Homeಅಂತರಾಷ್ಟ್ರೀಯಸುಡಾನ್‌ನ ಅಲ್‌-ಫಾಶೆರ್‌ನಲ್ಲಿ ಭೀಕರ ನರಮೇಧ : ಮೂರು ದಿನಗಳಲ್ಲಿ 1,500 ಜನರನ್ನು ಹತ್ಯೆಗೈದ ಆರ್‌ಎಸ್‌ಎಫ್‌

ಸುಡಾನ್‌ನ ಅಲ್‌-ಫಾಶೆರ್‌ನಲ್ಲಿ ಭೀಕರ ನರಮೇಧ : ಮೂರು ದಿನಗಳಲ್ಲಿ 1,500 ಜನರನ್ನು ಹತ್ಯೆಗೈದ ಆರ್‌ಎಸ್‌ಎಫ್‌

- Advertisement -
- Advertisement -

ಸುಡಾನ್‌ನ ಉತ್ತರ ದಾರ್ಫರ್ ರಾಜ್ಯದ ರಾಜಧಾನಿ ಅಲ್- ಫಾಶೆರ್‌ ಅನ್ನು ವಶಪಡಿಸಿಕೊಂಡ ಬಳಿಕ, ಕಳೆದ ಮೂರು ದಿನಗಳಲ್ಲಿ ಅರೆ ಸೈನಿಕ ಪಡೆ ರ‍್ಯಾಪಿಡ್ ಸಪೋರ್ಟ್ ಫೋರ್ಸಸ್ (ಆರ್‌ಎಸ್‌ಎಫ್) ಕನಿಷ್ಠ 1,500 ಜನರನ್ನು ಹತ್ಯೆ ಮಾಡಿದೆ ಎಂದು ವರದಿಯಾಗಿದೆ.

ರಾಜಧಾನಿ ಅಲ್‌-ಪಾಶೆರ್ ಅನ್ನು ಸಂಪೂರ್ಣ ವಶಕ್ಕೆ ಪಡೆದಿರುವ ಆರ್‌ಎಸ್‌ಎಫ್‌, ಇಡೀ ದಾರ್ಫರ್ ರಾಜ್ಯವನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ. 2023ರಿಂದ ಸಂಪೂರ್ಣ ಸುಡಾನ್‌ ಅನ್ನು ನಿಯಂತ್ರಣಕ್ಕೆ ಪಡೆಯಲು ಆರ್‌ಎಸ್‌ಎಫ್‌ ಸುಡಾನ್ ಸೇನೆಯೊಂದಿಗೆ ಸಂಘರ್ಷದಲ್ಲಿ ತೊಡಗಿದೆ.

ಆರ್‌ಎಸ್‌ಎಫ್‌ ಕೈಯಿಂದ ಜೀವ ಕಾಪಾಡಿಕೊಳ್ಳಲು ಜನರು ಪಲಾಯನ ಮಾಡುತ್ತಿದ್ದಾರೆ. ಈ ವೇಳೆ ಅವರನ್ನು ಹಿಡಿದು ನಿರ್ದಯವಾಗಿ ಹತ್ಯೆ ಮಾಡಲಾಗುತ್ತಿದೆ. ಮನೆಗಳಿಗೆ ನುಗ್ಗಿ ಜನರನ್ನು ಕೊಲ್ಲಲಾಗುತ್ತಿದೆ. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದಾರೆ. ಇದು ‘ನಿಜವಾದ ನರಮೇಧ’ ಎಂದು ದೇಶದ ಅಂತರ್ಯುದ್ಧವನ್ನು ವರದಿ ಮಾಡುವ ಗುಂಪು ಸುಡಾನ್ ಡಾಕ್ಟರ್ಸ್ ನೆಟ್‌ವರ್ಕ್ ಹೇಳಿರುವುದಾಗಿ ಸುದ್ದಿ ಸಂಸ್ಥೆ ಅಲ್-ಜಝೀರಾ ವರದಿ ಮಾಡಿದೆ.

“ಇಂದು ಜಗತ್ತು ನೋಡುತ್ತಿರುವ ಹತ್ಯಾಕಾಂಡಗಳು ಒಂದೂವರೆ ವರ್ಷದ ಹಿಂದೆ ಅಲ್‌-ಫಾಶೆರ್‌ನಲ್ಲಿ ನಡೆದ ಹತ್ಯಾಕಾಂಡದ ಮುಂದುವರಿದ ಭಾಗವಾಗಿದೆ. ಆ ಸಮಯದಲ್ಲಿ ಬಾಂಬ್ ದಾಳಿ, ಹಸಿವು ಮತ್ತು ಕಾನೂನುಬಾಹಿರ ಮರಣದಂಡನೆಗಳ ಮೂಲಕ 14,000ಕ್ಕೂ ಹೆಚ್ಚು ನಾಗರಿಕರು ಕೊಲ್ಲಲ್ಪಟ್ಟಿದ್ದರು” ಎಂದು ಡಾಕ್ಟರ್ಸ್ ನೆಟ್‌ವರ್ಕ್ ತಿಳಿಸಿದೆ.

ಅಕ್ಟೋಬರ್ 26ರಂದು ಆರ್‌ಎಸ್‌ಎಫ್‌ ಅಲ್‌-ಫಾಶೆರ್ ಅನ್ನು ವಶಪಡಿಸಿಕೊಂಡ ಬಳಿಕ, ಯೇಲ್ ವಿಶ್ವವಿದ್ಯಾನಿಲಯದ ಹ್ಯೂಮನಿಟೇರಿಯನ್ ರಿಸರ್ಚ್ ಲ್ಯಾಬ್, ತಾನು ತೆಗೆದ ಉಪಗ್ರಹ ಚಿತ್ರಗಳನ್ನು ಬಿಡುಗಡೆ ಮಾಡಿತ್ತು. ಅದರಲ್ಲಿ ಶವಗಳ ರಾಶಿ, ದೊಡ್ಡ ಮಟ್ಟದ ರಕ್ತದ ಕಲೆಗಳು ಗೋಚರವಾಗಿವೆ. ಇವುಗಳು ಭೀಕರ ನರಮೇಧವನ್ನು ಸೂಚಿಸುತ್ತದೆ ಎಂದು ವರದಿಗಳು ಹೇಳಿತ್ತು.

ವಿಶ್ವಸಂಸ್ಥೆ ಸೇರಿದಂತೆ ಜಾಗತಿಕ ಒಕ್ಕೂಟಗಳು ಹಿಂಸಾಚಾರವನ್ನು ಖಂಡಿಸಿತ್ತು. ಶಾಂತಿಗೆ ಕರೆ ಕೊಟ್ಟಿತ್ತು. ಈ ಬೆನ್ನಲ್ಲೇ ಸುಡಾನ್ ಡಾಕ್ಟರ್ಸ್ ನೆಟ್‌ವರ್ಕ್ ನೀಡಿರುವ ಭೀಕರದ ನರಮೇಧದ ವರದಿ ಜಗತ್ತನ್ನು ಬೆಚ್ಚಿ ಬೀಳಿಸಿದೆ.

ಆರ್‌ಎಸ್‌ಎಫ್ 2023ರಿಂದ ಸುಡಾನ್ ಸೈನ್ಯದೊಂದಿಗೆ ರಕ್ತಸಿಕ್ತ ಅಂತರ್ಯುದ್ಧದಲ್ಲಿ ತೊಡಗಿಕೊಂಡಿದೆ. ಪರಿಣಾಮ ಹತ್ತಾರು ಸಾವಿರ ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 12 ದಶಲಕ್ಷಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ.

ಕಳೆದ 17 ತಿಂಗಳ ಮುತ್ತಿಗೆಯ ನಂತರ ಅಕ್ಟೋಬರ್ 26, 2025ರಂದು ದಾರ್ಫರ್‌ನಲ್ಲಿ ಸೇನೆಯ ಕೊನೆಯ ಭದ್ರಕೋಟೆಯಾದ ಅಲ್‌-ಫಾಶೆರ್ ಅನ್ನು ಅರೆಸೈನಿಕ ಪಡೆ ಆರ್‌ಎಸ್‌ಎಫ್ ವಶಪಡಿಸಿಕೊಂಡಿದೆ.

ವ್ಯಾಪಾರ ಒತ್ತಡ ಹಾಕಿ ಭಾರತ-ಪಾಕಿಸ್ತಾನ ಯುದ್ಧ ನಿಲ್ಲಿಸಿದೆ : ಪುನರುಚ್ಚರಿಸಿದ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...