Homeಅಂತರಾಷ್ಟ್ರೀಯಸುಡಾನ್‌ನ ಅಲ್‌-ಫಾಶೆರ್‌ನಲ್ಲಿ ಭೀಕರ ನರಮೇಧ : ಮೂರು ದಿನಗಳಲ್ಲಿ 1,500 ಜನರನ್ನು ಹತ್ಯೆಗೈದ ಆರ್‌ಎಸ್‌ಎಫ್‌

ಸುಡಾನ್‌ನ ಅಲ್‌-ಫಾಶೆರ್‌ನಲ್ಲಿ ಭೀಕರ ನರಮೇಧ : ಮೂರು ದಿನಗಳಲ್ಲಿ 1,500 ಜನರನ್ನು ಹತ್ಯೆಗೈದ ಆರ್‌ಎಸ್‌ಎಫ್‌

- Advertisement -
- Advertisement -

ಸುಡಾನ್‌ನ ಉತ್ತರ ದಾರ್ಫರ್ ರಾಜ್ಯದ ರಾಜಧಾನಿ ಅಲ್- ಫಾಶೆರ್‌ ಅನ್ನು ವಶಪಡಿಸಿಕೊಂಡ ಬಳಿಕ, ಕಳೆದ ಮೂರು ದಿನಗಳಲ್ಲಿ ಅರೆ ಸೈನಿಕ ಪಡೆ ರ‍್ಯಾಪಿಡ್ ಸಪೋರ್ಟ್ ಫೋರ್ಸಸ್ (ಆರ್‌ಎಸ್‌ಎಫ್) ಕನಿಷ್ಠ 1,500 ಜನರನ್ನು ಹತ್ಯೆ ಮಾಡಿದೆ ಎಂದು ವರದಿಯಾಗಿದೆ.

ರಾಜಧಾನಿ ಅಲ್‌-ಪಾಶೆರ್ ಅನ್ನು ಸಂಪೂರ್ಣ ವಶಕ್ಕೆ ಪಡೆದಿರುವ ಆರ್‌ಎಸ್‌ಎಫ್‌, ಇಡೀ ದಾರ್ಫರ್ ರಾಜ್ಯವನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ. 2023ರಿಂದ ಸಂಪೂರ್ಣ ಸುಡಾನ್‌ ಅನ್ನು ನಿಯಂತ್ರಣಕ್ಕೆ ಪಡೆಯಲು ಆರ್‌ಎಸ್‌ಎಫ್‌ ಸುಡಾನ್ ಸೇನೆಯೊಂದಿಗೆ ಸಂಘರ್ಷದಲ್ಲಿ ತೊಡಗಿದೆ.

ಆರ್‌ಎಸ್‌ಎಫ್‌ ಕೈಯಿಂದ ಜೀವ ಕಾಪಾಡಿಕೊಳ್ಳಲು ಜನರು ಪಲಾಯನ ಮಾಡುತ್ತಿದ್ದಾರೆ. ಈ ವೇಳೆ ಅವರನ್ನು ಹಿಡಿದು ನಿರ್ದಯವಾಗಿ ಹತ್ಯೆ ಮಾಡಲಾಗುತ್ತಿದೆ. ಮನೆಗಳಿಗೆ ನುಗ್ಗಿ ಜನರನ್ನು ಕೊಲ್ಲಲಾಗುತ್ತಿದೆ. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದಾರೆ. ಇದು ‘ನಿಜವಾದ ನರಮೇಧ’ ಎಂದು ದೇಶದ ಅಂತರ್ಯುದ್ಧವನ್ನು ವರದಿ ಮಾಡುವ ಗುಂಪು ಸುಡಾನ್ ಡಾಕ್ಟರ್ಸ್ ನೆಟ್‌ವರ್ಕ್ ಹೇಳಿರುವುದಾಗಿ ಸುದ್ದಿ ಸಂಸ್ಥೆ ಅಲ್-ಜಝೀರಾ ವರದಿ ಮಾಡಿದೆ.

“ಇಂದು ಜಗತ್ತು ನೋಡುತ್ತಿರುವ ಹತ್ಯಾಕಾಂಡಗಳು ಒಂದೂವರೆ ವರ್ಷದ ಹಿಂದೆ ಅಲ್‌-ಫಾಶೆರ್‌ನಲ್ಲಿ ನಡೆದ ಹತ್ಯಾಕಾಂಡದ ಮುಂದುವರಿದ ಭಾಗವಾಗಿದೆ. ಆ ಸಮಯದಲ್ಲಿ ಬಾಂಬ್ ದಾಳಿ, ಹಸಿವು ಮತ್ತು ಕಾನೂನುಬಾಹಿರ ಮರಣದಂಡನೆಗಳ ಮೂಲಕ 14,000ಕ್ಕೂ ಹೆಚ್ಚು ನಾಗರಿಕರು ಕೊಲ್ಲಲ್ಪಟ್ಟಿದ್ದರು” ಎಂದು ಡಾಕ್ಟರ್ಸ್ ನೆಟ್‌ವರ್ಕ್ ತಿಳಿಸಿದೆ.

ಅಕ್ಟೋಬರ್ 26ರಂದು ಆರ್‌ಎಸ್‌ಎಫ್‌ ಅಲ್‌-ಫಾಶೆರ್ ಅನ್ನು ವಶಪಡಿಸಿಕೊಂಡ ಬಳಿಕ, ಯೇಲ್ ವಿಶ್ವವಿದ್ಯಾನಿಲಯದ ಹ್ಯೂಮನಿಟೇರಿಯನ್ ರಿಸರ್ಚ್ ಲ್ಯಾಬ್, ತಾನು ತೆಗೆದ ಉಪಗ್ರಹ ಚಿತ್ರಗಳನ್ನು ಬಿಡುಗಡೆ ಮಾಡಿತ್ತು. ಅದರಲ್ಲಿ ಶವಗಳ ರಾಶಿ, ದೊಡ್ಡ ಮಟ್ಟದ ರಕ್ತದ ಕಲೆಗಳು ಗೋಚರವಾಗಿವೆ. ಇವುಗಳು ಭೀಕರ ನರಮೇಧವನ್ನು ಸೂಚಿಸುತ್ತದೆ ಎಂದು ವರದಿಗಳು ಹೇಳಿತ್ತು.

ವಿಶ್ವಸಂಸ್ಥೆ ಸೇರಿದಂತೆ ಜಾಗತಿಕ ಒಕ್ಕೂಟಗಳು ಹಿಂಸಾಚಾರವನ್ನು ಖಂಡಿಸಿತ್ತು. ಶಾಂತಿಗೆ ಕರೆ ಕೊಟ್ಟಿತ್ತು. ಈ ಬೆನ್ನಲ್ಲೇ ಸುಡಾನ್ ಡಾಕ್ಟರ್ಸ್ ನೆಟ್‌ವರ್ಕ್ ನೀಡಿರುವ ಭೀಕರದ ನರಮೇಧದ ವರದಿ ಜಗತ್ತನ್ನು ಬೆಚ್ಚಿ ಬೀಳಿಸಿದೆ.

ಆರ್‌ಎಸ್‌ಎಫ್ 2023ರಿಂದ ಸುಡಾನ್ ಸೈನ್ಯದೊಂದಿಗೆ ರಕ್ತಸಿಕ್ತ ಅಂತರ್ಯುದ್ಧದಲ್ಲಿ ತೊಡಗಿಕೊಂಡಿದೆ. ಪರಿಣಾಮ ಹತ್ತಾರು ಸಾವಿರ ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 12 ದಶಲಕ್ಷಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ.

ಕಳೆದ 17 ತಿಂಗಳ ಮುತ್ತಿಗೆಯ ನಂತರ ಅಕ್ಟೋಬರ್ 26, 2025ರಂದು ದಾರ್ಫರ್‌ನಲ್ಲಿ ಸೇನೆಯ ಕೊನೆಯ ಭದ್ರಕೋಟೆಯಾದ ಅಲ್‌-ಫಾಶೆರ್ ಅನ್ನು ಅರೆಸೈನಿಕ ಪಡೆ ಆರ್‌ಎಸ್‌ಎಫ್ ವಶಪಡಿಸಿಕೊಂಡಿದೆ.

ವ್ಯಾಪಾರ ಒತ್ತಡ ಹಾಕಿ ಭಾರತ-ಪಾಕಿಸ್ತಾನ ಯುದ್ಧ ನಿಲ್ಲಿಸಿದೆ : ಪುನರುಚ್ಚರಿಸಿದ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...