Homeಅಂತರಾಷ್ಟ್ರೀಯಗಾಝಾ: ಶಾಲೆಗಳು, ನಿರಾಶ್ರಿತರ ಶಿಬಿರಗಳ ಮೇಲೆ ಇಸ್ರೇಲ್ ದಾಳಿ

ಗಾಝಾ: ಶಾಲೆಗಳು, ನಿರಾಶ್ರಿತರ ಶಿಬಿರಗಳ ಮೇಲೆ ಇಸ್ರೇಲ್ ದಾಳಿ

- Advertisement -
- Advertisement -

ಇಸ್ರೇಲ್‌- ಪ್ಯಾಲೆಸ್ತೀನ್‌ ಮೇಲೆ ಘೋಷಿಸಿದ ಯುದ್ಧ ಇಂದಿಗೆ 44ನೇ ದಿನಕ್ಕೆ ಕಾಲಿಟ್ಟಿದೆ.  ಉತ್ತರ, ಮಧ್ಯ ಮತ್ತು ದಕ್ಷಿಣ ಗಾಝಾದಲ್ಲಿ ನಡೆಸಿದ ವೈಮಾನಿಕ ದಾಳಿಗೆ ಮಕ್ಕಳು ಸೇರಿದಂತೆ ನೂರಾರು ಜನರು ಮೃತಪಟ್ಟಿದ್ದಾರೆ ಎಂದು ಅಲ್‌ ಜಝೀರಾ ವರದಿ ಮಾಡಿದೆ.

ಗಾಝಾದಲ್ಲಿರುವ ಬುರೇಜ್ ಮತ್ತು ನುಸಿರಾತ್ ನಿರಾಶ್ರಿತರ ಶಿಬಿರಗಳ ಮೇಲೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಎಂದು ಹಮಾಸ್‌ನ  ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ವೆಸ್ಟ್‌ಬ್ಯಾಂಕ್‌ ಮೇಲೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಕನಿಷ್ಠ ಇಬ್ಬರು ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ.

ದಕ್ಷಿಣ ಖಾನ್ ಯೂನಿಸ್ ನಗರದಲ್ಲಿ ನಡೆದ ದಾಳಿಯಲ್ಲಿ ಓರ್ವ ಮಹಿಳೆ ಮತ್ತು ಆಕೆಯ ಮಗು ಸಾವನ್ನಪ್ಪಿದ್ದಾರೆ ಎಂದು ಪ್ಯಾಲೆಸ್ತೀನ್ ಸುದ್ದಿ ಸಂಸ್ಥೆ ವಫಾ ವರದಿ ಮಾಡಿದೆ.

ಜೆನಿನ್ ನಿರಾಶ್ರಿತರ ಶಿಬಿರದ ಮೇಲೆ ನಡೆಸಿದ ದಾಳಿಯಲ್ಲಿ 46 ವರ್ಷದ ಅಂಗವಿಕಲ ವ್ಯಕ್ತಿ ಇಸ್ಸಾಮ್ ಅಲ್-ಫಾಯೆದ್ ಮೃತಪಟ್ಟಿದ್ದಾರೆ. 20 ವರ್ಷದ ಒಮರ್ ಲಾಹಮ್ ಬೆಥ್ ಲೆಹೆಮ್‌ನ ದಕ್ಷಿಣದಲ್ಲಿರುವ ಧೈಶೆಹ್ ನಿರಾಶ್ರಿತರ ಶಿಬಿರದ ಮೇಲಿನ ದಾಳಿಯಲ್ಲಿ ಮೃತಪಟ್ಟಿದ್ದಾರೆ.

ಜಬಾಲಿಯಾ ನಿರಾಶ್ರಿತರ ಶಿಬಿರದಲ್ಲಿರುವ ಅಲ್-ಫಖೂರಾ ಶಾಲೆಯ ಮೇಲೆ ನಡೆದ ದಾಳಿಯಲ್ಲಿ ಕನಿಷ್ಠ 50 ಜನರು ಸಾವನ್ನಪ್ಪಿದ್ದಾರೆ ಎಂದು ಗಾಜಾದ ಆರೋಗ್ಯ ಸಚಿವಾಲಯ ತಿಳಿಸಿದೆ. ಅಲ್-ಫಖೂರಾ ಶಾಲೆಯನ್ನು ವಿಶ್ವಸಂಸ್ಥೆ ನಡೆಸುತ್ತಿತ್ತು. ಈ ಶಾಲೆಯನ್ನು ಸ್ಥಳಾಂತರಗೊಂಡ ಪ್ಯಾಲೆಸ್ತೀನಿಯನ್ನರ ತಾತ್ಕಾಲಿಕ ಶಿಬಿರವನ್ನಾಗಿ ಪರಿವರ್ತಿಸಲಾಗಿತ್ತು.

ಮತ್ತೊಂದು ಕಟ್ಟಡದ ಮೇಲೆ ನಡೆದ ಪ್ರತ್ಯೇಕ ದಾಳಿಯಲ್ಲಿ ಒಂದೇ ಕುಟುಂಬದ 32 ಮಂದಿ ಹತ್ಯೆಗೀಡಾಗಿದ್ದು ಇವರಲ್ಲಿ 19 ಮಂದಿ ಮಕ್ಕಳು ಸೇರಿದ್ದಾರೆ. ಟಾಲ್ ಅಜ್-ಝಾತಾರ್‌ನ ಶಾಲೆಯ ಮೇಲಿನ ದಾಳಿಯಿಂದ ಅಪಾರ ಸಾವುನೋವುಗಳು ವರದಿಯಾಗಿವೆ.

ದೃಶ್ಯಗಳು ಭಯಾನಕವಾಗಿದ್ದವು. ಮಹಿಳೆಯರು ಮತ್ತು ಮಕ್ಕಳ ಶವಗಳು ನೆಲದ ಮೇಲೆ ಬಿದ್ದಕೊಂಡಿದೆ. ಜನರು ಸಹಾಯಕ್ಕಾಗಿ ಕಿರುಚುತ್ತಿದ್ದರು ಎಂದು ಅಲ್-ಫಖೂರಾ ದಾಳಿಯಲ್ಲಿ ಬದುಕುಳಿದ ಅಹ್ಮದ್ ರಾಡ್ವಾನ್ ಮಾದ್ಯಮಗಳಿಗೆ ತಿಳಿಸಿದ್ದಾರೆ.

ಮೃತದೇಹಗಳು ಚದುರಿಹೋಗಿವೆ, ಮಾಂಸದ ತುಂಡುಗಳು ಬಿದ್ದುಕೊಂಡಿದೆ. ಯಾರೂ ಕೂಡ ತಮ್ಮ ಮಕ್ಕಳನ್ನು ಗುರುತಿಸಲು ಸಾಧ್ಯವಿಲ್ಲ. ನಮ್ಮ ಜೀವನ ನರಕವಾಗಿದೆ ಎಂದು ವ್ಯಕ್ತಿಯೋರ್ವರು ಅಲ್‌ ಜಝೀರಾ ಜೊತೆ ಮಾತನಾಡುತ್ತಾ ಹೇಳಿದ್ದಾರೆ.

ಯುಎನ್‌ಆರ್‌ಡಬ್ಲ್ಯುಎ ಏಜೆನ್ಸಿಯ ಮುಖ್ಯಸ್ಥ ಫಿಲಿಪ್ ಲಜ್ಜರಿನಿ ಘಟನೆಯ ಭಯಾನಕ ಚಿತ್ರಗಳನ್ನು ವಿವರಿಸಿದರೆ, ಈಜಿಪ್ಟ್ ಬಾಂಬ್ ದಾಳಿಯನ್ನು ಯುದ್ಧಾಪರಾಧ ಮತ್ತು ವಿಶ್ವಸಂಸ್ಥೆಗೆ ಉದ್ದೇಶಪೂರ್ವಕ ಅವಮಾನ ಎಂದು ಕರೆದಿದೆ.

ಗಾಝಾ ಮೇಲೆ ಇಸ್ರೇಲ್‌ ಯುದ್ಧ ಘೋಷಿಸಿದ ಬಳಿಕ ಈವೆರೆಗೆ ಪ್ಯಾಲೆಸ್ತೀನ್‌ನಲ್ಲಿ 12,000ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ  5,000ಕ್ಕೂ ಹೆಚ್ಚು ಮಕ್ಕಳು ಮತ್ತು 3,300 ಮಹಿಳೆಯರು ಸೇರಿದ್ದಾರೆ. 30,000 ಮಂದಿ ಗಾಯಗೊಂಡಿದ್ದಾರೆ ಎಂದು ಪ್ಯಾಲೆಸ್ತೀನ್ ಸರಕಾರಿ ಮಾದ್ಯಮ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ವರದಿಯ ಪ್ರಕಾರ 1,800 ಮಕ್ಕಳು ಸೇರಿದಂತೆ ಸುಮಾರು 3,750 ಜನರು ಇನ್ನೂ ಪತ್ತೆಯಾಗಿಲ್ಲ. ಮೃತರಲ್ಲಿ ಒಟ್ಟು 200 ವೈದ್ಯರು, 22 ಸಿವಿಲ್ ಡಿಫೆನ್ಸ್ ಸಿಬ್ಬಂದಿ ಮತ್ತು 51 ಪತ್ರಕರ್ತರು ಕೂಡ ಸೇರಿದ್ದಾರೆ.

ಇಸ್ರೇಲ್‌ ಆಕ್ರಮಣದಿಂದ 25 ಆಸ್ಪತ್ರೆಗಳು ಮತ್ತು 52 ಆರೋಗ್ಯ ಕೇಂದ್ರಗಳು ಕಾರ್ಯಾಚರಣೆ ಸ್ಥಗಿತಗೊಳಿಸಿದೆ. ಇದಲ್ಲದೆ 55 ಆಂಬ್ಯುಲೆನ್ಸ್‌ಗಳನ್ನು ಇಸ್ರೇಲ್‌ ಪಡೆಗಳು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಇಸ್ರೇಲ್‌ ದಾಳಿಯಲ್ಲಿ ಆಸ್ಪತ್ರೆಗಳು, ಮಸೀದಿಗಳು ಮತ್ತು ಚರ್ಚ್‌ಗಳು ಸೇರಿದಂತೆ ಸಾವಿರಾರು ಕಟ್ಟಡಗಳು ಧ್ವಂಸಗೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...