Homeಕರ್ನಾಟಕಹೊಸಕೋಟೆ ಉಪಚುನಾವಣೆ: ನೂರು ಕೋಟಿ ಕುಳಗಳ ಆರ್ಭಟದಲ್ಲಿ ಕಾಂಚಾಣ ಝಣಝಣ

ಹೊಸಕೋಟೆ ಉಪಚುನಾವಣೆ: ನೂರು ಕೋಟಿ ಕುಳಗಳ ಆರ್ಭಟದಲ್ಲಿ ಕಾಂಚಾಣ ಝಣಝಣ

- Advertisement -
- Advertisement -

ಹೊಸಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ತ್ರಿಕೋನ ಸ್ಫರ್ದೆಯಿಂದ ರಂಗೇರಿದೆ. ಅನರ್ಹ ಶಾಸಕ ಎಂ.ಟಿ.ಬಿ.ನಾಗರಾಜ್ ಬಿಜೆಪಿಯಿಂದ, ಕಾಂಗ್ರೆಸ್‍ನಿಂದ ಭೈರತಿ ಸುರೇಶ್ ಹೆಂಡತಿ ಪದ್ಮಾವತಿ ಮತ್ತು ಬಿಜೆಪಿಯಿಂದ ಬಂಡಾಯವೆದ್ದು ಶರತ್ ಬಚ್ಚೇಗೌಡ ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. ಕಾಂಗ್ರೆಸ್‍ನಿಂದ ಬಿಜೆಪಿಗೆ ಬಂದ ಎಂ.ಟಿ.ಬಿ ನಾಗರಾಜ್‍ಗೆ ಈ ಚುನಾವಣೆಯಲ್ಲಿ ಗೆಲ್ಲುವುದು ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಕಾಂಗ್ರೆಸ್ ಪಕ್ಷವೂ ಸಹ ಗೆಲ್ಲಲೇಬೇಕೆಂದು ಜಿದ್ದಿಗೆಬಿದ್ದಿದ್ದು ಈಗಾಗಲೇ ಒಂದು ಸುತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಕ್ಷೇತ್ರಕ್ಕೆ ಬಂದು ಪ್ರಚಾರ ಮಾಡಿಹೋಗಿದ್ದಾರೆ. ಇತ್ತ ಶರತ್ ಬಚ್ಚೇಗೌಡ ಕುಟುಂಬದ ಪಾಳೆಯಪಟ್ಟನ್ನು ಉಳಿಸಿಕೊಳ್ಳಲು ಹೇಗಾದರೂ ಈ ಕ್ಷೇತ್ರವನ್ನು ಮತ್ತೆ ತಮ್ಮ ತೆಕ್ಕೆಗೆ ತೆಗೆದುಕೊಳ್ಳಬೇಕೆಂದು ಪ್ರಯತ್ನಿಸುತ್ತಿದ್ದಾರೆ. ಮೂವರೂ ಅಭ್ಯರ್ಥಿಗಳ ಘೋಷಿತ ಆಸ್ತಿ ತಲಾ 100 ಕೋಟಿಗಳಿಗೂ ಮೀರಿದೆ!!

ಕಾಂಗ್ರೆಸ್ ಪಕ್ಷದ ವತಿಯಿಂದ ಈಗಾಗಲೇ ಒಂದು ಸುತ್ತು ಆಮಿಷ ಒಡ್ಡಲು 35 ಸಾವಿರಕ್ಕೂ ಹೆಚ್ಚು ಕುಕ್ಕರ್ ಹಂಚಿದ್ದು, 5 ಸಾವಿರ ಕುಕ್ಕರ್‍ಗಳನ್ನು ಸೀಸ್ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಹಾಗೆಯೇ ಬಿಜೆಪಿಯ ಅಭ್ಯರ್ಥಿ ಎಂ.ಟಿ.ಬಿ ನಾಗರಾಜ್ ಕೂಡ ಒಂದು ಸಾವಿರ ಹಣ ಮತ್ತು ಬೆಳ್ಳಿನಾಣ್ಯಗಳನ್ನು ಹಂಚುತ್ತಿದ್ದಾರೆ ಎಂದು ವಾಟ್ಸಪ್‍ಗಳಲ್ಲಿ ಹರಿದಾಡುತ್ತದೆ. ಅಷ್ಟೇ ಅಲ್ಲದೇ ಮತದಾರರಿಗೆ ಉಂಗುರಗಳನ್ನು ಹಂಚುತ್ತಿದ್ದಾರೆಂಬ ಆರೋಪಗಳು ಕೇಳಿಬರುತ್ತಿವೆ. ಶರತ್ ಬಚ್ಚೇಗೌಡ ಯಾರು ಏನೇ ಕೊಟ್ಟರೂ ತೆಗದುಕೊಳ್ಳಿ, ಆದರೆ ಮತವನ್ನು ಮಾತ್ರ ನಮಗೆ ಹಾಕಿ ಎಂದು ಪ್ರಚಾರ ಮಾಡುತ್ತಿದ್ದಾರೆ. ಬೇರೆಯವರು ಕುಕ್ಕರ್ ಹಂಚುತ್ತಿದ್ದು ಇವರ ಚಿಹ್ನೆಯೇ ಕುಕ್ಕರ್ ಬಂದಿರುವುದು ಕಾಕತಾಳೀಯವಾಗಿದ್ದು ಈತನಿಗೆ ಒಳಗೊಳಗೆ ಖುಷಿ ತಂದಿದೆ. ಜೆಡಿಎಸ್ ಸಹ ಶರತ್ ಬಚ್ಚೆಗೌಡರನ್ನು ಬೆಂಬಲಿಸುತ್ತಿದ್ದು ನಿಖಿಲ್ ಕುಮಾರಸ್ವಾಮಿ ಚುನಾವಣಾ ಪ್ರಚಾರಕ್ಕೆ ಬರಲಿದ್ದಾರೆ ಎನ್ನಲಾಗಿದೆ.

ಮಗನ ಪರ ಕೆಲಸ ಮಾಡದಂತೆ ಬಿಜೆಪಿಯು ಬಚ್ಚೇಗೌಡರಿಗೆ ನೋಟೀಸ್‍ಗಳನ್ನು ಕೊಡುತ್ತಲೇ ಇದ್ದರೂ ಬಚ್ಚೇಗೌಡರು ಮನೆಯಿಂದಲೇ ಮಾಡಬಹುದಾದ್ದೆಲ್ಲವನ್ನೂ ಮಾಡುತ್ತಿದ್ದಾರೆ. ಈ ಕ್ಷೇತ್ರದಲ್ಲಿ ಹೋಸಕೋಟೆ ನಗರದ ಮತಗಳು ಮುಖ್ಯ ಪಾತ್ರ ವಹಿಸುತ್ತವೆ. 45 ಸಾವಿರಕ್ಕಿಂತ ಅಧಿಕ ಮತಗಳಿದ್ದು, ಅಂದಾಜು 50 ಬೂತುಗಳಿವೆ. ಇವುಗಳನ್ನು ಯಾರು ಅಧಿಕವಾಗಿ ಸೆಳೆಯುತ್ತಾರೋ ಅವರೇ ಗೆಲ್ಲುವ ಸಾಧ್ಯತೆ ಹೆಚ್ಚು ಎಂದು ಹೇಳಲಾಗುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ಈ ಕ್ಷೇತ್ರಕ್ಕೆ ಭೇಟಿ ನೀಡಲಿದ್ದು ಲಿಂಗಾಯತ, ವೀರಶೈವ ಮುಖಂಡರ ಸಭೆ ಕರೆದಿದ್ದಾರೆ ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...