Homeಕರ್ನಾಟಕಹೊಸಕೋಟೆ ಉಪಚುನಾವಣೆ: ನೂರು ಕೋಟಿ ಕುಳಗಳ ಆರ್ಭಟದಲ್ಲಿ ಕಾಂಚಾಣ ಝಣಝಣ

ಹೊಸಕೋಟೆ ಉಪಚುನಾವಣೆ: ನೂರು ಕೋಟಿ ಕುಳಗಳ ಆರ್ಭಟದಲ್ಲಿ ಕಾಂಚಾಣ ಝಣಝಣ

- Advertisement -
- Advertisement -

ಹೊಸಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ತ್ರಿಕೋನ ಸ್ಫರ್ದೆಯಿಂದ ರಂಗೇರಿದೆ. ಅನರ್ಹ ಶಾಸಕ ಎಂ.ಟಿ.ಬಿ.ನಾಗರಾಜ್ ಬಿಜೆಪಿಯಿಂದ, ಕಾಂಗ್ರೆಸ್‍ನಿಂದ ಭೈರತಿ ಸುರೇಶ್ ಹೆಂಡತಿ ಪದ್ಮಾವತಿ ಮತ್ತು ಬಿಜೆಪಿಯಿಂದ ಬಂಡಾಯವೆದ್ದು ಶರತ್ ಬಚ್ಚೇಗೌಡ ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. ಕಾಂಗ್ರೆಸ್‍ನಿಂದ ಬಿಜೆಪಿಗೆ ಬಂದ ಎಂ.ಟಿ.ಬಿ ನಾಗರಾಜ್‍ಗೆ ಈ ಚುನಾವಣೆಯಲ್ಲಿ ಗೆಲ್ಲುವುದು ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಕಾಂಗ್ರೆಸ್ ಪಕ್ಷವೂ ಸಹ ಗೆಲ್ಲಲೇಬೇಕೆಂದು ಜಿದ್ದಿಗೆಬಿದ್ದಿದ್ದು ಈಗಾಗಲೇ ಒಂದು ಸುತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಕ್ಷೇತ್ರಕ್ಕೆ ಬಂದು ಪ್ರಚಾರ ಮಾಡಿಹೋಗಿದ್ದಾರೆ. ಇತ್ತ ಶರತ್ ಬಚ್ಚೇಗೌಡ ಕುಟುಂಬದ ಪಾಳೆಯಪಟ್ಟನ್ನು ಉಳಿಸಿಕೊಳ್ಳಲು ಹೇಗಾದರೂ ಈ ಕ್ಷೇತ್ರವನ್ನು ಮತ್ತೆ ತಮ್ಮ ತೆಕ್ಕೆಗೆ ತೆಗೆದುಕೊಳ್ಳಬೇಕೆಂದು ಪ್ರಯತ್ನಿಸುತ್ತಿದ್ದಾರೆ. ಮೂವರೂ ಅಭ್ಯರ್ಥಿಗಳ ಘೋಷಿತ ಆಸ್ತಿ ತಲಾ 100 ಕೋಟಿಗಳಿಗೂ ಮೀರಿದೆ!!

ಕಾಂಗ್ರೆಸ್ ಪಕ್ಷದ ವತಿಯಿಂದ ಈಗಾಗಲೇ ಒಂದು ಸುತ್ತು ಆಮಿಷ ಒಡ್ಡಲು 35 ಸಾವಿರಕ್ಕೂ ಹೆಚ್ಚು ಕುಕ್ಕರ್ ಹಂಚಿದ್ದು, 5 ಸಾವಿರ ಕುಕ್ಕರ್‍ಗಳನ್ನು ಸೀಸ್ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಹಾಗೆಯೇ ಬಿಜೆಪಿಯ ಅಭ್ಯರ್ಥಿ ಎಂ.ಟಿ.ಬಿ ನಾಗರಾಜ್ ಕೂಡ ಒಂದು ಸಾವಿರ ಹಣ ಮತ್ತು ಬೆಳ್ಳಿನಾಣ್ಯಗಳನ್ನು ಹಂಚುತ್ತಿದ್ದಾರೆ ಎಂದು ವಾಟ್ಸಪ್‍ಗಳಲ್ಲಿ ಹರಿದಾಡುತ್ತದೆ. ಅಷ್ಟೇ ಅಲ್ಲದೇ ಮತದಾರರಿಗೆ ಉಂಗುರಗಳನ್ನು ಹಂಚುತ್ತಿದ್ದಾರೆಂಬ ಆರೋಪಗಳು ಕೇಳಿಬರುತ್ತಿವೆ. ಶರತ್ ಬಚ್ಚೇಗೌಡ ಯಾರು ಏನೇ ಕೊಟ್ಟರೂ ತೆಗದುಕೊಳ್ಳಿ, ಆದರೆ ಮತವನ್ನು ಮಾತ್ರ ನಮಗೆ ಹಾಕಿ ಎಂದು ಪ್ರಚಾರ ಮಾಡುತ್ತಿದ್ದಾರೆ. ಬೇರೆಯವರು ಕುಕ್ಕರ್ ಹಂಚುತ್ತಿದ್ದು ಇವರ ಚಿಹ್ನೆಯೇ ಕುಕ್ಕರ್ ಬಂದಿರುವುದು ಕಾಕತಾಳೀಯವಾಗಿದ್ದು ಈತನಿಗೆ ಒಳಗೊಳಗೆ ಖುಷಿ ತಂದಿದೆ. ಜೆಡಿಎಸ್ ಸಹ ಶರತ್ ಬಚ್ಚೆಗೌಡರನ್ನು ಬೆಂಬಲಿಸುತ್ತಿದ್ದು ನಿಖಿಲ್ ಕುಮಾರಸ್ವಾಮಿ ಚುನಾವಣಾ ಪ್ರಚಾರಕ್ಕೆ ಬರಲಿದ್ದಾರೆ ಎನ್ನಲಾಗಿದೆ.

ಮಗನ ಪರ ಕೆಲಸ ಮಾಡದಂತೆ ಬಿಜೆಪಿಯು ಬಚ್ಚೇಗೌಡರಿಗೆ ನೋಟೀಸ್‍ಗಳನ್ನು ಕೊಡುತ್ತಲೇ ಇದ್ದರೂ ಬಚ್ಚೇಗೌಡರು ಮನೆಯಿಂದಲೇ ಮಾಡಬಹುದಾದ್ದೆಲ್ಲವನ್ನೂ ಮಾಡುತ್ತಿದ್ದಾರೆ. ಈ ಕ್ಷೇತ್ರದಲ್ಲಿ ಹೋಸಕೋಟೆ ನಗರದ ಮತಗಳು ಮುಖ್ಯ ಪಾತ್ರ ವಹಿಸುತ್ತವೆ. 45 ಸಾವಿರಕ್ಕಿಂತ ಅಧಿಕ ಮತಗಳಿದ್ದು, ಅಂದಾಜು 50 ಬೂತುಗಳಿವೆ. ಇವುಗಳನ್ನು ಯಾರು ಅಧಿಕವಾಗಿ ಸೆಳೆಯುತ್ತಾರೋ ಅವರೇ ಗೆಲ್ಲುವ ಸಾಧ್ಯತೆ ಹೆಚ್ಚು ಎಂದು ಹೇಳಲಾಗುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ಈ ಕ್ಷೇತ್ರಕ್ಕೆ ಭೇಟಿ ನೀಡಲಿದ್ದು ಲಿಂಗಾಯತ, ವೀರಶೈವ ಮುಖಂಡರ ಸಭೆ ಕರೆದಿದ್ದಾರೆ ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...