HomeUncategorizedಹೋಸಪೇಟೆ: ಪ್ರಮುಖ ಸ್ಪರ್ಧಿಗಳು ನಾಲ್ಕು - ಆನಂದ್ ಸಿಂಗ್ ಗೆಲ್ಲುವ ಸಾಧ್ಯತೆಯೇ ಹೆಚ್ಚು

ಹೋಸಪೇಟೆ: ಪ್ರಮುಖ ಸ್ಪರ್ಧಿಗಳು ನಾಲ್ಕು – ಆನಂದ್ ಸಿಂಗ್ ಗೆಲ್ಲುವ ಸಾಧ್ಯತೆಯೇ ಹೆಚ್ಚು

- Advertisement -
- Advertisement -

ಗಣಿ ದುಡ್ಡಿನಲ್ಲಿ ಪ್ರಜಾಪ್ರಭುತ್ವದ ರಕ್ತಹೀರುವ ತಿಗಣೆಗಳು ಬಳ್ಳಾರಿಯಲ್ಲಿ ಮೇಲೆದ್ದ ಮೇಲೆ ಅದು ರಾಜ್ಯದ ಗಮನ ಸೆಳೆಯುವ ಜಿಲ್ಲೆಯಾಗಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ಮಧ್ಯೆ ಮರಕೋತಿ ಆಟವಾಡುತ್ತಿರುವ ಆನಂದ್ ಸಿಂಗ್ ವಿಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದ ಆರಿಸಿ ಬಂದು ರಾಜೀನಾಮೆ ಕೊಟ್ಟು ಅನರ್ಹ ಶಾಸಕನಾಗಿ ಬಿಜೆಪಿಯ ಅಭ್ಯರ್ಥಿಯಾಗಿದ್ದಾರೆ. ವಿಜಯನಗರ ಪ್ರತ್ಯೇಕ ಜಿಲ್ಲೆ ಮಾಡಬೇಕು, ಅನುದಾನ ಹೆಚ್ಚು ಮಾಡಬೇಕು ಮತ್ತು ಜಿಂದಾಲ್ ಕಂಪನಿಗೆ ಸರ್ಕಾರ ಭೂಮಿ ನೀಡಬಾರದು ಎನ್ನುವ ಕಾರಣಗಳನ್ನು ರಾಜೀನಾಮೆ ಕೊಟ್ಟಾಗ ಹೇಳಿದ್ದರು. ಅದು ಸ್ವಂತ ಮಾನ ಉಳಿಸಿಕೊಳ್ಳುವುದರ ಜೊತೆಗೆ, ಮುಂದಿನ ಉಪಚುನಾವಣೆಯ ಮೇಲೆ ಕಣ್ಣಿಟ್ಟೇ ಆಡಿದ ಮಾತಾಗಿತ್ತು. ಆದರೆ ಈ ಚುನಾವಣೆಯಲ್ಲಿ ಅವೆಲ್ಲಾ ಮೂಲೆಗೆ ಸರಿದಿವೆ.

ಕಾಂಗ್ರೆಸ್ ಪಕ್ಷದಿಂದ ಸಂಡೂರಿನ ರಾಜಮನೆತನದ ವಿ.ವೈ.ಘೋರ್ಫಡೆ ಕಣದಲ್ಲಿದ್ದು, ಜೆಡಿಎಸ್‍ನಿಂದ ಎನ್.ಎಂ.ನಬಿ ಕಣದಲ್ಲಿದ್ದಾರೆ. ಬಿಜೆಪಿಯಿಂದ ಬಂಡಾಯವೆದ್ದಿರುವ ಕವಿರಾಜ ಅರಸ್ ಪಕ್ಷೇತರ ಅಭ್ಯರ್ಥಿಯಾಗಿದ್ದಾರೆ. ಕಾಂಗ್ರೆಸ್‍ಗೆ ಗೆಲ್ಲುವ ಅವಕಾಶಗಳಿದ್ದರೂ ಸಹ ಪಕ್ಷದ ಪರವಾಗಿ ಕೆಲಸಮಾಡುವ ನಾಯಕರ ಕೊರತೆಯೇ ಎದ್ದು ಕಾಣುತ್ತಿದೆ. ಆದರೆ ಜೆಡಿಎಸ್ ಹೆಚ್ಚು ಕೆಲಸ ಮಾಡುತ್ತಿದೆಯಾದರೂ ಮತಗಳನ್ನು ಸೆಳೆಯುವಲ್ಲಿ ವಿಫಲವಾಗುತ್ತಿದೆ ಎನ್ನಲಾಗಿದೆ. ಎನ್.ಎಂ.ನಬಿಯವರು ಎಂ.ಪಿ.ಪ್ರಕಾಶ್ ಅವರ ಜೊತೆಗೆ ಸಚಿವರಾಗಿದ್ದಂತಹ ಹಿರಿಯರು. ಆಗಿನಿಂದಲೂ ಜೆಡಿಎಸ್‍ನಲ್ಲೇ ಇದ್ದವರು. ಇವರಿಗೆ ಇಲ್ಲಿ ಈಗ ಟಿಕೆಟ್ ದೊರೆತಿದೆ.

ಕಳೆದ ಬಾರಿ ಕಾಂಗ್ರೆಸ್‍ನಿಂದ ಬಂಡಾಯವೆದ್ದು, ಜೆಡಿಎಸ್‍ನಿಂದ ಕಣಕ್ಕಿಳಿದು 3835 ಮತಗಳ ಅಂತರದಿಂದ ಸೋತಿದ್ದಂತಹ ದೀಪಕ್ ಸಿಂಗ್ ಈ ಬಾರಿ ಕಾಂಗ್ರೆಸ್‍ನ ವಿ.ವೈ.ಘೋರ್ಪಡೆಯ ಪರವಾಗಿ ಕೆಲಸ ಮಾಡುವುದಾಗಿ ಘೋಷಿಸಿದ್ದಾರೆ. ಆನಂದ್ ಸಿಂಗ್ ಮತಗಳನ್ನು ಹಿಡಿದಿಟ್ಟುಕೊಳ್ಳುವಲ್ಲಿ ಈ ಬಾರಿ ಸಫಲವಾಗುವ ಸಾಧ್ಯತೆಗಳೇ ಹೆಚ್ಚು ಎಂದು ಹೇಳಲಾಗುತ್ತಿದೆ. ಮೇಲ್ನೋಟಕ್ಕೆ ತ್ರಿಕೋನ ಸ್ಪರ್ಧೆಯಂತೆ ಕಂಡರು ಸಹ ಕಾಂಗ್ರೆಸ್ ಮತ್ತು ಬಿಜೆಪಿಗೆ ಜಿದ್ದಾಜಿದ್ದಿ ಇರಲಿದೆ. ಬೇಕೆಂದಾಗ ರಾಜೀನಾಮೆ ನೀಡಿ ಉಪ ಚುನಾವಣೆ ನಡೆಸುವ ಮೂಲಕ ಜನರ ತೆರಿಗೆ ಹಣವನ್ನು ಪೋಲುಮಾಡುವ ರಾಜೀನಾಮೆ ಶೂರರನ್ನು ಸೋಲಿಸಬೇಕು ಎಂಬ ಮನಸ್ಸನ್ನು ವಿಜಯನಗರ ಕ್ಷೇತ್ರದ ಜನತೆ ಮಾಡಿದ ಹಾಗೆ ಕಾಣಿಸುತ್ತಿಲ್ಲ. ಹಾಗಾಗಿ ಕೊನೆಕ್ಷಣದ ಅಚ್ಚರಿ ನಡೆಯದ ಹೊರತು ಆನಂದ್‍ಸಿಂಗ್‍ಗೆ ಗೆಲ್ಲುವ ಎಲ್ಲಾ ಸಾಧ್ಯತೆಗಳು ಇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...