Homeಮುಖಪುಟವೈದ್ಯರ ಮೇಲೆ ಮಾರಣಾಂತಿಕ ಹಲ್ಲೆ, ಕಠಿಣ ಕಾಯ್ದೆ ರೂಪಿಸಲು IMA ಆಗ್ರಹ

ವೈದ್ಯರ ಮೇಲೆ ಮಾರಣಾಂತಿಕ ಹಲ್ಲೆ, ಕಠಿಣ ಕಾಯ್ದೆ ರೂಪಿಸಲು IMA ಆಗ್ರಹ

- Advertisement -
- Advertisement -

ಕೊರೊನಾ ಸಾವುಗಳು ಹೆಚ್ಚಾಗುತ್ತಿರುವಂತೆಯೇ ವೈದ್ಯರ ಮೇಲೆ ಹಲ್ಲೆಗಳು ಹೆಚ್ಚಾಗುತ್ತಿವೆ. ಗುವಾಹಟಿಯಿಂದ 140 ಕಿಲೋಮೀಟರ್ ದೂರದಲ್ಲಿರುವ ಅಸ್ಸಾಂನ ಹೊಜೈನಲ್ಲಿರುವ ಕೋವಿಡ್ ಆರೈಕೆ ಕೇಂದ್ರದಲ್ಲಿ ವೈದ್ಯರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.

ಆಮ್ಲಜನಕದ ಕೊರತೆಯಿಂದಾಗಿ ಸಾವನ್ನಪ್ಪಿದ ಕೊರೊನಾ ಸೋಂಕಿತ ರೋಗಿಯ ಸಂಬಂಧಿಕರು, ವೈದ್ಯರ ಮೇಲೆ ಲೋಹದ ಕಸದ ಡಬ್ಬಿ ಮತ್ತು ಇಟ್ಟಿಗೆಗಳಿಂದ ಮನ ಬಂದಂತೆ ಥಳಿಸಿದ್ದಾರೆ. ಮೃತನ ಸಂಬಂಧಿಕರ ಜೊತೆಗೆ ವೈದ್ಯರ ಮೇಲೆ ಸ್ಥಳೀಯರು ಹಲ್ಲೆ ಮಾಡಿದ್ದಾರೆ. ವೈದ್ಯರ ಮೇಲಿನ ಮಾರಣಾಂತಿಕ ಹಲ್ಲೆಯ ವಿಡಿಯೋ ತುಣುಕು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಘಟನೆಯಲ್ಲಿ ಮುಖ್ಯ ಆರೋಪಿಗಳು ಸೇರಿದಂತೆ 24 ಜನರನ್ನು ಬಂಧಿಸಲಾಗಿದೆ.

ಹೊಜೈನಲ್ಲಿರುವ ಉದಾಲಿ ಮಾಡೆಲ್ ಆಸ್ಪತ್ರೆಯಲ್ಲಿ ಮಂಗಳವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಡಾ. ಸೆಯೇಜ್ ಕುಮಾರ್ ಸೇನಾಪತಿ ಕರ್ತವ್ಯದಲ್ಲಿದ್ದರು. ಪಿಪಾಲ್ ಪುಖುರಿ ಗ್ರಾಮದ ನಿವಾಸಿ ಗಿಯಾಜ್ ಉದ್ದೀನ್ ಎಂಬ ರೋಗಿಯು ಕೊರೊನಾ ಸಂಬಂಧಿತ ತೊಂದರೆಗಳಿಂದಾಗಿ ಮಂಗಳವಾರ ಮೃತಪಟ್ಟಿದ್ದರು.

ಇದನ್ನೂ ಓದಿ: ರಾಜ್ಯದಲ್ಲಿ ಬಿಜೆಪಿಗೂ ಲಸಿಕೆಗೂ ಮುಗಿಯದ ನಂಟು, ಮತ್ತೆ ವಿವಾದದಲ್ಲಿ ಬಿಜೆಪಿ ಶಾಸಕ

 

“ರೋಗಿಯ ಸ್ಥಿತಿ ಗಂಭೀರವಾಗಿದೆ ಮತ್ತು ಬೆಳಿಗ್ಗೆಯಿಂದ ಮೂತ್ರ ವಿಸರ್ಜಿಸಿಲ್ಲ ಎಂದು ನನಗೆ ಅಟೆಂಡರ್‌ ತಿಳಿಸಿದರು. ನಾನು ಕೋಣೆಗೆ ಹೋಗಿ ರೋಗಿಯನ್ನು ಪರೀಕ್ಷಿಸಿದೆ. ಆತ ಮೃತಪಟ್ಟಿದ್ದಾನೆ ತಿಳಿಯಿತು. ನಾನು ಸುದ್ದಿ ತಿಳಿಸುತ್ತಿದ್ದಂತೆ, ಮೃತನ ಸಂಬಂಧಿ ನನ್ನನ್ನು ನಿಂದಿಸಲು ಪ್ರಾರಂಭಿಸಿದರು” ಎಂದು ಡಾ.ಸೇನಾಪತಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಕೊರೊನಾ ಸೋಂಕಿತ ರೋಗಿಯ ಸಾವಿನಿಂದ ಬೇಸತ್ತ ಜನಸಮೂಹವು ಆಸ್ಪತ್ರೆಯ ಮೇಲೆ ದಾಳಿ ಮಾಡಿತು. ಹೆಚ್ಚಿನ ವೈದ್ಯಕೀಯ ಅಧಿಕಾರಿಗಳು ಇವರಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಆದರೆ, ಡಾ. ಸೇನಾಪತಿ ತನ್ನನ್ನು ಕೋಣೆ ಒಳಗೆ ಸೇರಿಕೊಂಡಿದ್ದರು, ಆದರೆ ಜನರ ಗುಂಪು ಕೊಠಡಿಗೆ ನುಗ್ಗಿ ತೀವ್ರವಾಗಿ ಹಲ್ಲೆ ಮಾಡಿದೆ ಎಂದು ವರದಿಯಾಗಿದೆ.

“ಉದ್ರಿಕ್ತ ಗುಂಪು ಆಸ್ಪತ್ರೆಯನ್ನು ದರೋಡೆ ಮಾಡಿದರು, ನಾವು (ಸಿಬ್ಬಂದಿ) ಸುರಕ್ಷತೆಗಾಗಿ ಓಡಿದೆವು. ನಾನು ಒಂದು ಕೊಠಡಿಗೆ ಸೇರಿಕೊಂಡು ಬಚಾವಾಗಲು ಪ್ರಯತ್ನಿಸಿದೆ. ಆದರೆ, ಅವರು ನನ್ನನ್ನು ಕಂಡು ನನ್ನ ಮೇಲೆ ಹಲ್ಲೆ ನಡೆಸಿದರು. ಅವರು ನನ್ನ ಚಿನ್ನದ ಸರ, ನನ್ನ ಉಂಗುರ ಮತ್ತು ನನ್ನ ಮೊಬೈಲ್ ಕಸಿದುಕೊಂಡರು. ಅವರು 30 ಜನರಿದ್ದರು” ಎಂದು ಡಾ.ಸೇನಾಪತಿ ಹೇಳಿದ್ದಾರೆ.

ವೈದ್ಯರ ಮೇಲಿನ ಹಲ್ಲೆ ವ್ಯಾಪಕ ಖಂಡನೆಗೆ ಕಾರಣವಾಗಿದ್ದು, ಈ ಘಟನೆಯನ್ನು ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಜೆ.ಜಯಲಾಲ್ ಖಂಡಿಸಿದ್ದಾರೆ. ಅಸ್ಸಾಂ ವೈದ್ಯಕೀಯ ಸೇವೆಗಳ ಸಂಘದ (ಎಎಂಎಸ್ಎ) ಅಸ್ಸಾಂ ಅಧ್ಯಾಯದ ಸದಸ್ಯರು ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಸರ್ಕಾರಿ ಎಲ್ಲಾ ವೈದ್ಯಕೀಯ ಸೌಲಭ್ಯಗಳಲ್ಲಿ ಅವರು ಇಂದು ಹೊರರೋಗಿ ವಿಭಾಗ (ಒಪಿಡಿ) ಸೇವೆಗಳನ್ನು ಬಹಿಷ್ಕರಿಸಿದ್ದಾರೆ.

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ದಾಳಿಯ ಬಗ್ಗೆ ತನಿಖೆ ನಡೆಸಿ, ಆರೋಪಿಗಳನ್ನು ಬಂಧಿಸುವಂತೆ ಅಸ್ಸಾಂನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಜಿ.ಪಿ.ಸಿಂಗ್‌ಗೆ ನಿರ್ದೇಶನ ನೀಡಿದ್ದಾರೆ., ಘಟನೆ ಕುರಿತು ಪ್ರಕರಣ ದಾಖಲಾಗಿದ್ದು, ದಾಳಿಯಲ್ಲಿ ಭಾಗಿಯಾಗಿರುವ ವ್ಯಕ್ತಿಗಳನ್ನು ಬಂಧಿಸಲಾಗಿದೆ.

ಭಾರತೀಯ ವೈದ್ಯಕೀಯ ಸಂಘಟನೆ ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿದೆ. ವೈದ್ಯರ ಮೇಲೆ ನಡೆಯುತ್ತಿರುವ ಹಲ್ಲೆಯನ್ನು ತಡೆಯಲು ಕಠಿಣ ಮತ್ತು ಪರಿಣಾಮಕಾರಿ ಕಾಯ್ದೆ ಜಾರಿಗೆ ತರಬೇಕು ಎಂದು ಗೃಹ ಸಚಿವ ಅಮಿತ್ ಶಾ ಅವರಲ್ಲಿ ಮನವಿ ಮಾಡಿದೆ.


ಇದನ್ನೂ ಓದಿ: ಕಲಬುರಗಿ ಕೇಂದ್ರೀಯ ವಿವಿಯಲ್ಲಿ ಪ್ರಭಾರಿಗಳ ಕಾರ್ಯಶೈಲಿ: ಭ್ರಷ್ಟಾಚಾರ, ಅಕ್ರಮ ನೇಮಕಾತಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...