Homeಕರ್ನಾಟಕಹೊಸಕೋಟೆ ಉಪಚುನಾವಣೆ: ನೂರು ಕೋಟಿ ಕುಳಗಳ ಆರ್ಭಟದಲ್ಲಿ ಕಾಂಚಾಣ ಝಣಝಣ

ಹೊಸಕೋಟೆ ಉಪಚುನಾವಣೆ: ನೂರು ಕೋಟಿ ಕುಳಗಳ ಆರ್ಭಟದಲ್ಲಿ ಕಾಂಚಾಣ ಝಣಝಣ

- Advertisement -
- Advertisement -

ಹೊಸಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ತ್ರಿಕೋನ ಸ್ಫರ್ದೆಯಿಂದ ರಂಗೇರಿದೆ. ಅನರ್ಹ ಶಾಸಕ ಎಂ.ಟಿ.ಬಿ.ನಾಗರಾಜ್ ಬಿಜೆಪಿಯಿಂದ, ಕಾಂಗ್ರೆಸ್‍ನಿಂದ ಭೈರತಿ ಸುರೇಶ್ ಹೆಂಡತಿ ಪದ್ಮಾವತಿ ಮತ್ತು ಬಿಜೆಪಿಯಿಂದ ಬಂಡಾಯವೆದ್ದು ಶರತ್ ಬಚ್ಚೇಗೌಡ ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. ಕಾಂಗ್ರೆಸ್‍ನಿಂದ ಬಿಜೆಪಿಗೆ ಬಂದ ಎಂ.ಟಿ.ಬಿ ನಾಗರಾಜ್‍ಗೆ ಈ ಚುನಾವಣೆಯಲ್ಲಿ ಗೆಲ್ಲುವುದು ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಕಾಂಗ್ರೆಸ್ ಪಕ್ಷವೂ ಸಹ ಗೆಲ್ಲಲೇಬೇಕೆಂದು ಜಿದ್ದಿಗೆಬಿದ್ದಿದ್ದು ಈಗಾಗಲೇ ಒಂದು ಸುತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಕ್ಷೇತ್ರಕ್ಕೆ ಬಂದು ಪ್ರಚಾರ ಮಾಡಿಹೋಗಿದ್ದಾರೆ. ಇತ್ತ ಶರತ್ ಬಚ್ಚೇಗೌಡ ಕುಟುಂಬದ ಪಾಳೆಯಪಟ್ಟನ್ನು ಉಳಿಸಿಕೊಳ್ಳಲು ಹೇಗಾದರೂ ಈ ಕ್ಷೇತ್ರವನ್ನು ಮತ್ತೆ ತಮ್ಮ ತೆಕ್ಕೆಗೆ ತೆಗೆದುಕೊಳ್ಳಬೇಕೆಂದು ಪ್ರಯತ್ನಿಸುತ್ತಿದ್ದಾರೆ. ಮೂವರೂ ಅಭ್ಯರ್ಥಿಗಳ ಘೋಷಿತ ಆಸ್ತಿ ತಲಾ 100 ಕೋಟಿಗಳಿಗೂ ಮೀರಿದೆ!!

ಕಾಂಗ್ರೆಸ್ ಪಕ್ಷದ ವತಿಯಿಂದ ಈಗಾಗಲೇ ಒಂದು ಸುತ್ತು ಆಮಿಷ ಒಡ್ಡಲು 35 ಸಾವಿರಕ್ಕೂ ಹೆಚ್ಚು ಕುಕ್ಕರ್ ಹಂಚಿದ್ದು, 5 ಸಾವಿರ ಕುಕ್ಕರ್‍ಗಳನ್ನು ಸೀಸ್ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಹಾಗೆಯೇ ಬಿಜೆಪಿಯ ಅಭ್ಯರ್ಥಿ ಎಂ.ಟಿ.ಬಿ ನಾಗರಾಜ್ ಕೂಡ ಒಂದು ಸಾವಿರ ಹಣ ಮತ್ತು ಬೆಳ್ಳಿನಾಣ್ಯಗಳನ್ನು ಹಂಚುತ್ತಿದ್ದಾರೆ ಎಂದು ವಾಟ್ಸಪ್‍ಗಳಲ್ಲಿ ಹರಿದಾಡುತ್ತದೆ. ಅಷ್ಟೇ ಅಲ್ಲದೇ ಮತದಾರರಿಗೆ ಉಂಗುರಗಳನ್ನು ಹಂಚುತ್ತಿದ್ದಾರೆಂಬ ಆರೋಪಗಳು ಕೇಳಿಬರುತ್ತಿವೆ. ಶರತ್ ಬಚ್ಚೇಗೌಡ ಯಾರು ಏನೇ ಕೊಟ್ಟರೂ ತೆಗದುಕೊಳ್ಳಿ, ಆದರೆ ಮತವನ್ನು ಮಾತ್ರ ನಮಗೆ ಹಾಕಿ ಎಂದು ಪ್ರಚಾರ ಮಾಡುತ್ತಿದ್ದಾರೆ. ಬೇರೆಯವರು ಕುಕ್ಕರ್ ಹಂಚುತ್ತಿದ್ದು ಇವರ ಚಿಹ್ನೆಯೇ ಕುಕ್ಕರ್ ಬಂದಿರುವುದು ಕಾಕತಾಳೀಯವಾಗಿದ್ದು ಈತನಿಗೆ ಒಳಗೊಳಗೆ ಖುಷಿ ತಂದಿದೆ. ಜೆಡಿಎಸ್ ಸಹ ಶರತ್ ಬಚ್ಚೆಗೌಡರನ್ನು ಬೆಂಬಲಿಸುತ್ತಿದ್ದು ನಿಖಿಲ್ ಕುಮಾರಸ್ವಾಮಿ ಚುನಾವಣಾ ಪ್ರಚಾರಕ್ಕೆ ಬರಲಿದ್ದಾರೆ ಎನ್ನಲಾಗಿದೆ.

ಮಗನ ಪರ ಕೆಲಸ ಮಾಡದಂತೆ ಬಿಜೆಪಿಯು ಬಚ್ಚೇಗೌಡರಿಗೆ ನೋಟೀಸ್‍ಗಳನ್ನು ಕೊಡುತ್ತಲೇ ಇದ್ದರೂ ಬಚ್ಚೇಗೌಡರು ಮನೆಯಿಂದಲೇ ಮಾಡಬಹುದಾದ್ದೆಲ್ಲವನ್ನೂ ಮಾಡುತ್ತಿದ್ದಾರೆ. ಈ ಕ್ಷೇತ್ರದಲ್ಲಿ ಹೋಸಕೋಟೆ ನಗರದ ಮತಗಳು ಮುಖ್ಯ ಪಾತ್ರ ವಹಿಸುತ್ತವೆ. 45 ಸಾವಿರಕ್ಕಿಂತ ಅಧಿಕ ಮತಗಳಿದ್ದು, ಅಂದಾಜು 50 ಬೂತುಗಳಿವೆ. ಇವುಗಳನ್ನು ಯಾರು ಅಧಿಕವಾಗಿ ಸೆಳೆಯುತ್ತಾರೋ ಅವರೇ ಗೆಲ್ಲುವ ಸಾಧ್ಯತೆ ಹೆಚ್ಚು ಎಂದು ಹೇಳಲಾಗುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ಈ ಕ್ಷೇತ್ರಕ್ಕೆ ಭೇಟಿ ನೀಡಲಿದ್ದು ಲಿಂಗಾಯತ, ವೀರಶೈವ ಮುಖಂಡರ ಸಭೆ ಕರೆದಿದ್ದಾರೆ ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...