Homeಅಂತರಾಷ್ಟ್ರೀಯಗಾಝಾ: ಶಾಲೆಗಳು, ನಿರಾಶ್ರಿತರ ಶಿಬಿರಗಳ ಮೇಲೆ ಇಸ್ರೇಲ್ ದಾಳಿ

ಗಾಝಾ: ಶಾಲೆಗಳು, ನಿರಾಶ್ರಿತರ ಶಿಬಿರಗಳ ಮೇಲೆ ಇಸ್ರೇಲ್ ದಾಳಿ

- Advertisement -
- Advertisement -

ಇಸ್ರೇಲ್‌- ಪ್ಯಾಲೆಸ್ತೀನ್‌ ಮೇಲೆ ಘೋಷಿಸಿದ ಯುದ್ಧ ಇಂದಿಗೆ 44ನೇ ದಿನಕ್ಕೆ ಕಾಲಿಟ್ಟಿದೆ.  ಉತ್ತರ, ಮಧ್ಯ ಮತ್ತು ದಕ್ಷಿಣ ಗಾಝಾದಲ್ಲಿ ನಡೆಸಿದ ವೈಮಾನಿಕ ದಾಳಿಗೆ ಮಕ್ಕಳು ಸೇರಿದಂತೆ ನೂರಾರು ಜನರು ಮೃತಪಟ್ಟಿದ್ದಾರೆ ಎಂದು ಅಲ್‌ ಜಝೀರಾ ವರದಿ ಮಾಡಿದೆ.

ಗಾಝಾದಲ್ಲಿರುವ ಬುರೇಜ್ ಮತ್ತು ನುಸಿರಾತ್ ನಿರಾಶ್ರಿತರ ಶಿಬಿರಗಳ ಮೇಲೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಎಂದು ಹಮಾಸ್‌ನ  ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ವೆಸ್ಟ್‌ಬ್ಯಾಂಕ್‌ ಮೇಲೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಕನಿಷ್ಠ ಇಬ್ಬರು ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ.

ದಕ್ಷಿಣ ಖಾನ್ ಯೂನಿಸ್ ನಗರದಲ್ಲಿ ನಡೆದ ದಾಳಿಯಲ್ಲಿ ಓರ್ವ ಮಹಿಳೆ ಮತ್ತು ಆಕೆಯ ಮಗು ಸಾವನ್ನಪ್ಪಿದ್ದಾರೆ ಎಂದು ಪ್ಯಾಲೆಸ್ತೀನ್ ಸುದ್ದಿ ಸಂಸ್ಥೆ ವಫಾ ವರದಿ ಮಾಡಿದೆ.

ಜೆನಿನ್ ನಿರಾಶ್ರಿತರ ಶಿಬಿರದ ಮೇಲೆ ನಡೆಸಿದ ದಾಳಿಯಲ್ಲಿ 46 ವರ್ಷದ ಅಂಗವಿಕಲ ವ್ಯಕ್ತಿ ಇಸ್ಸಾಮ್ ಅಲ್-ಫಾಯೆದ್ ಮೃತಪಟ್ಟಿದ್ದಾರೆ. 20 ವರ್ಷದ ಒಮರ್ ಲಾಹಮ್ ಬೆಥ್ ಲೆಹೆಮ್‌ನ ದಕ್ಷಿಣದಲ್ಲಿರುವ ಧೈಶೆಹ್ ನಿರಾಶ್ರಿತರ ಶಿಬಿರದ ಮೇಲಿನ ದಾಳಿಯಲ್ಲಿ ಮೃತಪಟ್ಟಿದ್ದಾರೆ.

ಜಬಾಲಿಯಾ ನಿರಾಶ್ರಿತರ ಶಿಬಿರದಲ್ಲಿರುವ ಅಲ್-ಫಖೂರಾ ಶಾಲೆಯ ಮೇಲೆ ನಡೆದ ದಾಳಿಯಲ್ಲಿ ಕನಿಷ್ಠ 50 ಜನರು ಸಾವನ್ನಪ್ಪಿದ್ದಾರೆ ಎಂದು ಗಾಜಾದ ಆರೋಗ್ಯ ಸಚಿವಾಲಯ ತಿಳಿಸಿದೆ. ಅಲ್-ಫಖೂರಾ ಶಾಲೆಯನ್ನು ವಿಶ್ವಸಂಸ್ಥೆ ನಡೆಸುತ್ತಿತ್ತು. ಈ ಶಾಲೆಯನ್ನು ಸ್ಥಳಾಂತರಗೊಂಡ ಪ್ಯಾಲೆಸ್ತೀನಿಯನ್ನರ ತಾತ್ಕಾಲಿಕ ಶಿಬಿರವನ್ನಾಗಿ ಪರಿವರ್ತಿಸಲಾಗಿತ್ತು.

ಮತ್ತೊಂದು ಕಟ್ಟಡದ ಮೇಲೆ ನಡೆದ ಪ್ರತ್ಯೇಕ ದಾಳಿಯಲ್ಲಿ ಒಂದೇ ಕುಟುಂಬದ 32 ಮಂದಿ ಹತ್ಯೆಗೀಡಾಗಿದ್ದು ಇವರಲ್ಲಿ 19 ಮಂದಿ ಮಕ್ಕಳು ಸೇರಿದ್ದಾರೆ. ಟಾಲ್ ಅಜ್-ಝಾತಾರ್‌ನ ಶಾಲೆಯ ಮೇಲಿನ ದಾಳಿಯಿಂದ ಅಪಾರ ಸಾವುನೋವುಗಳು ವರದಿಯಾಗಿವೆ.

ದೃಶ್ಯಗಳು ಭಯಾನಕವಾಗಿದ್ದವು. ಮಹಿಳೆಯರು ಮತ್ತು ಮಕ್ಕಳ ಶವಗಳು ನೆಲದ ಮೇಲೆ ಬಿದ್ದಕೊಂಡಿದೆ. ಜನರು ಸಹಾಯಕ್ಕಾಗಿ ಕಿರುಚುತ್ತಿದ್ದರು ಎಂದು ಅಲ್-ಫಖೂರಾ ದಾಳಿಯಲ್ಲಿ ಬದುಕುಳಿದ ಅಹ್ಮದ್ ರಾಡ್ವಾನ್ ಮಾದ್ಯಮಗಳಿಗೆ ತಿಳಿಸಿದ್ದಾರೆ.

ಮೃತದೇಹಗಳು ಚದುರಿಹೋಗಿವೆ, ಮಾಂಸದ ತುಂಡುಗಳು ಬಿದ್ದುಕೊಂಡಿದೆ. ಯಾರೂ ಕೂಡ ತಮ್ಮ ಮಕ್ಕಳನ್ನು ಗುರುತಿಸಲು ಸಾಧ್ಯವಿಲ್ಲ. ನಮ್ಮ ಜೀವನ ನರಕವಾಗಿದೆ ಎಂದು ವ್ಯಕ್ತಿಯೋರ್ವರು ಅಲ್‌ ಜಝೀರಾ ಜೊತೆ ಮಾತನಾಡುತ್ತಾ ಹೇಳಿದ್ದಾರೆ.

ಯುಎನ್‌ಆರ್‌ಡಬ್ಲ್ಯುಎ ಏಜೆನ್ಸಿಯ ಮುಖ್ಯಸ್ಥ ಫಿಲಿಪ್ ಲಜ್ಜರಿನಿ ಘಟನೆಯ ಭಯಾನಕ ಚಿತ್ರಗಳನ್ನು ವಿವರಿಸಿದರೆ, ಈಜಿಪ್ಟ್ ಬಾಂಬ್ ದಾಳಿಯನ್ನು ಯುದ್ಧಾಪರಾಧ ಮತ್ತು ವಿಶ್ವಸಂಸ್ಥೆಗೆ ಉದ್ದೇಶಪೂರ್ವಕ ಅವಮಾನ ಎಂದು ಕರೆದಿದೆ.

ಗಾಝಾ ಮೇಲೆ ಇಸ್ರೇಲ್‌ ಯುದ್ಧ ಘೋಷಿಸಿದ ಬಳಿಕ ಈವೆರೆಗೆ ಪ್ಯಾಲೆಸ್ತೀನ್‌ನಲ್ಲಿ 12,000ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ  5,000ಕ್ಕೂ ಹೆಚ್ಚು ಮಕ್ಕಳು ಮತ್ತು 3,300 ಮಹಿಳೆಯರು ಸೇರಿದ್ದಾರೆ. 30,000 ಮಂದಿ ಗಾಯಗೊಂಡಿದ್ದಾರೆ ಎಂದು ಪ್ಯಾಲೆಸ್ತೀನ್ ಸರಕಾರಿ ಮಾದ್ಯಮ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ವರದಿಯ ಪ್ರಕಾರ 1,800 ಮಕ್ಕಳು ಸೇರಿದಂತೆ ಸುಮಾರು 3,750 ಜನರು ಇನ್ನೂ ಪತ್ತೆಯಾಗಿಲ್ಲ. ಮೃತರಲ್ಲಿ ಒಟ್ಟು 200 ವೈದ್ಯರು, 22 ಸಿವಿಲ್ ಡಿಫೆನ್ಸ್ ಸಿಬ್ಬಂದಿ ಮತ್ತು 51 ಪತ್ರಕರ್ತರು ಕೂಡ ಸೇರಿದ್ದಾರೆ.

ಇಸ್ರೇಲ್‌ ಆಕ್ರಮಣದಿಂದ 25 ಆಸ್ಪತ್ರೆಗಳು ಮತ್ತು 52 ಆರೋಗ್ಯ ಕೇಂದ್ರಗಳು ಕಾರ್ಯಾಚರಣೆ ಸ್ಥಗಿತಗೊಳಿಸಿದೆ. ಇದಲ್ಲದೆ 55 ಆಂಬ್ಯುಲೆನ್ಸ್‌ಗಳನ್ನು ಇಸ್ರೇಲ್‌ ಪಡೆಗಳು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಇಸ್ರೇಲ್‌ ದಾಳಿಯಲ್ಲಿ ಆಸ್ಪತ್ರೆಗಳು, ಮಸೀದಿಗಳು ಮತ್ತು ಚರ್ಚ್‌ಗಳು ಸೇರಿದಂತೆ ಸಾವಿರಾರು ಕಟ್ಟಡಗಳು ಧ್ವಂಸಗೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...