ಓದಿ: ರಾಜ್ಯದಲ್ಲಿ ಬಿಜೆಪಿಗೂ ಲಸಿಕೆಗೂ ಮುಗಿಯದ ನಂಟು, ಮತ್ತೆ ವಿವಾದದಲ್ಲಿ ಬಿಜೆಪಿ ಶಾಸಕ

 

“ರೋಗಿಯ ಸ್ಥಿತಿ ಗಂಭೀರವಾಗಿದೆ ಮತ್ತು ಬೆಳಿಗ್ಗೆಯಿಂದ ಮೂತ್ರ ವಿಸರ್ಜಿಸಿಲ್ಲ ಎಂದು ನನಗೆ ಅಟೆಂಡರ್‌ ತಿಳಿಸಿದರು. ನಾನು ಕೋಣೆಗೆ ಹೋಗಿ ರೋಗಿಯನ್ನು ಪರೀಕ್ಷಿಸಿದೆ. ಆತ ಮೃತಪಟ್ಟಿದ್ದಾನೆ ತಿಳಿಯಿತು. ನಾನು ಸುದ್ದಿ ತಿಳಿಸುತ್ತಿದ್ದಂತೆ, ಮೃತನ ಸಂಬಂಧಿ ನನ್ನನ್ನು ನಿಂದಿಸಲು ಪ್ರಾರಂಭಿಸಿದರು” ಎಂದು ಡಾ.ಸೇನಾಪತಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಕೊರೊನಾ ಸೋಂಕಿತ ರೋಗಿಯ ಸಾವಿನಿಂದ ಬೇಸತ್ತ ಜನಸಮೂಹವು ಆಸ್ಪತ್ರೆಯ ಮೇಲೆ ದಾಳಿ ಮಾಡಿತು. ಹೆಚ್ಚಿನ ವೈದ್ಯಕೀಯ ಅಧಿಕಾರಿಗಳು ಇವರಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಆದರೆ, ಡಾ. ಸೇನಾಪತಿ ತನ್ನನ್ನು ಕೋಣೆ ಒಳಗೆ ಸೇರಿಕೊಂಡಿದ್ದರು, ಆದರೆ ಜನರ ಗುಂಪು ಕೊಠಡಿಗೆ ನುಗ್ಗಿ ತೀವ್ರವಾಗಿ ಹಲ್ಲೆ ಮಾಡಿದೆ ಎಂದು ವರದಿಯಾಗಿದೆ.

“ಉದ್ರಿಕ್ತ ಗುಂಪು ಆಸ್ಪತ್ರೆಯನ್ನು ದರೋಡೆ ಮಾಡಿದರು, ನಾವು (ಸಿಬ್ಬಂದಿ) ಸುರಕ್ಷತೆಗಾಗಿ ಓಡಿದೆವು. ನಾನು ಒಂದು ಕೊಠಡಿಗೆ ಸೇರಿಕೊಂಡು ಬಚಾವಾಗಲು ಪ್ರಯತ್ನಿಸಿದೆ. ಆದರೆ, ಅವರು ನನ್ನನ್ನು ಕಂಡು ನನ್ನ ಮೇಲೆ ಹಲ್ಲೆ ನಡೆಸಿದರು. ಅವರು ನನ್ನ ಚಿನ್ನದ ಸರ, ನನ್ನ ಉಂಗುರ ಮತ್ತು ನನ್ನ ಮೊಬೈಲ್ ಕಸಿದುಕೊಂಡರು. ಅವರು 30 ಜನರಿದ್ದರು” ಎಂದು ಡಾ.ಸೇನಾಪತಿ ಹೇಳಿದ್ದಾರೆ.

ವೈದ್ಯರ ಮೇಲಿನ ಹಲ್ಲೆ ವ್ಯಾಪಕ ಖಂಡನೆಗೆ ಕಾರಣವಾಗಿದ್ದು, ಈ ಘಟನೆಯನ್ನು ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಜೆ.ಜಯಲಾಲ್ ಖಂಡಿಸಿದ್ದಾರೆ. ಅಸ್ಸಾಂ ವೈದ್ಯಕೀಯ ಸೇವೆಗಳ ಸಂಘದ (ಎಎಂಎಸ್ಎ) ಅಸ್ಸಾಂ ಅಧ್ಯಾಯದ ಸದಸ್ಯರು ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಸರ್ಕಾರಿ ಎಲ್ಲಾ ವೈದ್ಯಕೀಯ ಸೌಲಭ್ಯಗಳಲ್ಲಿ ಅವರು ಇಂದು ಹೊರರೋಗಿ ವಿಭಾಗ (ಒಪಿಡಿ) ಸೇವೆಗಳನ್ನು ಬಹಿಷ್ಕರಿಸಿದ್ದಾರೆ.

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ದಾಳಿಯ ಬಗ್ಗೆ ತನಿಖೆ ನಡೆಸಿ, ಆರೋಪಿಗಳನ್ನು ಬಂಧಿಸುವಂತೆ ಅಸ್ಸಾಂನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಜಿ.ಪಿ.ಸಿಂಗ್‌ಗೆ ನಿರ್ದೇಶನ ನೀಡಿದ್ದಾರೆ., ಘಟನೆ ಕುರಿತು ಪ್ರಕರಣ ದಾಖಲಾಗಿದ್ದು, ದಾಳಿಯಲ್ಲಿ ಭಾಗಿಯಾಗಿರುವ ವ್ಯಕ್ತಿಗಳನ್ನು ಬಂಧಿಸಲಾಗಿದೆ.

ಭಾರತೀಯ ವೈದ್ಯಕೀಯ ಸಂಘಟನೆ ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿದೆ. ವೈದ್ಯರ ಮೇಲೆ ನಡೆಯುತ್ತಿರುವ ಹಲ್ಲೆಯನ್ನು ತಡೆಯಲು ಕಠಿಣ ಮತ್ತು ಪರಿಣಾಮಕಾರಿ ಕಾಯ್ದೆ ಜಾರಿಗೆ ತರಬೇಕು ಎಂದು ಗೃಹ ಸಚಿವ ಅಮಿತ್ ಶಾ ಅವರಲ್ಲಿ ಮನವಿ ಮಾಡಿದೆ.


ಇದನ್ನೂ ಓದಿ: ಕಲಬುರಗಿ ಕೇಂದ್ರೀಯ ವಿವಿಯಲ್ಲಿ ಪ್ರಭಾರಿಗಳ ಕಾರ್ಯಶೈಲಿ: ಭ್ರಷ್ಟಾಚಾರ, ಅಕ್ರಮ ನೇಮಕಾತಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....