Homeಮುಖಪುಟಹೊಸಪೇಟೆ ಅಪಘಾತ ಪ್ರಕರಣ: ನನ್ನ ಮಗ ಕಾರಿನಲ್ಲಿದ್ದು ನಿಜ, ಆದರೆ ಕಾರು ಚಲಾಯಿಸುತ್ತಿರಲ್ಲಿಲ್ಲ - ಸಚಿವ...

ಹೊಸಪೇಟೆ ಅಪಘಾತ ಪ್ರಕರಣ: ನನ್ನ ಮಗ ಕಾರಿನಲ್ಲಿದ್ದು ನಿಜ, ಆದರೆ ಕಾರು ಚಲಾಯಿಸುತ್ತಿರಲ್ಲಿಲ್ಲ – ಸಚಿವ ಆರ್‌ ಅಶೋಕ್‌

ಮೊದಲಿಗೆ ಆರ್‌ ಅಶೋಕ್‌ ಪುತ್ರ ಕಾರಿನಲ್ಲಿದ್ದರೂ ಸಹ ಅತನ ಹೆಸರನ್ನು ಎಫ್‌ಐಆರ್‌ನಲ್ಲಿ ಕೈಬಿಟ್ಟಿದ್ದು ಏಕೆ? ಅಪಘಾತವಾದಾಗ ಬೆಂಜ್‌ ಕಾರು ಬದಲಿಗೆ ಆಡಿ ಕಾರು ಎಂದು ಉಲ್ಲೇಖಿಸಿದ್ದು ಏಕೆ?? ಅಲ್ಲದೇ ಕುಡಿದು ಚಾಲನೆ ಮಾಡಿದರು ಎಂಬ ಅಂಶವನ್ನು ಮರೆಮಾಚಿದ್ದು ಏಕೆ???

- Advertisement -
- Advertisement -

ಹೊಸಪೇಟೆಯ ಬಳಿಯ ಮರಿಯಮ್ಮನಹಳ್ಳಿಯಲ್ಲಿ ಫೆ.10 ರಂದು ಸಂಭವಿಸಿದ ಅಪಘಾತ ಪ್ರಕರಣದಲ್ಲಿ ಸಚಿವ ಆರ್‌ ಅಶೋಕ್‌ ಪುತ್ರನ ಪಾತ್ರವಿದೆಯೆಂಬ ಸುದ್ದಿ ಹರಿದಾಡಿದ್ದು ಹೊಸ ವಿವಾದಕ್ಕೆ ಕಾರಣವಾಗಿದೆ.

ಈ ಮೊದಲು ಬೆಂಗಳೂರಿನಿಂದ ಹಂಪಿಗೆ ಪ್ರವಾಸಕ್ಕೆಂದು ತೆರಳಿದ್ದ ಸಚಿನ್‌, ರಾಹುಲ್‌ ಸೇರಿದಂತೆ ಐವರು ಗೆಳೆಯರು ಕುಡಿದ ಮತ್ತಿನಲ್ಲಿ ಅತೀವೇಗದಲ್ಲಿ ಕಾರು ಚಲಾಯಿಸಿದ ಕಾರಣಕ್ಕೆ ರಸ್ತೆ ಬದಿ ನಿಂತಿದ್ದ ರವಿನಾಯ್ಕ್‌ ಎಂಬುವವರಿಗೆ ಗುದ್ದಿ, ಕಾರು ಮಗುಚಿಕೊಂಡಿತ್ತು. ಸ್ಥಳದಲ್ಲಿಯೇ ರವಿನಾಯ್ಕ್‌ ಸೇರಿದಂತೆ ಕಾರಿನಲ್ಲಿದ್ದ ಸಚಿನ್‌ ಎಂಬುವವರು ಮೃತಪಟ್ಟಿದ್ದರು.

ಆದರೆ ಘಟನೆ ನಡೆದು ಮೂರು ದಿನಗಳು ಕಳೆದರೂ ಇದರಲ್ಲಿ ಸಚಿವ ಆರ್‌ ಅಶೋಕ್‌ ಮತ್ತು ಆತನ ಪುತ್ರನ ಹೆಸರು ಬಹಿರಂಗಗೊಳ್ಳದಂತೆ ಪೊಲೀಸರು ಕೆಲಸ ಮಾಡಿದ್ದಾರೆ. ಬೆಂಜ್‌ ಕಾರು ಅಪಘಾತದಲ್ಲಿದ್ದರೆ ಪೊಲೀಸರು ಆಡಿ ಕಾರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿ ಕೇಸನ್ನು ತಿರುಚಲು ಮುಂದಾಗಿದ್ದಾರೆ.

ಈಗ ಬಂದ ಸುದ್ದಿಯ ಪ್ರಕಾರ ಆರ್‌ ಅಶೋಕ್‌ರವರ ಮಗ ಶರತ್‌ ಕಾರು ಓಡಿಸುತ್ತಿದ್ದು ಆತನೇ ಅಪಘಾತಕ್ಕೆ ಕಾರಣವೆಂದು ಹೇಳಲಾಗುತ್ತಿದೆ. ಅಪಘಾತವಾದ ಕೂಡಲೇ ಆತನನ್ನು ಬೇರೊಂದು ಕಾರಿನಲ್ಲಿ ಬೆಂಗಳೂರಿಗೆ ಕಳುಹಿಸಿಕೊಟ್ಟಿದ್ದು ಎಲ್ಲಿಯೂ ಆತನ ಹೆಸರು ಬಹಿರಂಗವಾಗದಂತೆ ಮೋಸ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಇಂದು ಬೆಳಿಗ್ಗೆಯಿಂದಲೇ ದಿನಪತ್ರಿಕೆಗಳಲ್ಲಿ ಈ ವಿಷಯ ಬಹಿರಂಗಗೊಂಡಂತೆ ಆರ್‌.ಅಶೋಕ್‌ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೇ ಅಪಘಾತದಲ್ಲಿ ಒಳಗೊಂಡ ಕಾರು ಆ‌ರ್‌ ಅಶೋಕ್‌ ಒಡೆತನದ ನ್ಯಾಷನಲ್ ಪಬ್ಲಿಕ್ ಶಾಲೆಗೆ ಸೇರಿದ್ದು ಎಂಬುದು ಸ್ಪಷ್ಟವಾಗಿದೆ.

ಈ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿರುವ ಕಂದಾಯ ಸಚಿವ ಆರ್‌. ಅಶೋಕ್‌ “ಅಂದು ಅಪಘಾತವಾದ ಕಾರಿನಲ್ಲಿ ನನ್ನ ಮಗ ಶರತ್‌ ಇದ್ದಿದ್ದು ನಿಜ. ಆದರೆ ಆತ ಕಾರು ಚಾಲನೆ ಮಾಡುತ್ತಿರಲ್ಲಿಲ್ಲ ಬದಲಿಗೆ ರಾಹುಲ್‌ ಎಂಬಾತ ಕಾರು ಚಾಲನೆ ಮಾಡುತ್ತಿದ್ದ” ಎಂದು ಅವರು ಹೇಳಿದ್ದಾರೆ.

ಪೊಲೀಸರ ಪಕ್ಷಪಾತ

ಈ ಘಟನೆಯಲ್ಲಿ ಪೊಲೀಸರ ಪಕ್ಷಪಾತ ಮತ್ತು ಕರ್ತವ್ಯ ಲೋಪ ಎದ್ದುಕಾಣುತ್ತಿದೆ. ಮೊದಲಿಗೆ ಆರ್‌ ಅಶೋಕ್‌ ಪುತ್ರ ಕಾರಿನಲ್ಲಿದ್ದರೂ ಸಹ ಅತನ ಹೆಸರನ್ನು ಕೈಬಿಟ್ಟಿದ್ದು ಹೇಗೆ? ಅಪಘಾತವಾದಾಗ ಬೆಂಜ್‌ ಕಾರು ಬದಲಿಗೆ ಆಡಿ ಕಾರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದು ದೊಡ್ಡ ಪ್ರಮಾದವಾಗಿದೆ. ಅಲ್ಲದೇ ಕುಡಿದು ಚಾಲನೆ ಮಾಡಿದರು ಎಂಬ ಅಂಶವನ್ನು ಸಹ ಎಫ್‌ಐಆರ್‌ನಲ್ಲಿ ಸೇರಿಸಿಲ್ಲ.

ಒಟ್ಟಿನಲ್ಲಿ ಪ್ರಭಾವಿ ಸಚಿವನ ಮಗನನ್ನು ಕಾಪಾಡಲು ಪೊಲೀಸರು ತಪ್ಪುಗಳ ಮೇಲೆ ತಪ್ಪುಗಳನ್ನು ಎಸಗಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ.

ಇನ್ನು ಸಚಿವ ಆರ್‌ ಅಶೋಕ್‌ ಸಹ ಇದುವರೆಗೂ ಸಾವಿಗೀಡಾದ ರವಿನಾಯ್ಕ್‌ರವರ ನೊಂದ ಕುಟುಂಬವನ್ನು ಮಾತಾಡಿಸಿಲ್ಲ. ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಕೇಸನ್ನು ಮುಚ್ಚಿಹಾಕಲು ಮತ್ತು ತಮ್ಮ ಮಗನನ್ನು ರಕ್ಷಿಸಲು ಮುಂದಾಗಿರುವುದು ಖಂಡನೀಯವಾಗಿದೆ.

ಕಾಂಗ್ರೆಸ್‌ ಶಾಸಕ ಹ್ಯಾರಿಸ್‌ ಮಗ ನಲಪಾಡ್‌‌ನ ಹಿಟ್‌ ಅಂಡ್‌ ರನ್‌ ಕೇಸ್‌ನಲ್ಲಿ ವಿಚಾರದಲ್ಲಿ ದಕ್ಷತೆಯಿಂದ ನಡೆದುಕೊಂಡ ಪೊಲೀಸರು ಆರ್‌ ಅಶೋಕ್‌ ಮಗನ ವಿಚಾರದಲ್ಲಿ ಅನ್ಯಾಯ ಮಾಡಿದ್ದು ಏಕೆ? ಇದು ಕೂಡ ಹಿಟ್‌ ಅಂಡ್‌ ರನ್‌ ಕೇಸ್‌ ಅಲ್ಲವೇ? ಪೊಲೀಸರ ಮೇಲೆ ಒತ್ತಡ ಹಾಕಿದವರು ಯಾರು? ಈ ರೀತಿ ನ್ಯಾಯದ ವಿಷಯದಲ್ಲಿ ಪೊಲೀಸರೇ ತಾರತಮ್ಯ ಮಾಡಿದರೆ ಹೇಗೆ ಎಂಬ ಪ್ರಶ್ನೆಗಳು ಉದ್ಭವಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...