Homeಅಂತರಾಷ್ಟ್ರೀಯಸುಡಾನ್‌ನ ಅಲ್‌-ಫಾಶೆರ್‌ನಲ್ಲಿ ಭೀಕರ ನರಮೇಧ : ಮೂರು ದಿನಗಳಲ್ಲಿ 1,500 ಜನರನ್ನು ಹತ್ಯೆಗೈದ ಆರ್‌ಎಸ್‌ಎಫ್‌

ಸುಡಾನ್‌ನ ಅಲ್‌-ಫಾಶೆರ್‌ನಲ್ಲಿ ಭೀಕರ ನರಮೇಧ : ಮೂರು ದಿನಗಳಲ್ಲಿ 1,500 ಜನರನ್ನು ಹತ್ಯೆಗೈದ ಆರ್‌ಎಸ್‌ಎಫ್‌

- Advertisement -
- Advertisement -

ಸುಡಾನ್‌ನ ಉತ್ತರ ದಾರ್ಫರ್ ರಾಜ್ಯದ ರಾಜಧಾನಿ ಅಲ್- ಫಾಶೆರ್‌ ಅನ್ನು ವಶಪಡಿಸಿಕೊಂಡ ಬಳಿಕ, ಕಳೆದ ಮೂರು ದಿನಗಳಲ್ಲಿ ಅರೆ ಸೈನಿಕ ಪಡೆ ರ‍್ಯಾಪಿಡ್ ಸಪೋರ್ಟ್ ಫೋರ್ಸಸ್ (ಆರ್‌ಎಸ್‌ಎಫ್) ಕನಿಷ್ಠ 1,500 ಜನರನ್ನು ಹತ್ಯೆ ಮಾಡಿದೆ ಎಂದು ವರದಿಯಾಗಿದೆ.

ರಾಜಧಾನಿ ಅಲ್‌-ಪಾಶೆರ್ ಅನ್ನು ಸಂಪೂರ್ಣ ವಶಕ್ಕೆ ಪಡೆದಿರುವ ಆರ್‌ಎಸ್‌ಎಫ್‌, ಇಡೀ ದಾರ್ಫರ್ ರಾಜ್ಯವನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ. 2023ರಿಂದ ಸಂಪೂರ್ಣ ಸುಡಾನ್‌ ಅನ್ನು ನಿಯಂತ್ರಣಕ್ಕೆ ಪಡೆಯಲು ಆರ್‌ಎಸ್‌ಎಫ್‌ ಸುಡಾನ್ ಸೇನೆಯೊಂದಿಗೆ ಸಂಘರ್ಷದಲ್ಲಿ ತೊಡಗಿದೆ.

ಆರ್‌ಎಸ್‌ಎಫ್‌ ಕೈಯಿಂದ ಜೀವ ಕಾಪಾಡಿಕೊಳ್ಳಲು ಜನರು ಪಲಾಯನ ಮಾಡುತ್ತಿದ್ದಾರೆ. ಈ ವೇಳೆ ಅವರನ್ನು ಹಿಡಿದು ನಿರ್ದಯವಾಗಿ ಹತ್ಯೆ ಮಾಡಲಾಗುತ್ತಿದೆ. ಮನೆಗಳಿಗೆ ನುಗ್ಗಿ ಜನರನ್ನು ಕೊಲ್ಲಲಾಗುತ್ತಿದೆ. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದಾರೆ. ಇದು ‘ನಿಜವಾದ ನರಮೇಧ’ ಎಂದು ದೇಶದ ಅಂತರ್ಯುದ್ಧವನ್ನು ವರದಿ ಮಾಡುವ ಗುಂಪು ಸುಡಾನ್ ಡಾಕ್ಟರ್ಸ್ ನೆಟ್‌ವರ್ಕ್ ಹೇಳಿರುವುದಾಗಿ ಸುದ್ದಿ ಸಂಸ್ಥೆ ಅಲ್-ಜಝೀರಾ ವರದಿ ಮಾಡಿದೆ.

“ಇಂದು ಜಗತ್ತು ನೋಡುತ್ತಿರುವ ಹತ್ಯಾಕಾಂಡಗಳು ಒಂದೂವರೆ ವರ್ಷದ ಹಿಂದೆ ಅಲ್‌-ಫಾಶೆರ್‌ನಲ್ಲಿ ನಡೆದ ಹತ್ಯಾಕಾಂಡದ ಮುಂದುವರಿದ ಭಾಗವಾಗಿದೆ. ಆ ಸಮಯದಲ್ಲಿ ಬಾಂಬ್ ದಾಳಿ, ಹಸಿವು ಮತ್ತು ಕಾನೂನುಬಾಹಿರ ಮರಣದಂಡನೆಗಳ ಮೂಲಕ 14,000ಕ್ಕೂ ಹೆಚ್ಚು ನಾಗರಿಕರು ಕೊಲ್ಲಲ್ಪಟ್ಟಿದ್ದರು” ಎಂದು ಡಾಕ್ಟರ್ಸ್ ನೆಟ್‌ವರ್ಕ್ ತಿಳಿಸಿದೆ.

ಅಕ್ಟೋಬರ್ 26ರಂದು ಆರ್‌ಎಸ್‌ಎಫ್‌ ಅಲ್‌-ಫಾಶೆರ್ ಅನ್ನು ವಶಪಡಿಸಿಕೊಂಡ ಬಳಿಕ, ಯೇಲ್ ವಿಶ್ವವಿದ್ಯಾನಿಲಯದ ಹ್ಯೂಮನಿಟೇರಿಯನ್ ರಿಸರ್ಚ್ ಲ್ಯಾಬ್, ತಾನು ತೆಗೆದ ಉಪಗ್ರಹ ಚಿತ್ರಗಳನ್ನು ಬಿಡುಗಡೆ ಮಾಡಿತ್ತು. ಅದರಲ್ಲಿ ಶವಗಳ ರಾಶಿ, ದೊಡ್ಡ ಮಟ್ಟದ ರಕ್ತದ ಕಲೆಗಳು ಗೋಚರವಾಗಿವೆ. ಇವುಗಳು ಭೀಕರ ನರಮೇಧವನ್ನು ಸೂಚಿಸುತ್ತದೆ ಎಂದು ವರದಿಗಳು ಹೇಳಿತ್ತು.

ವಿಶ್ವಸಂಸ್ಥೆ ಸೇರಿದಂತೆ ಜಾಗತಿಕ ಒಕ್ಕೂಟಗಳು ಹಿಂಸಾಚಾರವನ್ನು ಖಂಡಿಸಿತ್ತು. ಶಾಂತಿಗೆ ಕರೆ ಕೊಟ್ಟಿತ್ತು. ಈ ಬೆನ್ನಲ್ಲೇ ಸುಡಾನ್ ಡಾಕ್ಟರ್ಸ್ ನೆಟ್‌ವರ್ಕ್ ನೀಡಿರುವ ಭೀಕರದ ನರಮೇಧದ ವರದಿ ಜಗತ್ತನ್ನು ಬೆಚ್ಚಿ ಬೀಳಿಸಿದೆ.

ಆರ್‌ಎಸ್‌ಎಫ್ 2023ರಿಂದ ಸುಡಾನ್ ಸೈನ್ಯದೊಂದಿಗೆ ರಕ್ತಸಿಕ್ತ ಅಂತರ್ಯುದ್ಧದಲ್ಲಿ ತೊಡಗಿಕೊಂಡಿದೆ. ಪರಿಣಾಮ ಹತ್ತಾರು ಸಾವಿರ ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 12 ದಶಲಕ್ಷಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ.

ಕಳೆದ 17 ತಿಂಗಳ ಮುತ್ತಿಗೆಯ ನಂತರ ಅಕ್ಟೋಬರ್ 26, 2025ರಂದು ದಾರ್ಫರ್‌ನಲ್ಲಿ ಸೇನೆಯ ಕೊನೆಯ ಭದ್ರಕೋಟೆಯಾದ ಅಲ್‌-ಫಾಶೆರ್ ಅನ್ನು ಅರೆಸೈನಿಕ ಪಡೆ ಆರ್‌ಎಸ್‌ಎಫ್ ವಶಪಡಿಸಿಕೊಂಡಿದೆ.

ವ್ಯಾಪಾರ ಒತ್ತಡ ಹಾಕಿ ಭಾರತ-ಪಾಕಿಸ್ತಾನ ಯುದ್ಧ ನಿಲ್ಲಿಸಿದೆ : ಪುನರುಚ್ಚರಿಸಿದ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...