HomeUncategorizedಹೋಸಪೇಟೆ: ಪ್ರಮುಖ ಸ್ಪರ್ಧಿಗಳು ನಾಲ್ಕು - ಆನಂದ್ ಸಿಂಗ್ ಗೆಲ್ಲುವ ಸಾಧ್ಯತೆಯೇ ಹೆಚ್ಚು

ಹೋಸಪೇಟೆ: ಪ್ರಮುಖ ಸ್ಪರ್ಧಿಗಳು ನಾಲ್ಕು – ಆನಂದ್ ಸಿಂಗ್ ಗೆಲ್ಲುವ ಸಾಧ್ಯತೆಯೇ ಹೆಚ್ಚು

- Advertisement -
- Advertisement -

ಗಣಿ ದುಡ್ಡಿನಲ್ಲಿ ಪ್ರಜಾಪ್ರಭುತ್ವದ ರಕ್ತಹೀರುವ ತಿಗಣೆಗಳು ಬಳ್ಳಾರಿಯಲ್ಲಿ ಮೇಲೆದ್ದ ಮೇಲೆ ಅದು ರಾಜ್ಯದ ಗಮನ ಸೆಳೆಯುವ ಜಿಲ್ಲೆಯಾಗಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ಮಧ್ಯೆ ಮರಕೋತಿ ಆಟವಾಡುತ್ತಿರುವ ಆನಂದ್ ಸಿಂಗ್ ವಿಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದ ಆರಿಸಿ ಬಂದು ರಾಜೀನಾಮೆ ಕೊಟ್ಟು ಅನರ್ಹ ಶಾಸಕನಾಗಿ ಬಿಜೆಪಿಯ ಅಭ್ಯರ್ಥಿಯಾಗಿದ್ದಾರೆ. ವಿಜಯನಗರ ಪ್ರತ್ಯೇಕ ಜಿಲ್ಲೆ ಮಾಡಬೇಕು, ಅನುದಾನ ಹೆಚ್ಚು ಮಾಡಬೇಕು ಮತ್ತು ಜಿಂದಾಲ್ ಕಂಪನಿಗೆ ಸರ್ಕಾರ ಭೂಮಿ ನೀಡಬಾರದು ಎನ್ನುವ ಕಾರಣಗಳನ್ನು ರಾಜೀನಾಮೆ ಕೊಟ್ಟಾಗ ಹೇಳಿದ್ದರು. ಅದು ಸ್ವಂತ ಮಾನ ಉಳಿಸಿಕೊಳ್ಳುವುದರ ಜೊತೆಗೆ, ಮುಂದಿನ ಉಪಚುನಾವಣೆಯ ಮೇಲೆ ಕಣ್ಣಿಟ್ಟೇ ಆಡಿದ ಮಾತಾಗಿತ್ತು. ಆದರೆ ಈ ಚುನಾವಣೆಯಲ್ಲಿ ಅವೆಲ್ಲಾ ಮೂಲೆಗೆ ಸರಿದಿವೆ.

ಕಾಂಗ್ರೆಸ್ ಪಕ್ಷದಿಂದ ಸಂಡೂರಿನ ರಾಜಮನೆತನದ ವಿ.ವೈ.ಘೋರ್ಫಡೆ ಕಣದಲ್ಲಿದ್ದು, ಜೆಡಿಎಸ್‍ನಿಂದ ಎನ್.ಎಂ.ನಬಿ ಕಣದಲ್ಲಿದ್ದಾರೆ. ಬಿಜೆಪಿಯಿಂದ ಬಂಡಾಯವೆದ್ದಿರುವ ಕವಿರಾಜ ಅರಸ್ ಪಕ್ಷೇತರ ಅಭ್ಯರ್ಥಿಯಾಗಿದ್ದಾರೆ. ಕಾಂಗ್ರೆಸ್‍ಗೆ ಗೆಲ್ಲುವ ಅವಕಾಶಗಳಿದ್ದರೂ ಸಹ ಪಕ್ಷದ ಪರವಾಗಿ ಕೆಲಸಮಾಡುವ ನಾಯಕರ ಕೊರತೆಯೇ ಎದ್ದು ಕಾಣುತ್ತಿದೆ. ಆದರೆ ಜೆಡಿಎಸ್ ಹೆಚ್ಚು ಕೆಲಸ ಮಾಡುತ್ತಿದೆಯಾದರೂ ಮತಗಳನ್ನು ಸೆಳೆಯುವಲ್ಲಿ ವಿಫಲವಾಗುತ್ತಿದೆ ಎನ್ನಲಾಗಿದೆ. ಎನ್.ಎಂ.ನಬಿಯವರು ಎಂ.ಪಿ.ಪ್ರಕಾಶ್ ಅವರ ಜೊತೆಗೆ ಸಚಿವರಾಗಿದ್ದಂತಹ ಹಿರಿಯರು. ಆಗಿನಿಂದಲೂ ಜೆಡಿಎಸ್‍ನಲ್ಲೇ ಇದ್ದವರು. ಇವರಿಗೆ ಇಲ್ಲಿ ಈಗ ಟಿಕೆಟ್ ದೊರೆತಿದೆ.

ಕಳೆದ ಬಾರಿ ಕಾಂಗ್ರೆಸ್‍ನಿಂದ ಬಂಡಾಯವೆದ್ದು, ಜೆಡಿಎಸ್‍ನಿಂದ ಕಣಕ್ಕಿಳಿದು 3835 ಮತಗಳ ಅಂತರದಿಂದ ಸೋತಿದ್ದಂತಹ ದೀಪಕ್ ಸಿಂಗ್ ಈ ಬಾರಿ ಕಾಂಗ್ರೆಸ್‍ನ ವಿ.ವೈ.ಘೋರ್ಪಡೆಯ ಪರವಾಗಿ ಕೆಲಸ ಮಾಡುವುದಾಗಿ ಘೋಷಿಸಿದ್ದಾರೆ. ಆನಂದ್ ಸಿಂಗ್ ಮತಗಳನ್ನು ಹಿಡಿದಿಟ್ಟುಕೊಳ್ಳುವಲ್ಲಿ ಈ ಬಾರಿ ಸಫಲವಾಗುವ ಸಾಧ್ಯತೆಗಳೇ ಹೆಚ್ಚು ಎಂದು ಹೇಳಲಾಗುತ್ತಿದೆ. ಮೇಲ್ನೋಟಕ್ಕೆ ತ್ರಿಕೋನ ಸ್ಪರ್ಧೆಯಂತೆ ಕಂಡರು ಸಹ ಕಾಂಗ್ರೆಸ್ ಮತ್ತು ಬಿಜೆಪಿಗೆ ಜಿದ್ದಾಜಿದ್ದಿ ಇರಲಿದೆ. ಬೇಕೆಂದಾಗ ರಾಜೀನಾಮೆ ನೀಡಿ ಉಪ ಚುನಾವಣೆ ನಡೆಸುವ ಮೂಲಕ ಜನರ ತೆರಿಗೆ ಹಣವನ್ನು ಪೋಲುಮಾಡುವ ರಾಜೀನಾಮೆ ಶೂರರನ್ನು ಸೋಲಿಸಬೇಕು ಎಂಬ ಮನಸ್ಸನ್ನು ವಿಜಯನಗರ ಕ್ಷೇತ್ರದ ಜನತೆ ಮಾಡಿದ ಹಾಗೆ ಕಾಣಿಸುತ್ತಿಲ್ಲ. ಹಾಗಾಗಿ ಕೊನೆಕ್ಷಣದ ಅಚ್ಚರಿ ನಡೆಯದ ಹೊರತು ಆನಂದ್‍ಸಿಂಗ್‍ಗೆ ಗೆಲ್ಲುವ ಎಲ್ಲಾ ಸಾಧ್ಯತೆಗಳು ಇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...